Connect with us

DAKSHINA KANNADA

ಅತ್ಯಾಚಾರ ಆರೋಪ : ಕೊಣಾಜೆ ವಿ.ವಿ ಸಹಪ್ರಾಧ್ಯಾಪಕ ಡಾ.ವೇದವ ಪಿ.ಗೆ ಹೈಕೋರ್ಟ್ ಕ್ಲೀನ್‌ ಚಿಟ್‌..!

Published

on

ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹಪ್ರಾಧ್ಯಾಪಕ ಡಾ. ವೇದವ ಪಿ. ವಿರುದ್ಧ ಕನ್ನಡ ವಿಭಾಗದ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಿಂದ ಕ್ಲೀನ್‌ ಚಿಟ್‌ ನೀಡಿ ನಿರಪರಾಧಿ ಎಂದು ಸಾಬೀತುಪಡಿಸಿದೆ.

ಉಳ್ಳಾಲ: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹಪ್ರಾಧ್ಯಾಪಕ ಡಾ. ವೇದವ ಪಿ. ವಿರುದ್ಧ ಕನ್ನಡ ವಿಭಾಗದ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಿಂದ ಕ್ಲೀನ್‌ ಚಿಟ್‌ ನೀಡಿ ನಿರಪರಾಧಿ ಎಂದು ಸಾಬೀತುಪಡಿಸಿದೆ.

2004ರಲ್ಲಿ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ಪೂರ್ಣಿಮಾ ಎಂಬವರು ಸಹಪ್ರಾಧ್ಯಾಪಕ ಡಾ.ವೇದವ .ಪಿ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು.

2013ರ ಜೂ.6 ರಂದು ಅತ್ಯಾಚಾರ ನಡೆಸಿ ಜೀವಬೆದರಿಕೆಯನ್ನು ಒಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು.

ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯಗಳು ಪತ್ತೆಯಾಗದೇ, ಜಿಲ್ಲಾ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಲಯ ಆರೋಪ ಪಟ್ಟಿಯನ್ನು ಪರಿಗಣಿಸಿ ಸಮನ್ಸ್‌ ಜ್ಯಾರಿಗೊಳಿಸಿದ್ದರು.

ಹಿಯರಿಂಗ್‌ ಬಿಫೋರ್‌ ಚಾರ್ಜ್‌ ಹಂತದಲ್ಲಿ ಆರೋಪದಿಂದ ಬಿಡುಗಡೆಗೊಳಿಸಲು ಕಲಂ 227ರ ಪ್ರಕಾರ ಡಾ| ವೇದವ್‌ ಡಿಸ್ಚಾರ್ಜ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನು ಪ್ರಶ್ನಿಸಿ ಡಾ| ವೇದವ್‌ ಹೈಕೋರ್ಟ್‌ ನಲ್ಲಿ 482ರಡಿ ಕ್ರಿಮಿನಲ್‌ ಅರ್ಜಿಯನ್ನು ಸಲ್ಲಿಸಿದ್ದರು.

2012 ರಲ್ಲಿ ಜಿಲ್ಲಾ ನ್ಯಾಯಾಧೀಶರ ಡಿಸ್ಚಾರ್ಜ್‌ ಅರ್ಜಿಯ ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಿತ್ತು.

2013ರ ಫೆ.23 ರಂದು ನಡೆದ ಅಂತಿಮ ಹಿಯರಿಂಗ್‌ ನಲ್ಲಿ ಆರೋಪಗಳನ್ನು ಸಾಬೀತುಪಡಿಸಲು ಆರೋಪ ಪಟ್ಟಿ ಮತ್ತು ಎಫ್‌ ಐ ಆರ್‌ ಯಾವುದೇ ಪುರಾವೆಗಳನ್ನು ಹೊಂದಿಲ್ಲವೆಂದು ಸರ್ವೋಚ್ಛ ನ್ಯಾಯಾಲಯದ 2018ರ ಮಹಾರಾಷ್ಟ್ರ ರಾಜ್ಯ ಸರಕಾರದ ವಿರುದ್ಧದ ಡಾ| ಧ್ರುವಮ್ ಡಾ| ಮುರಳೀಧರ್‌ ಸೋನಾರ್‌ ಪ್ರಕರಣ ಮತ್ತು ಉತ್ತರಪ್ರದೇಶ ಸರಕಾರದ ವಿರುದ್ಧದ ಶಂಭು ಖಾರವಾರ್‌ ಪ್ರಕರಣವನ್ನು ಮುಂದಿಟ್ಟು ಹೈಕೋರ್ಟ್‌ ಅರ್ಜಿಯನ್ನು ಪುರಸ್ಕರಿಸಿ, ದ.ಕ ಜಿಲ್ಲಾ ಮತ್ತು ಸೆಷೆನ್‌ ನ್ಯಾಯಾಧೀಶರು ಡಾ| ವೇದವ ಪಿ. ಸಲ್ಲಿಸಿದ ಡಿಸ್ಚಾರ್ಜ್‌ ಅರ್ಜಿಯನ್ನು ತಿರಸ್ಕರಿಸಿದ ತೀರ್ಪನ್ನು ರದ್ದು ಮಾಡಿ ಆರೋಪಿಯನ್ನು ಎಲ್ಲಾ ಆರೋಪಗಳಿಂದ ಬಿಡುಗಡೆ ಮಾಡಿದೆ.

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆಗೆ ಪ್ರೇರೇಪಿಸಿರುವುದು ಕಂಡುಬರುತ್ತಿಲ್ಲ ಮತ್ತು ಆರೋಪಿಯು ಮದುವೆಯಾಗುವುದಾಗಿ ನಂಬಿಸಿ ಬಲಾತ್ಕಾರವಾಗಿ ಲೈಂಗಿಕ ಕ್ರಿಯೆ ನಡೆಸಿದ ಆರೋಪವು ಸಿಆರ್‌ ಪಿಸಿ 376 ಮತ್ತು 506 ರ ಪ್ರಕಾರ ಅಪರಾಧವಾಗುವುದಿಲ್ಲ.

ಈ ಅಪರಾಧಗಳಿಗೆ ಅಗತ್ಯ ಅಂಶಗಳಿಲ್ಲ , ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪು ಒಪ್ಪತಕ್ಕದಲ್ಲ ಎಂದು ಹೈಕೋರ್ಟ್‌ ತೀರ್ಮಾನಿಸಿದೆ.

ಬಲತ್ಕಾರದ ಲೈಂಗಿಕಕ್ರಿಯೆ 2013ರ ಜೂ.2 ರಂದು ನಡೆದು, ಎಫ್‌ ಐ ಆರ್‌ ನ್ನು 2014ರ ಅ.16 ರಂದು ದಾಖಲಿಸಿರುವುದರಿಂದ ಆರೋಪಿ ಮತ್ತು ಫಿರ್ಯಾದಿದಾರಳ ನಡುವೆ ಸಂಬಂಧವಿದ್ದು, ಅದು ಹಳಸಿದಾಗ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದ ಮತ್ತು ಪ್ರತೀಕಾರದ ಉದ್ದೇಶವಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ.

ದೂರುದಾರೆ ಪೂರ್ಣಿಮಾ 2014ರ ಅ.29 ರಂದು ಮಂಗಳೂರು ವಿ.ವಿಯ ವ್ಯವಹಾರ ಆಡಳಿತ ವಿಭಾಗದ ಎದುರುಗಡೆ ಪ್ರತಿಭಟನೆಯನ್ನು ನಡೆಸಿದ್ದರು.
ಆರೋಪಿ ಪರವಾಗಿ ಹೈಕೋರ್ಟ್‌ ಅಡ್ವಕೇಟ್‌ ಜನರಲ್‌ ರವಿಶಂಕರ್‌ ಕೊಡೆಂಕಿರಿ ವಾದಿಸಿದ್ದರು.

DAKSHINA KANNADA

ಎಎನ್ಎಫ್‌ ವಿಸರ್ಜನೆ ಮಾಡಲಾಗಿಲ್ಲ : ಗೃಹ ಸಚಿವ ಪರಮೇಶ್ವರ್

Published

on

ಮಂಗಳೂರು : ಎಎನ್ಎಫ್‌ ವಿಸರ್ಜನೆ ಮಾಡಲಾಗಿಲ್ಲ. ಅದರಲ್ಲಿರುವ ಸಿಬ್ಬಂದಿ ಸಂಖ್ಯೆ ಕಡಿಮೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ, ಜಿ. ಪರಮೇಶ್ವರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕೆಲವು ಕೊ*ಲೆ ಪ್ರಕರಣಗಳಿದಾಗಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು  ಸರಿದಾರಿಗೆ ತಂದು ಶಾಂತಿ ಕಾಪಾಡುವ ಉದ್ದೇಶದಿಂದ ರಚಿಸಲಾಗಿರುವ ವಿಶೇಷ ಕಾರ್ಯಪಡೆಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಇದನ್ನೂ ಓದಿ : ಬಾಂ*ಬ್ ಬೆದರಿಕೆ; ದೆಹಲಿಗೆ ಬರುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

ಸದ್ಯದ ಮಟ್ಟಿಗೆ ನಕ್ಸಲ್‌ ನಿಗ್ರಹ ದಳದ ಅಗತ್ಯತೆ ಇಲ್ಲದಿದ್ದರೂ ಯಾವುದಾದರೂ ಸಂದರ್ಭದಲ್ಲಿ ಅಗತ್ಯ ಬಂದರೆ ಬೇಕಾಗುತ್ತದೆ. ಈಗ  ನಮ್ಮ ರಾಜ್ಯದಲ್ಲಿ ನಕ್ಸಲರು ಇಲ್ಲದಿದ್ದರೂ ಒರಿಸ್ಸಾ, ಅಸ್ಸಾಂ ಮೊದಲಾದ ಕಡೆ ನಕ್ಸಲ್‌ ಚಟುವಟಿಕೆ ಇದೆ. ಅಲ್ಲಿಂದ ಇಲ್ಲಿಗೆ ಬರಲಾರರು ಎನ್ನಲಾಗದು. ಅವರು ಬಂದರೆ ತಯಾರಿರಬೇಕೆಂದು ನಕ್ಸಲ್‌ ನಿಗ್ರಹ ಪಡೆಯ ಸ್ವಲ್ಪ ಭಾಗವನ್ನು ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Continue Reading

DAKSHINA KANNADA

ಕಾಸರಗೋಡು: ಗೆಳೆಯನಿಂದಲೇ ನಡೆಯಿತು ವ್ಯಕ್ತಿಯ ಕೊಲೆ

Published

on

ಕಾಸರಗೋಡಿನ ಅಡೂರು ಚಂದನಕ್ಕಾಡ್ ನಲ್ಲಿರುವ ದೈವ ಕಲಾವಿದ, ಸತೀಶ್ (48) ಎಂಬವರ ನಿಗೂಢ ಸಾವು ಕೊಲೆ ಎಂದು ಸಾಬೀತಾಗಿದೆ. ಗೆಳೆಯನೇ ಈತನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಚಿದಾನಂದ ಪೊಲೀಸ್ ವಶದಲ್ಲಿರುವ ಆರೋಪಿ. ಸತೀಶ್ ಮಂಗಳವಾರ ಸಂಜೆ ನೆರೆಮನೆಯ ಬಳಿ ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಆಂತರಿಕ ಗಾಯಗಳು ಪತ್ತೆಯಾಗಿತ್ತು. ಕುತ್ತಿಗೆಯ ಎಲುಬು ಮುರಿದಿರುವುದು ಕಂಡುಬಂದಿತ್ತು. ತನಿಖೆ ನಡೆಸಿ ಚಿದಾನಂದ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ಬಂದಿಸಲಾಗಿದೆ.

ಏನಿದು ಘಟನೆ ?

ಸೋಮವಾರ ಮಧ್ಯಾಹ್ನ ಸತೀಶ್ ಹಾಗೂ ಚಿದಾನಂದ ಸಮೀಪದ ಚೋಮಣ್ಣ ನಾಯ್ಕ್ ಮನೆಯೊಂದರಲ್ಲಿ ಒಟ್ಟಿಗೆ ಸೇರಿದ್ದು, ಈ ಸಂದರ್ಭದಲ್ಲಿ ಇಬ್ಬರ ನಡುವೆ ಜಗಳವಾಗಿತ್ತು. ಈ ಸಂದರ್ಭದಲ್ಲಿ ತಳ್ಳಾಟ ನಡೆದಿದ್ದು, ನೆಲಕ್ಕೆ ಬಿದ್ದ ಸತೀಶ್ ರನ್ನು ಚೋಮಣ್ಣ ನಾಯ್ಕ್ ರ ಮನೆಯ ವರಾಂಡದಲ್ಲಿ ಮಲಗಿಸಿ ಪರಾರಿಯಾಗಿದ್ದನು ಎನ್ನಲಾಗಿದೆ.

READ IN ENGLISH : https://www.nammakudlaenglish.com/kasargod-man-murdered-by-his-own-friend/

ಇದನ್ನೂ ಓದಿ: ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಭೇಟಿ; ಗಾಯಾಳುಗಳನ್ನು ಸಂತೈಸಿದ ಮೋದಿ

ಸತೀಶ್ ಮನೆಗೆ ಬಾರದೆ ಇದ್ದುದರಿಂದ ಸಹೋದರಿ ಮೊಬೈಲ್ ಗೆ ಕರೆ ಮಾಡಿದರೂ ರಿಸೀವ್ ಮಾಡದೆ ಇದ್ದುದರಿಂದ ಶೋಧ ನಡೆಸಿದಾಗ ಸಮೀಪದ ಮನೆಯೊಂದರ ವರಾಂಡದಲ್ಲಿ ಬಿದ್ದಿರುವುದು ಕಂಡು ಬಂದಿದೆ. ಬಳಿಕ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಸತೀಶ್ ನ ಅಂತ್ಯಕ್ರಿಯೆ ಯಲ್ಲಿ ಚಿದಾನಂದ ಪಾಲ್ಗೊಳ್ಳದಿರುವುದು ಈತನ ಮೇಲೆ ಸಂಶಯ ಬರಲು ಕಾರಣವಾಗಿತ್ತು.

Continue Reading

DAKSHINA KANNADA

ಮಂಗಳೂರು : ವಿಶೇಷ ಕಾರ್ಯಪಡೆ ಘಟಕ ಉದ್ಘಾಟನೆ

Published

on

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋ*ಮು ಸಂ*ಘರ್ಷ ನಿಗ್ರಹಕ್ಕಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯಪಡೆ  ಕಚೇರಿ ಕಾರ್ಯಾಚರಣೆ ನಡೆಸಲಿದೆ.

READ IN ENGLISH : https://www.nammakudlaenglish.com/mangaluru-special-task-force-unit-inaugurated/

ಇದನ್ನೂ ಓದಿ : ಉಳ್ಳಾಲ: 12ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಸಾವು

ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಎ.ಸಲೀಂ, ಅಪರ ಪೊಲೀಸ್ ಮಹಾ ನಿರ್ದೇಶಕ ಎಸ್.ಮುರುಗನ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಶೇಷ ಕಾರ್ಯಪಡೆ  ಘಟಕದ ಡಿಐಜಿಪಿ ಆಗಿರುವ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page