Connect with us

LATEST NEWS

ಉಡುಪಿ: ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

Published

on

ಉಡುಪಿ: ಇಲ್ಲಿನ ಖಾಸಗಿ ಕಾಲೇಜ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಧಾರಾವಾಡ ಜಿಲ್ಲೆಯ ಕುಂದಗೋಳ್ ನಿವಾಸಿಯಾಗಿರುವ ಸರಸ್ವತಿ ( 16 )

ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದರು.

ಸರಸ್ವತಿ ಉಡುಪಿ ಖಾಸಗಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದರು. ಇವರ ತಂದೆ – ತಾಯಿ ಕಟ್ಟಿಗೆ ಮಿಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು,

ನಿನ್ನೆ ತಂದೆ, ತಾಯಿ ಕೆಲಸಕ್ಕೆ ತೆರಳಿದ ವೇಳೆ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಹಾಸನ: ಶಾಲಾ ಬಾಲಕಿಯನ್ನು ಬೆನ್ನಟ್ಟಿದ ಪ್ರಕರಣ; ಕಿಡಿಗೇಡಿಯನ್ನು ಬಂಧಿಸಿದ ಪೊಲೀಸರು

Published

on

ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಬಂಧಿಸಲಾಗಿದೆ.


ಕೋಲಾರ ಜಿಲ್ಲೆಯ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ.

ಜನವರಿ 17 ರಂದು ಹಾಸನದಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿ ಬಾಲಕಿ ಭಯಭೀತಳಾಗಿ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು.

ಇದನ್ನೂ ಓದಿ: ಬಾರೊಂದರಲ್ಲಿ ನಡೆದ ಗಲಾಟೆ; ತೀವ್ರ ಹಲ್ಲೆಗೊಳಗಾಗಿ ವ್ಯಕ್ತಿ ಸಾವು!

ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿ ನೋಡಿ ವಾಪಾಸು ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು, ವೈರಲ್ ಆಗಿತ್ತು.
ಈ ಬಗ್ಗೆ ಪೆನ್‌ ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Continue Reading

LATEST NEWS

ಬಾರೊಂದರಲ್ಲಿ ನಡೆದ ಗಲಾಟೆ; ತೀವ್ರ ಹಲ್ಲೆಗೊಳಗಾಗಿ ವ್ಯಕ್ತಿ ಸಾವು!

Published

on

ಚಿಕ್ಕಮಗಳೂರು: ಬಾರ್ ಒಂದರಲ್ಲಿ ಬಿಹಾರಿ ಕಾರ್ಮಿಕರು ಹಾಗೂ ವ್ಯಕ್ತಿಯೊಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ತೇಜು (40)  ಸಾವನ್ನಪ್ಪಿದ ವ್ಯಕ್ತಿ. ಬಾರ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತೇಜು ಮೇಲೆ ಹಲ್ಲೆ ಮಾಡಿದ್ದಾರೆ. ಪರಿಣಾಮ ತೀವ್ರ ಅಸ್ವಸ್ಥಗೊಂಡ ಅವರನ್ನು ಒಂದು ಕಿಮೀ ದೂರದ ಪಟಾಕಿ ಮೈದಾನಕ್ಕೆ ಒಯ್ದು ಎಸೆದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ಖಾಸಗಿ ಸ್ಲೀಪರ್ ಬಸ್ ನಲ್ಲಿ ಅಗ್ನಿ ಅವಘಡ; ಮೂವರು ಸಜೀವ ದಹನ

ಆಟೋ ಚಾಲಕರೊಬ್ಬರು ತೇಜುವನ್ನು ನೋಡಿ ಉಸಿರಾಡುತ್ತಿರುವುದನ್ನು ಗಮನಿಸಿ ಆಸ್ಪತ್ರೆಗೆ ಸೇರಿಸಿದ್ದರು. ತೀವ್ರ ಹಲ್ಲೆಯಾಗಿದ್ದರಿಂದ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ತೇಜು ಕೊನೆಯುಸಿರೆಳೆದಿದ್ದಾರೆ.

Continue Reading

LATEST NEWS

ಆಂಧ್ರಪ್ರದೇಶ: ಖಾಸಗಿ ಸ್ಲೀಪರ್ ಬಸ್ ನಲ್ಲಿ ಅಗ್ನಿ ಅವಘಡ; ಮೂವರು ಸಜೀವ ದಹನ

Published

on

ಅಮರಾವತಿ: ಖಾಸಗಿ ಸ್ಲೀಪರ್ ಬಸ್ ನ ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಆಂಧ್ರಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ಮೂವರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.


ಆಂಧ್ರಪ್ರದೇಶದ ನೆಲ್ಲೂರಿನಿಂದ ತೆಲಂಗಾಣದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಸ್ಫೋಟಗೊಂಡಿತ್ತು. ಹಠಾತ್ ಸ್ಫೋಟದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ, ವಾಹನವು ರಸ್ತೆ ವಿಭಜಕವನ್ನು ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

ಪರಿಣಾಮ ಬಸ್ ಮತ್ತು ಟ್ರಕ್ ಎರಡೂ ಬೆಂಕಿಗೆ ಆಹುತಿಯಾದವು. ಕೂಡಲೇ ಸ್ಥಳೀಯರು ಮತ್ತು ಬಸ್ ಸಿಬ್ಬಂದಿಗಳು ಬಸ್ ನ ಕಿಟಕಿಗಳನ್ನು ಒಡೆದು ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬಸ್ ನಲ್ಲಿದ್ದ 36 ಪ್ರಯಾಣಿಕರು ಬದುಕುಳಿದು ಮೂವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page