Connect with us

LATEST NEWS

ಮಂಗಳೂರು: ಬೆಸೆಂಟ್‌ ಜಂಕ್ಷನ್‌ನಿಂದ ಕಲಾಕುಂಜ ರಸ್ತೆಯ ಕಾಂಕ್ರಿಟ್‌ ಕಾಮಗಾರಿ-ಸಂಚಾರ ಬಂದ್‌

Published

on

ಮಂಗಳೂರು: ನಗರದ ಬೆಸೆಂಟ್‌ ಜಂಕ್ಷನ್‌ನಿಂದ ಕಲಾಕುಂಜಕ್ಕೆ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್‌ ಹಾಕುವ ಕಾಮಗಾರಿ ಆರಂಭಿಸಲಾಗಿದೆ.

ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಬಂದ್‌ ಮಾಡಲಾಗಿದೆ.
ಒಂದು ಭಾಗದ ಕಾಮಗಾರಿ ಮುಗಿದಿದ್ದು, ಮತ್ತೂಂದು ಭಾಗದ ಕೆಲಸ ನಡೆಯುತ್ತಿದೆ.

ಒಂದು ವಾರದೊಳಗೆ ಕಾಂಕ್ರೀಟ್‌ ಹಾಕಲಿದ್ದು, ಬಳಿಕ ಕ್ಯೂರಿಂಗ್‌ಗೆ ಕ್ರಮ ಕೈಗೊಳ್ಳಲಾಗುವುದು. ನಂತರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು.
ಇಲ್ಲಿನ ಕಾಮಗಾರಿ ಮುಗಿದ ಬಳಿಕ ಬೆಸೆಂಟ್‌ ಜಂಕ್ಷನ್‌ನಿಂದ ಜೈಲ್‌ ರೋಡ್‌ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್‌ ಹಾಕಲಾಗುವುದು. ಸದ್ಯ ಇಲ್ಲಿ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ.

LATEST NEWS

ಉಡುಪಿ: ಮಹಿಳೆಯ ಮೊಬೈಲ್‌ ಮತ್ತು ಪರ್ಸ್ ಎಗರಿಸಿದ ಆರೋಪಿ ಬಂಧನ

Published

on

ಉಡುಪಿಯ ಹೊರಟು ಕೆಳಾರ್ಕಳಬೆಟ್ಟು- ಸಂತೆಕಟ್ಟೆ ರಸ್ತೆಯಲ್ಲಿ ನಾಲ್ಕು ದಿನಗಳ ಹಿಂದೆ ಪಾದಚಾರಿ ಮಹಿಳೆಯ ಮೊಬೈಲ್‌ ಫೋನ್‌ ಮತ್ತು ಪರ್ಸ್ ಎಗರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಲ್ಪೆಯ ತೊಟ್ಟಂ ನಿವಾಸಿ ದರ್ಶನ್‌ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಬಾಗಲ್ಕೋಟೆ ಮೂಲದ ಮಹಿಳೆ ಸರಸ್ವತಿ (21) ಎಂಬವರು ಮಾರ್ಚ್ 21 ರಂದು ಬೆಳಿಗ್ಗೆ 11:45 ಗಂಟೆಗೆ ಸಂತೆಕಟ್ಟೆಯಲ್ಲಿನ ವೈದ್ಯರ ಬಳಿ ಹೋಗಲು ತನ್ನ ಮಗನನ್ನು ಎತ್ತಿಕೊಂಡು ಕೆಳಾರ್ಕಳಬೆಟ್ಟುವಿನ ತನ್ನ ತಾಯಿಯ ಮನೆಯಿಂದ ಹೊರಟು ಕೆಳಾರ್ಕಳಬೆಟ್ಟು- ಸಂತೆಕಟ್ಟೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಸುಲಿಗೆ ನಡೆದಿತ್ತು.

ಅಪರಿಚಿತ ಮೋಟಾರ್‌ ಸೈಕಲ್‌ ಸವಾರನೊಬ್ಬ ಹಿಂಬದಿಯಿಂದ ಬಂದು ಸರಸ್ವತಿ ಅವರ ಕೈಯಲ್ಲಿದ್ದ ಚೀಲವನ್ನು ಬಲತ್ಕಾರವಾಗಿ ಕಸಿದುಕೊಂಡು ಕೆಮ್ಮಣ್ಣು ಕಡೆಗೆ ಪರಾರಿಯಾಗಿದ್ದನು. ಅಪರಿಚಿತ ವ್ಯಕ್ತಿ ಎಗರಿಸಿದ್ದ ಚೀಲದಲ್ಲಿ ಮೊಬೈಲ್‌ ಪೋನ್‌ ಮತ್ತು 2500 ರೂಪಾಯಿ ಹಣವಿದ್ದ ಸಣ್ಣ ಪರ್ಸ್‌ ಇತ್ತು.

ಈ ಬಗ್ಗೆ ಸರಸ್ವತಿ ಅವರು ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಮಾರ್ಚ್ 24 ರಂದು ಬಂಧಿಸಿ ಆತನಿಂದ 13,000 ರೂಪಾಯಿ ಬೆಲೆಯ ರೆಡ್ಮಿ ಮೊಬೈಲ್ ಫೋನ್‌ ಮತ್ತು 2,500 ನಗದು ಹಾಗೂ ಲೇಡೀಸ್ ಪರ್ಸನ್ನು ವಶಪಡಿಸಿಕೊಂಡಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯ ಸಬ್‌ ಇನ್ಸ್‌ ಪೆಕ್ಟರ್ ರವಿ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

ಕಂಬಳಕ್ಕೆ ವಿದಾಯ ಹೇಳಿದ ‘ಚಾಂಪಿಯನ್ ಕುಟ್ಟಿ’ ; 17 ವರ್ಷದಿಂದ ಕಂಬಳಾಭಿಮಾನಿಗಳ ಫೇವರೇಟ್ ಆಗಿದ್ದ ‘ಕುಟ್ಟಿ’..!

Published

on

ಮಂಗಳೂರು : ಕಳೆದ ಹದಿನೇಳು ವರ್ಷಗಳಿಂದ ಕಂಬಳ ಕ್ಷೇತ್ರವನ್ನು ಆಳಿದ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದ ‘ಚಾಂಪಿಯನ್ ಕುಟ್ಟಿ’ ಕಂಬಳ ಕ್ಷೇತ್ರಕ್ಕೆ ವಿದಾಯ ಹೇಳಿದ್ದಾನೆ. ಈ ಮೂಲಕ ಸುದೀರ್ಘ ಕಾಲ ಕಂಬಳ ಕರೆಯಲ್ಲಿ ತನ್ನ ಗಾಂಭೀರ್ಯ ಓಟದ ಮೂಲಕ ಕಂಬಳಾಭಿಮಾನಿಗಳ ಹೃದಯ ಗೆದ್ದಿದ್ದ ಪ್ರಸಿದ್ಧ ‘ಕುಟ್ಟಿ’ ಕಂಬಳ ಕ್ಷೇತ್ರದಿಂದ ದೂರ ಉಳಿಯಲಿದ್ದಾನೆ.


17 ವರ್ಷದ ಹಿಂದೆ ಮುಲ್ಕಿಯಲ್ಲಿ ಮೊದಲ ಬಾರಿಗೆ ಜ್ಯೂನಿಯರ್ ವಿಭಾಗದಲ್ಲಿ ಕಂಬಳ ಕರೆಗೆ ಇಳಿದು ಮೊದಲ ಓಟದಲ್ಲೇ ಬಹುಮಾನ ಪಡೆಯುವ ಮೂಲಕ ‘ಕುಟ್ಟಿ’ ತನ್ನ ಗೆಲುವಿನ ನಾಗಾಲೋಟ ಆರಂಭಿಸಿತ್ತು. ಇದಾದ ಬಳಿಕ ಸತತ ಎರಡು ವರ್ಷ ಜ್ಯೂನಿಯರ್ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯೊಂದಿಗೆ ‘ಚಾಂಪಿಯನ್ ಕುಟ್ಟಿ’ ಕಂಬಳಾಭಿಮಾನಿಗಳ ಹೃದಯ ಗೆದ್ದಿತ್ತು. ಬಾರ್ಕೂರು ಶಾಂತಾರಾಮ ಶೆಟ್ಟಿ ಅವರ ಬಳಿ ಇದ್ದ ‘ಕುಟ್ಟಿ’ ಕೋಪಿಷ್ಠನಾಗಿದ್ದು, ಯಾರ ನಿಯಂತ್ರಣಕ್ಕೂ ಸಿಗುವ ಕೋಣ ಅಲ್ಲ. ಹೀಗಾಗಿ ‘ಚಾಂಪಿಯನ್ ಕುಟ್ಟಿ’ ನಂದಳಿಕೆ ಶ್ರೀಕಾಂತ ಭಟ್ಟರ ತಂಡ ಸೇರಿಕೊಂಡಿತ್ತು. ನಂದಳಿಕೆ ಶ್ರೀಕಾಂತ ಭಟ್ಟರ ಬಳಿ ಮತ್ತಷ್ಟು ಪಳಗಿದ ‘ಕುಟ್ಟಿ’ ಹಲವಾರು ಬಹುಮಾನಗಳನ್ನು ಪಡೆಯುವ ಮೂಲಕ ‘ಚಾಂಪಿಯನ್ ಕುಟ್ಟಿ’ಯಾಗಿ ಬದಲಾಗಿತ್ತು.

ಯಾವುದೇ ಕೋಣಗಳ ಜೊತೆ ಕಟ್ಟಿ ಓಡಿಸಿದ್ರೂ ಬಹುಮಾನ ತಂದು ಕೊಡುವ ಶಕ್ತಿ ಚಾಂಪಿಯನ್ ‘ಕುಟ್ಟಿ’ಗೆ ಇತ್ತು ಅನ್ನೋದೇ ವಿಶೇಷ. ಈ ಕೋಣವನ್ನು ಓಡಿಸಿದ ನಾಲ್ವರು ಓಟಗಾರರು ಕೂಡಾ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುವುದು ಮತ್ತೊಂದು ವಿಶೇಷ. ಸಾಮಾನ್ಯವಾಗಿ ಓಟದಲ್ಲಿ ಹಿಂದೆ ಬಿದ್ದಾಗ ಕೋಣಗಳಿಗೆ ನಿವೃತ್ತಿ ಘೊಷಣೆ ಮಾಡಲಾಗುತ್ತದೆ. ಆದ್ರೆ ಉಪ್ಪಿನಂಗಡಿಯಲ್ಲಿ ನಡೆದ ಕಂಬಳದಲ್ಲಿ ಭಾಗವಹಿಸಿದ ‘ಚಾಂಪಿಯನ್ ಕುಟ್ಟಿ’ ಇಲ್ಲೂ ಕೂಡಾ ಹಗ್ಗ ಹಿರಿಯ ವಿಭಾಗದಲ್ಲಿ ಬಹುಮಾನ ಗಳಿಸಿ ತಾನು ಇನ್ನೂ ಚಾಂಪಿಯನ್ ಅಂತ ತೋರಿಸಿಕೊಟ್ಟಿದೆ. ಆದ್ರೆ ಇದಾದ ಬಳಿಕ ನಂದಳಿಗೆ ಶ್ರೀಕಾಂತ್ ಭಟ್ಟರು ‘ಚಾಂಪಿಯನ್ ಕುಟ್ಟಿ’ಯ ನಿವೃತ್ತಿ ಘೋಷಣೆ ಮಾಡಿದ್ದರೆ. ಕಂಬಳ ಅಭಿಮಾನಿಗಳ ಕರತಾಡನದೊಂದಿಗೆ ‘ಚಾಂಪಿಯನ್ ಕುಟ್ಟಿ’ಗೆ ಗೌರವ ನೀಡಿ ವಿಶೇಷ ರೀತಿಯಲ್ಲಿ ಬೀಳ್ಕೊಡಲಾಗಿದೆ.

Continue Reading

LATEST NEWS

ಭಾರತದಲ್ಲೇ ಶ್ರೀಮಂತ ಹಾಸ್ಯ ನಟ ಬ್ರಹ್ಮಾನಂದಂ ಅವರ ಆಸ್ತಿ ಕೇಳಿದ್ರೆ ಶಾಕ್ ಆಗ್ತೀರಾ !

Published

on

‘ಟಾಲಿವುಡ್‌ ಕಾಮಿಡಿ ಕಿಂಗ್’ ಎಂದೇ ಖ್ಯಾತರಾಗಿರುವ ತೆಲುಗು ನಟ ಬ್ರಹ್ಮಾನಂದಂ ಭಾರತದ ಅತ್ಯಂತ ಶ್ರೀಮಂತ ಹಾಸ್ಯನಟ ಎಂದು ಅನೇಕ ವರದಿಗಳು ತಿಳಿಸಿವೆ.


ಹೌದು, ಪದ್ಮಶ್ರೀ ಪುರಸ್ಕೃತ ಹಾಸ್ಯ ನಟ ಬ್ರಹ್ಮಾನಂದಂ ಇದುವರೆಗೂ ಬರೀ ನಟರಾಗಿ ಎಲ್ಲರಿಗೂ ಪರಿಚಯಗೊಂಡಿದ್ದರು. ಆದ್ರೆ ಅವರು ಕೇವಲ ನಟನಲ್ಲದೇ ಒಬ್ಬ ಅದ್ಭುತ ಚಿತ್ರ ಕಲಾವಿದ ಕೂಡ ಆಗಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತೆರೆ ಮೇಲೆ ಎಲ್ಲರನ್ನೂ ನಗಿಸುತ್ತಾರೆ. ಒಂದು ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಪಡೆದುಕೊಂಡಿದ್ದಾರೆ.

ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ (ವಿಶ್ವ ದಾಖಲೆ) ಬ್ರಹ್ಮಾನಂದಂ ತಮ್ಮ ವೃತ್ತಿಜೀವನದಲ್ಲಿ ಸುಮಾರು 500 ಕೋಟಿಗೂ ಹೆಚ್ಚು ಆಸ್ತಿಯನ್ನು ಸಂಪಾದಿಸಿದ್ದಾರೆ. ಇದು ಭಾರತದ ಸ್ಟಾರ್​ ನಟರಾದ ರಣಬೀರ್ ಕಪೂರ್ (350 ಕೋಟಿ), ಪ್ರಭಾಸ್ ( 300 ಕೋಟಿ) ಮತ್ತು ರಜನಿಕಾಂತ್ (400 ಕೋಟಿ) ಗಿಂತ ಹೆಚ್ಚು ಶ್ರೀಮಂತನನ್ನಾಗಿ ಮಾಡಿದೆ.

ಭಾರತದ ಇತರ ಪ್ರಮುಖ ಹಾಸ್ಯನಟರು ಯಾರೂ ಬ್ರಹ್ಮಾನಂದಂ ಅವರ ಹತ್ತಿರಕ್ಕೂ ಸುಳಿದಿಲ್ಲ. ಕಪಿಲ್ ಶರ್ಮಾ ಅವರ ನಿವ್ವಳ ಮೌಲ್ಯ 300 ಕೋಟಿ ರೂ. ಎಂದು ವರದಿಯಾಗಿದೆ. ದೇಶದ ಇತರ ಯಾವುದೇ ಹಾಸ್ಯನಟರು ತಮ್ಮ ನಿವ್ವಳ ಮೌಲ್ಯದಲ್ಲಿ 100 ಕೋಟಿ ರೂ.ಗಳನ್ನು ದಾಟಿಲ್ಲ. ಆದರೆ, ಬ್ರಹ್ಮಾನಂದಂ 500 ಕೋಟಿ ಗೂ ಹೆಚ್ಚು ಆಸ್ತಿಯನ್ನು ಹೊಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಟ್ರೆಂಡ್ ಬದಿಗಿಟ್ಟು ಮಗಳಿಗೆ ಅರ್ಥಗರ್ಭಿತ ಹೆಸರಿಟ್ಟ ನಟಿ ನೇಹಾ ಗೌಡ; ವ್ಹಾವ್ ಅಂದ್ರು ಫ್ಯಾನ್ಸ್!

ಬ್ರಹ್ಮಾನಂದಂ ಅವರು ಮೂಲತಃ ಆಂಧ್ರಪ್ರದೇಶದ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. 80ರ ದಶಕದಲ್ಲಿ ತಮ್ಮ ಮಿಮಿಕ್ರಿ ಕೌಶಲ್ಯಕ್ಕೆ ಹೆಸರುವಾಸಿಯಾದ ರಂಗಭೂಮಿ ಕಲಾವಿದರಾಗಿ ತಮ್ಮ ಶೋಬಿಜ್ ವೃತ್ತಿ ಜೀವನವನ್ನು ಪ್ರಾರಂಭಿಸಿದರು.

ಇದರಿಂದ 1985ರಲ್ಲಿ ಟಿವಿಗೆ ಪಾದಾರ್ಪಣೆ ಮಾಡಿದ್ರು. 1987ರಲ್ಲಿ ಸಿನಿಮಾಗೆ ಪಾದಾರ್ಪಣೆ ಮಾಡಿದ್ದರು. ಆಹಾ ನಾ ಪೆಲ್ಲಂಟ ಹೆಸರಿನ ಸಿನಿಮಾ ಅವರ ವೃತ್ತಿಜೀವನದಲ್ಲಿ ಹೊಸ ತಿರುವು ನೀಡಿತು. ಅಂದಿನಿಂದ, ಆಫರ್‌ಗಳು ಹರಿದು ಬಂದವು.

Continue Reading
Advertisement

Trending

Copyright © 2025 Namma Kudla News

You cannot copy content of this page