Connect with us

DAKSHINA KANNADA

 ರಾಷ್ಟ್ರ ವಿರೋಧಿ ಚಟುವಟಿಕೆ ಸಹಿಸಲ್ಲ- ಕಠಿಣ ಕ್ರಮ ಖಂಡಿತ : ನಳಿನ್ ಕುಮಾರ್ ಕಟೀಲ್ ..!

Published

on

 ರಾಷ್ಟ್ರ ವಿರೋಧಿ ಚಟುವಟಿಕೆ ಸಹಿಸಲ್ಲ- ಕಠಿಣ ಕ್ರಮ ಖಂಡಿತ : ನಳಿನ್ ಕುಮಾರ್ ಕಟೀಲ್ ..!

ಉಡುಪಿ : ಮಂಗಳೂರಿನ ಗೋಡೆಯೊಂದರಲ್ಲಿ ಲಷ್ಕರ್ ತೋಯ್ಬಾ ಬೆಂಬಲ ದೇಶ ವಿರೋಧಿ ಚಟುವಟಿಕೆಯಾಗಿದೆ. ಈ ರಾಷ್ಟ್ರ ವಿರೋಧಿ ಬರಹ ಬರೆದವರು ಯಾರೇ ಇದ್ದರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳೂರಿನಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಈ ಬಗ್ಗೆ ಸಿಎಂ ಕೂಡಾ ಒಪ್ಪಿಗೆ ನೀಡಿದ್ದಾರೆ ಅಂದ್ರು. ಹಾಗೂ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಸರಿಡಲು ಹಲವಾರು ನಿಯಮಗಳಿವೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಎಂದರು.

ರಾಜ್ಯ ಮಂತ್ರಿಮಂಡಲ ವಿಸ್ತರಣೆ ವಿಚಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿವೇಚನೆ ಬಿಟ್ಟದ್ದು. ರಾಷ್ಟ್ರೀಯ ನಾಯಕರ ಸೂಚನೆಯಂತೆ ಸಂಪುಟ ವಿಸ್ತರಣೆ ಆಗಲಿದೆ.

ಸಮಯ ಬಂದಾಗ ಸಂಪುಟ ವಿಸ್ತರಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಡೆಲ್ಲಿಗೆ ಬಿಜೆಪಿ ನಾಯಕರ ಓಡಾಟ ಸಹಜವಾಗಿರುತ್ತೆ. ಕೇಂದ್ರ ಸರಕಾರದ ಅನುದಾನ ತರಲು ದೆಹಲಿಗೆ ಹೋಗಿರಬಹುದು ಎಂದು ಹೇಳಿದ್ದಾರೆ.

DAKSHINA KANNADA

ಬಂಟ್ವಾಳ: ಮನೆಯಲ್ಲಿ ಅಕ್ರಮ ಎಂಡಿಎಂಎ ದಾಸ್ತಾನು; ನಾಲ್ವರು ಅರೆಸ್ಟ್

Published

on

ಬಂಟ್ವಾಳ: ಅಕ್ರಮವಾಗಿ ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ದೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೋಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲ್ಲೂಕಿನ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ , ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ಬಂಧಿತ ಆರೋಪಿಗಳು.

ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಮ್.ಡಿ.ಎಮ್.ಎ ಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರ ತಂಡ ದಾಳಿ ನಡೆಸಿದೆ.

ಈ ವೇಳೆ  ಅಶ್ರಫ್ ಜಿ ಎಂಬಾತನ ಜೊತೆ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ಅವರೊಂದಿಗೆ ಈ ಮನೆಯಲ್ಲಿದ್ದ.

ಇದನ್ನೂ ಓದಿ: 30 ವರ್ಷಗಳಿಂದ ಕೊರಗ ಸಮುದಾಯದ ವ್ಯಕ್ತಿಯನ್ನು ಜೀತದಾಳಾಗಿಸಿ ದೌರ್ಜನ್ಯ ಆರೋಪ; ಮಹಿಳೆ ಬಂಧನ

ದಾಳಿಯ ವೇಳೆ ಮನೆಯೊಳಗೆ ದಾಸ್ತಾನು ಇರಿಸಲಾಗಿದ್ದ ಮಾದಕ ವಸ್ತುಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಂಧಿತರಿಂದ ಒಂದು ಲಕ್ಷದ 79 ಸಾವಿರದ ಏಳುನೂರು ರೂ. ಮೌಲ್ಯದ 17.97 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆಯಲಾಗಿದೆ.

Continue Reading

DAKSHINA KANNADA

ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ

Published

on

ಸುಬ್ರಹ್ಮಣ್ಯ: ಇರಾನ್-ಇಸ್ರೇಲ್ ಸಂಘರ್ಷದ ಕಾರಣದಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದೀಗ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ಇದರ ಬಿಸಿ ತಟ್ಟಿದೆ.


ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರತಿದಿನ ಬೆಳಿಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು. ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಇಂದಿನಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಯಿಸುವ ತಿನಿಸು ಬದಲಾಗಿ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಸಂಘರ್ಷ: ಮಾ.12ರಂದು ಮಂಗಳೂರು- ಮಧ್ಯ ಪ್ರಾಚ್ಯ ಮಾರ್ಗದ 14 ವಿಮಾನಗಳು ರದ್ದು

ಇದರ ನಡುವೆ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬದಲಾವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Continue Reading

DAKSHINA KANNADA

ಕಾಲೇಜಿಗೆ ರಾಜಕೀಯ ಕೇಂದ್ರಿತ ವ್ಯಕ್ತಿಗಳ ಅನಗತ್ಯ ಪ್ರವೇಶ ಆರೋಪ; ಮಂಗಳೂರು ವಿ.ವಿ. ಕಾಲೇಜಿನಲ್ಲಿ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Published

on

ಮಂಗಳೂರು: ಕಾಲೇಜಿನಲ್ಲಿ ರಾಜಕೀಯ ಕೇಂದ್ರಿತ ವ್ಯಕ್ತಿಗಳ ಅನಗತ್ಯ ಪ್ರವೇಶ ಮಾಡಿ ಗದ್ದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಎ.ಬಿ.ವಿ.ಪಿ. ಸಂಘಟನೆಯ ವಿದ್ಯಾರ್ಥಿಗಳು ನಿನ್ನೆ ಹಂಪನಕಟ್ಟೆಯ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು.


ಮಾರ್ಚ್ 9 ರಂದು ರಾಜಕೀಯ ಪಕ್ಷ ಕೇಂದ್ರಿತ ಸುಮಾರು 15 ರಿಂದ 20 ಜನರ ಗುಂಪು ಆಗಮಿಸಿ ಕೆಲವು ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳ ಜತೆ ಸಂಭಾಷಣೆಯ ನೆಪದಲ್ಲಿ ಅನಾವಶ್ಯಕ ಗದ್ದಲವನ್ನು ಸೃಷ್ಟಿಸಿರುವುದು ವಿದ್ಯಾರ್ಥಿಗಳಲ್ಲಿ ಕಳವಳವನ್ನುಂಟು ಮಾಡಿದೆ. ಈ ರೀತಿ ಕಾಲೇಜಿಗೆ ಸಂಬಂಧ ಪಡದ, ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳ ಕ್ಯಾಂಪಸ್ ಪ್ರವೇಶವು ಅತ್ಯಂತ ಖಂಡನೀಯ.

ಇಂತಹ ಘಟನೆಗಳು ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ. ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಇದಕ್ಕೆ ಅನುಮತಿ ನೀಡಿರುವ ಪ್ರಾಧ್ಯಾಪಕರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಎಬಿವಿಪಿ ಮುಖಂಡರು ಒತ್ತಾಯಿಸಿದರು.̇

ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ಹಾನಿ!

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲ ಗಣಪತಿ‌ ಗೌಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು. ನಿನ್ನೆ ನಮ್ಮಿಂದ ಒಂದು ಆಚಾತುರ್ಯ ನಡೆದು ಹೋಗಿದೆ. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಬರ್ತಾರೆ ಅಂತಾ ಹೇಳಿದ್ದರು. ಆದರೆ ಘೋಷಣೆ ‌ಕೂಗಿದ ವಿಚಾರ ನಮಗೆ ಗೊತ್ತಾಗಿಲ್ಲ. ಸಾಂಕೇತಿಕವಾಗಿ ಸಿಹಿ ತಿಂಡಿ ವಿತರಿಸಿದ್ದಾರೆ. ನಿನ್ನೆ ನಡೆದ ಘಟನೆಯ ವರದಿಯನ್ನು ಉಪಕುಲಪತಿಯಯವರಿಗೆ ನೀಡ್ತೇವೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಪ್ರಾಂಶುಪಾಲರು ಆಶ್ವಾಸನೆ ನೀಡಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page