Connect with us

FILM

ಕಾಲ್ತುಳಿತ ವಿವಾದದ ಬೆನ್ನಲ್ಲೇ ಪುಷ್ಪ 2 ಚಿತ್ರದ ಹಾಡಿಗೆ ಬಿತ್ತು ಕತ್ತರಿ!

Published

on

ಮಂಗಳೂರು/ಹೈದರಾಬಾದ್ : ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಕಾಲ್ತುಳಿತ ಪ್ರಕರಣದ ನಂತರ ಇದೀಗ ಹಾಡೊಂದಕ್ಕೆ ಕತ್ತರಿ ಬಿದ್ದಿದೆ. ಚಿತ್ರದ ಸೂಪರ್ ಹಿಟ್ ಹಾಡಲ್ಲಿ ಒಂದಾದ ‘ದಮ್ಮುಂಟೆ ಪಟ್ಟುಕೋರ’(ಧಮ್ಮಿದ್ರೆ ನನ್ನನ್ನು ಹಿಡಿಯಿರಿ) ಹಾಡು ಟೀಕೆಗೆ ಗುರಿಯಾಗಿದ್ದು, ಈ ಹಾಡನ್ನು ಯೂಟ್ಯೂಬ್‌ನಿಂದ ತೆಗೆದು ಹಾಕಲಾಗಿದೆ.

ಅಲ್ಲು ಅರ್ಜುನ್ ಹಾಡಿರುವ ಈ ಹಾಡನ್ನು ಡಿ.24 ರಂದು ಬಿಡುಗಡೆ ಮಾಡಲಾಗಿತ್ತು. ಚಿತ್ರದಲ್ಲಿ ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳ ಸಾಗಣೆದಾರರ ಸಿಂಡಿಕೇಟ್‌ನ ಮುಖಂಡನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್‌ನನ್ನು ಹಿಡಿಯಲು ಪೊಲೀಸ್ (ಶೇಖಾವತ್) ಬಹಳ ಪ್ರಯತ್ನ ಪಡುತ್ತಿರುತ್ತಾನೆ.

ದೃಶ್ಯವೊಂದರಲ್ಲಿ ಶೇಖಾವತ್ ಗೆ ಪುಷ್ಪ ಅಂದ್ರೆ ಅಲ್ಲು ಅರ್ಜುನ್, ದಮ್ಮಿದ್ರೆ ನನ್ನನ್ನು ಹಿಡಿಯಿರಿ ಶೇಖಾವತ್(ಫಹಾದ್ ಫಾಸಿಲ್) ಎಂದು  ಹಾಡುತ್ತಾ ಸವಾಲು ಹಾಕುತ್ತಾನೆ. ಈ ಸಾಲು ಟೀಕೆಗೊಳಗಾಗಿದ್ದು, ಪೊಲೀಸರನ್ನು ಗೇಲಿ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಇದೀಗ ಹಾಡನ್ನು ಡಿಲೀಟ್ ಮಾಡಲಾಗಿದೆ.

ಇದನ್ನೂ ಓದಿ  : ‘ವರ್ಕ್ ಫ್ರಂ ಹೋಮ್’ ಎಂದು ನಂಬಿಸಿ ಮಹಿಳೆಗೆ ಲಕ್ಷ ಲಕ್ಷ ವಂಚನೆ !!

ವಿವಾದಗಳ ನಡುವೆ ಪುಷ್ಪ 2 ಚಿತ್ರ ಭಾರೀ ಯಶಸ್ಸನ್ನು ಬಾಚಿಕೊಳ್ಳುತ್ತಿದೆ. ಡಿ.5 ರಂದು ಬಿಡುಗಡೆಗೊಂಡ ಈ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ಪುಷ್ಪ 2 ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಪರಿಣಾಮ ಅಲ್ಲು ಅರ್ಜುನ್‌ರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಅವರು ಹೊರ ಬಂದಿದ್ದರು. ಈ ಬೆಳವಣಿಗೆಯ ಮಧ್ಯೆ ಇದೀಗ ಹಾಡಿಗೆ ಕತ್ತರಿ ಹಾಕಲಾಗಿದೆ.

FILM

ಬ್ರೇಕಪ್ ಬಗ್ಗೆ ಕೊನೆಗೂ ಮೌನ ಮುರಿದ ತಮನ್ನಾ

Published

on

ಮಂಗಳೂರು/ಮುಂಬೈ: ವಿಜಯ್ ಜೊತೆಗಿನ ಬ್ರೇಕಪ್ ಸುದ್ದಿಯಿಂದಲೇ ಸಖತ್ ಟ್ರೆಂಡಿಂಗ್‌ನಲ್ಲಿರುವ ಮಿಲ್ಕಿ ಬ್ಯೂಟಿ, ಇದ್ಯಾವುದಕ್ಕೂ ಉತ್ತರಿಸುವ ಅಥವಾ ಪ್ರತಿಕ್ರಿಯೆ ನೀಡುವ ಪ್ರಯತ್ನಕ್ಕೆ ಮುಂದಾಗಿರಲಿಲ್ಲ. ಆದರೆ, ಕಡೆಗೂ ಈ ವಿಚಾರದ ಕುರಿತು ಮೌನ ಮುರಿದಿದ್ದಾರೆ.


ಇತ್ತೀಚೆಗೆ ವಿಜಯ್ ಮತ್ತು ತಮನ್ನಾ 2 ವರ್ಷಗಳ ಡೇಟಿಂಗ್‌ಗೆ ಬ್ರೇಕ್ ಬಿದ್ದಿದೆ ಎಂದು ವರದಿಯಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿರುದ್ಧ ಹರಿದಾಡುತ್ತಿರುವ ಬ್ರೇಕಪ್ ಸುದ್ದಿ ಬಗ್ಗೆ ಮಾತನಾಡಿದ ತಮನ್ನಾ, “ಇಲ್ಲಿ ನಾನು ನನ್ನ ವೈಯಕ್ತಿಕ ಜೀವನವನ್ನು ಖಾಸಗಿಯಾಗಿಡಲು ಬಯಸುತ್ತೇನೆ. ನನಗೆ ಅದು ಸರಿ ಎಂದು ಅನಿಸಿದರೆ ಮಾತ್ರ ಹಂಚಿಕೊಳ್ಳುತ್ತೇನೆ. ಎಲ್ಲಿ ಯಾವ ವಿಷಯವನ್ನು ಹೇಳಬೇಕು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದಿದ್ದಾರೆ. ನನ್ನ ಕಡೆಯಿಂದ ಯಾರ ಬಗ್ಗೆಯೂ ಹಾಗೂ ಯಾವುದರ ಬಗ್ಗೆಯೂ ದೂರುಗಳಿಲ್ಲ ಎಂದಿದ್ದಾರೆ.‌ ಈ ಮೂಲಕ ಪರೋಕ್ಷವಾಗಿ ಬ್ರೇಕಪ್‌ ಸುದ್ದಿ ನನ್ನ ವೈಯಕ್ತಿಕ ವಿಚಾರ” ಎಂದಿದ್ದಾರೆ.

“ನಾನು ಜನಪರ ವ್ಯಕ್ತಿ. ಅವರೊಂದಿಗೆ ಮಾತನಾಡುವುದನ್ನು ನಾನು ಆನಂದಿಸುವೆ. ಏರ್‌ಪೋರ್ಟ್‌ನಲ್ಲಿ ಫೋಟೋಗ್ರಾಫರ್, ಅಭಿಮಾನಿಗಳನ್ನು ನಗುಮುಖದಿಂದಲೇ ಮಾತನಾಡಿಸುತ್ತೀನಿ. ಫೋಟೋ, ಸೆಲ್ಫಿ ಎಂದು ಕೇಳುವ ಜನರಿಗೆ ನಾನು ಓಕೆ ಅಂತೀನಿ. ಇದನ್ನೆಲ್ಲ ನಾನು ಬಹಳ ಸಂತೋಷದಿಂದ, ಹೃದಯದಿಂದ ಮಾಡುತ್ತಿದ್ದೇನೆ. ನಾನು ಮಾಡಿಕೊಂಡಿರುವ ಆಯ್ಕೆಯಲ್ಲಿ ಖುಷಿಯಾಗಿದ್ದೇನೆ. ಅಪರಿಚಿತರೊಂದಿಗೆ ಮಾತನಾಡುವ ಮೂಲಕ ನಾವು ಸಾಕಷ್ಟು ವಿಷಯಗಳನ್ನು ಕಲಿಯಬಹುದು ಎಂದು ತಮನ್ನಾ” ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ; ‘ಮಂಡ್ಯದ ಗಂಡು’ ನಿರ್ದೇಶಕ ಎಟಿ ರಘು ನಿಧನ

ಅಂದಹಾಗೆ, ಇತ್ತೀಚೆಗೆ ರವೀನಾ ಟಂಡನ್ ಮನೆಯಲ್ಲಿ ಹೋಳಿ ಹಬ್ಬ ಆಯೋಜಿಸಿದ್ದರು. ಈ ವೇಳೆ, ವಿಜಯ್ ಮತ್ತು ತಮನ್ನಾ ಪ್ರತ್ಯೇಕವಾಗಿ ಭಾಗಿಯಾಗಿದ್ದರು. ಇದು ವದಂತಿಗಳಿಗೆ ಮತ್ತಷ್ಟು ಪುಷ್ಠಿ ನೀಡಿತ್ತು.

Continue Reading

FILM

ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ; ‘ಮಂಡ್ಯದ ಗಂಡು’ ನಿರ್ದೇಶಕ ಎಟಿ ರಘು ನಿಧನ

Published

on

ಮಂಗಳೂರು/ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಶುಕ್ರವಾರ ಒಂದು ಶಾಕಿಂಗ್ ಸುದ್ದಿ ಸಿಕ್ಕಿದೆ. ಶುಭ ಶುಕ್ರವಾರ ಸಿನಿಮಾ ರಿಲೀಸ್ ಆಗುವ ದಿನವೇ ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎಟಿ ರಘು ನಿಧನ ಹೊಂದಿದ್ದಾರೆ.


ಸ್ಯಾಂಡಲ್​ವುಡ್​ನ​ ಖ್ಯಾತ ನಿರ್ದೇಶಕ ಎ.ಟಿ. ರಘು ಅವರು ತಮ್ಮ 76ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಎ.ಟಿ. ರಘು ಅವರು ‘ಮಂಡ್ಯದ ಗಂಡು’ ಸೇರಿದಂತೆ 55ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು. ರಘು ಅವರ ನಿಧನದ ಸುದ್ದಿ ಕೇಳಿ ಇಡೀ ಕನ್ನಡ ಚಿತ್ರರಂಗ ಆಘಾತಕ್ಕೆ​ ಒಳಗಾಗಿದೆ.

ರಘು ತೀವ್ರ ಅನಾರೋಗ್ಯದಿಂದ ಬಳಲುತ್ತಾ ಇದ್ದರು. ನಿರಂತರವಾಗಿ ಅವರು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಸದ್ಯ ಬೆಂಗಳೂರಿನ ಆರ್​ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದೆ. ಇಂದು (ಮಾರ್ಚ್ 21) ಮಧ್ಯಾಹ್ನ 2 ಗಂಟೆ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ಇದನ್ನೂ ಓದಿ: ಖ್ಯಾತ ಹಿಂದೂ ನಾಯಕ, ವಕೀಲ ಅಶ್ವಿನ್ ತ್ರಿಕಾಮಿ ವಿಧಿವಶ

ಮಂಡ್ಯದ ಗಂಡು, ಮಿಡಿದ ಹೃದಯಗಳು, ಮೈಸೂರ್ ಜಾಣಾ, ಅಂತಿಮ ತೀರ್ಪು, ನ್ಯಾಯ ನೀತಿ ಧರ್ಮ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಅಂಬರೀಶ್​ ಅವರಿಗೆ ಸುಮಾರು 27ಕ್ಕೂ ಅಧಿಕ ಸಿನಿಮಾ ನಿರ್ದೇಶನ ಮಾಡಿದ್ದರು. ರಜನಿಕಾಂತ್ ನಟನೆಯ ಮೇರಿ ಅದಾಲತ್ ಸಿನಿಮಾವನ್ನು ಕೂಡ ರಘು ನಿರ್ದೇಶಿಸಿದ್ದರು.

Continue Reading

FILM

ಟಾಲಿವುಡ್‌ನ 25 ಖ್ಯಾತ ನಟ, ನಟಿಯರ ಮೇಲೆ ಕೇಸ್ ದಾಖಲು

Published

on

ಮಂಗಳೂರು/ಹೈದರಾಬಾದ್: ಟಾಲಿವುಡ್‌ನ 25 ಖ್ಯಾತ ನಟ, ನಟಿಯರಿಗೆ ತೆಲಂಗಾಣ ಪೊಲೀಸರು ಶಾಕ್ ಕೊಟ್ಟಿದ್ದಾರೆ.

ವಿಜಯ್‌ ದೇವರಕೊಂಡ, ಪ್ರಕಾಶ್‌ ರಾಜ್, ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ನಿಧಿ ಅಗರವಾಲ್, ಕನ್ನಡದ ನಟಿ ಪ್ರಣೀತಾ ವಿರುದ್ದ ಕೇಸ್ ದಾಖಲಾಗಿದೆ.

32 ವರ್ಷದ ಉದ್ಯಮಿ ಫಣೀಂದ್ರ ಶರ್ಮಾ ಸಲ್ಲಿಸಿದ ಅರ್ಜಿಯ ಮೇರೆಗೆ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 318 (4), ಸೆಕ್ಷನ್ 112, 49ರಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾಗೆ ಭರ್ಜರಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ!

ಆನ್‌ಲೈನ್ ಬೆಟ್ಟಿಂಗ್ ದಂಧೆಯಿಂದ ಯುವಜನರು ಹಾಳಾಗುತ್ತಿದ್ದಾರೆ. ಸಮಾಜದಲ್ಲಿ ಸಾಕಷ್ಟು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಬೆಟ್ಟಿಂಗ್ ಆ್ಯಪ್‌ಗಳ ಆಘಾತಕಾರಿ ವಿಚಾರ ಗೊತ್ತಿದ್ದರೂ ಖ್ಯಾತ ನಟ, ನಟಿಯರು ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ.

ಹೀಗಾಗಿ ಇದಕ್ಕೆ ಕಡಿವಾಣ ಹಾಕುವಂತೆ ದೂರು ಸಲ್ಲಿಕೆಯಾಗಿತ್ತು. ಈ ದೂರಿನ ಆಧಾರದ ಮೇಲೆ ನಟ, ನಟಿಯರ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page