Connect with us

LATEST NEWS

ಅರವಿಂದ ಶ್ಯಾನಭಾಗ ನನ್ನ ವಿರುದ್ಧ ಮಾಡಿದ ಆರೋಪ ಸತ್ಯಕ್ಕೆ ದೂರ: ಅಕಾಡೆಮಿ ಅಧ್ಯಕ್ಷ ರಹೀಮ್‌ ಉಚ್ಚಿಲ್‌

Published

on

ಮಂಗಳೂರು: ಅಕಾಡೆಮಿಯ ಅಧ್ಯಕ್ಷನಾದ ನಾನು 2020 ರ ಎಪ್ರಿಲ್ ಹಾಗೂ ಮೇ 15 ರ ತನಕ ಮಾಸಿಕ ಗೌರವ ಧನ ಕೇವಲ 28000 ರೂ ಪಡೆದುಕೊಂಡಿರುವುದಕ್ಕೆ

ನನ್ನಿಂದ ಭ್ರಷ್ಟಾಚಾರ ನಡೆದಿದೆ ಎಂದು ಮಾಧ್ಯಮದ ಮೂಲಕ ಕುಮಟಾ ತಾಲೂಕಿನ ಅರವಿಂದ ಶ್ಯಾನಭಾಗ ಎಂಬವರು ಆರೋಪ ಮಾಡಿದ್ದು ಇದು ಸತ್ಯಕ್ಕೆ ದೂರವಾಗಿದೆ.


ಅವರು ಆರೋಪ ಮಾಡಿದ ಅದೇ ತಿಂಗಳಲ್ಲಿ 140 ಮನೆಗೆ ಆಹಾರ ಸಾಮಾಗ್ರಿ ಕಿಟ್ ಅಕಾಡೆಮಿಯ ವತಿಯಿಂದ ವಿತರಿಸಲಾಗಿದ್ದು, 277 ಕಲಾವಿದರಿಗೆ ಸಹಾಯಧನವನ್ನು ನೇರವಾಗಿ ಖಾತೆಗೆ ಇಲಾಖೆಯ ಮುಖಾಂತರ ಜಮಾ ಮಾಡಲಾಗಿದೆ.

ಈ ಎಲ್ಲಾ ಕೆಲಸ ಕಾರ್ಯಗಳಿಗೆ ಲಾಕ್ ಡೌನ್ ಇದ್ದರೂ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಹಾಜರಾತಿ ಸೇರಿದಂತೆ ಎಲ್ಲಾ ದಾಖಲೆಗಳು ನನ್ನಲಿದೆ.

ನಾನು ಮಾತ್ರವಲ್ಲದೇ ಹಲವಾರು ಅಕಾಡೆಮಿಗಳು, ನಿಗಮ ಮಂಡಳಿಗಳ ಅಧ್ಯಕ್ಷರುಗಳು,

ಜನ ಪ್ರತಿನಿಧಿಗಳು ಎಲ್ಲರೂ ಸಹಜವಾಗಿಯೇ ಈ ಮಾಸಿಕ ಗೌರವ ಧನ, ಪ್ರಯಾಣ ಭತ್ಯೆಯನ್ನು ಪಡೆದಿದ್ದು, ಪೂರ್ವಾಗ್ರಹ ಪೀಡಿತರಾಗಿ ನಮ್ಮನ್ನು ಮಾತ್ರ ಆರೋಪಿಯಾಗಿಸಿ,

ಅರವಿಂದ ಶ್ಯಾನಭಾಗ ರವರವು ಭ್ರಷ್ಟಾಚಾರ ನಡೆಸಿದ್ದೇನೆ ಎಂಬ ಸುಳ್ಳಾರೋಪ ಮಾಡಿರುತ್ತಾರೆ.
ಮಾಹಿತಿ ಹಕ್ಕು ಕಾರ್ಯಕರ್ತರ ಬಗ್ಗೆ ನನಗೆ ಆಪಾರವಾದ ಗೌರವವಿದ್ದು ಪ್ರಾಮಾಣಿಕವಾದ ಮಾಹಿತಿ ಹಕ್ಕು ಕಾರ್ಯಕರ್ತರಿಂದ ಹಲವಾರು ಭ್ರಷ್ಟಾಚಾರಿಗಳಿಗೆ ಕಡಿವಾಣ ಬಿದ್ದಿದೆ.

ಆದರೆ ಬ್ಲಾಕ್‌ಮೇಲ್ ಮಾಡಿ ಹಣ ವಸೂಲಾತಿ ಮಾಡುವ ಸಲುವಾಗಿ ಮತ್ತು ಇದನ್ನೇ ದಂಧೆಯಾಗಿಸಿಕೊಂಡಿರುವ ನಕಲಿ ಮಾಹಿತಿ ಹಕ್ಕು ಕಾರ್ಯಕರ್ತರ ಬಗ್ಗೆ ಜನ ಜಾಗೃತರಾಗಿರಬೇಕು.

ಇದೀಗ ನಮ್ಮ ಬಗ್ಗೆ ಮಾಹಿತಿ ಹಕ್ಕನ್ನು ಪಡೆದು ನನ್ನ ವಿರುದ್ದ ಆರೋಪ ಮಾಡಿರುವ ಅರವಿಂದ ಶ್ಯಾನಭಾಗರವರು ತಾನು ಬಡತನ ರೇಖೆಗಿಂತ ಕೆಳಗಿನವನಾಗಿದ್ದು ಎಂದು ಸುಳ್ಳು ದಾಖಲೆ ಘೋಷಿಸಕೊಂಡು ಬಿಪಿಎಲ್ ಕಾರ್ಡನ್ನು ಸರಕಾರದಿಂದ 01-02-2013 ಕ್ಕೆ ಪಡೆದುಕೊಂಡಿರುತ್ತಾರೆ.
ಇದೇ ಬಿಪಿಎಲ್ ಕಾರ್ಡನ್ನು ತೋರಿಸಿ ಬಡವರಿಗೆ ನೀಡಲಾಗುವ ಅವಕಾಶವನ್ನು ದುರುಪಯೋಗ ಪಡಿಸಿಕೊಂಡು ಯಾವುದೇ ಹಣವನ್ನು ಸರಕಾರಕ್ಕೆ ಪಾವತಿ ಮಾಡದೆ ವಿವಿಧ ಇಲಾಖೆಗಳಲ್ಲಿ ನೂರಾರು ಪುಟಗಳನ್ನೊಳಗೊಂಡ ಮಾಹಿತಿಯನ್ನು ಉಚಿತವಾಗಿ ಪಡೆದುಕೊಂಡು ಎಲ್ಲಾ ಇಲಾಖೆಗಳಿಗೂ ವಂಚನೆಯನ್ನು ಎಸಗಿದ್ದಾರೆ.
ಇವರು 2017 ರಿಂದ 2019 ರ ವರೆಗೆ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದು

ಈ ಸಂದರ್ಭದಲ್ಲಿ ಒಟ್ಟು ರೂ. 3,70,100/-(ರೂಪಾಯಿ ಮೂರು ಲಕ್ಷದ ಎಪ್ಪತ್ತು ಸಾವಿರದ ನೂರು ಮಾತ್ರ) ಮೊತ್ತವನ್ನು ಚೆಕ್/ನೇರವಾಗಿ ಖಾತೆಗೆ ಪಡೆದುಕೊಂಡಿರುತ್ತಾರೆ.

ನಗರದ ಕೊಟ್ಟಾರದಲ್ಲಿರುವ ಚೈತನ್ಯ ವಿದ್ಯಾಸಂಸ್ಥೆ ಎಂಬಲ್ಲಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡು ಸೇವೆ ಸಲ್ಲಿಸುತ್ತಿದ್ದಾಗ

ಎಪ್ರಿಲ್ 2020 ರಿಂದ ಡಿಸೆಂಬರ್ 2020 ವರೆಗೆ ಯಾವುದೇ ಸಿಬ್ಬಂದಿ ಕರ್ತವ್ಯ ನಿರ್ವಹಿಸದೇ ಇದ್ದಾಗಲೂ ಹಾಜರಾತಿಯಿಲ್ಲದೆಯೇ ಆನ್ ಲೈನ್ ಮುಖಾಂತರ ಕೂಡ ತರಗತಿಯನ್ನು ನಡೆಸದೆ

ರೂ. 1,17,950/-(ರೂಪಾಯಿ ಒಂದು ಲಕ್ಷದ ಹದಿನೇಳು ಸಾವಿರದ ಒಂಬೈನೂರ ಐವತ್ತು ಮಾತ್ರ) ಡಿಡಿ ಸಂಖ್ಯೆ 89107 ಮುಖಾಂತರ ಮಾನ್ಯ ಉಪನಿರ್ದೆಶಕರ ಕಛೇರಿಯಲ್ಲಿ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿ ಪಡೆದುಕೊಂಡಿರುತ್ತಾರೆ.

ಇವಿಷ್ಟೆ ಅಲ್ಲದೆ ಇದೇ ಸಂಸ್ಥೆಯಿಂದ ಉಚಿತ ವಾಸ್ತವ್ಯ, ಊಟೋಪಚಾರ ಮತ್ತು ಪ್ರಯಾಣ ಭತ್ಯೆಯನ್ನು ಹೆಚ್ಚುವರಿಯಾಗಿ ಪಡೆದುಕೊಂಡಿರತ್ತಾರೆ.
ಇದೇ ರೀತಿ ಶಾರದಾ ವಿದ್ಯಾಸಂಸ್ಥೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ. ಈ ಎಲ್ಲಾ ದಾಖಲೆಗಳನ್ನು ಮಂಗಳೂರು

ವಿಶ್ವ ವಿದ್ಯಾನಿಲಯದ ಕುಲಾಧಿಪತಿಯವರಿಂದ ಹಾಗೂ ಚೈತ್ಯನ್ಯ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಿಂದ ಲಿಖಿತವಾಗಿ ಮಾಹಿತಿ ಹಕ್ಕಿನ ಮುಖಾಂತರ ಪಡೆದುಕೊಂಡಿದ್ದು,

ಈ ಮಾಹಿತಿಯನ್ನು ಕುಮಟಾ ತಾಲೂಕಿನ ತಹಶೀಲ್ದಾರರವರಿಗೆ ಈಗಾಗಲೇ ನಾನು ನೀಡಿದ್ದು, ಅದರಂತೆ ಇವರ ಬಿಪಿಎಲ್ ಕಾರ್ಡನ್ನು ರದ್ದುಗೊಳಿಸುವಂತೆ ತಹಶೀಲ್ದಾರರು ಸಂಬಂಧಪಟ್ಟ ಆಹಾರ ಇಲಾಖೆಯ ಅಧೀಕ್ಷಕರಿಗೆ ಪತ್ರ ಬರೆದು ಆದೇಶಿಸಿರುತ್ತಾರೆ ಎಂಬ ಬಗ್ಗೆ ತಹಶೀಲ್ದಾರರು ನನಗೆ ಮೌಖಿಕವಾಗಿ ತಿಳಿಸಿರುತ್ತಾರೆ.
ಸರಕಾರದ ವಿವಿಧ ಇಲಾಖೆಯ ಭ್ರಷ್ಟಾಚಾರವನ್ನು ಪ್ರಶ್ನೆ ಮಾಡುವ ವ್ಯಕ್ತಿಗಳು ಪ್ರಾಮಾಣಿಕರಾಗಿರಬೇಕಾಗಿರುತ್ತದೆ.

ಆದರೆ ಸ್ವತ: ಸರಕಾರವನ್ನು ವಂಚಿಸಿ ವಿವಿಧ ಇಲಾಖೆಗಳನ್ನು ಮಾಹಿತಿ ಹಕ್ಕಿನ ಹೆಸರಿನಲ್ಲಿ ಬ್ಲಾಕ್ ಮೆಲ್ ಮಾಡುವ ಅರವಿಂದ ಶ್ಯಾನಭಾಗ ಇವರ ವಿರುದ್ದ ಕ್ರಿಮಿನಲ್ ಹಾಗೂ ಮಾನನಷ್ಟ ಮೊಕದ್ದಮೆಯನ್ನು ಹೂಡಲಾಗುವುದು.

ಸಾರ್ವಜನಿಕರು ಹಾಗೂ ಇಲಾಖಾ ಮುಖ್ಯಸ್ಥರು ಇಂತಹ ವ್ಯಕ್ತಿಗಳನ್ನು ಗುರುತಿಸಿ ಇಂತವರನ್ನು ದೂರವಿಡುವ ಮೂಲಕ ಸಮಾಜದಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಸೇವೆ ಸಲ್ಲಿಸುವ ಮಾಹಿತಿ ಹಕ್ಕು ಕಾರ್ಯರ್ತರಿಗೆ ಈ ಮೂಲಕ ಗೌರವ ಸಲ್ಲುವಂತೆ ಮಾಡಬೇಕು.

DAKSHINA KANNADA

ಜಪ್ಪಿನಮೊಗರು ನಾರಾಯಣಗುರು ಮಂದಿರದಲ್ಲಿ ಆರೋಗ್ಯ ತಪಾಸಣಾ ಶಿಬಿರ

Published

on

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮತ್ತು ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಭಾನುವಾರ(ಫೆ.08) ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಆಯೋಜಿಸಲಾಗಿತ್ತು.

ಕಂಕನಾಡಿ ಗರೋಡಿಯ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದ ಮೊಕ್ತೇಸರ ಚಂದ್ರನಾಥ್ ಅತ್ತಾವರ  ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯವನ್ನು ದೇವರು ಕರುಣಿಸುತ್ತಾರೆ ಎಂಬುದು  ನಮ್ಮ ನಂಬಿಕೆ. ಆದರೆ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರವೂ ಇದೆ. ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡು ಬರುವುದು ನಮ್ಮ ಜವಾಬ್ದಾರಿ. ಹಾಗಿರುವಾಗ ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ ಎಂದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ಜನರ ಆರೋಗ್ಯವನ್ನು ಕಾಪಾಡಿಕೊಂಡು ಬರಬೇಕೆಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ. ಸಹಕಾರಿ ಸಂಘಗಳ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ಪ್ರಯೋಜನ ಲಭಿಸುತ್ತಿದ್ದು, ಅದರ ಪ್ರಯೋಜನ ಪಡೆಯಬೇಕೆಂದರು.  ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಮನೋಜ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ :WATCH VIDEO : ಉಡುಪಿ : ಕಬ್ಯಾಡಿಯಲ್ಲಿ ಕಾಂಪೌಂಡ್‌ನಲ್ಲಿ ಅಡ್ಡಾಡಿದ ಚಿರತೆ; ವೀಡಿಯೋ ವೈರಲ್!

ಕದ್ರಿಯ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಹಾಗೂ ಮುಕ್ಕ ಶ್ರೀನಿವಾಸ್ ಇನಿಸ್ಟಿಟ್ಯೂಟ್‌ ಆಫ್‌ ಡೆಂಟಲ್ ಸಾಯನ್ಸ್ ಇದರ ತಜ್ಞ ವೈದ್ಯರು ವೈದ್ಯಕೀಯ ತಪಾಸಣೆಯನ್ನು ನಡೆಡಿಕೊಟ್ಟರು.

Continue Reading

LATEST NEWS

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ಆಕಸ್ಮಿಕ ಬೆಂಕಿ ದುರಂತ

Published

on

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರ ಘಡಕ್ಕೆ ಸಂಚರಿಸುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


ಬಸ್ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಚಾಲಕ ಸಮಯಪ್ರಜ್ಞೆ ಪ್ರದರ್ಶಿಸಿ ಬಸ್ಸನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಸುರಕ್ಷಿತವಾಗಿ ಇಳಿಯಲು ಅವಕಾಶ ಮಾಡಿಕೊಟ್ಟರು. ಚಾಲಕನ ಬಾಗಿಲು ಮೂಲಕ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮದ್ಯವೆಂದು ಸ್ಪಿರಿಟ್ ಸೇವಿಸಿ ಯುವಕ ಸಾವು; ಇಬ್ಬರ ಬಂಧನ

ಚಾಲಕನ ತಕ್ಷಣದ ಕ್ರಮದಿಂದಾಗಿ ಸಂಭವಿಸಬಹುದಾದ ಭಾರಿ ಅವಘಡ ತಪ್ಪಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲವೆಂದು ವರದಿಯಾಗಿದೆ. ಘಟನೆಯ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ದೇಶದ ಆರ್ಥಿಕ ಪ್ರಗತಿಗೆ ಪೂರಕವಾಗಿದೆ ಕೇಂದ್ರ ಬಜೆಟ್ : ಎಸ್.ಎಸ್.ನಾಯಕ್

Published

on

ಮಂಗಳೂರು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಈ ವರ್ಷದ ಬಜೆಟ್‌ ದೇಶದ ಆರ್ಥಿಕ ಪ್ರಗತಿಗೆ ಪೂರಕವಾದ ಬಜೆಟ್‌ ಆಗಿದೆ ಎಂದು ಹಿರಿಯ ಲೆಕ್ಕಪರಿಶೋಧಕ, ಆರ್ಥಿಕ ತಜ್ಞ ಎಸ್‌. ಎಸ್‌. ನಾಯಕ್‌  ಅಭಿಪ್ರಾಯ ಪಟ್ಟಿದ್ದಾರೆ. ಮಂಗಳೂರು ಪ್ರಾಡಕ್ಟಿವಿಟಿ ಕೌನ್ಸಿಲ್‌ ವತಿಯಿಂದ ಲೇಡಿಹಿಲ್‌ ನ ಸೀ ವ್ಯೂ ಹೊಟೇಲ್‌ ಸಭಾಂಗಣದಲ್ಲಿ ಶನಿವಾರ(ಫೆ.07)ಏರ್ಪಡಿಸಿದ್ದ ಡಿ ಕೋಡಿಂಗ್ ಯೂನಿಯನ್ ಬಜೆಟ್ 2026 ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ ಎಂದು ಕೆಲವರು ಟೀಕೆ ಮಾಡುತ್ತಾರೆ. ಆದರೆ ಇಂತಹ ಆರೋಪದಲ್ಲಿ ಹುರುಳಿಲ್ಲ. ಏಕೆಂದರೆ ಬಜೆಟ್‌ನ್ನು ಪೂರ್ತಿಯಾಗಿ ಓದಿ ಆರ್ಥೈಸಿಕೊಳ್ಳದವರು ಮಾತ್ರ ಈ ರೀತಿಯಾಗಿ ಹೇಳಿಕೆ ನೀಡುತ್ತಾರೆ ಎಂದರು.

ಈ ಬಜೆಟ್‌ನಲ್ಲಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಯಾವುದೇ ಹೆಚ್ಚುವರಿ ತೆರಿಗೆಯನ್ನು ಹಾಕದೆ ಜನರಿಗೆ ಅನೇಕ ಪ್ರಯೋಜನಗಳನ್ನು ನೀಡಿದೆ. ಭಾರತವು ಜಗತ್ತಿನ ಅತಿ ವೇಗದ ಆರ್ಥಿಕ ಶಕ್ತಿಯಾಗಿ ಮೂಡಿಬರುತ್ತಿದ್ದು, ಅದಕ್ಕೆ ಪೂರಕವಾಗಿ ಈ ಬಜೆಟ್‌ ಬಂದಿದೆ.  ಬಂಡವಾಳ ವೆಚ್ಚದಲ್ಲಿ ಏರಿಕೆಯಾಗಿದ್ದು, 12.20 ಲಕ್ಷ ಕೋಟಿ ರೂಪಾಯಿ  ಮೀಸಲಿಡಲಾಗಿದೆ. ಇದು ಬಜೆಟ್‌ ಗಾತ್ರದ ಶೇಕಡಾ 22.80 ಆಗಿದ್ದು, ಆರ್ಥಿಕ ಪ್ರಗತಿಗೆ ಪೂರಕವಾಗಿದೆ. ಮುಂಬರುವ ದಿನಗಳಲ್ಲಿ ದೇಶದ ನಂ.1 ಆರ್ಥಿಕ ಶಕ್ತಿಯಾಗಿ ಮೂಡಿಬರಲು ಸಹಾಯಕವಾಗಿದೆ ಎಂದರು.

ಇದನ್ನೂ ಓದಿ : ಮಂಗಳೂರು : ಕೆಎಂಸಿ ಆಸ್ಪತ್ರೆಯಲ್ಲಿ ‘ಕ್ಯಾನ್ಸರ್ ತಪ್ಪಿಸೋಣ’ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕೆನರಾ ಬ್ಯಾಂಕ್‌ ಮಂಗಳೂರು ವೃತ್ತ ಕಚೇರಿಯ ಜನರಲ್‌ ಮ್ಯಾನೇಜರ್‌ ಮತ್ತು ಮುಖ್ಯಸ್ಥ  ಮಂಜುನಾಥ್‌ ಬಿ. ಸಿಂಘೈ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಒಮಾನ್ ದೇಶದ ಸಿಬಿಎಫ್‌ಎಸ್‌- ಸೆಂಟರ್‌ ಫಾರ್‌ ಟ್ರೈನಿಂಗ್‌ ಇದರ ನಿರ್ದೇಶಕ ಡಾ.ಕೆ. ರಾಜೇಶ್‌ ನಾಯಕ್‌, ಮಂಗಳೂರು ಪ್ರಾಡಕ್ಟಿವಿಟಿ ಕೌನ್ಸಿಲ್‌ನ ಅಧ್ಯಕ್ಷ ಯು.ರಾಮರಾವ್‌ ಮತ್ತಿತರರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page