Connect with us

DAKSHINA KANNADA

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಮಂಗಳೂರಿನಿಂದ ಧರ್ಮಸ್ಥಳಕ್ಕೆ ಇಂದಿನಿಂದ ರಾಜಹಂಸ ಬಸ್

Published

on

ಮಂಗಳೂರು: ಈವರೆಗೆ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಅರ್ಡಿನರಿ ಸಾರಿಗೆ ಬಸ್‌ಗಳು ಮಾತ್ರ ಇದ್ದು, ಇದೀಗ ರಾಜಹಂಸ ಬಸ್ ಆರಂಭವಾಗಿದೆ. ಹೌದು.. ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಎರಡನೇ ಘಟಕದಿಂದ ಜುಲೈ 3 ರಿಂದ ರಾಜಹಂಸ ಬಸ್ ಹೊರಡಲಿದೆ.

ಮಂಗಳೂರಿನಿಂದ ಧರ್ಮಸ್ಥಳಕ್ಕೆ ಸಂಚರಿಸುವ ಸಮಯ:

ಬೆಳಗ್ಗೆ: 6.30, 7, 8.30, 9, 11.15,
ಮಧ್ಯಾಹ್ನ: 12.15, 2.30, 3.30,
ಸಂಜೆ: 5.30, 6.30

ಧರ್ಮಸ್ಥಳದಿಂದ ಮಂಗಳೂರಿಗೆ ಸಂಚರಿಸುವ ಸಮಯ:

ಬೆಳಗ್ಗೆ: 6.30, 7, 9, 9.15, 11.30
ಮಧ್ಯಾಹ್ನ: 12, 2.45, 3.30,
ಸಂಜೆ: 4.30, 5.30

ಇದನ್ನೂ ಓದಿ: ಪುತ್ತೂರು : ವಂಚನೆಗೊಳಗಾದ ವಿದ್ಯಾರ್ಥಿನಿ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ

ಈ ಬಸ್ ಮಂಗಳೂರಿನಿಂದ ಹೊರಟು ಬಿ.ಸಿ. ರೋಡ್, ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಂಚರಿಸಲಿದೆ. ಈ ಬಸ್ಸಿನ ಪ್ರಯಾಣ ದರವು 110 ರೂ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟನೆಯಲ್ಲಿ ತಿಳಿಸಿದೆ.

DAKSHINA KANNADA

ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

Published

on

ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

Continue Reading

DAKSHINA KANNADA

ಸುಳ್ಯ: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ನಾಲ್ಕು ಲಕ್ಷ ಮೌಲ್ಯದ ಯಂತ್ರ ಹಾನಿ

Published

on

ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ನಿನ್ನೆ (ಜು. 9) ಸಂಜೆಯ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದಿದೆ.

ಘನತ್ಯಾಜ್ಯ ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿತ್ತು. ಹೀಗಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಘಟಕವು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ.

ಇದನ್ನೂ ಓದಿ: ಹೃದಯಾ*ಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾ*ವು

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಅಲ್ಲದೇ ಘನತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು ಲಕ್ಷ ಮೌಲ್ಯದ ಯಂತ್ರ ಸೇರಿ ಇತರ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.

Continue Reading

DAKSHINA KANNADA

ತಲೆ ಸಿಮಿಯಾ ರೋಗಿಗಳಿಗೆ ನ್ಯೂಟ್ರಿಶಿಯನ್‌ ಬಾರ್‌ ಕೊಡುಗೆ ನೀಡಿದ ಎಂಆರ್‌ಪಿಎಲ್‌

Published

on

ಮಂಗಳೂರು: ಮಂಗಳೂರಿನ ವೆನ್ಲಾಕ್ ಅಸ್ಪತ್ರೆಗೆ ಎಂ.ಆರ್.ಪಿ.ಎಲ್ ಸಂಸ್ಥೆ ಸಾಕಷ್ಠು ಕೊಡುಗೆ ನೀಡಿದೆ, ಕೊರೋನಾ ಸಂದರ್ಭ ಆಕ್ಸಿಜನ್ ಕೊರತೆ ಇದ್ದಾಗ ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಸಂಸ್ಥೆ ಮಾಡಿದೆ ಎಂದು ಎಂ.ಆರ್.ಪಿ.ಎಲ್ ನ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು.

ಮಂಗಳೂರಿನ ವೆನ್ಲಾಕ್ ಸರಕಾರಿ ಅಸ್ಪತ್ರೆಯಲ್ಲಿ ತಲೆ ಸಿಮಿಯಾ ರೋಗದಿಂದ ದಾಖಲಾದ ರೋಗಿಗಳಿಗೆ ಎಂ.ಆರ್.ಪಿ.ಎಲ್ ವತಿಯಿಂದ ನ್ಯೂಟ್ರಿಶಿಯನ್ ಬಾರ್ ನೀಡಿ ಮಾತನಾಡಿದ ಎಂ.ಆರ್.ಪಿ.ಎಲ್ ನ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಅವರು, ಅರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು ಎಂಬ ದೃಷಿಯಿಂದ ಪ್ರತೀ ವರ್ಷ ಸಂಸ್ಥೆ ವತಿಯಿಂದ ಸಹಕಾರ ನೀಡುತ್ತಿದೇವೆ ಎಂದರು.

ಇದನ್ನೂ ಓದಿ: ಪುತ್ತೂರು: ಉದ್ಘಾಟನೆಗೆ ಸಿದ್ಧಗೊಂಡ ಹೊಸ ನ್ಯಾಯಾಲಯ ಸಂಕೀರ್ಣ 

ಈ ಸಂದರ್ಭ ಸುಮಾರು 100 ರೋಗಿಗಳಿಗೆ ನ್ಯೂಟ್ರಿಶಿಯನ್ ಬಾರ್ ನೀಡಲಾಯಿತು.

ಎಂ.ಆರ್.ಪಿ.ಎಲ್ ನ ಕೇಶವ ಪಾಟಾಳಿ, ವೆನ್ಲಾಕ್ ಅಸ್ಪತ್ರೆಯ ದ.ಕ ಜಿಲ್ಲಾ ಸರ್ಜನ್ ಸುಪರಿಡೆಂಟ್ ಶಿವ ಪ್ರಕಾಶ್, ಆರ್.ಎಂ.ಒ ಡಾ ಸುಧಾಕರ್, ಸಂಯೋಜಕ ಡಾ ಶರತ್ ಕುಮಾರ್ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page