Connect with us

DAKSHINA KANNADA

ದ.ಕದಲ್ಲಿ ಕೋಮುಗಲಭೆ ಆರೋಪಿಗಳ ಆಸ್ತಿ ಮುಟ್ಟುಗೋಲು: ADGP

Published

on

ಮಂಗಳೂರು: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ.


ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿನ್ನೆ ದ.ಕ, ಉಡುಪಿ ಹಾಗೂ ಮಂಗಳೂರು ಕಮಿಷನರೇಟ್‌ನ ಉನ್ನತ ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು.

ಆಗಾಗ ಕೋಮು ಸಂಘರ್ಷ ಉಟಾಗುವುದನ್ನು ತಪ್ಪಿಸುವುದಕ್ಕೆ ಇಂತಹ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ.

ಕೋಮು ಕೇಸಿಗೆ ಸಂಧಿಸಿದಂತೆ ಆರೋಪಿಗಳು ಎಲ್ಲಿದ್ದಾರೆ? ಹೇಗಿದ್ದಾರೆ? ಅವರ ಮೇಲೆ ಯಾವುದಾದರೂ ಪ್ರಿವೆಂಟಿವ್ ಆಗಿ ರೌಡಿ ಶೀಟ್ ತೆರೆಯುವ ಕೆಲಸ ಆಗಿದೆಯಾ? ಕೇಸಿನ ವಿಚಾರಣೆ ಹೇಗೆ. ನಡೆಯುತ್ತಿದೆ ಎಂಬಿತ್ಯಾದಿ ಆಯಾಮಗಳಲ್ಲಿ ಪರಿಶೀಲನೆ ಮಾಡಬೇಕು.

ಶರತ್‌ ಮಡಿವಾಳ ಹತ್ಯೆ, ದೀಪಕ್ ರಾವ್ ಹತ್ಯೆ, ಪಿಂಕಿ ನವಾಜ್ ಹತ್ಯೆ ಯತ್ನದಂತಹ ಅನೇಕ ಪ್ರಕರಣಗಳಲ್ಲಿ ವಿಚಾರಣೆ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ.

ಕೆಲವೊಮ್ಮೆ ಆರೋಪಿಗಳು ಜಾಮೀನು ಪಡೆದು ಹೊರಬರುವುದು, ತನಿಖೆ ಸರಿಯಾಗಿ ನಡೆಯದ ಕೇಸ್ ಖುಲಾಸೆಯಾಗಿ ಹೊರಬಂದು ಆರೋಪಿಗಳು ಮತ್ತೆ ಅಂತಹ ಕೃತ್ಯ ಮುಂದುವರಿಸುವುದು ಆಗಬಾರದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೋಮುಗಲಭೆಯಲ್ಲಿದ್ದ ಕೆಲವೊಂದು ಆರೋಪಿಗಳು ತಲೆಮರೆಸಿಕೊ೦ಡಿದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ.

ಪಿಂಕಿ ನವಾಜ್‌ ಹತ್ಯೆ ಯತ್ನ ಪ್ರಕರಣ ಆರೋಪಿ ನೌಷಾದ್ ಎಂಬಾತ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ. ಇಂತಹ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

DAKSHINA KANNADA

ಬಸ್ಸಿನಲ್ಲಿ ಕುಳಿತ ಸೀಟಿನಲ್ಲೇ ಸಾವನ್ನಪ್ಪಿದ ಪ್ರಯಾಣಿಕ

Published

on

ಶಿರ್ವ : ಕೆಎಸ್‌ಆರ್‌ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್ಸಿನ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಶಿರ್ವ – ಮುಂಬೈನಿಂದ ಉಡುಪಿ-ಶಿರ್ವ-ಮೂಡುಬಿದಿರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ  ಎ. 21 ರಂದು ಮುಂಜಾನೆ ನಡೆದಿದೆ.

ಮೃತರನ್ನು ಕುಮಟಾ ಮೂಲದ ಪ್ರಯಾಣಿಕ ಸುಮಾರು 45 ವರ್ಷ ಪ್ರಾಯದ ಸತ್ಯ ಭಂಡಾರಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಸತ್ಯ ಭಂಡಾರಿ ಪ್ರಯಾಣದ ಸಂಧರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.

Continue Reading

BELTHANGADY

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಮೂವರು ಗಂಭೀರ

Published

on

ಬೆಳ್ತಂಗಡಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮಿಪದ ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ನಿನ್ನೆ (ಏ.21) ಸಂಜೆ ನಡೆದಿದೆ.

ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣ ಮಾಡುತ್ತಿದ್ದ ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50), ವೈಭವ್‌ (23) ಎಂಬುವವರು ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಉಡುಪಿ : ಪತ್ರಕರ್ತ ರಾಮ್ ಅಜೆಕಾರ್ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ

Published

on

ಉಡುಪಿ : ಕನ್ನಡ ರಿಪೋರ್ಟರ್ ರಾಮ್ ಅಜೆಕಾರ್‌ ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಆಯಕೆಯಾಗಿದ್ದಾರೆ.

ಹಿರಿಯ ಉದ್ಯಮಿ ಅಶ್ರಫ್ ಷಾ ಮಂತೂರು ಅವರ ದತ್ತಿನಿಧಿಯಿಂದ ನೀಡಲಾಗುವ ಪ್ರಶಸ್ತಿಗೆ ಪತ್ರಕರ್ತ ರಾಮ್ ಅಜೆಕಾರ್ ವರ ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಶೀರ್ಷಿಕೆಯಡಿಯ ಸುದ್ಧಿ ಆಯ್ಕೆಯಾಗಿದೆ. ಕನ್ನಡಪ್ರಭ ಪತ್ರಿಕೆಯಲ್ಲಿ ಈ ಸುದ್ಧಿ ಬಿಡುಗಡೆಯಾಗಿತ್ತು.

ದತ್ತಿನಿಧಿಯಿಂದ ನೀಡಲಾಗುವ ಈ ಪ್ರಶಸ್ತಿಯು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ ೩ರಂದು ಸೀತಾಂಗೋಳಿಯ ಎಲೈನ್ಸ್ ಸಭಾಂಗಣದಲ್ಲಿ ನಡೆಯಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page