Connect with us

bengaluru

ಇನ್ಮುಂದೆ 5ನೇ ಹಾಗೂ 8ನೇ ತರಗತಿಗೂ ಪಬ್ಲಿಕ್ ಎಕ್ಸಾಂ..!-ಶಿಕ್ಷಣ ಇಲಾಖೆಯಿಂದ ಖಡಕ್ ಆದೇಶ

Published

on

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಶೈಕ್ಷಣಿಕ ವರ್ಷದ ಪಬ್ಲಿಕ್ ಪರೀಕ್ಷೆಗಳು ಇನ್ನೇನು ಹತ್ತಿರದಲ್ಲಿದೆ. ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಇನ್ಮುಂದೆ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.


ಮಕ್ಕಳ ಕಲಿಕಾ ಕೊರತೆ ನೀಗಿಸಲು ಕಲಿಕೆಯಲ್ಲಿ ಪ್ರಗತಿ ಕಾಣಲು ಇಲಾಖೆ ಈ ನಿರ್ಧಾರ ಮಾಡಿದೆ. ಕ್ಲಸ್ಟರ್ ಹಂತದಲ್ಲಿ ಪರೀಕ್ಷಾ ವ್ಯವಸ್ಥೆಗಳು ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಲಿದೆ. ಮೌಲ್ಯಾಂಕನ ಪರೀಕ್ಷೆ ಹೆಸರಿನಲ್ಲಿ ಈ ಪರೀಕ್ಷೆ ನಡೆಯಲಿದೆ.

ಆದರೆ ಒಂದು ಮುಖ್ಯವಾದ ವಿಷಯವೇನೆಂದರೆ ಯಾವುದೇ ವಿದ್ಯಾರ್ಥಿಗಳನ್ನ ಈ ಪರೀಕ್ಷೆಯಲ್ಲಿ ಫೇಲ್ ಮಾಡೋದಿಲ್ಲ. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯೋ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವ್ಯವಸ್ಥೆ ಇಲಾಖೆ ಮಾಡಿಕೊಳ್ಳಲಿದೆ. ಮಕ್ಕಳ ಕಲಿಕೆ ಗುಣಮಟ್ಟ ಏನು? ಕೊರತೆಗಳೇನು? ಯಾವ ವಿಷಯಗಳಲ್ಲಿ ಹಿನ್ನಡೆಯಾಗಿದೆ ಎಂಬುದನ್ನು ತಿಳಿಯಲು ಈ ಪರೀಕ್ಷೆಯಿಂದ ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ರೂಪಣಾತ್ಮಕ ಪರೀಕ್ಷೆ ಮತ್ತು ಸಂಕಲನಾತ್ಮಕ ಪರೀಕ್ಷೆ ವಿಧಾನದಲ್ಲಿ ಪರೀಕ್ಷೆ ನಡೆಯಲಿದೆ. ಕ್ಲಸ್ಟರ್ ಹಂತದಲ್ಲಿ ಈ ಪರೀಕ್ಷೆಗಳನ್ನ ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಗೆ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಪಡೆಯುವಂತಿಲ್ಲ.

8ನೇ ತರಗತಿಗೆ ಒಂದು ಪರೀಕ್ಷಾ ಕೇಂದ್ರಕ್ಕೆ 50 ಮಕ್ಕಳು ಇರುವಂತೆ, 5ನೇ ತರಗತಿಗೆ 25 ಮಕ್ಕಳು ಒಂದು ಕೇಂದ್ರಕ್ಕೆ ಇರುವಂತೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕು. ಮಕ್ಕಳ ಸಂಖ್ಯೆ ಕಡಿಮೆಯಿದ್ದರೆ 2 ಕಿಮೀ ವ್ಯಾಪ್ತಿಯ ಶಾಲೆಗಳನ್ನ ಒಳಪಡಿಸಿಕೊಳ್ಳುವುದು.

ಪರೀಕ್ಷಾ ಕೇಂದ್ರ ಸ್ಥಾಪನೆಗೆ ಡಯಟ್ ಪ್ರಾಂಶುಪಾಲರು, ಬಿಇಓಗಳು ಚರ್ಚಿಸಿ ನಿರ್ಧಾರ ಮಾಡಬೇಕು. ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರನ್ನ ಅದಲು ಬದಲು ಮಾಡಬೇಕು. ಶಾಲಾ ಹಂತದಲ್ಲಿ ಪರೀಕ್ಷೆ ಪ್ರವೇಶ ಪತ್ರಗಳನ್ನ ಮುಖ್ಯಶಿಕ್ಷಕರು ವಿತರಿಸಬೇಕು. 50 ಅಂಕಗಳ ಪರೀಕ್ಷೆ. 2 ಗಂಟೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು.

50 ಅಂಕದಲ್ಲಿ 40 ಅಂಕ ಲಿಖಿತ ಪರೀಕ್ಷೆ, 10 ಅಂಕ ಮೌಖಿಕ ಪರೀಕ್ಷೆ ನಡೆಸುವುದು. ಪ್ರಶ್ನೆ ಪತ್ರಿಕೆ ಮುದ್ರಣವನ್ನ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುದ್ರಿಸುತ್ತದೆ. ಜಿಲ್ಲಾ ಡಯಟ್ ಗಳಿಗೆ ಇದು ಹಂಚಿಕೆಯಾಗಲಿದೆ. ಇದರ ಉಸ್ತುವಾರಿ ಬಿಇಓ ಆಗಿರುತ್ತಾರೆ.

ಸಂಕಲನಾತ್ಮಕ ಮತ್ತು ರೂಪಣಾತ್ಮಕ ಸೇರಿ 100 ಅಂಕಗಳಿಗೆ ಪರೀಕ್ಷೆ ಇರಲಿದೆ. 35 ಅಂಕ ಪಡೆದ ವಿದ್ಯಾರ್ಥಿ ಪ್ರಗತಿ ಸಾಧಿಸಿರುವ ವಿದ್ಯಾರ್ಥಿ ಅಂತ ಘೋಷಣೆ ಮಾಡಲಾಗುತ್ತದೆ.

ಕಡಿಮೆ ಅಂಕ ಪಡೆದ ವಿದ್ಯಾರ್ಥಿ ಫೇಲ್ ಮಾಡದೇ ಪ್ರಗತಿ ಸಾಧಿಸಬೇಕಾದ ವಿದ್ಯಾರ್ಥಿ ಅಂತ ಪರಿಗಣಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

bengaluru

ಏರ್ಪೋರ್ಟ್ ನಲ್ಲಿ ಟಾಯ್ಲೆಟ್ ಗೆ ಕರೆದೊಯ್ದು ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ-ಸಿಬ್ಬಂದಿ ಅರೆಸ್ಟ್

Published

on

ಬೆಂಗಳೂರು: ವಿದೇಶಿ ಮಹಿಳೆಗೆ ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ನಡೆದಿದೆ. ಏರ್ ಸಾಟ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎಫ್‌.ಡಿ ಆಪ್ಪಾನ್ ಅಹಮದ್ ಬಂಧಿತ ಆರೋಪಿ.

ದಕ್ಷಿಣ ಕೊರಿಯಾ ಮೂಲದ 36 ವರ್ಷದ ಮಹಿಳೆಯೊಬ್ಬರು ಭಾರತಕ್ಕೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸ ಮುಗಿಸಿ ಮತ್ತೆ ತನ್ನ ದೇಶಕ್ಕೆ ಹಿಂದಿರುಗಲು ಬೆಂಗಳೂರು ಏರ್‌ಪೋರ್ಟ್‌ಗೆ ವಾಪಸ್‌ ಆಗಿದ್ದರು. ಅಲ್ಲಿ ಭದ್ರತಾ ಪರಿಶೀಲನೆ ಮುಗಿಸಿ ಬೋರ್ಡಿಂಗ್ ಆಗುವ ವೇಳೆ ಎದುರಾದ ಆರೋಪಿ ಮಹಿಳಾ ಪ್ರಯಾಣಿಕರ ಬಳಿ ತಮ್ಮ ಬ್ಯಾಗೇಜ್ ಪರಿಶೀಲನೆ ಮಾಡಬೇಕು ಎಂದು ತಿಳಿಸಿ ಬ್ಯಾಗೇಜ್ ಪರಿಶೀಲನೆ ಮಾಡಿದ್ದಾರೆ.

ನಂತರ ವೈಯಕ್ತಿಕವಾಗಿ ಪರಿಶೀಲನೆ ಮಾಡಲಿದೆ ಎಂದು ತಿಳಿಸಿ ಈ ಮಹಿಳೆಯನ್ನ ಪುರುಷರ ಶೌಚಾಲಯದ ಒಳಗೆ ಕರೆದುಕೊಂಡು ಹೋಗಿ ಆಕೆಯನ್ನು ಮುಟ್ಟುವ ಹಾಗೂ ತಬ್ಬಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಇದರಿಂದ ವಿಚಲಿತಳಾದ ಮಹಿಳೆ ಸಿಐಎಸ್‌ ಎಫ್‌ ಸಿಬ್ಬಂದಿಗೆ ತಿಳಿಸಿದ್ದಾಳೆ.

ಕೂಡಲೇ ಸಿಐಎಸ್ ಎಫ್ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಸಂಬಂಧ ಮಹಿಳೆಯ ಬಳಿ ದೂರು ಪಡೆದಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

 

 

Continue Reading

bengaluru

ಪಿಜಿಯಲ್ಲಿ ಸಿಲಿಂಡರ್ ಸ್ಫೋಟ-ಓರ್ವ ಸಾವು, ಮೂವರಿಗೆ ಗಂಭೀರ ಗಾಯ

Published

on

ಬೆಂಗಳೂರು: ಪಿಜಿಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ನಡೆದಿದೆ.

ಸೆವೆನ್ ಹಿಲ್ಸ್ ಕೋ‌ಲಿವಿಂಗ್ ಬಾಯ್ಸ್ ಪಿಜಿಯಲ್ಲಿ ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಅರವಿಂದ್ ಮೃತ ಯುವಕ. ವೆಂಕಟೇಶ್ (28), ವಿಶಾಲ್ (23), ಗೋಯಲ್ (25) ಎಂಬುವವರು ಗಾಯಗೊಂಡಿದ್ದಾರೆ. ಘಟನಾ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ದೌಡಾಯಿಸಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ, ಪಿಜಿಯ ಕೆಳಮಹಡಿಯಲ್ಲಿದ್ದ ಅಡುಗೆ ಕೋಣೆಯಲ್ಲಿ ಅನಿಲ ಸೋರಿಕೆಯಾಗಿ ಸಿಲಿಂಡರ್‌ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

ಸದ್ಯ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪಿಜಿಯಲ್ಲಿದ್ದ ಇತರರನ್ನ ಬೇರೆ ಬೇರೆ ಪಿಜಿಗಳಿಗೆ ಶಿಫ್ಟ್ ಮಾಡಿಸಿದ್ದಾರೆ. ಈ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಜಿಬಿಎ ಅಧಿಕಾರಿಗಳು ಹಾಗೂ ಪೋರ್ವ ನಗರಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

Continue Reading

bengaluru

ಟೆಕ್ಕಿಯನ್ನು ಸರಸಕ್ಕೆ ಕರೆದು ಇವರು ಮಾಡಿದ್ದೇನು ಗೊತ್ತಾ..? ಮಹಿಳೆಯರು ಸೇರಿ ಐವರು ಅರೆಸ್ಟ್

Published

on

ಬೆಂಗಳೂರು: ಟೆಕ್ಕಿಯೋರ್ವನನ್ನು ಸರಸಕ್ಕೆ ಕರೆದು ಆತನಲ್ಲಿ ಹಣಕ್ಕೆ ಬೇಡಿಕೆಯಿಟ್ಟು ನಂತರ ಆತನಲ್ಲಿದ್ದ ಹಣವನ್ನು ದೋಚಿ ಹಲ್ಲೆ ಮಾಡಿದ ಆರೋಪದ ಮೇಲೆ ಮಹಿಳೆಯರಿಬ್ಬರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮಲತಾ ಅಲಿಯಾಸ್ ಅಂಜಲಿ, ಅನ್ನಪೂರ್ಣೇಶ್ವರಿ ನಗರದ ಹರ್ಷಿಣಿ ಅಲಿಯಾಸ್ ಸ್ವೀಟಿ, ಜಗದೀಶ್, ಲೋಕೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಇಬ್ಬರು ಮಹಿಳೆಯರು ಸೇರಿಕೊಂಡು ಟೆಕ್ಕಿಯನ್ನು ಸರಸಕ್ಕೆ ಕರೆದಿದ್ದಾರೆ. ಆತ ಸ್ಥಳಕ್ಕೆ ಬರುತ್ತಿದ್ದಂತೆ 40 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಟೆಕ್ಕಿ ಅದಕ್ಕೆ ಒಪ್ಪದಿದ್ದಾಗ ಸಹಚರರನ್ನು ಕರೆದು ಹಲ್ಲೆ ನಡೆಸಿ, ಮೊಬೈಲ್ ಕಸಿದುಕೊಂಡು ಬೆದರಿಕೆ ಹಾಕಿದ್ದಾರೆ.

ಕೂಡಲೇ ಅಲ್ಲಿಂದ ಓಡಿಬಂದ ಟೆಕ್ಕಿ ಸ್ಥಳೀಯರ ಸಹಾಯದಿಂದ 112ಗೆ ಕರೆ ಮಾಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹೋದ ಹೊಯ್ಸಳ ಪೊಲೀಸರು ಟೆಕ್ಕಿ ಹಾಗೂ ಹಲ್ಲೆ ಮಾಡಿದ್ದ ಇಬ್ಬರು ಮಹಿಳೆಯರು ಸೇರಿ ಐವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸಿದಾಗ ಇವರ ವಂಚನೆ ಬೆಳಕಿಗೆ ಬಂದಿದೆ.

ಡಿ.10ರಂದು ಟೆಲಿಗ್ರಾಂ ಮೂಲಕ ಟೆಕ್ಕಿಗೆ ಓರ್ವ ಹುಡುಗಿಯ ಪರಿಚಯವಾಗಿತ್ತು. ಆ ಹುಡುಗಿ 20,000 ರೂ. ಕೊಡಿ ಎಂದು ಕೇಳಿದ್ದು, ಟೆಕ್ಕಿ ಕೊಡುವುದಾಗಿ ಒಪ್ಪಿಕೊಂಡಿದ್ದರು. ಬಳಿಕ ಟೆಕ್ಕಿ ಮಹಿಳೆ ಮನೆಗೆ ಹೋಗಿದ್ದಾಗ ಬೆದರಿಸಿ, 20 ಸಾವಿರ ರೂ. ಕಸಿದುಕೊಂಡು ಕಳಿಸಿದ್ದರು.

ಬಳಿಕ ಅದೇ ಮಹಿಳೆ ತನ್ನ ಸ್ನೇಹಿತೆ ಸಹಾಯದಿಂದ ಅದೇ ಟೆಕ್ಕಿಯನ್ನು ಕರೆಸಿ ಮತ್ತೆ 20 ಸಾವಿರ ರೂ. ಕಸಿದುಕೊಂಡು ಹಲ್ಲೆ ನಡೆಸಿದ್ದರು. ಈ ಕುರಿತು ಟೆಕ್ಕಿ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಟೆಕ್ಕಿಯ ದೂರಿನ ಆಧಾರದ ಮೇಲೆ ಆರ್ ಆರ್ ನಗರ ಪೊಲೀಸರು ಐವರನ್ನು ಬಂಧಿಸಿದ್ದರು. ಸದ್ಯ ಕೋರ್ಟ್ ಐವರಿಗೆ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

 

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page