Connect with us

FILM

ಡ್ರಗ್ಸ್ ದಂಧೆ ಸ್ಯಾಂಡಲ್ ವುಡ್ ನಟಿ ರಾಗಿಣಿ ಸಿಸಿಬಿ ವಶಕ್ಕೆ

Published

on

ಬೆಂಗಳೂರು: ಬೆಂಗಳೂರು ಡ್ರಗ್ಸ್ ದಂಧೆ ಪ್ರಕರಣದ ಹಿನ್ನಲೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದಾರೆ. ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ ಅವರ ಯಲಹಂಕದ ಜ್ಯುಡಿಷಿನಲ್ ಲೇಔಟ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಮುಂಜಾನೆಯೇ ಆರಂಭವಾದ ತಪಾಸಣೆ ಬೆಳಗ್ಗೆ 10.15ರವರೆಗೂ ಮುಂದುವರಿದಿತ್ತು. ಮನೆಯ ಪ್ರತಿ ಮೂಲೆ ಮೂಲೆಯನ್ನೂ ತೀವ್ರವಾಗಿ ಪರಿಶೀಲಿಸಿದ ಬಳಿಕ ಕೆಲವು ಮಹತ್ವದ ದಾಖಲೆಗಳನ್ನು ಪಡೆದುಕೊಳ್ಳಲಾಗಿದೆ. ಬಳಿಕ ರಾಗಿಣಿ ಅವರನ್ನು ವಶಕ್ಕೆ ಪಡೆದು, ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಅಧಿಕಾರಿಗಳ ಇನ್ನಷ್ಟು ಪ್ರಶ್ನೆಗಳಿಗೆ ರಾಗಿಣಿ ಉತ್ತರಿಸಬೇಕಿದೆ. ಸತತ 3 ಗಂಟೆ ಶೋಧ ಕಾರ್ಯ ಬಳಿಕ ಮನೆ ಕೀ, ಕಾರು ಕೀ, ಮೊಬೈಲ್ ಅನ್ನು ವಶಕ್ಕೆ ಪಡೆದು ರಾಗಿಣಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಗುರುವಾರವೇ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗವಂತೆ ಈ ಹಿಂದೆಯೇ ರಾಗಿಣಿಗೆ ನೋಟಿಸ್‌ ನೀಡಲಾಗಿತ್ತು. ಆದರೆ ಕೆಲವು ಕಾರಣಗಳನ್ನು ನೀಡಿ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ರಾಗಿಣಿ ಅವರ ಆಪ್ತ ರವಿಶಂಕರ್‌ ಅವರಿಂದಲೂ ಅನೇಕ ಮಾಹಿತಿಗಳನ್ನು ಕಲೆ ಹಾಕಿದ ಬಳಿಕ ಅಧಿಕಾರಿಗಳು ತಕ್ಷಣವೇ ಈ ದಾಳಿ ನಡೆಸಿದ್ದಾರೆ. ಇನ್ನಷ್ಟು ನಟಿಯರ ಹೆಸರು ಕೂಡ ಹೊರಬರುವ ಸಾಧ್ಯತೆ ದಟ್ಟವಾಗಿದೆ.

FILM

ಕರಾವಳಿಯಾದ್ಯಂತ ತೆರೆಕಂಡ ‘ಧರ್ಮ ಚಾವಡಿ’ ತುಳು ಚಿತ್ರ

Published

on

ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಲಾದ ಧರ್ಮ ಚಾವಡಿ ತುಳು ಚಿತ್ರ ಇಂದು(ಜು.11) ಮಂಗಳೂರಿನ ಭಾರತ್‌ ಮಾಲ್‌ನಲ್ಲಿ ಬಿಡುಗಡೆಗೊಂಡಿತು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ದೀಪ ಬೆಳಗಿಸುವ ಮೂಲಕ ಸಿನೆಮಾ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತುಳು ಚಿತ್ರರಂಗ ಇದೀಗ ಉಚ್ಛಾಯ ಸ್ಥಿತಿಯಲ್ಲಿದ್ದು, ಚಿತ್ರ ಯಶಸ್ಸಿ ಕಾಣಲಿ. ಈ ಮೂಲಕ ಇನ್ನಷ್ಟು ವ್ಯಾಪಿಸಲಿ ಎಂದು ನಳಿನ್ ಶುಭ ಹಾರೈಸಿದರು.

ಇದನ್ನೂ ಓದಿ: ಚಿನ್ನದಂಗಡಿಗೆ ನುಗ್ಗಿ 3 ಕೆಜಿ ಚಿನ್ನಾಭರಣವನ್ನು ಲೂಟಿ ಮಾಡಿ ಪರಾರಿಯಾದ ಕಳ್ಳರು

ಕಾರ್ಯಕ್ರಮದಲ್ಲಿ ಗಣ್ಯರಾದ ಚಿತ್ರ ನಿರ್ಮಾಪಕರಾದ ವಿಜಯಕುಮಾರ್ ಕೊಡಿಯಾಲ್‌ ಬೈಲ್‌, ದೇವದಾಸ್‌ ಕಾಪಿಕಾಡ್, ಆರ್ ಧನರಾಜ್‌, ಯೋಗೀಶ್ ಶೆಟ್ಟಿ, ಲಂಚುಲಾಲ್‌, ಇಸ್ಮಾಯಿಲ್‌ ಮೂಡುಶೆಡ್ಡೆ, ಮೋಹನ್‌ ಕೊಪ್ಪಳ, ಪ್ರಕಾಶ್ ಪಾಂಡೇಶ್ವರ, ತಾರಾನಾಥ ಗಟ್ಟಿ ಕಾಪಿಕಾಡ್, ರೂಪೇಶ್ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಸ್ವರಾಜ್ ಶೆಟ್ಟಿ, ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ, ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ, ನಟಿ ಧನ್ಯ ಪೂಜಾರಿ, ಚಿತ್ರ ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ಸಂಗೀತ ನಿರ್ದೇಶಕ ಪ್ರಸಾದ್ ಕೆ. ಶೆಟ್ಟಿ, ಅರುಣ್ ರೈ ಪುತ್ತೂರು, ನಟಿ ನೇಹಾ ಕೋಟ್ಯಾನ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದು, ಚಿತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Continue Reading

FILM

‘ಅಮೃತಧಾರೆ’ ಕಿರುತೆರೆ ನಟಿಗೆ ಪತಿಯಿಂದ ಚಾ*ಕು ಇ*ರಿತ

Published

on

ಬೆಂಗಳೂರು: ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಶ್ರುತಿ ಚಾ*ಕು ಇ*ರಿತಕ್ಕೆ ಒಳಗಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರುತಿ ಅವರ ಪತಿ ಅಮರೇಶ್ ಅವರೇ ಪತ್ನಿಗೆ ಚಾ*ಕು ಇ*ರಿದಿದ್ದಾರೆ ಎನ್ನಲಾಗಿದ್ದು, ಪೊಲೀಸರು ಅಮರೇಶ್ ಅನ್ನು ಬಂಧಿಸಿದ್ದಾರೆ. ಈ ಘಟನೆ ಜುಲೈ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶ್ರುತಿ 20 ವರ್ಷದ ಹಿಂದೆ ಅಮರೇಶ್‌ ಎಚ್‌ಎಸ್‌ಎಂಬಾತನ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ ಇಬ್ಬರು ಮಕ್ಕಳು ಕೂಡ ಇದ್ದರು. ಸಂಸಾರ ಸಮೇತ ಹನುಮಂತ ನಗರದಲ್ಲಿ ಲೀಸ್ ಗೆ ಮನೆ ಪಡೆದು ದಂಪತಿ ವಾಸವಿದ್ದರು. ನಂತರ ಶ್ರುತಿ ನಡವಳಿಕೆ ಗಂಡ ಅಮರೇಶ್‌ಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೂಡ ಸರಿಯಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಗಂಡನಿಂದ ದೂರಾಗಿ ಶ್ರುತಿ ಅಣ್ಣನ ಮನೆಯಲ್ಲಿ ವಾಸವಿದ್ದರು. ಕಳೆದ ಏಪ್ರಿಲ್‌ನಲ್ಲಿ ಶ್ರುತಿ ಗಂಡನಿಂದ ದೂರವಾಗಿದ್ದರು. ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಪ್ರೇಮಿಗಳು

ಈ ಕುರಿತಂತೆ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದರು. ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂದಾನ ಮಾಡಿ ಗಂಡ-ಹೆಂಡತಿ ಒಂದಾಗಿದ್ದರು. ಆದರೆ, ಇಬ್ಬರೂ ಒಂದಾದ ಮಾರನೇ ದಿನವೇ ಗಂಡ ಪತ್ನಿಗೆ ಚಾ*ಕು ಇರಿದಿದ್ದಾನೆ. ಕಳೆದ ಶುಕ್ರವಾರ ಮಕ್ಕಳಿಬ್ಬರು ಕಾಲೇಜಿಗೆ ಹೋದ ನಂತರ ಹೆಂಡತಿಯ ಮೇಲೆ ಹ*ಲ್ಲೆ ನಡೆದಿದೆ. ಪೆಪ್ಪರ್ ಸ್ಪ್ರೇ ಹೊಡೆದು ಹೆಂಡತಿಗೆ ಚಾ*ಕು ಇ*ರಿದು ಕೊ*ಲೆಗೆ ಯತ್ನ ನಡೆಸಿದ್ದಾನೆ. ಸದ್ಯ ಶ್ರುತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

FILM

ತುಳು ಚಿತ್ರ “ಧರ್ಮ ಚಾವಡಿ” ಜುಲೈ 11 ಕ್ಕೆ ಬಿಡುಗಡೆ

Published

on

ಮಂಗಳೂರು: ಕೃಷ್ಣವಾಣಿ ಪಿಚ್ಚರ್ಸ್‌ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ರಮೇಶ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.


ಚಿತ್ರದ ಬಗ್ಗೆ ಸುದ್ದಿಗಾರರಿಗೆ ಮಾಹಿತಿನೀಡಿದ ಅವರು, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ.

ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್, ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ, ರಂಜನ್ ಬೋಲೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ ಎಂದರು.

ಇದನ್ನೂ ಓದಿ: ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡ್ಲ್‌ ಈಸ್ಟ್- 2025; ತುಳುನಾಡಿನ ಮಹಿಳೆಯರಿಗಾಗಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ ಅಮೀನ್, ನಿತೀನ್ ರೈ ಕುಕ್ಕುವಳ್ಳಿ, ಪ್ರಸಾದ್ ಕೆ.ಶೆಟ್ಟಿ, ಅರುಣ್ ರೈ ಪುತ್ತೂರು, ಧನ್ಯಾ ಪೂಜಾರಿ, ನೇಹ ಕೋಟ್ಯಾನ್ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page