Connect with us

bangalore

ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!

Published

on

ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

revannaನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ.

2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿದವಿಟ್‌ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ;ಅವರ ಆಸ್ತಿ ವಿವರ ಇಲ್ಲಿದೆ!

ಪ್ರಜ್ವಲ್ ರೇವಣ್ಣ ಮಾಡಿದ ಸಾಲ
ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್​ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.

ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ
ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.

bangalore

ಗೂಗಲ್ ಮ್ಯಾಪ್ ನೋಡಿಕೊಂಡು ಹೋದ ವೈದ್ಯ ಸೇರಿದ್ದು ಸಾವಿನ ಮನೆಗೆ

Published

on

ಮಂಗಳೂರು/ಬೆಂಗಳೂರು: ದಾರಿ ತೋರಿಸುವ ಗೆಳೆಯ ಗೂಗಲ್‌ ಮ್ಯಾಪ್‌ ಎಂದು ಹೇಳುತ್ತಾರೆ. ಆದರೆ, ಅದೇ ಮ್ಯಾಪ್‌ನಲ್ಲಿ ಮಗ್ನನಾಗಿದ್ದ ಕಾರು ಚಾಲಕ ದುರಂತ ಸಾವು ಕಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಸಂಭವಿಸಿದೆ.

ಕಾರು ಚಾಲಕ ಗೂಗಲ್‌ ಮ್ಯಾಪ್‌ ಮಗ್ನನಾಗಿದ್ದು ಶರವೇಗದಲ್ಲಿ ಹೋಗಿ ಸೈಡ್‌ನಲ್ಲಿ ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಡಿಕ್ಕಿಯಾಗಿ ಮೂರು ಪಲ್ಟಿ ಹೊಡೆದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ವೈದ್ಯ ಸ್ಥಳದಲ್ಲೇ ಸಾವಿನ ಮನೆ ಸೇರಿದ್ದಾನೆ.

ಹೈದರಬಾದ್‌ ಮೂಲದ ಅಮರ್ ಪ್ರಸಾದ್, ವೇಣು ಮತ್ತು ಪ್ರವಳಿಕಾ ಅನ್ನೋ ಮೂವರು ಸ್ನೇಹಿತರು ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಬೇಕು ಎಂದುನಿನ್ನೆ (ಫೆ.6) ಬೆಳಗಿನಜಾವ 2 ಗಂಟೆಗೆ ಹೈದ್ರಾಬಾದ್‌ನಿಂದ ಹೊರಡು, ಬೆಳಗ್ಗೆ 10 ಗಂಟೆ ಹೊತ್ತಿಗೆ ಹೊಸಕೋಟೆ ಬಳಿ ತಲುಪಿದ್ದರು. ದೇವನಹಳ್ಳಿ ಮೂಲಕ ಹೊಸಕೋಟೆಗೆ ಬರುತ್ತಿದ್ದ ಕಾರು, ಕೋಲಾರದ ಹೆದ್ದಾರಿಯಲ್ಲಿ ಯೂಟರ್ನ್ ತೆಗೆಯಲು ಮುಂದಾಗಿದ್ದ ವೇಳೆ ಮ್ಯಾಪ್‌ ನೋಡುತ್ತ ಕಾರು ಚಾಲನೆ ಮಾಡಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ : ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

ತಕ್ಣವೇ ಘಟನಾ ಸ್ಥಳಕ್ಕೆ ಸ್ಥಳೀಯರು ಧಾವಿಸಿ ಕಾರ್‌ನಲ್ಲಿದ್ದ ವೈದ್ಯೆ ಪ್ರವಳಿಕಾ ಮತ್ತು ವೇಣುನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸಣ್ಣಪುಟ್ಟ ಗಾಯದೊಂದಿಗೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading

bangalore

ಟಿಆರ್‌ಪಿಯಲ್ಲಿ ಬಿಗ್‌ಬಾಸನ್ನು ಹಿಂದಿಕ್ಕಿದ ಸರಿಗಮಪ

Published

on

By

ಮಂಗಳೂರು/ಬೆಂಗಳೂರು : ಬೇಟೆಗಾರನನ್ನು ಬೇಟೆ ಆಡುವ ರಣ ಬೇಟೆಗಾರ ಬಂದ ಎಂಬ ಡೈಲಾಗ್​​ನಂತೆ ‘ಬಿಗ್ ಬಾಸ್’ ದಾಖಲೆಯನ್ನು ‘ಸರಿಗಮಪ’ ಹಿಂದಿಕ್ಕಿದೆ. ಇಷ್ಟು ದಿನಗಳ ಕಾಲ ಟಿಆರ್​ಪಿಯಲ್ಲಿ ಬಿಗ್ ಬಾಸ್ ಪಾರುಪತ್ಯ ಸಾಧಿಸುತ್ತಾ ಬರುತ್ತಿತ್ತು. ಎಲ್ಲಾ ಧಾರಾವಾಹಿಗಳ ಟಿಆರ್​ಪಿಯನ್ನು ಬೀಟ್ ಮಾಡಿ ಬಿಗ್ ಬಾಸ್ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಭರ್ಜರಿ ಟಿಆರ್​ಪಿ ಪಡೆಯುವ ಮೂಲಕ ಈ ಶೋ ಮೊದಲ ಸ್ಥಾನ ಪಡೆದಿದೆ.

52ನೇ ವಾರದ ಟಿಆರ್​ಪಿ ಪ್ರಕಾರ, ಬಿಗ್ ಬಾಸ್​ಗೆ ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ವಾರದ ದಿನ 8 ಟಿವಿಆರ್, ಶನಿವಾರ 9.1 ಟಿವಿಆರ್ ಹಾಗೂ ಭಾನುವಾರ 10 ಟಿವಿಆರ್​ ಸಿಕ್ಕಿದೆ. ವಾರಾಂತ್ಯದಲ್ಲಿ ಸುದೀಪ್ ಅವರು ಇರುವ ಕಾರಣ ಶೋಗೆ ಭರ್ಜರಿ ಟಿಆರ್​ಪಿ ದೊರೆಯುತ್ತಿದೆ. ‘ಸರಿಗಮಪ’ ಆಡಿಷನ್ ಇತ್ತೀಚೆಗೆ ಪೂರ್ಣಗೊಂಡಿದೆ. ಶನಿವಾರ ಹಾಗೂ ಭಾನುವಾರ ಸಂಜೆ 7.30ರಿಂದ 9 ಗಂಟೆವರೆಗೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಆಡಿಷನ್ ಎಪಿಸೋಡ್ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ. ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ 11.1 ಟಿವಿಆರ್ ಹಾಗೂ ಗ್ರಾಮೀಣ ಭಾಗದಲ್ಲಿ 13.1 ಟಿವಿಆರ್ ಈ ಶೋಗೆ ಸಿಕ್ಕಿದೆ. ಈ ಮೂಲಕ ಬಿಗ್ ಬಾಸ್​ನ ಶೋ ಹಿಂದಿಕ್ಕಿದೆ. ‘ಸರಿಗಮಪ’ ಶೋನಲ್ಲಿ ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯ ಜಡ್ಜ್ ಸ್ಥಾನದಲ್ಲಿ ಇದ್ದಾರೆ.

ಸೀರಿಯಲ್‌ಗಳ ಟಿಆರ್​ಪಿ

ಸೀರಿಯಲ್‌ಗಳ ಟಿಆರ್​ಪಿ ವಿಚಾರಕ್ಕೆ ಬರೋದಾದರೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಅಣ್ಣಯ್ಯ’ ಧಾರಾವಾಹಿಗಳು ಇವೆ. ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’, ನಾಲ್ಕನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಇದೆ.

Continue Reading

bangalore

ಸರಿಗಮಪ ಜ್ಯೂರಿ ಎಸ್ ಬಾಲಿ ವಿಧಿವಶ

Published

on

By

ಮಂಗಳೂರು/ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್‌ನಲ್ಲಿ ಇರುತ್ತಿದ್ದ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ.

ಮೃದಂಗ, ತಬಲಾ, ಢೋಲಕ್‌ , ಢೋಲ್ಕಿ, ಖಂಜರಿ, ಕೋಲ್‌ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸ ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷವಾಗಿತ್ತು.

ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್‌ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್‌. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್‌, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಕೆ ಇವರದು.

ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು

ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ಶ್ರೀ ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಬಾಗಿಯಾಗಿದ್ದಾರೆ.

ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್-ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಎಸ್. ಬಾಲಿ ಅವರದ್ದಾಗಿದೆ. ಶಂಕರನಾಗ್‌ ಅವರ ಸಂಕೇತ್‌ ಸ್ಟುಡಿಯೊ ಆರಂಭದ ದಿನಗಳಲ್ಲಿ ಎದುರಾದ ಸವಾಲುಗಳನ್ನು ಎದುರಿಸಲು ಬಾಲಿ ಹೆಗಲು ನೀಡಿದರು.

ಬಾಲಿ ಅವರು ಕನ್ನಡದ ಮೊಟ್ಟಮೊದಲ ಧ್ವನಿಸುರಳಿ ಕವಿ ನಿಸಾರ್ ಅಹಮ್‌ದರವರ ನಿತ್ಯೋತ್ಸವದಿಂದ ಮೊದಲುಗೊಂಡು ಮೈಸೂರು ಅನಂತಸ್ವಾಮಿಯವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದವರು. ಹಲವಾರು ಧ್ವನಿಸುರುಳಿಗಳು, ಕಿರುತೆರೆ, ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶ್ವದೆಲ್ಲೆಡೆ ಬಾಲಿ ಅವರ ಲಯ ಸಂಗೀತ ಶಾಶ್ವತವಾಗಿ ಮೊಳಗುತ್ತಲೇ ಇದೆ. 1970ರ ದಶಕದಲ್ಲಿ ಬಾಲಿ ಬಹುಬೇಡಿಕೆಯ ವ್ಯಕ್ತಿಯಾಗಿದ್ದರು. ಅವರಿಗ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

Continue Reading
Advertisement

Trending

Copyright © 2025 Namma Kudla News

You cannot copy content of this page