Connect with us

FILM

ವೇದಿಕೆ ಮೇಲೆ ಇಬ್ಬರ ರೊಮಾನ್ಸ್​ ; ಅನುಶ್ರೀನೇ ನನ್ನ ಸ್ವರ್ಗ ಎಂದ ಜಗದೀಶ್

Published

on

ಲಾಯರ್‌ ಜಗದೀಶ್‌ ಸದ್ಯ ಬಿಗ್‌ ಬಾಸ್‌ ಮನೆಯಿಂದ ಬಂದ ತಕ್ಷಣ ಹಲವು ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್​ಬಾಸ್​ ಮನೆಯಲ್ಲಿ ಹವಾ ಕ್ರಿಯೇಟ್​ ಮಾಡಿದ್ದ ಲಾಯರ್ ಜಗದೀಶ್, ಹೊರಕ್ಕೆ ಬಂದಿರುವುದಕ್ಕೆ ಇದಾಗಲೇ ಹಲವರಿಗೆ ಸಿಕ್ಕಾಪಟ್ಟೆ ಬೇಸರವಾಗಿದೆ. ಆದರೆ, ಬೇರೆ ಶೋಗಳಿಗೆ ಎಂಟ್ರಿಯಾಗುವ ಮೂಲಕ ಲಾಯರ್‌ ಜಗದೀಶ್‌ ಅವರು ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

ಬಿಗ್​ಬಾಸ್​ ಮನೆಯಲ್ಲಿದ್ದಾಗ ಲಾಯರ್‌ ಜಗದೀಶ್‌ ಅವರು ಇನ್ನೋರ್ವ ಸ್ಪರ್ಧಿ ಹಂಸಾ ಜೊತೆ ಇವರ ರೊಮ್ಯಾನ್ಸ್​ ಸಕತ್​ ಸದ್ದು ಮಾಡಿತ್ತು. ಆದರೆ ಇದೀಗ ಅವರಿಗೆ ಬಿಗ್​ಬಾಸ್​ನಿಂದ ಬಂದ ಮೇಲೆ ಸಹಜವಾಗಿ ಡಿಮ್ಯಾಂಡ್​ ಹೆಚ್ಚಾಗಿದೆ. ಡಾನ್ಸ್ ಕರ್ನಾಟಕ ಡಾನ್ಸ್​ ವೇದಿಕೆಗೆ ಅವರು ಆಗಮಿಸಿದ್ದಾರೆ. ಡಿಕೆಡಿ ಶೋ ನಲ್ಲಿ ಲಾಯರ್‌ ಜಗದೀಶ್‌ ಅವರು ಡ್ಯಾನ್ಸ್‌ ಮಾಡಿದ್ದಾರೆ.

ಇದೇ ವೇಳೆ ಕೆಲವು ಮಾತನಾಡಿರುವ ಜಗದೀಶ್​ ಅವರು, ಪಕ್ಕದಲ್ಲೇ ಇರುವ ಆಯಂಕರ್​ ಅನುಶ್ರೀ ತಮ್ಮ ಸ್ವರ್ಗ ಎಂದೂ ಹೇಳಿದ್ದಾರೆ. ವೇದಿಕೆಯ ಮೇಲೆ ತಮಾಷೆ ಮಾಡುವ ಸಮಯದಲ್ಲಿ ಲಾಯರ್​ ಜಗದೀಶ್​ ಅವರು, ನನ್ನ ಲಕ್ಕಿ ನಂಬರ್ ಸೆವೆನ್​. ನನ್ನ ಪಕ್ಕವೇ ಇದೆ ಹೆವನ್ ಎಂದು ಅನುಶ್ರೀಯವರನ್ನು ಉದ್ದೇಶಿಸಿ ಹೇಳಿದ್ದಾರೆ. ಇದನ್ನು ಕೇಳಿ ಅನುಶ್ರೀ ಅವರು ನಾಚಿ ನೀರಾಗಿದ್ದಾರೆ. ಈ ವೇಳೆ ಆಯಂಕರ್​ ಅನುಶ್ರೀ ಮತ್ತು ಜಗದೀಶ್‌ ದಾದಾ ಸೇರಿ ತುಝೆ ದೇಖಾ ತೋ ಯೇ ಜಾನಾ ಸನಮ್​ ಹಾಡಿಗೆ ರೊಮಾನ್ಸ್​ ಮಾಡಿದ್ದಾರೆ.

ಇನ್ನೂ ಅನುಶ್ರೀ ಜೊತೆ ಲಾಯರ್‌ ಜಗದೀಶ್‌ ಡ್ಯಾನ್‌ ನೋಡಿ ತರ್ಲೆ ಕಮೆಂಟಿಗರು ಹಲವು ಕಮೆಂಟ್ಸ್​ ಹಾಕುತ್ತಿದ್ದಾರೆ. ಬಿಗ್​ಬಾಸ್​ನಲ್ಲಿ ಹಂಸ ಮೇಡಂ ಆಯ್ತು, ಈಗ ಅನುಶ್ರೀ ಮೇಡಂ ಎಂದು ಕೆಲವರು ಹೇಳಿದ್ರೆ, ಮತ್ತೆ ಹಲವರು ಹಿಂದಿ ಹಾಡು ಹಾಕಿದ್ದಕ್ಕೆ ಗರಂ ಆಗಿದ್ದಾರೆ. ಇನ್ನೂ ಕೆಲವರು ಈ ಕಣ್ಣಲ್ಲಿ ಏನೇನೋ ನೋಡ್ಬೇಕೋ ನಾ ಕಾಣೆ ದೇವರೇ.. ಟೊಮೇಟೊ ಜೊತೆಗೆ ಬದನೇಕಾಯಿ ಡಾನ್ಸ್ ಮಾಡಿದ ಹಾಗೆ ಇದೆ ಎಂದಿದ್ದಾರೆ.

ಬಿಗ್‌ ಬಾಸ್‌ ನಿಂದ ಹೊರ ಬಂದ ಮೇಲೆ ಹಲವು ಶೋ ಗಳಲ್ಲಿ ಲಾಯರ್‌ ಜಗದೀಶ್‌ ಅವರು ಕಾಣಿಸಿಕೊಳ್ಳುತ್ತಿದ್ದು, ಮತ್ತೆ ಜಗದೀಶ್​ ಅವರನ್ನು ವಾಪಸ್​ ಬಿಗ್​ಬಾಸ್​ಗೆ ಕರೆಸಿಕೊಳ್ಳಬೇಕು ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ ಇದು ಸಾಧ್ಯವೇ ಇಲ್ಲ ಎಂದು ಖುದ್ದು ಕಿಚ್ಚ ಸುದೀಪ್‌ ಅವರೇ ಹೇಳಿದ್ದಾರೆ. ಈ ಹಿಂದೆ ಜಗದೀಶ್​ ಅವರೂ ನೇರ ಪ್ರಸಾರದಲ್ಲಿ ಬಂದು ವಾಪಸ್​ ಹೋಗಲು ತಮಗೆ ಅವಕಾಶ ಇಲ್ಲ ಎಂದು ನೋವು ತೋಡಿಕೊಂಡಿದ್ದರು.

ಬಿಗ್‌ ಬಾಸ್‌ ಮನೆಯಲ್ಲಿ ಒಂದು ಚಿಕ್ಕ ಪದದಿಂದ ಬಿಗ್​ಬಾಸ್​ನಿಂದ ಹೊರಕ್ಕೆ ಕಳುಹಿಸಲಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದ ಜಗದೀಶ್, ಇನ್ನೂ ನನಗೆ ಅರ್ಥವಾಗದ ವಿಷಯ ಏನೆಂದರೆ, ಚೈತ್ರಾ ಕುಂದಾಪುರ, ತುಕಾಲಿ ಮಾನಸ, ಮಂಜಣ್ಣ ಇವರೆಲ್ಲರೂ ನನ್ನ ಹಾಗೆಯೇ ಕೆಲವು ಸಲ ಕೆಟ್ಟ ಪದ ಪ್ರಯೋಗ ಮಾಡಿದ್ದಾರೆ. ಆದರೆ ನನ್ನೊಬ್ಬನನ್ನೇ ಯಾಕೆ ಹೊರಗೆ ಕಳುಹಿಸಿದ್ದೋ ಗೊತ್ತಾಗುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ‌

ಇನ್ನೂ ಲಾಯರ್‌ ಜಗದೀಶ್‌ ಅವರನ್ನ ಹಲವರು ನೀವು ಮತ್ತೆ ಹೋಗ್ತೀರಾ ಎಂದು ಪ್ರಶ್ನಿಸುತ್ತಾರೆ. ಆದರೆ ಇದು ಸಾಧ್ಯವಿಲ್ಲ. ಏಕೆಂದ್ರೆ ಈಗಾಗಲೇ ಸುದೀಪ್​ ಅವರು, ಬಿಗ್​ಬಾಸ್​ಗೆ ಜಗದೀಶ್​ ಮುಗಿದು ಹೋಗಿರೋ ಅಧ್ಯಾಯ ಎಂದಿದ್ದಾರೆ. ಆದ್ದರಿಂದ ಮತ್ತೆ ವಾಪಸ್​ ಹೋಗುವ ಯಾವುದೇ ಚಾನ್ಸ್​ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

FILM

ರಾಜ್ಯದಾದ್ಯಂತ ಡೆವಿಲ್ ಚಿತ್ರದ ಟ್ರೇಲರ್‌ ಔಟ್‌; ಗಿಲ್ಲಿ ಖಡಕ್‌ ಡೈಲಾಗ್‌

Published

on

ಮಿಲನ ಪ್ರಕಾಶ್‌ ನಿರ್ದೇಶನದ, ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾದ ಟ್ರೇಲರ್‌ ಇಂದು (ಡಿ.5)ಬೆಳಿಗ್ಗೆ 10.05 ಕ್ಕೆ ರಿಲೀಸ್‌ ಆಗಿದ್ದು, ಭಾರೀ ಮೆಚ್ಚುಗೆಯನ್ನು ಪಡೆದಿದೆ. ಈ ಟ್ರೇಲರ್‌ನಲ್ಲಿ ದರ್ಶನ್‌ ಮಾಸ್‌ ಲುಕ್‌ನಲ್ಲಿ ಕಾಣಿಸಿ, ಎಲ್ಲರ ಗಮನ ಸೆಳೆದಿದ್ದಾರೆ.

ಬಿಗ್‌ಬಾಸ್‌ನಲ್ಲಿರೋ ಗಿಲ್ಲಿ ನಟ ಕೂಡ ಡೆವಿಲ್‌ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಟ್ರೇಲರ್‌ನಲ್ಲಿ ಗಿಲ್ಲಿ ಅವರ ಪಾತ್ರದ ಝಲಕ್‌ ತೋರಿಸಲಾಗಿದೆ. ಟ್ರೇಲರ್‌ನಲ್ಲಿ ತೋರಿಸಲಾದ ಒಂದು ಡೈಲಾಗ್‌ಗೆ ಮತ್ತು ಅವರ ಗೆಟಪ್ ನೋಡಿ ಫ್ಯಾನ್ಸ್‌ ಫುಲ್‌ ಖುಷಿಪಟ್ಟಿದ್ದಾರೆ.


ಖಡಕ್‌ ಲುಕ್‌ನಲ್ಲಿ ಪೊಲೀಸ್‌ ಠಾಣೆಗೆ ಬಂದು ಪೊಲೀಸ್‌ ಅಧಿಕಾರಿ ಮುಂದೆ ಕಾಲ್ಮೇಲೆ ಕಾಲಾಕಿ ಕೂತು, ‘ಎಕ್ಸ್‌ಕ್ಯೂಸ್‌ ಮೀ ಪಿಸಿ, ಎಸಿ ಹಾಕಮ್ಮ. ಲಾಟ್ಸ್‌ ಆಫ್‌ ಸೆಖೆ’ ಎಂದು ಡೈಲಾಗ್‌ ಹೊಡೆಯುತ್ತಾರೆ. ಸಿನಿಮಾದಲ್ಲಿ ಅವರ ಪಾತ್ರ ಎಷ್ಟು ಹೊತ್ತು ಇರುತ್ತದೆ ಎಂಬ ಕುತೂಹಲ ಇದೆ.

 

ಡೆವಿಲ್‌ ಸಿನಿಮಾದಲ್ಲಿ ದರ್ಶನ್‌ಗೆ ಜತೆಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಮಹೇಶ್‌ ಮಂಜ್ರೇಕರ್‌, ಅಚ್ಯುತ್‌ ಕುಮಾರ್‌, ಶರ್ಮಿಳಾ ಮಾಂಡ್ರೆ ಮೊದಲಾದವರಿದ್ದಾರೆ. ಶೋಭರಾಜ್‌ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಡಿದ್ದಾರೆ. ಬಿಗ್‌ಬಾಸ್‌ ಖ್ಯಾತಿಯ ವಿನಯ್‌ ಗೌಡ ಕೂಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

 

ಇದನ್ನೂ ಓದಿ: ಡೆವಿಲ್ ಸಿನಿಮಾ ಸೆಟ್‌ನಲ್ಲಿ ಮರೆಯಲಾಗದ ಕ್ಷಣಗಳು ಇವು : ಚಂದು ಗೌಡ ಪೋಸ್ಟ್

 

ಡಿಸೆಂಬರ್ 11ರಂದು ಡೆವಿಲ್‌ ಸಿನಿಮಾ ರಾಜ್ಯಾದಾದ್ಯಂತ ಬಿಡುಗಡೆ ಆಗಲಿದೆ. ದರ್ಶನ್‌ ಜೈಲಿನಲ್ಲಿ ಇರುವಾಗಲೇ ಡೆವಿಲ್‌ ಸಿನಿಮಾ ತೆರೆಗೆ ಬರುತ್ತಿದೆ. ಎಲ್ಲರೂ ಪ್ಯಾನ್‌ ಇಂಡಿಯಾ ಹಿಂದೆ ಓಡುತ್ತಿರುವಾಗ ಡೆವಿಲ್‌ ಕನ್ನಡದಲ್ಲಿ ಮಾತ್ರ ರಿಲೀಸ್‌ ಆಗುತ್ತಿದೆ.

Continue Reading

FILM

ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್‌ ವತಿಯಿಂದ ಬಾರೆಬೈಲ್‌ನಲ್ಲಿ ಹರಕೆ ನೇಮೋತ್ಸವ

Published

on

ಮಂಗಳೂರು: ಕಾಂತಾರ-1 ಸಿನಿಮಾದ ಯಶಸ್ಸಿನ ಹಿನ್ನೆಲೆಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಚಿತ್ರತಂಡದಿಂದ ಗುರುವಾರ ರಾತ್ರಿ ಹರಕೆಯ ಕೋಲ ಸಮರ್ಪಿಸಲಾಯಿತು.

ಮಂಗಳೂರಿನ ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನೆರವೇರಿತು. ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್‌ ವತಿಯಿಂದ ಹರಕೆ ನೇಮೋತ್ಸವ ಆಯೋಜನೆಗೊಂಡಿತ್ತು.

 

ಪತ್ನಿ ಮಕ್ಕಳ ಜತೆಗೆ ರಿಷಬ್ ಶೆಟ್ಟಿ ಭಾಗವಹಿಸಿದರು. ಚಿತ್ರದ ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಹಲವರು ಭಾಗವಹಿಸಿದ್ದರು.

 

ಕಳೆದ ಏಪ್ರಿಲ್ ನಲ್ಲಿ ಇದೇ ದೈವಸ್ಥಾನದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಹಾಗೂ ಕುಟುಂಬ ಭಾಗವಹಿಸಿತ್ತು. ಗುರುವಾರ ಅದೇ ದೈವಸ್ಥಾನದಲ್ಲಿ ಹರಕೆ ನೇಮೋತ್ಸವ ಸಲ್ಲಿಸಲಾಯಿತು.

Continue Reading

FILM

ಸಿನಿಮಾ ಶೂಟಿಂಗ್ ವೇಳೆ ಕುಸಿದು ಬಿದ್ದು ಕನ್ನಡದ ನಿರ್ದೇಶಕ ಸಾವು

Published

on

ಶಿವಮೊಗ್ಗ: ಸಾವು ಅನ್ನೋದು ಯಾವಾಗ ಹೇಗೆ ಬರುತ್ತದೆ ಎಂದು ಊಹಿಸೋದು ತುಂಬಾನೇ ಕಷ್ಟ. ಅದೆಷ್ಟೋ ಕಲಾವಿದರು ಅಭಿನಯ ಮಾಡುತ್ತಿರುವಾಗಲೇ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದೀಗ ಕನ್ನಡದ ನಿರ್ದೇಶಕರೊಬ್ಬರು ಸಿನಿಮಾ ಚಿತ್ರೀಕರಣದ ವೇಳೆಯೇ ಕುಸಿದು ಬಿದ್ದ ಪರಿಣಾಮ ಬುಧವಾರ (ಡಿ.03) ಮೃತಪಟ್ಟಿದ್ದಾರೆ. ಸಂಗೀತ್ ಸಾಗರ್ ಮೃತಪಟ್ಟ ನಿರ್ದೇಶಕ.


ಸಂಗೀತ್ ಸಾಗರ್ ಶಿವಮೊಗ್ಗ ಕೊಪ್ಪದಲ್ಲಿ ಪಾತ್ರಧಾರಿ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಆ ವೇಳೆ ನಿರ್ದೇಶಕ ಸಾಗರ್ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಏನೂ ಪ್ರಯೋಜನ ಆಗಿಲ್ಲ.

ಇದನ್ನೂ ಓದಿ: ಮದುವೆ ಮನೆಯಲ್ಲಿ ರಾದ್ಧಾಂತ ಮಾಡಿದ ವರನ ಕುಟುಂಬ; ಕಾರಣ ಏನು ಗೊತ್ತಾ?

ಮೃತ ನಿರ್ದೇಶಕ ಸಂಗೀತ್ ಸಾಗರ್ ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page