Connect with us

LATEST NEWS

ಪುತ್ತೂರು: ಹಿಂದೂ ಭಜಕರ ವಿರುದ್ಧ ಪೋಸ್ಟ್ ಮಾಡಿ ತಗ್ಲಾಕೊಂಡ ಸರ್ಕಾರಿ ಅಧಿಕಾರಿ

Published

on

ಪುತ್ತೂರು: ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಬರಹ ಇದೀಗ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟು ಹಿಡಿದಿವೆ. ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಗಡುವು ನೀಡಲಾಗಿದೆ. ತಪ್ಪಿದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಈ ಹಿಂದೆ ಪ್ರವಾದಿ ಬಗ್ಗೆ ಪೋಸ್ಟ್ ಮಾಡಿದ ಹಿಂದೂ ಯುವಕನನ್ನು ಪೋಲೀಸರು ತಕ್ಷಣ ಬಂಧಿಸಿದ್ದಾರೆ.

ಆದರೆ ಹಿಂದೂಗಳ ಆಚರಣೆಯ ಬಗ್ಗೆ ಬರೆದ ಅಧಿಕಾರಿಯ ಮೇಲೆ ಕ್ರಮಕ್ಕೆ ಮೀನಾಮೇಷ ಎಣಿಸಲಾಗುತ್ತಿದೆ. ಅಲ್ಲದೆ ಹಿಂದೂ ಭಜಕರ ಅವಹೇಳನಕಾರಿಯಾಗಿ ಬರೆದ ಅಧಿಕಾರಿಯನ್ನು ಸಮರ್ಥಿಸುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್, ಯು.ಟಿ.ಖಾದರ್ ಅಧಿವೇಶನದಲ್ಲಿ ಅಧಿಕಾರಿಯ ಪರ ಮಾತನಾಡುತ್ತಾರೆ.


ಹಿಂದೂಗಳ ಆಚರಣೆ ಬಗ್ಗೆ ಬರೆದವನ ಪರ ವಹಿಸುವ ಈ ಮುಖಂಡರು ಹಿಂದೂ ಯುವಕನ ಪರ ಯಾಕೆ ಮಾತಾಡಿಲ್ಲ? ಎಂದವರು ವಾಗ್ದಾಳಿ ನಡೆಸಿದರು.

ಅಧಿಕಾರಿಯನ್ನು ಅಮಾನತು ಮಾಡದೇ ಹೋದಲ್ಲಿ ಪ್ರತಿಭಟನೆಯನ್ನು ಹಂತ ಹಂತವಾಗಿ ಮಾಡಲಾಗುವುದು.

10 ಸಾವಿರ ಭಜಕರನ್ನು ಸೇರಿಸಿ ರಸ್ತೆ ತಡೆ ನಡೆಸಲಾಗುವುದು. ಅರಣ್ಯ ಇಲಾಖೆಯ ಎಲ್ಲಾ ಕಛೇರಿ ಮುಂದೆಯೂ ಪ್ರತಿಭಟಿಸಲಾಗುವುದು ಎಂದು ಸರಕಾರ ಮತ್ತು ಅಧಿಕಾರಿಗಳಿಗೆ ಅವರು ಎಚ್ಚರಿಕೆ ನೀಡಿದ್ದಾರೆ.

 

LATEST NEWS

ಲಾಡ್ಜ್‌ನ ಹಿಂಭಾಗದ ಪಾಳು ಬಿ*ದ್ದ ಪಾರ್ಕ್‌ನಲ್ಲಿ ಯುವಕನ ಶ*ವ ಪತ್ತೆ

Published

on

ಮಂಗಳೂರು/ಕಲಬುರಗಿ : ಲಾಡ್ಜ್ ಒಂದರ ಹಿಂಭಾಗದ ಪಾಳು ಬಿ*ದ್ದ ಪಾರ್ಕ್‌ನಲ್ಲಿ ಯುವಕನನ್ನು ಮಾರ*ಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹ*ತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

21 ವರ್ಷದ ಸಯ್ಯದ್ ಮೆಹಬೂಬ್ ಅಲಿಯಾಸ್ ಬಾಡಿ ಹ*ತ್ಯೆಗೊಳಗಾದ ಯುವಕ. ಅಪರಿಚಿತ ದುಷ್ಕರ್ಮಿಗಳು ತಡರಾತ್ರಿ ಈ ಕೃ*ತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಫಾರೆನ್ಸಿಕ್ ತಂಡ ಹಾಗೂ ಶ್ವಾನ ದಳದಿಂದಲೂ ತನಿಖೆ ಕೈಗೊಳ್ಳಲಾಗಿದೆ. ಮೆಹಬೂಬ್ ಕೆಲ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎನ್ನಲಾಗಿದೆ. ಹಳೆಯ ದ್ವೇಷದ ಹಿನ್ನೆಲೆ ಈ ಕೊ*ಲೆ ನಡೆದಿರುವ ಸಾಧ್ಯತೆಯಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕೇರಳ: ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಆತ್ಮಹತ್ಯೆ ಪ್ರಕರಣ; ವ್ಲೋಗರ್ ಶಿಂಜಿತಾ ಮುಸ್ತಫಾ ಬಂಧನ

ಈ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Continue Reading

LATEST NEWS

ಕರಾಚಿ ಶಾಪಿಂಗ್ ಮಾಲ್‌ನಲ್ಲಿ ಅ*ಗ್ನಿ ಅವ*ಘಡ; ಒಂದೇ ಮಳಿಗೆಯಲ್ಲಿತ್ತು 30 ಶ*ವಗಳು

Published

on

ಮಂಗಳೂರು/ಕರಾಚಿ : ಕರಾಚಿಯ ಗುಲ್ ಪ್ಲಾಜಾ ಶಾಪಿಂಗ್‌ ಮಾಲ್‌ ನಲ್ಲಿ ಉಂಟಾದ ಅ*ಗ್ನಿ ಅವ*ಘಡದಲ್ಲಿ ಸಾ*ವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಒಂದೇ ಮಳಿಗೆಯಲ್ಲಿ 30 ಶ*ವಗಳು ಪತ್ತೆಯಾಗಿರೋದು ಶಾ*ಕ್ ಕೊಟ್ಟಿದೆ.  ಸಾ*ವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆಯಿದೆ.

ಪಾಕಿಸ್ತಾನದ ಮನಿ ಕ್ಯಾಪಿಟಲ್‌ ಎಂದೇ ಖ್ಯಾತಿಗಳಿಂದ  ಕರಾಚಿ ಸದರ್‌ ಪ್ರದೇಶದಲ್ಲಿರುವ ಗುಲ್‌ ಶಾಪಿಂಗ್‌ ಮಾಲ್‌ನ ನೆಲಮಾಳಿಗೆಯಲ್ಲಿ ಜ.17 ರಂದು ಬೆಂ*ಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂ*ಕಿ ಬಳಿಕ ಕ್ಷಣಾರ್ಧದಲ್ಲಿ ಇಡೀ ಮಾಲ್‌ಗೆ ವ್ಯಾಪಿಸಿತ್ತು.

1,200 ಮಳಿಗೆಗಳನ್ನು ಹೊಂದಿರುವ  ಗುಲ್ ಪ್ಲಾಜಾ ಶಾಪಿಂಗ್‌ ಮಾಲ್‌ನಲ್ಲಿ 36 ಗಂಟೆಗಳ ಬಳಿಕ ಬೆಂ*ಕಿಯನ್ನು ನಿಯಂತ್ರಣಕ್ಕೆ ತರಲಾಗಿತ್ತು. ಬೆಂ*ಕಿಯನ್ನ ಮುಚ್ಚುವುದಕ್ಕಾಗಿ ಒಳಗಿದ್ದ ಹಲವು ಮಳಿಗೆಗಳ ಶೆಟರ್‌ಗಳನ್ನ ಬಂದ್‌ ಮಾಡಲಾಗಿತ್ತು.

ಇದನ್ನೂ ಓದಿ : ಕೇರಳ: ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಆತ್ಮಹತ್ಯೆ ಪ್ರಕರಣ; ವ್ಲೋಗರ್ ಶಿಂಜಿತಾ ಮುಸ್ತಫಾ ಬಂಧನ

ಬೆಂಕಿ ನಿಯಂತ್ರಣಕ್ಕೆ ಬಂದ ಬಳಿಕ  ಮಾಲ್ ಒಳಗೆ ಪರಿಶೀಲನೆ ನಡೆಸಲಾಯಿತು. ಈ ವೇಳೆ  ‘ದುಬೈ ಕ್ರಾಕರಿ’ ಎಂಬ ಒಂದೇ ಮಳಿಗೆಯಲ್ಲಿ ಸುಮಾರು 30 ಶ*ವಗಳು ಪತ್ತೆಯಾಗಿವೆ. ಬೆಂ*ಕಿಯಿಂದ ತಪ್ಪಿಸಿಕೊಳ್ಳಲು ಗ್ರಾಹಕರು ಹಾಗೂ ಮಳಿಗೆಯವರು ಶೆಟ್ಟರ್ ಮುಚ್ಚಿಕೊಂಡಿದ್ದಾರೆ. ಈ ವೇಳೆ ದಟ್ಟ ಹೊಗೆ ತುಂಬಿಕೊಂಡು ಸಾ*ವನ್ನಪ್ಪಿರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತವಾಗಿದೆ. ಅಲ್ಲದೇ ಹಲವು ಮಂದಿ ಕಾಣೆಯಾಗಿದ್ದಾರೆಂದು ತಿಳಿದು ಬಂದಿದೆ.

Continue Reading

DAKSHINA KANNADA

ಪುತ್ತೂರು: 33ನೇ ವರ್ಷದ ಕೋಟಿ-ಚೆನ್ನಯ ಜೋಡುಕೆರೆ ಕಂಬಳ

Published

on

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಜನವರಿ 24 ಮತ್ತು 25ರಂದು ನಡೆಯಲಿದೆ.


ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ಕೂಟಗಳ ಪೈಕಿ ಹಲವು ಪ್ರಥಮಗಳನ್ನು ಸ್ಥಾಪಿಸಿದ ಕೂಟವೆಂಬ ಹೆಗ್ಗಳಿಕೆ ಪುತ್ತೂರು ಕಂಬಳಕ್ಕಿದ್ದು, ಈ ಬಾರಿ 200ಕ್ಕಿಂತಲೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸಲಿವೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.32ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯ ಜೋಡುಕರೆಯಲ್ಲಿ ಕಂಬಳವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಲಿದ್ದಾರೆ ಎಂದರು.

ಇದನ್ನೂ ಓದಿ: ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ರೈ ವಹಿಸಲಿದ್ದಾರೆ ಹಲವು ಮಂದಿ ಗಣ್ಯರು ಭಾಗವಹಿಸಲಿರುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಕೋಶಾಕಾರಿ ಪಂಜಿಗುಡ್ಡೆ ಈಶ್ವರ ಭಟ್, ಉಪಾಧ್ಯಕ್ಷರಾದ ನಿರಂಜನ ರೈ ಮಠಂತಬೆಟ್ಟು ಮೊದಲಾದವರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page