Connect with us

DAKSHINA KANNADA

ಕೇರಳದಲ್ಲಿ ತುಳು ಭಾಷೆ ಅಧಿಕೃತಗೊಳಿಸುಂತೆ ಶಾಸಕರಿಗೆ ಮನವಿ

Published

on

ಮಂಗಳೂರು: ಕೇರಳದಲ್ಲಿ ತುಳು ಭಾಷೆಯನ್ನು ಅಧಿಕೃತವಾಗಿ ಮಾಡುವಂತೆ ಮಂಜೇಶ್ವರ ಶಾಸಕರಿಗೆ  ಜೈತುಳುನಾಡ್  ಸಂಘಟನೆಯಿಂದ ಮನವಿ ಸಲ್ಲಿಸಲಾಯಿತು.

ಮಂಜೇಶ್ವರ ಶಾಸಕ ಎ.ಕೆ ಎಮ್ ಅಶ್ರಫ್ ಹಾಗು ಮಂಜೇಶ್ವರ ಮಾಜಿ ಶಾಸಕ ಉದುಮ ಕ್ಷೇತ್ರದ ಪ್ರಸ್ತುತ ಶಾಸಕ ಸಿ.ಹೆಚ್ ಕುಂಞಂಬುರವನ್ನು ಭೇಟಿ ಮಾಡಿದ  ಜೈ ತುಳುನಾಡ್ ಸಂಘಟನೆಯ ಕಾಸರಗೋಡು ಘಟಕ ಅಧ್ಯಕ್ಷ ಹರಿಕಾಂತ್ ಕಾಸರಗೋಡು, ಕಾರ್ಯದರ್ಶಿ ಕಾರ್ತಿಕ್ ಪೆರ್ಲ, ಕೋಶಾಧಿಕಾರಿ ಪ್ರಶಾಂತ್ ರೈ ಬಂದ್ಯೋಡ್ಕ, ಮುಖ್ಯ ಸಂಚಾಲಕ ಪ್ರವೀಶ್ ಕುಲಾಲ್ ಹಾಗು ಸದಸ್ಯ ದೇವಿಪ್ರಸಾದ್ ರೈ ಅವರನ್ನು ಒಳಗೊಂಡ ನಿಯೋಗ ಮನವಿ ಸಲ್ಲಿಸಿತು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಎ.ಕೆ.ಎಂ ಅಶ್ರಫ್ ಮುಂಬರುವ ಅಧಿವೇಶನದಲ್ಲಿ ಈ  ವಿಷಯವನ್ನು ಸರಕಾರದ ಗಮನಕ್ಕೆ ತಂದು ಮನವರಿಕೆ ಮಾಡುವುದಾಗಿ ಭರವಸೆ ನೀಡಿದರು. ಹಾಗೂ ಉದುಮ ಶಾಸಕ ಸಿ.ಯೆಚ್ ಕುಂಞಂಬು ಮಾತನಾಡಿ, ತುಳು ಭಾಷೆಯನ್ನು  ಕೇರಳದ  ಅಧಿಕೃತ  ಭಾಷೆಯನ್ನಾಗಿ  ಮಾಡುವ ಬಗ್ಗೆ ಕೂಲಂಕುಷವಾಗಿ  ಪರಿಶೀಲಿಸಿ ಪ್ರಯತ್ನ ಪಡುತ್ತೇನೆ ಎಂದು ಭರವಸೆ ನೀಡಿದರು.

DAKSHINA KANNADA

ನಾಳೆಯಿಂದ ಎಸ್.ಎಸ್. ಎಲ್‌.ಸಿ. ಪರೀಕ್ಷೆ ಆರಂಭ; ಬಾಲಕರಿಗೂ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ

Published

on

ಮಂಗಳೂರು : ಈ ವರ್ಷದ ಎಸ್ಎಸ್ಎಲ್‌ಸಿ ಪರೀಕ್ಷೆಯು ನಾಳೆ ಮಾರ್ಚ್ 21 ರಂದು ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 92 ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 29760 ಮಂದಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಒಟ್ಟು 2057 ಸಿಬಂದಿಯನ್ನು ನಿಯೋಜಿಸಲಾಗಿದೆ. ಶಾಲೆಗಳ ಮೂಲಕ 14,735 ಬಾಲಕರು ಮತ್ತು 13,711 ಬಾಲಕಿಯರು ಸೇರಿದಂತೆ ಒಟ್ಟು 28,446 ವಿದ್ಯಾರ್ಥಿಗಳು ನೊಂದಾಯಿಸಿದ್ದಾರೆ.

ಈ ಪೈಕಿ 8892 ಸರಕಾರಿ ಶಾಲೆಗಳ ವಿದ್ಯಾರ್ಥಿಗಳು, 7864 ಅನುದಾನಿತ ಹಾಗೂ 11690 ಮಂದಿ ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಾಗಿರುತ್ತಾರೆ. ಖಾಸಗಿಯಾಗಿ ಮೊದಲ ಬಾರಿ ಪರೀಕ್ಷೆ ಬರೆಯಲು 579 ಹುಡುಗರು ಮತ್ತು 252 ಹುಡುಗಿಯರ ಸಹಿತ 831 ವಿದ್ಯಾರ್ಥಿಗಳು ನೊಂದಾಯಿಸಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು 259 ಮಂದಿ ಇದ್ದು,  211 ಬಾಲಕರು ಮತ್ತು 48 ಬಾಲಕಿಯರು ಇದ್ದಾರೆ. ಖಾಸಗಿಯಾಗಿ ಪುನರಾವರ್ತಿತ ವಿದ್ಯಾರ್ಥಿಗಳು 217 ಮಂದಿ ಇದ್ದು, ಇದರಲ್ಲಿ 179 ಹುಡುಗರು ಮತ್ತು 38 ಹುಡುಗಿಯರು ಆಗಿರುತ್ತಾರೆ.

1332 ಪರೀಕ್ಷಾ ಕೊಠಡಿಗಳು, 1678 ಸಿಸಿ ಕ್ಯಾಮರಾ ಆಳವಡಿಸಲಾಗಿದೆ. 184 ಪೊಲೀಸ್‌ ಸಿಬಂದಿ ನಿಯೋಜನೆ ಮಾಡಲಾಗಿದ್ದು, ಪರೀಕ್ಷಾ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟಕ್ಕಾಗಿ 34 ಗಸ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಬಾಲಕರಿಗೂ ಕೆಎಸ್ಆರ್‌ಟಿಸಿ ಬಸ್‌ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಲ್ ಟಿಕೆಟ್‌ ತೋರಿಸಿ ಪ್ರಯಾಣಿಸ ಬಹುದಾಗಿದೆ.

Continue Reading

DAKSHINA KANNADA

ನಿರೂಪಕ ಸಾಯಿಹೀಲ್ ರೈಗೆ ಪಿತೃ ವಿಯೋಗ

Published

on

ಮಂಗಳೂರು : ನಿರೂಪಕ ಸಾಯಿಹೀಲ್ ರೈ ಅವರ ತಂದೆ, ಉದ್ಯಮಿ, ಸಾಯಿ ಭಕ್ತ ಬೋಳಾರ ಮಂಗಳಾದೇವಿ ನಿವಾಸಿ ಬೆಳ್ಳಿಪ್ಪಾಡಿ ಸತೀಶ್ ರೈ ಅಗರಿ (66) ಅವರು ಇಂದು(ಮಾ.20) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು.

ಮೃತರು ಪತ್ನಿ ಶೋಭಾ ರೈ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಬಿ. ಸಿ. ರೋಡ್, ಸಜೀಪ – ನಾಲ್ ಕೈ ತ್ತಾಯ ದೈವಸ್ಥಾನದ ಸಮೀಪ ಇರುವ “ಅಗರಿ ಮನೆ”  ಯಲ್ಲಿ ಸಂಜೆ 4.30 ರಿಂದ 7 ನಡೆಯಲಿದೆ.

 

Continue Reading

DAKSHINA KANNADA

ಸುಳ್ಯ : ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ; ಕಾರಣ ನಿಗೂಢ

Published

on

ಸುಳ್ಯ : ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಕಾರಣಗಳು ನಿಖರವಾಗಿರುವುದಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ.

ಸುಳ್ಯದ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ, ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟ ಮಹಿಳೆಯನ್ನು ರೇವತಿ (51) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page