Connect with us

LATEST NEWS

ಉತ್ತರಕ್ಕೆ ರಾಹುಲ್…ದಕ್ಷಿಣಕ್ಕೆ ಪ್ರಿಯಾಂಕಾ..! ಕಾಂಗ್ರೆಸ್ ಪ್ಲ್ಯಾನ್‌ ಏನು ?

Published

on

ದೆಹಲಿ/ಮಂಗಳೂರು:  ವಯನಾಡು ಹಾಗೂ ರಾಯ್‌ಬರೇಲಿ ಎರಡನ್ನೂ ಗೆದ್ದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸದ್ಯ ದೇಶದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿರುವ ರಾಹುಲ್ ಗಾಂಧಿ ಸದ್ಯ ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಪ್ರವಾಸ ಮಾಡ್ತಾ ಇದ್ದಾರೆ. ಇತ್ತ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಉಪಚುನಾವಣೆ ಎದುರಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ರಾಜಸ್ಥಾನದಿಂದ ರಾಜ್ಯ ಸಭಾ ಸದಸ್ಯೆಯಾಗಿ ಸೋನಿಯಾ ಗಾಂಧಿ ಪಶ್ಚಿಮದ ರಾಜ್ಯಗಳತ್ತ ಗಮನ ಹರಿಸಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬಲ ಹೆಚ್ಚಿಸಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಉತ್ತರ ಭಾರತದಲ್ಲಿ ರಾಹುಲ್ ನಿರಂತರ ಪ್ರವಾಸ..!


ವಿರೋಧ ಪಕ್ಷದ ನಾಯಕನಾದ ಬಳಿಕ ಉತ್ತರ ಭಾರತದ ರಾಜ್ಯಗಳಲ್ಲಿ ಪ್ರವಾಸ ಮಾಡುತ್ತಿರುವ ರಾಹುಲ್ ಗಾಂಧಿ ತಮ್ಮ ಎಂದಿನ ಶೈಲಿಯಲ್ಲೇ ಜನರನ್ನು ಭೇಟಿಯಾಗ್ತಾ ಇದ್ದಾರೆ. ಅಸ್ಸಾಂ ನೆರೆ ಸಂತ್ರಸ್ತರು, ಹತ್ರಾಸ್‌ ಕಾಲ್ತುಳಿತ ಸಂತ್ರಸ್ತರು, ಮಣಿಪುರ ಗಲಭೆಯ ಸಂತ್ರಸ್ತರು, ಹೀಗೇ ಎಲ್ಲರನ್ನೂ ಭೇಟಿಯಾಗಿ ಸಾಂತ್ವಾನ ಹೇಳ್ತಾ ಇದ್ದಾರೆ. ತನ್ನ ಕ್ಷೇತ್ರವಾದ ರಾಯ್‌ ಬರೇಲಿಯಲ್ಲೂ ಸುತ್ತಾಡಿಕೊಂಡು ಫುಲ್ ಆಕ್ಟಿವ್ ಆಗಿದ್ದಾರೆ. ಸಂತ್ರಸ್ತರ ನೆರವಿಗೆ ಬಾರದ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸುವ ಮೂಲಕ ಉತ್ತರ ಭಾರತದ ಜನರ ವಿಶ್ವಾಸ ಗಳಿಸುತ್ತಿದ್ದಾರೆ. ಇನ್ನು ತನ್ನದೇ ಕ್ಷೇತ್ರ ರಾಯ್‌ ಬರೇಲಿಯಲ್ಲೂ ಕೂಡಾ ಓಡಾಡಿಕೊಂಡು ಜನರ ಜೊತೆ ಬೆರೆಯುತ್ತಿರುವ ರಾಹುಲ್ ಗಾಂಧಿ ಜನರಿಗೆ ಬಹಳಷ್ಟು ಹತ್ತಿರವಾಗಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್

ದಕ್ಷಿಣದಲ್ಲಿ ಹವಾ ಸೃಷ್ಠಿಸಲು ಸಜ್ಜಾದ ಪ್ರಿಯಾಂಕಾ..!


ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸಿದ್ದ ಪ್ರಿಯಾಂಕ ಗಾಂಧಿ ಶೀಘ್ರವಾಗಿ ಕೇರಳದ ವಯನಾಡಿಗೆ ಶಿಫ್ಟ್‌ ಆಗುತ್ತಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದ ಪ್ರಿಯಾಂಕಾ ಸದ್ಯ ಕೇರಳದತ್ತ ಗಮನಹರಿಸಿದ್ದಾರೆ. ರಾಹುಲ್ ಗಾಂಧಿಗೆ ಮರುಜೀವ ನೀಡಿದ್ದ ವಯನಾಡಿನಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲು ಮುಂದಾಗಿದ್ದು, ಗೆಲುವಿನ ನಿರೀಕ್ಷೆಯಲ್ಲೂ ಇದ್ದಾರೆ. ಕೇರಳದಲ್ಲಿ ಗೆಲುವು ಸಾಧಿಸಿದ್ರೆ ದಕ್ಷಿಣ ಭಾರತದಲ್ಲಿ ಪ್ರಿಯಾಂಕ ಹವಾ ಸೃಷ್ಠಿಯಾಗುವ ಎಲ್ಲಾ ಲಕ್ಷಣ ಗೋಚರಿಸಿದೆ.

ಗಾಂಧಿ ಕುಟುಂಬ ಮುಂದಿಟ್ಟು ಕಾಂಗ್ರೆಸ್ ತಂತ್ರಗಾರಿಕೆ..!
ಉತ್ತರ, ದಕ್ಷಿಣ ಹಾಗೂ ಪಶ್ಚಿಮದಲ್ಲಿ ರಾಹುಲ್ , ಪ್ರಿಯಾಂಕಾ , ಸೋನಿಯಾ ಗಾಂಧಿ ಮೂಲಕ ಪಕ್ಷ ಸಂಘಟನೆಯ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಇದೊಂದು ಕಾಂಗ್ರೆಸ್‌ನ ಉತ್ತಮ ರಾಜಕೀಯ ತಂತ್ರಗಾರಿಕೆ ಅಂತ ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ರಾಹುಲ್ ಗಾಂಧಿಗೆ ಮೊದಲ ಅಗ್ನಿ ಪರೀಕ್ಷೆಯಾಗಿದೆ. ರಾಯ್‌ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ ಇಲ್ಲಿ ಎಷ್ಟು ಪ್ರಾಭಲ್ಯ ಬೆಳೆಸಿದ್ದಾರೆ ಅನ್ನೋದು ಉಪಚುನಾವಣೆ ಸಾಬೀತು ಪಡಿಸಲಿದೆ.

‘ಇಡೀ ರಾಜ್ಯವೇ ಖುಷಿ ಪಡೋ ಸುದ್ದಿ’ ಕೇರಳದಲ್ಲಿ ಪೊಲೀಸರ ಬಲೆಗೆ ಬಿದ್ದ ದಿವ್ಯಾ ವಸಂತ

ಉತ್ತರ ಪ್ರದೇಶದಲ್ಲಿ 15 ವರ್ಷದ ಬಳಿಕ ಬದಲಾವಣೆಯ ನಿರೀಕ್ಷೆಯಲ್ಲಿರುವ ಕಾಂಗ್ರೆಸ್‌ಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಆಶಾಕಿರಣವಾಗಿದ್ದಾರೆ. ಈ ಬಾರಿ ಇಂಡಿ ಒಕ್ಕೂಟದ ಜೊತೆ ಸೇರಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಇನ್ನಿಲ್ಲದ ಶಾಕ್ ನೀಡಿದ್ದಾರೆ. ರಾಜಕೀಯ ವಿಶ್ಲೇಷಕರ ಪ್ರಕಾರ ಇದು ಕಾಂಗ್ರೆಸ್‌ನ ಉತ್ತಮ ನಡೆಯಾಗಿದ್ದು, ಎದುರಾಳಿ ಪಕ್ಷಗಳಿಗೆ ದೊಡ್ಡ ಸವಾಲು ನೀಡುವ ಸಾಧ್ಯತೆಯನ್ನು ನಿರೀಕ್ಷಿಸಿದ್ದಾರೆ.

LATEST NEWS

WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

Published

on

ಮಂಗಳೂರು/ವಿಜಯಪುರ : ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಜಯಪುರದಲ್ಲಿ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.  ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಈ ದು*ರಂತ ಸಂಭವಿಸಿದೆ.

28 ವರ್ಷದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಮೃ*ತ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ  ಹೃ*ದಯಾಘಾತಕ್ಕೊಳಗಾಗಿ ಕು*ಸಿದು ಬಿದ್ದಿದ್ದಾನೆ.

ಇದನ್ನೂ ಓದಿ : ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ. ಯುವಕನ ಕೊನೆಯ ಕ್ಷಣದ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

 

Continue Reading

LATEST NEWS

ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

Published

on

ಮಂಗಳೂರು/ಬೆಳಗಾವಿ: ಮಹಾಮಾರಿ ಕೋವಿಡ್ ಕುರಿತು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮಿಜಿಯವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕೊವಿಡ್ ಕುರಿತು ಸ್ವಾಮೀಜಿ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರಿ. ಉಸಿರಾಟಕ್ಕೆ ತೊಂದರೆಯಾಗಿ ಸಾ*ವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.

Continue Reading

FILM

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

Published

on

ಮಂಗಳೂರು/ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ, ಮೋಹಕ ತಾರೆ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ಬೇಸರ ಹಂಚಿಕೊಂಡಿದ್ದಾರೆ.

ಕರ್ನಾಟಕ ಡಿಟರ್ಜೆಂಟ್ಸ್ ಕಂಪನಿಯು ತನ್ನ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ಸಂಭಾವನೆಯನ್ನು ಗೊತ್ತುಪಡಿಸಿದೆ. ತಮನ್ನಾ, ಸಂಸ್ಥೆಯ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್‌ ಮಾಡಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ! ಸಂಭಾವನೆ ಎಷ್ಟು?

‘ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜಗತ್ತಿನ ಯಶಸ್ವಿ ಬ್ರಾಂಡ್‌ಗಳಲ್ಲಿ ಒಂದಾದ ಆ್ಯಪಲ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಹಾಗೆಯೇ, ಡವ್‍ ಸೋಪ್‍ ಪ್ರಚಾರ ಬಹಳ ಚೆನ್ನಾಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page