Connect with us

DAKSHINA KANNADA

Mangaluru: ಖ್ಯಾತ ಕಲಾವಿದ ಮುಂಡ್ಕೂರು ನಾಗೇಶ ಪ್ರಭು ನಿಧನ..!

Published

on

ಮಂಗಳೂರಿನ ಖ್ಯಾತ ಹವ್ಯಾಸಿ ಯಕ್ಷಗಾನ ಅರ್ಥಧಾರಿ, ಭಾಗವತ, ಹಿಮ್ಮೇಳ ವಾದಕ, ಸಂಘಟಕ ಮುಂಡ್ಕೂರು ನಾಗೇಶ್ ಪ್ರಭುಗಳು ಫೆ.9 ರಂದು ಮಂಗಳೂರಿನ ಕೊಡಿಯಾಲ ಬೈಲ್ ಸ್ವಗೃಹದಲ್ಲಿ ನಿಧನರಾದರು.


86 ವರ್ಷ ಸಾರ್ಥಕ ಜೀವನ ನಡೆಸಿದ್ದ ಪ್ರಭುಗಳು ಶ್ರೀ ರಾಮ ಯಕ್ಷಗಾನ ಸಂಘ, ಬಿ. ಸಿ. ರೋಡ್,ಇದರ ಸ್ಥಾಪಕ ಆಧ್ಯಕ್ಷರಾಗಿದ್ದರು. ಮಂಗಳೂರಿನ ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಕಾರ್ಯಾಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿದ್ದರು. ವಾಗೀಶ್ವರಿ ಸಂಘದ ಶತಮಾನೋತ್ಸವವು ಮಂಗಳೂರು ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ಪ್ರಭುಗಳ ಮಾರ್ಗದರ್ಶನದಲ್ಲಿ 50 ಸನ್ಮಾನ, 50 ಸಂಸ್ಮರಣೆ, 50 ತಾಳಮದ್ದಲೆ ಕಾರ್ಯಕ್ರಮದೊಂದಿಗೆ ಅಭೂತ ಪೂರ್ವಾ ಯಶಸ್ಸು ಕಂಡಿತ್ತು. ಶ್ರೀಯುತರು 50 ವರ್ಷಗಳ ಕಲಾ ಸೇವೆಯನ್ನು ಗೈದಿದ್ದಾರೆ. ಯಾವುದೇ ಪಾತ್ರವನ್ನು ಲೀಲಾಜಾಲವಾಗಿ ನಿರ್ವಹಿಸುವ ಮಾತುಗಾರಿಕೆಯ ಸೊಗಡು ಸ್ಮರಣೀಯವಾಗಿದೆ. ಮೃತರು ಈರ್ವರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ವಾಗೀಶ್ವರಿ ಸಂಘ ದ ಗೌರವ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಕದ್ರಿ ನವನೀತ ಶೆಟ್ಟಿ, ಪಿ.ಸಂಜಯ್ ಕುಮಾರ್, ಶ್ರೀ ನಾಥ್ ಪ್ರಭು, ಸಿ. ಎಸ್. ಭಂಡಾರಿ, ಅಶೋಕ್ ಬೋಳೂರು, ಮಹಾಮಾಯ ದೇವಸ್ಥಾನ ದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಂತಾಪ ವ್ಯಕ್ತಪಡಿಸಿದ್ದಾರೆ.

DAKSHINA KANNADA

ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ. ಯೋಗಿಂದ್ರ ಬಿ ಇನ್ನಿ*ಲ್ಲ

Published

on

ಕಿನ್ನಿಗೋಳಿ : ಕಿನ್ನಿಗೋಳಿಯ ಐಕಳ ಪೊಂಪೈ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಯೋಗಿಂದ್ರ ಬಿ. (62 )ಅವರು ಹೃದಯಘಾತದಿಂದ ಬುಧವಾರ ರಾತ್ರಿ ನಿ*ಧನ ಹೊಂದಿದರು.

ಮೂಲತಃ ಕಾಸರಗೋಡು ತಾಲೂಕಿನ ಬದಿಯಡ್ಕ ನಿವಾಸಿಯಾಗಿದ್ದ ಅವರು  1986ರಲ್ಲಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಬಳಿಕ ಪೊಂಪೈ ಕಾಲೇಜಿಗೆ ವರ್ಗಾವಣೆಗೊಂಡು 21 ವರ್ಷಗಳ ವರೆಗೆ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

ಸಮಾಜಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಮತ್ತು ಮುಖ್ಯಸ್ಥರಾಗಿ ಒಟ್ಟು 36 ವರ್ಷಗಳ ಸೇವೆಯನ್ನು ಸಲ್ಲಿಸಿದ್ದ ಅವರು ಮಂಗಳೂರು ವಿಶ್ವ ವಿದ್ಯಾನಿಲಯದ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಪೊಂಪೈ ಕಾಲೇಜಿನಲ್ಲಿ ಮೂರು ವರ್ಷಗಳ ಕಾಲ ಎನ್.ಎಸ್. ಎಸ್ ಕಾರ್ಯಕ್ರಮ ಅಧಿಕಾರಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ಹಲವು ವರ್ಷಗಳ ಕಾಲ ಸಹ ಕಾರ್ಯಕ್ರಮ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು‌ ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

Published

on

ಮಂಗಳೂರು: ತನ್ನ ಪತ್ನಿಯನ್ನು ಕುಡಿದ ಅಮಲಿನಲ್ಲಿ ಪತಿ ಕೊಂದು ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣದ ಮುಖ್ಯ ಆರೋಪಿ ಪತಿಗೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ನಿನ್ನೆ (ಫೆ.6) ತೀರ್ಪು ನೀಡಿದೆ.

ಸುಳ್ಯದ ತೋಡಿಕಾನ ಅಂಡ್ಯಡ್ಕ ಸಿಆರ್‌ಸಿ ಕ್ವಾಟ್ರರ್ಸ್ ನಿವಾಸಿ ರಾಜ (64) ಶಿಕ್ಷೆಗೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.

ರಾಜ ತನ್ನು ಪತ್ನಿ ಕಮಲಾ (57) ಎಂಬಾಕೆಯನ್ನು ಕೊಲೆಗೈದ ಆರೋಪದಲ್ಲಿ ಸಿಕ್ಕಿಬಿದ್ದಿದ್ದ. 2022ರ ಸೆ.4ರಂದು ದಂಪತಿ ರಾಜಾ ಮತ್ತು ಕಮಲಾ ರಬ್ಬರ್ ಮ್ಯಾಪಿಂಗ್ ಕೆಲಸ ಕೇಳುತ್ತಾ ಬೆಳ್ತಂಗಡಿ ಕೊಯೂರು ಗ್ರಾಮದ ಅಲೆಕ್ಕಿ ಎಂಬಲ್ಲಿನಧರ್ಣಪ್ಪ ಗೌಡರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಇವರಿಗೆ ರಬ್ಬರ್ ತೋಟದ ಶೆಡ್‌ನಲ್ಲೇ ವಾಸ್ತವ್ಯಕ್ಕೆ ಅವಕಾಶ ನೀಡಲಾಗಿತ್ತು.

 

ಇದನ್ನೂ ಓದಿ : ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

 

ಪ್ರಸ್ತುತ ಆರೋಪಿಗೆ ನ್ಯಾಯಲಯವು ಜಾವಾವಧಿ ಶಿಕ್ಷೆ ವಿಧಿಸಿ ಕಮಲಾ ಸಾವಿಗೆ ನ್ಯಾಯ ನೀಡಿದೆ.

 

Continue Reading

DAKSHINA KANNADA

ಸುರತ್ಕಲ್: ಡ್ರೆಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಭಾರೀ ನಷ್ಟ

Published

on

ಸುರತ್ಕಲ್: ಮೈ ಚಾಯ್ಸ್ ಬಟ್ಟೆ ವಿನ್ಯಾಸ ಹಾಗೂ ಜವಳಿ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಸುರತ್ಕಲ್‌ನ ಪೂವ ಆರ್ಕೆಡ್‌ನಲ್ಲಿರುವ ಮಳಿಗೆಯಲ್ಲಿ ಬುಧವಾರ ತಡರಾತ್ರಿ 1 ಗಂಟೆಗೆ ಸಂಭವಿಸಿದೆ.

ಸುಟ್ಟು ಕರಕಲಾಗಿದ್ದ ಮಳಿಗೆಯು ಕೃಷ್ಣಾಪುರ ನಿವಾಸಿ ಶಮೀಮ್ ಎಂಬವರಿಗೆ ಸೇರಿದ್ದು, ಬಟ್ಟೆ ಬರೆಗಳು ಹಾಗೂ ಯಂತ್ರೋಪಕರಣಗಳು ಸೇರಿ ಕೋಟಿ ರೂ. ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಂಗಡಿಯ ಮೇಲ್ಛಾವಣಿಯಲ್ಲಿನ ಬಟ್ಟೆ ವಿನ್ಯಾಸ ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಗೆ ಕ್ಷಣಾರ್ಧದಲ್ಲಿ ಇಡೀ ಮಳಿಗೆಯನ್ನು ಸುಟ್ಟು ಭಸ್ಮ ಮಾಡಿತು.

ಇದನ್ನೂ ಓದಿ : ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

ಘಟನಾ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಮೂರು ಮತ್ತು ಎಂಆರ್ ಪಿಎಲ್ ನ ಒಂದು ಅಗ್ನಿ ನಿರೋಧಕ ವಾಹನಗಳು ಸತತ 4 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page