Connect with us

BELTHANGADY

ಪುತ್ತೂರು: ಬಿಜೆಪಿ ಕಾರ್ಯಕರ್ತರು ದಾಖಲಾಗಿರುವ ಆಸ್ಪತ್ರೆಗೆ ಹರೀಶ್ ಪೂಂಜ ಹಾಗೂ ಅರುಣ್ ಪುತ್ತಿಲ ಭೇಟಿ

Published

on

ಗಾಯಾಳು ಆರೋಪಿಗಳು ದಾಖಲಾಗಿರುವ ಪುತ್ತೂರಿನ ಆಸ್ಪತ್ರೆಗೆ ಶಾಸಕ ಹರೀಶ್‌ ಪೂಂಜಾ ಹಾಗೂ ಅರುಣ್ ಪುತ್ತಿಲ ಅವರು ಭೇಟಿ ನೀಡಿ ಅವರ ಅರೋಗ್ಯವನ್ನು ವಿಚಾರಿಸಿದರು.

ಪುತ್ತೂರು: ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಬಗ್ಗೆ ಆಕ್ಷೇಪಾರ್ಹ ಬ್ಯಾನರ್‌ನ್ನು ಪುತ್ತೂರು ಬಸ್‌ ನಿಲ್ದಾಣದ ಬಳಿ ಪ್ರದರ್ಶಿಸಿ ಅದಕ್ಕೆ ಚಪ್ಪಲಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಗಾಯಾಳು ಆರೋಪಿಗಳು ದಾಖಲಾಗಿರುವ ಪುತ್ತೂರಿನ ಆಸ್ಪತ್ರೆಗೆ ಶಾಸಕ ಹರೀಶ್‌ ಪೂಂಜಾ ಅವರು ಭೇಟಿ ನೀಡಿ ಅವರ ಅರೋಗ್ಯವನ್ನು ವಿಚಾರಿಸಿದರು.

ಜೊತೆಗೆ ಅರುಣ್ ಪುತ್ತಿಲ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದೆ ಬಗ್ಗೆ ವಿಚಾರಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ನಡೆಸಿದರೆನ್ನಲಾದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ದ.ಕ. ಜಿಲ್ಲಾ ಎಸ್‌ ಪಿ ಅವರನ್ನು ಒತ್ತಾಯಿಸಿದ್ದಾರೆ.

ಗಾಯಾಳು ಆರೋಪಿಗಳು ದಾಖಲಾಗಿರುವ ಪುತ್ತೂರಿನ ಆಸ್ಪತ್ರೆಗೆ ಶಾಸಕ ಹರೀಶ್‌ ಪೂಂಜಾ ಅವರು ಭೇಟಿ ನೀಡಿ ಅವರ ಅರೋಗ್ಯವನ್ನು ವಿಚಾರಿಸಿದ ಬಳಿಕ ಈ ದೌರ್ಜನ್ಯ ಅಮಾನವೀಯ. ಇದನ್ನು ಖಂಡಿಸುತ್ತೇನೆ ಎಂದು ಪೂಂಜಾ ತಿಳಿಸಿದರು.

BELTHANGADY

ಮಾಲಾಡಿ ಮನೆಯ ದೆವ್ವದ ರಹಸ್ಯವೇನು ಗೊತ್ತಾ..?

Published

on

ಬೆಳ್ತಂಗಡಿ ತಾಲೂಕಿನ ಮಾಲಾಡಿ ಎಂಬ ಗ್ರಾಮದಲ್ಲಿ ಭೂತದ ಕಾಟ ನಡೆಯುತ್ತಿರುವುದು ಈಗ ಕುತೂಹಲ ಮೂಡಿಸಿದೆ. ಕಳೆದ ಮೂರು ತಿಂಗಳಿನಿಂದ ಮನೆಯಲ್ಲಿ ವಿಚಿತ್ರ ಘಟನೆಗಳು ನಡೆಯುತ್ತಿದ್ದು, ಇದು ಭೂತದ ಚೇಷ್ಟೆ ಎಂದು ಮನೆಯವರು ಹೇಳಿಕೊಂಡಿದ್ದಾರೆ.

ಏಕಾಏಕಿ ಬೆಂಕಿ ತಗುಲಿ ಹೊತ್ತಿ ಉರಿಯುವ ಬಟ್ಟೆಗಳು.. ಇದ್ದಕ್ಕಿದ್ದಂತೆ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗುವ ಜೋಡಿಸಿಟ್ಟ ಅಡುಗೆ ಪಾತ್ರೆಗಳು… ಕತ್ತಲಾಗುತ್ತಿದ್ದಂತೆ ಮನೆಯಲ್ಲಿ ಇನ್ಯಾರೋ ಓಡಾಡಿದಂತೆ ಆಗುವ ಅನುಭವ. ಹೌದು ಇಂತಹ ಒಂದು ಘಟನೆ ಮನೆಯೊಂದರಲ್ಲಿ ನಡೆಯುತ್ತಿದ್ದು ಕಳೆದ ಮೂರು ತಿಂಗಳಿನಿಂದ ಮನೆಯವರು ನಿದ್ರೆಯನ್ನೇ ಕಳೆದುಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಉಮೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿದೆಯಂತೆ.

ಮೊಬೈಲ್‌ನಲ್ಲಿ ದೆವ್ವದ ಫೋಟೊ ಸೆರೆ

ಕತ್ತಲು ಆವರಿಸುತ್ತಿದ್ದಂತೆ ನಡೆಯುವ ಈ ವಿಚಿತ್ರಕಾರಿ ಘಟನೆಯಿಂದ ಮಾಲಾಡಿಯ ಈ ಮನೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಉಮೇಶ್ ಶೆಟ್ಟಿ ಹಾಗೂ ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಈ ಮನೆಯಲ್ಲಿ ವಾಸವಾಗಿದ್ದು, ಕಳೆದ ಮೂರು ತಿಂಗಳಿನಿಂದ ಈ ಅನುಭವ ಆಗುತ್ತಿದೆ ಎಂದು ಹೇಳಿದ್ದಾರೆ. ವಿಶೇಷ ಅಂದ್ರೆ ಉಮೇಶ್ ಶೆಟ್ಟಿ ಅವರ ಮಗಳು ತನ್ನ ಮೊಬೈಲ್ ಮೂಲಕ ಈ ವಿಚಿತ್ರ ಘಟನೆಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ಈ ವೇಳೆ ಮಹಿಳೆಯ ಮುಖವನ್ನು ಹೋಲುವ ಆಕೃತಿಯೊಂದು ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದೆ. ಹೀಗಾಗಿ ಇದು ಭೂತದ ಚೇಷ್ಟೆ ಅಂತ ಹೇಳಲಾಗಿದ್ದು, ಗ್ರಾಮದ ಜನರು ಇದರ ಪರಿಶೀಲನೆ ನಡೆಸಲು ಈ ಮನೆಗೆ ಬರ್ತಾ ಇದ್ದಾರೆ.

ಕೇವಲ ಮನೆಯವರಷ್ಟೇ ಇರುವಾಗ ಇಂತಹ ವಿಚಿತ್ರಕಾರಿ ಘಟನೆಗಳು ನಡೆದಿದೆ ಅನ್ನುವುದು ಇಲ್ಲಿ ಅನುಮಾನಕ್ಕೆ ಕಾರಣವಾಗಿದೆ. ಊರಿನ ಜನರು ಬಂದು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ನಡೆಸಿದ್ದಾರೆಯಾದ್ರೂ ಯಾರಿಗೂ ಇಂತಹ ಅನುಭವ ಉಂಟಾಗಿಲ್ಲ. ಹಾಗಂತ ಉಮೇಶ್ ಅವರ ಪತ್ನಿಗೆ ಉಸಿರುಗಟ್ಟಿದಂತಹ ಅನುಭವ ಹೊರತು ಪಡಿಸಿದ್ರೆ ಬೇರೆ ಏನು ಇಲ್ಲಿ ಕಂಡು ಬಂದಿಲ್ಲ. ಆದ್ರೆ ಅವರ ಉಸಿರುಗಟ್ಟುವಿಕೆಗೂ ಭೂತಕ್ಕೂ ಸಂಬಂಧ ಇದೆಯಾ ಅನ್ನೋದು ಕೂಡಾ ಖಚಿತವಾಗಿಲ್ಲ.

ಯಾವಾಗ ಇವರು ಮೊಬೈಲ್‌ನಲ್ಲಿ ವಿಚಿತ್ರ ಆಕೃತಿಯ ಫೋಟೊ ತೆಗೆದು ಊರ ಜನರಿಗೆ ತೋರಿಸಿದ್ರೋ ಆವಾಗಿನಿಂದ ಇಲ್ಲಿಗೆ ಪ್ರತಿ ನಿತ್ಯ ರಾತ್ರಿಯಾಗುತ್ತಿದ್ದಂತೆ ಜನರು ಬರಲು ಆರಂಭಿಸಿದ್ದಾರೆ. ಆದ್ರೆ ಊರವರ ಮುಂದೆ ಭೂತ ಪ್ರತ್ಯಕ್ಷವಾಗದೇ ಇರೋ ಕಾರಣ ಈ ಕಥೆಯ ಬಗ್ಗೆಯೇ ಜನರಿಗೆ ಅನುಮಾನ ಆರಂಭವಾಗಿದೆ. ಅಸಲಿಗೆ ಇಲ್ಲಿ ನಡೆಯುತ್ತಿರುವುದು ಭೂತದ ಚೇಷ್ಟೆಯೋ ಅಥವಾ ಮನುಷ್ಯ ನಿರ್ಮಿತ ಚೇಷ್ಟೆಯೋ ಅನ್ನೋ ಅನುಮಾನಗಳು ಜನರಿಗೆ ಕಾಡಿದೆ.

ಭಯದ ವಾತವಾರಣರದಲ್ಲಿ ಕತ್ತಲಲ್ಲಿ ಮೊಬೈಲ್ ಹಿಡಿದು ಭೂತದ ಫೋಟೊ ಹೇಗೆ ತೆಗೆದರು ಎಂಬ ಪ್ರಶ್ನೆಗೆ ಇದುವರೆಗೂ ಉತ್ತರ ಸಿಕ್ಕಿಲ್ಲ. ಹಾಗಂತ ಈ ರೀತಿ ಭೂತ ಇದೆ ಅಂತ ಸುಳ್ಳು ಹೇಳುವುದರಿಂದಲೂ ಇವರಿಗೇನು ಸಿಗುತ್ತದೆ ಎಂಬ ಪ್ರಶ್ನೆ ಕೂಡಾ ಎದುರಾಗಿದೆ. ಈ ವಿಚಾರದಲ್ಲಿ ನೂರಾರು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ಭೂತದ ಹುಟುಕಾಟಕ್ಕೆ ಜನರು ಮುಂದಾಗಿದ್ದಾರೆ. ಕೆಲವರು ಇದು ಹೌದು ಅಂದ್ರೆ ಇನ್ನೂ ಕಲವರು ಇದು ಸುಳ್ಳು ಅಂದಿದ್ದು, ಇದರ ಹಿಂದೆ ಏನೋ ಮಸಲತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ರೆ ಇದರ ಅಸಲಿ ಸತ್ಯ ಏನು ಅನ್ನೋ ಬಗ್ಗೆ ಈ ಮನೆಯವರ ಕೌನ್ಸಿಲಿಂಗ್ ಮಾಡಿದ್ರಷ್ಟೇ ಗೊತ್ತಾಗಬಹುದು ಅನ್ನೋದು ಹಲವರ ಅಭಿಪ್ರಾಯ.

Continue Reading

BELTHANGADY

ಬೆಳ್ತಂಗಡಿಯಲ್ಲಿ ದೆವ್ವದ ಕಾಟಕ್ಕೆ ಕಂಗಾಲಾದ ಕುಟುಂಬ; ಮೊಬೈಲ್‌ನಲ್ಲಿ ಭೂತದ ಫೋಟೊ ಸೆರೆ

Published

on

ಬೆಳ್ತಂಗಡಿ: ದೆವ್ವ, ಆತ್ಮ, ಪ್ರೇತಗಳು ಇವೆಯಾ…? ಇದೊಂದು ಉತ್ತರ ಇಲ್ಲದ ಪ್ರಶ್ನೆ. ನಂಬುವವರು ಇದಕ್ಕೆ ಹೌದು ಎನ್ನುತ್ತಾರೆ. ನಂಬದೇ ಇರುವವರು ಇದನ್ನು ಭ್ರಮೆ ಎನ್ನುತ್ತಾರೆ. ಇದರ ಜತೆಗೆ, ಕೆಲವೊಮ್ಮೆ ಕೆಲವೊಂದು ದೃಶ್ಯಗಳು, ಫೋಟೊ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಸದ್ಯ ಅಂತಹದ್ದೇ ದೃಶ್ಯವೊಂದು ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ವೈರಲ್ ಆಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮನೆಯೊಂದರಲ್ಲಿ ಭೂತದ ಚೇಷ್ಟೆಯಿಂದ ಕುಟುಂಬವೊಂದು ಕಂಗಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಮೂರು ತಿಂಗಳಿನಿಂದ ಈ ಕುಟುಂಬ ಭೂತದ ಕಾಟದಿಂದ ನಿದ್ದೆ ಇಲ್ಲದೆ ಕಳೆಯುತ್ತಿದೆ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಉಮೇಶ್ ಶೆಟ್ಟಿ ಎಂಬವರ ಕುಟುಂಬ ಈ ಸಮಸ್ಯೆಗೆ ಸಿಲುಕಿದೆ.

ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿರುವ ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ನಿತ್ಯ ವಿಚಿತ್ರ ಘಟನೆಗಳು ನಡೆಯುತ್ತಿದ್ದು, ಸಂಜೆಯಾಗುತ್ತಿದ್ದಂತೆ ಮನೆಯವರು ಭಯ ಭೀತರಾಗುತ್ತಿದ್ದಾರೆ. ಮಲಗಿದ್ದ ವೇಳೆ ಕುತ್ತಿಗೆ ಹಿಡಿದಂತಾಗುವುದು, ಪಾತ್ರೆಗಳನ್ನು ಎಸೆಯುವುದು, ಬಟ್ಟೆಗೆ ಬೆಂಕಿ ತಗಲುವುದು ಮೊದಲಾದ ಘಟನೆಗಳು ನಡೆಯುತ್ತಿದೆ ಎನ್ನಲಾಗಿದೆ.

ಈ ಸುದ್ದಿ ತಿಳಿದ ಹಲವಾರು ಜನರು ಉಮೇಶ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆಯಾದ್ರೂ ಅವರಿಗೆ ಯಾರಿಗೂ ಈ ಅನುಭವ ಆಗಿಲ್ಲ. ಉಮೇಶ್ ಶೆಟ್ಟಿ ಅವರ ಪುತ್ರಿ ತನ್ನ ಶಿಕ್ಷಣದ ಸಲುವಾಗಿ ಮೊಬೈಲ್ ನೋಡುತ್ತಿರುವ ಸಂದರ್ಭದಲ್ಲಿ ಇಂತಹ ಅನುಭವ ಉಂಟಾಗಿ ಫೋಟೋ ತೆಗೆದಾಗ ಒಂದು ಆಕೃತಿ ಮೊಬೈಲ್ ಫೋಟೋದಲ್ಲಿ ಸೆರೆಯಾಗಿದೆ. ಇದರ ಜೊತೆಗೆ ಬಟ್ಟೆಗೆ ಬೆಂಕಿ ಬಿದ್ದಿರುವ ಫೋಟೊವನ್ನು ಕೂಡಾ ಅವರು ತೆಗೆದಿದ್ದಾರೆ.

ಒಟ್ಟಾರೆ ಈ ಮನೆಯಲ್ಲಿ ಕಾಡುವ ಸಮಸ್ಯೆಯ ಬಗ್ಗೆ ಜನರು ತಲೆಗೊಂದು ಮಾತನಾಡುತ್ತಿದ್ದು, ಭೂತ ಇದೆಯಾ ಇಲ್ಲವೋ ಎಂಬ ಕುತೂಹಲದಿಂದ ಪರೀಕ್ಷೆ ನಡೆಸಲು ಹಲವಾರು ಜನರು ಇವರ ಮನೆಗೆ ಬರುತ್ತಾ ಇದ್ದಾರೆ.

Continue Reading

BELTHANGADY

ಪಿಲ್ಯ ಸಮೀಪ ಕಾರುಗಳ ನಡೆವೆ ಭೀಕರ ಅಪಘಾತ; ನಾಲ್ವರಿಗೆ ಗಾಯ, ಇರ್ವರು ಗಂಭೀರ

Published

on

ಬೆಳ್ತಂಗಡಿ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಿನ್ನೆ (ಫೆ.2) ಸಂಜೆ ಬೆಳ್ತಂಗಡಿ ತಾಲೂಕಿನ ಪಿಲ್ಯ ಸಮೀಪ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತಿದ್ದ ಕಾರಿಗೆ ಹಾಗೂ ಉಡುಪಿ ಕಡೆಯಿಂದ ಬರುತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ.

ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಕಾರಿನಲ್ಲಿದ್ದವರ ಮಾಹಿತಿ ತಿಳಿಯಬೇಕಷ್ಟೇ.

Continue Reading
Advertisement

Trending

Copyright © 2025 Namma Kudla News

You cannot copy content of this page