Connect with us

DAKSHINA KANNADA

ಪುತ್ತೂರು : ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ 78 ನೇ ಜಯಂತ್ಯೋತ್ಸವ ಸಂಸ್ಕರಣೆ ಕಾರ್ಯಕ್ರಮಕ್ಕೆ ಭರದ ಸಿದ್ದತೆ..!

Published

on

ಪುತ್ತೂರು: ಜ.22ರಂದು ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಜರುಗಲಿರುವ ಭೈರವೈಕ್ಯ ಶ್ರೀ ಡಾ| ಬಾಲಗಂಗಾಧರನಾಥ ಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆ, ಗ್ರಂಥಲೋಕಾರ್ಪಣೆ, ಗುರುವಂದನೆ, ರಜತ ತಲಾಭಾರ ಕಾರ್ಯಕ್ರಮದ ಸಿದ್ಧತೆಗಾಗಿ ಈಗಾಗಲೇ ಭರದ ಸಿದ್ಧತೆ ನಡೆಯುತ್ತಿದ್ದು, ಸುಮಾರು 86 ಸಾವಿರ ಚದರ ಅಡಿಗೂ ಮಿಕ್ಕಿ ಸಭಾಂಗಣ ನಿರ್ಮಾಣ ಮಾಡಲಾಗುತ್ತಿದೆ.

 ದೇವಳದ ಗದ್ದೆಯ ತುದಿಯಲ್ಲಿರುವ ಧ್ಯಾನರೂಢ ಶಿವನ ಪ್ರತಿಮೆಯ ಬಳಿಯಿಂದ ಹಿಡಿದು ದೇವಳದ ಬಳಿಯ ಶ್ರೀ ಅಯ್ಯಪ್ಪ ಸನ್ನಿಧಿಯ ತನಕ ಶೀಟ್ ಹಾಸು ಮತ್ತು ಪೆಂಡಾಲ್ ಅಳವಡಿಸಲಾಗುತ್ತಿದೆ.

ಸುಮಾರು 120 ಚದರಅಡಿ ಅಗಲ ಮತ್ತು 40 ಚ.ಅಡಿ ಉದ್ದದ ವೇದಿಕೆ ನಿರ್ಮಾಣಗೊಂಡಿದೆ.

ಅಲ್ಲಿಂದ 400 ಮೀಟರ್ ಉದ್ದಕ್ಕೂ 300ಮೀಟರ್ ಅಗಲದ ಶೀಟ್ ಅಳವಡಿಕೆಯ ಪೆಂಡಾಲ್, ಬಳಿಕ ದೇವಳದ ಬಳಿಯ ತನಕವೂ ಶಾಮೀಯಾನದ ಪೆಂಡಾಲ್ ಅಳವಡಿಸಲಾಗಿದೆ.

ಪೆಂಡಾಲ್ ಪೂರ್ಣ ನೆಲಕ್ಕೆ ಧೂಳು ಬಾರದಂತೆ ನೈಲಾನ್ ಶೇಡ್ ನೆಟ್‌ ಹೊದಿಕೆ ಹಾಕಲಾಗಿದೆ.

ಈ ಹಿಂದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶದ ಸಂದರ್ಭದಲ್ಲಿ ಪಾಕಶಾಲೆ ಮಾಡುತ್ತಿದ್ದ ಸ್ಥಳದಲ್ಲೇ ಪಾಕಶಾಲೆ ನಿರ್ಮಾಣ ಮಾಡಲಾಗಿದೆ.

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಕರಣೆ ಕಾರ್ಯಕ್ರಮದ ಆಮಂತ್ರಣವನ್ನು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಸಂಸ್ಕರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಅವರು ಸಂಸ್ಥಾನದಲ್ಲಿ ನೀಡಿದರು.

ಜ. ೨೨ರಂದು ನಡೆಯುವ ಕಾರ್ಯಕ್ರಮಕ್ಕೆ ಮೊದಲನೆ ದಿನ ಆಗಮಿಸಲಿರುವ ಶ್ರೀಗಳು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ.

ಮರುದಿನ ಬೆಳಗ್ಗೆಯಿಂದಲೇ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ.

ಸಂಸ್ಕರಣಾ ಸಮಿತಿಯ ಅರ್ಥಿಕ ಸಮಿತಿ ಸಂಚಾಲಕ ಯು.ಪಿ ರಾಮಕೃಷ್ಣ ಗೌಡ, ಬೆಂಗಳೂರು ದಕ್ಷಿಣ ಕನ್ನಡ ಗೌಡ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ಲಕ್ಷ್ಮೀ ನಾರಾಯಣ ಗೌಡ ಐವರ್ನಾಡು, ದಕ್ಷಿಣ ಕನ್ನಡ ಕೊಡಗು ಗೌಡ ಸಂಘದ ಕಾರ್ಯದರ್ಶಿ ನಾಗೇಶ್ ಕುಮಾರ್ ಕಲಮೋಟ್ಟು ಹಾಗೂ ಯೋಗೀಶ್ ಉಪಸ್ಥಿತರಿದ್ದರು.

1979ರಲ್ಲಿ ಮಹಾಸ್ವಾಮೀಜಿ ದಕ್ಷಿಣ ಕನ್ನಡಕ್ಕೆ ಬಂದು ಒಕ್ಕಲುತನ ಮಾಡುವ ಬಂಧುಗಳ ಮನೆಯಲ್ಲಿ ನಿಂತು ಶ್ರೀ ಮಠದ ಬಗ್ಗೆ ಇಲ್ಲಿನ ಭಕ್ತರನ್ನು ಸಂಘಟಿಸುವ ಕೆಲಸ ಮಾಡಿದ್ದಾರೆ. 1958ರಲ್ಲಿ ಅವರಿಗೆ ಬೆಳ್ಳಿಯ ತುಲಾಭಾರ ಮಂಗಳೂರಿನಲ್ಲಿ ಮಾಡಲಾಗಿತ್ತು.

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ..

68ನೇ ಜಯಂತ್ಯೋತ್ಸವವು ಮಂಗಳೂರಿನಲ್ಲಿ ನಡೆಯಿತು.

ಅವರು ಭೈರವೈಕ್ಯರಾದ ಬಳಿಕವೂ 78ನೇ ಜಯಂತ್ಯೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾಡಲಾಗುತ್ತಿದೆ.

ಈ ಮೂಲಕ ಶ್ರೀಗಳ ಕಾರ್ಯವನ್ನು ಮತ್ತೊಮ್ಮೆ ಸಮಾಜಕ್ಕೆ ನೆನಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page