Connect with us

chikkamagaluru

ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!

Published

on

ಮಂಗಳೂರು : ಬಿಸಿಲಿನ ಬೇಗೆಯಿಂದ ಭೂಮಿಯೇ ಬಾಯಿಬಿಟ್ಟಂತಾಗಿದ್ದು, ನೀರಿಗಾಗಿ ಜನರ ಹಾಹಾಕಾರ ಮುಗಿಲು ಮುಟ್ಟಿತ್ತು. ಜಾನುವಾರುಗಳು ಪ್ರಾಣಿ ಪಕ್ಷಿಗಳದ್ದಂತು ಹೇಳ ತೀರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದೊಂದು ವಾರದಿಂದ ಇದಕ್ಕೆ ಬ್ರೇಕ್ ನೀಡಿ ವರುಣನ ಸಿಂಚನದಿಂದ ಕೆಲವೊಂದೆಡೆ ಜನರು ನೆಮ್ಮದಿ ಕಂಡಿದ್ರು. ಆದ್ರೆ ಗುರುವಾರ (ಎ.11) ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ವಿಜಯಪುರ, ಕಲಬುರಗಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಿದೆ.

rain

ಸು*ಟ್ಟು ಕರಕಲಾಗುವಂತ ಪರಿಸ್ಥಿತಿಯಲ್ಲಿದ್ದ ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ ಇನ್ನು ವಿಜಯಪುರ ತಾಲೂಕಿನಲ್ಲೂ ಧಾರಕಾರ ಮಳೆ ಸುರಿದಿದ್ದು, ಒಂದೇ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಸಿಡಿಲಿನ ಅರ್ಭಟಕ್ಕೆ ಜನ ಮನೆಯಿಂದ ಹೊರ ಬಾರದೆ ಮನೆಯಲ್ಲೇ ಆಶ್ರಯ ಪಡೆದುಕೊಂಡಿದ್ದಾರೆ. ಆದ್ರೂ 16 ವರ್ಷ ಬಾಲಕ ಹಾಗೂ ಇಂಡಿ ತಾಲೂಕಿನ ಮಸಳಿ ಗ್ರಾಮದಲ್ಲಿ ಜಮೀನು ಕೆಲಸ ಮಾಡುತ್ತಿದ್ದ 45 ವರ್ಷದ ರೈತ ಸೋಮಶೇಖರ್ ಪಟ್ಟಣಶೆಟ್ಟಿ ಸಿಡಿಲು ಬಡಿದು ಮೃ*ತಪಟ್ಟಿದ್ದಾರೆ.

ಇದನ್ನೂ ಓದಿ..; ‘ಬಿಗ್ ಬಾಸ್‌’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್‌..!

ಇನ್ನು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಜಿಲ್ಲೆಯ ಕೆರಮಕ್ಕಿ, ಬೈಗೂರು,ಹಂರವಳ್ಳಿ, ಆವುತಿ ಪರಿಸರದಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಕಾಫಿ ಬೆಳೆಗಾರರು ಸಂತಸಗೊಂಡಿದ್ದಾರೆ.

chikkamagaluru

ಘಾಟಿಯಲ್ಲಿ ಪಲ್ಟಿಯಾದ ಕಾರು; ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ

Published

on

ಮೂಡಿಗೆರೆ: ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಿನ್ನೆ (ಮಾ.27) ನಡೆದಿದೆ.

ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಲಾಗಿದೆ. ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ.

ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದು, ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

Baindooru

3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ

Published

on

By

ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್‌ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ.

ಕಾಂಗ್ರೆಸ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದರೆ ಬಿಜೆಪಿ ನಾಯಕರಿಗೆ ಬಹಳ ದೊಡ್ಡ ನಿರಾಸೆಯಾಗಿದೆ. ಬಿಜೆಪಿ ನಾಯಕರು ನಿರೀಕ್ಷೆ ಮಾಡದ ತೀರ್ಪನ್ನು ಮೂರು ವಿಧಾನಸಭಾ ಕ್ಷೇತ್ರದ ಮತದಾರರು ನೀಡಿದ್ದು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಸೋಲು ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ.

ಬೈಎಲೆಕ್ಷನ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಮನೆಯಲ್ಲಿನ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲ್ಹಾರ ಪಟ್ಟಣದ ವೀರಭದ್ರಪ್ಪ ಬಾಗಿ ಎಂಬುವವರು ಇಂದು ಬೆಳಗ್ಗೆಯಿಂದ ಉಪಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಾ ಇದ್ದರು. 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ರಾಜ್ಯ ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಬೇಕು. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ವೀರಭದ್ರಪ್ಪ ಬಾಗಿ ಆಗ್ರಹಿಸಿದ್ದಾರೆ.

Continue Reading

Baindooru

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ

Published

on

By

ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.

ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ

ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page