Connect with us

FILM

ನಟಿಯಾಗಿದ್ದ ಸಾಯಿಪಲ್ಲವಿ ಗಮನ ಈಗ ನಿರ್ದೇಶನದತ್ತ

Published

on

ಸಾಕಷ್ಟು ಮೇಕಪ್ ಮಾಡಿಕೊಂಡು, ಗ್ಲಾಮರಸ್ ಡ್ರೆಸ್ ಹಾಕಿಕೊಂಡು ನಟಿಯರು ಮಿಂಚುತ್ತಿರುವ ಈ ಕಾಲದಲ್ಲಿ ದಕ್ಷಿಣದ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ಸಾಯಿ ಪಲ್ಲವಿ ತಮ್ಮ ಸರಳತೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಪ್ರಸ್ತುತ ಸಾಯಿ ಪಲ್ಲವಿ ಅವರು ನಿರ್ದೇಶನದತ್ತ ಗಮನ ಹರಿಸುವ ಆಲೋಚನೆ ಹೊಂದಿದ್ದು, ಭವಿಷ್ಯದ ಯೋಜನೆಯ ಬಗ್ಗೆ ನಟ ನಾಗ ಚೈತನ್ಯ ಮಾತನಾಡಿದ್ದಾರೆ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಥಾಂಡೇಲ್’ ಸಿನಿಮಾ ಇಂದು (ಫೆ.7) ರಿಲೀಸ್ ಆಗಿದ್ದು, ಬಹು ನಿರೀಕ್ಷೆ ಸೃಷ್ಟಿಸಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಅವರ ಪಾತ್ರ ಹೆಚ್ಚು ಹೈಲೈಟ್ ಆಗುವ ನಿರೀಕ್ಷೆ ಇದೆ. ಈ ಚಿತ್ರ ಪ್ರಚಾರ ವೇಳೆ ಅವರ ನಿರ್ದೇಶನದ ಪ್ಲ್ಯಾನ್ ಬಗ್ಗೆ ನಟ ಮಾತನಾಡಿದ್ದಾರೆ. ಸಂದರ್ಶನದ ವೇಳೆ ನೆರೆದಿದ್ದ ಅಭಿಮಾನಿಗಳಿಗೆ ಪ್ರಶ್ನೆ ಮಾಡಲು ಅವಕಾಶ ನೀಡಲಾಗಿದ್ದು, ಸಾಯಿ ಪಲ್ಲವಿ ಅವರಿಗೆ ‘ನೀವು ಫಿಲ್ಮ್ ಡೈರೆಕ್ಷನ್ ಮಾಡುವ ಸಾಧ್ಯತೆ ಇದೆಯೇ’ ಎಂದು ಕೇಳಲಾಯಿತು. ಇದಕ್ಕೆ ‘ಇಲ್ಲ’ ಎನ್ನುವ ಉತ್ತರವನ್ನು ಅವರು ನೀಡಿದರು. ‘ಇದು ಸುಳ್ಳು. ಒಂದು ಸಿನಿಮಾ ನಿರ್ದೇಶನ ಮಾಡಬಹುದು ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದಾರೆ. ನನ್ನನ್ನು ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳೋದಾಗಿಯೂ ಹೇಳಿದ್ದಾರೆ’ ಎಂದು ನಾಗ ಚೈತನ್ಯ ಅವರು ವಾದಿಸಿದಾಗ ‘ಅದು ನನಗೆ ನೆನಪಿದೆ’ ಎಂದು ಸಾಯಿ ಪಲ್ಲವಿ ಹೇಳಿದರು.

ಇದನ್ನೂ ಓದಿ : ಬಾಲಿವುಡ್ ಕಿಂಗ್ ಖಾನ್ ಪುತ್ರನಿಗೆ ಬೆಂಬಲ ನೀಡಿದ ಚಿತ್ರರಂಗ !

ಸಿನಿಮಾ ನಿರ್ದೇಶನದ ಮಾತುಕಥೆ ಮುಗಿದ ಬಳಿಕ, ಫ್ಯಾನ್ಸ್ಫ ಫುಲ್ ಥ್ರಿಲ್ ಆಗಿದ್ದಾರೆ. ಈ ಹೊಸ ಚಿತ್ರ ಶೀಘ್ರವೇ ಸೆಟ್ಟೇರಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಆದರೆ, ನಿರ್ದೇಶನ ಮಾಡೋದು ಅದು ಅಷ್ಟು ಸುಲಭದ ಮಾತಲ್ಲ. ಸಿನಿಮಾ ನಿರ್ದೇಶಿಸಲು ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಆ ಬಳಿಕವೇ ಸಿನಿಮಾ ನಿರ್ದೇಶನಕ್ಕೆ ಇಳಿಯಬೇಕಾಗುತ್ತದೆ. ಸಾಯಿ ಪಲ್ಲವಿ ಅವರು ಸದ್ಯ ‘ರಾಮಾಯಣ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಹಿಂದಿ ಭಾಷೆಯ ಈ ಚಿತ್ರದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ.

FILM

ಟ್ರೆಂಡ್ ಬದಿಗಿಟ್ಟು ಮಗಳಿಗೆ ಅರ್ಥಗರ್ಭಿತ ಹೆಸರಿಟ್ಟ ನಟಿ ನೇಹಾ ಗೌಡ; ವ್ಹಾವ್ ಅಂದ್ರು ಫ್ಯಾನ್ಸ್!

Published

on

ಮಂಗಳೂರು/ಬೆಂಗಳೂರು : ಲಕ್ಷ್ಮೀ ಬಾರಮ್ಮ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ನಟಿ ನೇಹಾ ಗೌಡ. ಗೊಂಬೆ ಎಂದೇ ಖ್ಯಾತರಾಗಿದ್ದರು ನೇಹಾ. ಅದಾದ ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 9 ರ ಶೋ ಮೂಲಕನೂ ಗಮನ ಸೆಳೆದಿದ್ದರು. ಅವರ ಪತಿ ಚಂದನ್ ಕೂಡ ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಮನೆ ಮಾತಾಗಿದ್ದರು. ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ನಾಮಕರಣ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ.

ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕಿರುತೆರೆ, ಹಿರಿತೆರೆ ಕಲಾವಿದರು ಆಗಮಿಸಿ ಶುಭ ಹಾರೈಸಿದರು.

ವಿಶೇಷ ಅಂದ್ರೆ ಟ್ರೆಂಡ್ಸ್‌ ಬದಿಗಿಟ್ಟು ನೇಹಾ ದಂಪತಿ ಚಂದದ ಹೆಸರೊಂದನ್ನು ಮಗಳಿಗಿಟ್ಟಿದ್ದಾರೆ. ಇತ್ತೀಚೆಗೆ ವಿಭಿನ್ನ ಹೆಸರುಗಳದೇ ರಾಯಭಾರವಾಗಿರುವಾಗ ನೇಹಾ – ಚಂದನ್ ಮಾತ್ರ ಅರ್ಥಪೂರ್ಣವಾಗಿರುವ ಹೆಸರಿಟ್ಟಿದ್ದಾರೆ.

ಹೌದು, ಈ ದಂಪತಿ ಮಗುವಿಗೆ ಇಟ್ಟಿರುವ ಹೆಸರು ‘ಶಾರದಾ’. ದಂಪತಿ ನಿಲುವಿಗೆ ಅಭಿಮಾನಿಗಳು ಫುಲ್ ಖುಷಿಯಾಗಿದ್ದು, ಶುಭ ಹಾರೈಸುತ್ತಿದ್ದಾರೆ.

ಇದನ್ನೂ ಓದಿ : ಸಿಕಂದರ್ ಸಿನಿಮಾದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ಒಬ್ಬರೇ ಅಲ್ಲ..! ಟ್ರೈಲರ್‌ನಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಕನ್ನಡಿಗ..?

ಬಾಲ್ಯದಲ್ಲೇ ಪ್ರೀತಿಯಲ್ಲಿ ಬಿದ್ದಿದ್ದ ನೇಹಾ – ಚಂದನ್ 2018ರಲ್ಲಿ ವಿವಾಹವಾಗಿದ್ದರು. ಕಳೆದ ವರ್ಷ ಅಕ್ಟೋಬರ್‌ 29ರಂದು ನೇಹಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

Continue Reading

FILM

ಸಿಕಂದರ್ ಸಿನಿಮಾದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ಒಬ್ಬರೇ ಅಲ್ಲ..! ಟ್ರೈಲರ್‌ನಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಕನ್ನಡಿಗ..?

Published

on

ಮಂಗಳೂರು/ಮುಂಬೈ: ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ ‘ಸಿಕಂದರ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಸಿನಿಮಾದ ಟ್ರೈಲರ್‌ನಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ಒಬ್ಬರೇ ಅಲ್ಲ, ಕನ್ನಡದ ಮತ್ತೊಬ್ಬ ನಟ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಸಿಕಂದರ್‌ನಲ್ಲಿ ಕನ್ನಡ ಪ್ರತಿಭೆಗಳ ಹವಾ ತುಂಬಾ ಜೋರಾಗಿದೆ.


ಸಲ್ಮಾನ್‌ ಖಾನ್ ನಟನೆಯ ‘ಸಿಕಂದರ್’ ಸಿನಿಮಾ ಮಾರ್ಚ್ 30ಕ್ಕೆ ತೆರೆಮೇಲೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಲ್ಲಿ ಸಲ್ಲುಗೆ ನಾಯಾಕಿಯಾಗಿ ರಶ್ಮಿಕಾ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.

ಆ್ಯಕ್ಷನ್ ಅವತಾರದಲ್ಲಿ ಸಲ್ಲು..
ಸಲ್ಮಾನ್‌ ಖಾನ್ ಸಿನಿಮಾಗಳಲ್ಲಿ ಮಾಸ್ ಅಂಶಗಳು ಎಂದಿನಂತೆ ಪುನರಾವರ್ತನೆಯಾಗಿದೆ. ಈ ಚಿತ್ರದಲ್ಲಿ ಪ್ರಮುಖವಾಗಿ ಸಮಾಜದಲ್ಲಿರುವ ಕೆಟ್ಟ ಶಕ್ತಿಗಳು ಮತ್ತು ಸಮಾಜಕ್ಕೆ ಕೇಡು ಭಯಸುವವರ ವಿರುದ್ದ ಸಲ್ಮಾನ್ ಖಾನ್ ಅವರು ಹೋರಾಡುವಂತೆ ಟ್ರೈಲರ್‌ನಲ್ಲಿ ತೊರಿಸಲಾಗಿದೆ. ಮತ್ತೊಂದೆಡೆ ಸಲ್ಮಾನ್ ಖಾನ್ ಲವರ್ ಬಾಯ್ ಆಗಿಯೂ ಕಾಣಿಸಿಕೊಂಡಿದ್ದಾರೆ.

ಕ್ಯೂಟ್ ಆಗಿ ಕಾಣಿಸಿಕೊಂಡ ರಶ್ಮಿಕಾ
ಸಿಕಂದರ್ ಸಿನಿಮಾದಲ್ಲಿ ಸಲ್ಲುಗೆ ಜೊತೆಯಾಗಿ ರಶ್ಮಿಕಾ ನಟಿಸಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರ ಕ್ಯೂಟ್ ಆಗಿ ಇರಲಿದೆ ಅನ್ನೋದು ಟ್ರೈಲರ್ ಮೂಲಕ ಫ್ಯಾನ್ಸ್‌ಗೆ ಪಕ್ಕಾ ಆಗಿದೆ. ರಶ್ಮಿಕಾ ಟ್ರೈಲರ್ ಉದಕ್ಕೂ ಕಾಣಿಸಿಕೊಂಡಿದ್ದಾರೆ. ಸಿಕಂದರ್‌ಗೆ ಇಷ್ಟ ಆಗುವ ಹುಡುಗಿಯಾಗಿ ನೋಡಬಹುದು.

ಇದನ್ನೂ ಓದಿ: ಸಿಕಂದರ್ ಸಿನಿಮಾಗೆ ರಶ್ಮಿಕಾ ಮಂದಣ್ಣ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡ ಕನ್ನಡಿಗ
ಸಿನಿಮಾದಲ್ಲಿ ಬಾಲಿವುಡ್ ಕಲಾವಿದರಿಗಿಂತ ದಕ್ಷಿಣದ ಮಂದಿಗೆ ಚಿತ್ರತಂಡ ಮಣೆ ಹಾಕಿದೆ. ಸಿಕಂದರ್‌ನಲ್ಲಿ ಕನ್ನಡಿಗ ಕಿಶೋರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಬಹುಭಾಷಾ ನಟನಾಗಿ ಸೈ ಎನಿಸಿಕೊಂಡಿರುವ ಕನ್ನಡಿಗ ಕಿಶೋರ್, ಯಾವುದೇ ಭಾಷೆಯ ಸಿನಿಮಾ ಆಗಿದ್ರೂ ಪಾತ್ರಕ್ಕೆ ಜೀವ ತುಂಬುತ್ತಾರೆ.

ಸಲ್ಮಾನ್ ಖಾನ್ ಮುಂದೆ ಕಿಶೋರ್ ತೊಡೆ ತಟ್ಟಿದ್ದಾರೆ. ಟ್ರೈಲರ್‌ನಲ್ಲಿ ಚಿಕ್ಕದಾಗಿ ಸಲ್ಮಾನ್ ಮತ್ತು ಕಿಶೋರ್ ಫೈಟ್ ಸೀನ್ ತೋರಿಸಲಾಗಿದೆ. ಇಬ್ಬರ ನಡುವಿನ ಕಾಂಬಿನೇಶನ್ ಯಾವ ರೀತಿ ಇರಲಿದೆ ಎಂದು ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.

‘ಘಜಿನಿ’ ರೀತಿಯ ಸಿನಿಮಾಗಳನ್ನು ನೀಡಿದ ಎ ಆರ್ ಮುರುಗದಾಸ್ ಅವರು ‘ಸಿಕಂದರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ, ಸತ್ಯರಾಜ್, ಕಿಶೋರ್ ಮೊದಲಾದವರು ಪಾತ್ರವರ್ಗದಲ್ಲಿ ಇದ್ದಾರೆ.

Continue Reading

FILM

ಕ್ರಿಕೆಟಿಗ ಡೇವಿಡ್ ವಾರ್ನರ್‌ಗೆ ನೀನೊಬ್ಬ ದೊಡ್ಡ ಕಳ್ಳ.. ಎಂದ ಹಿರಿಯ ನಟ ರಾಜೇಂದ್ರ ಪ್ರಸಾದ್!

Published

on

ಮಂಗಳೂರು/ಹೈದರಾಬಾದ್: ಟಾಲಿವುಡ್ ನಟ ನಿತಿನ್ ಮತ್ತು ಶ್ರೀಲೀಲಾ ಅಭಿನಯದ ‘ರಾಬಿನ್‌ಹುಡ್‌’ ಸಿನಿಮಾದಲ್ಲಿ ಡೇವಿಡ್ ವಾರ್ನರ್ ಕೂಡ ಬಣ್ಣ ಹಚ್ಚಿದ್ದು, ಸಿನಿಮಾ ಮಾ. 28ರಂದು ತೆರೆಗೆ ಬರಲಿದೆ.


ಸಿನಿಮಾದ ಫ್ರೀ ರಿಲೀಸ್ ಈವೆಂಟ್‌ ಭಾನುವಾರ (ಮಾ.23) ಹೈದರಾಬಾದ್‌ನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಡೇವಿಡ್ ವಾರ್ನರ್ ಕೂಡ ಹಾಜರಿದ್ದರು. ಇದೇ ಸಂದರ್ಭದಲ್ಲಿ ವಾರ್ನರ್‌ಗೆ ಹಿರಿಯ ನಟ ರಾಜೇಂದ್ರ ಪ್ರಸಾದ್ ಅವರು ನೀಡಿದ ಹೇಳಿಕೆಗಳು ವೈರಲ್ ಆಗಿದೆ.

ಈ ಸಿನಿಮಾದಲ್ಲಿ ರಾಜೇಂದ್ರ ಪ್ರಸಾದ್ ಪ್ರಧಾನ ಹಾಸ್ಯ ಕಲಾವಿದನಾಗಿ ಬಣ್ಣ ಹಚಿದ್ದಾರೆ. ಫ್ರೀ ರಿಲೀಸ್ ಈವೆಂಟ್‌ ವೇದಿಕೆಯಲ್ಲಿ ಮಾತನಾಡಿದ ರಾಜೇಂದ್ರ ಪ್ರಸಾದ್, ಡೇವಿಡ್ ವಾರ್ನರ್ ಅವರು, ನೀವು ಕ್ರಿಕೆಟ್ ಆಡಿದರೆ, ನೀವು ನಟಿಸುತ್ತಿರುವಂತೆ ಕಾಣುತ್ತದೆ ಎಂದು ಹೇಳಿದರು. ಅಲ್ಲದೇ, ನೀನೊಬ್ಬ ದೊಡ್ಡ ಕಳ್ಳ, ನೀವೇನು ಸಾಮಾನ್ಯ ವ್ಯಕ್ತಿಯಲ್ಲ ಎಂದರು. ಆದರೆ, ರಾಜೇಂದ್ರ ಪ್ರಸಾದ್ ಇದನ್ನೆಲ್ಲ ತಮಾಷೆಗಾಗಿ ಹೇಳಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ ವಿರುದ್ದ ಆಕ್ರೋಶಗೊಂಡ ಕ್ರಿಕೆಟಿಗ ಡೇವಿಡ್ ವಾರ್ನರ್!

ಮುಂದುವರಿದು, ತಾನು 48 ವರ್ಷಗಳಿಂದ ಚಿತ್ರರಂಗದಲ್ಲಿ ಇರುವುದಕ್ಕೆ ಕಾರಣ ಯಾರು ಎಂಬುದನ್ನು ಹೇಳಿದ್ದಾರೆ. ನಾನು ಇಲ್ಲೇ ಇರುವುದಕ್ಕೆ ಕಾರಣ ಮೈತ್ರಿ ಮೂವೀಸ್. ಇದು ನನ್ನ ಸ್ವಂತ ಕಂಪನಿಯಿದ್ದಂತೆ. ನವೀನ್ ಮತ್ತು ರವಿ ಎಲ್ಲರೂ ನನ್ನ ಮಕ್ಕಳು. ನಾನು ಫಸ್ಟ್ ಶ್ರೀಮಂತುಡು ಸಿನಿಮಾದಲ್ಲಿ ನಟಿಸಿದೆ. ಇಂದು ನಾನು ರಾಬಿನ್ ಹುಡ್‌ನಲ್ಲಿ ನಟಿಸಿದ್ದೇನೆ. ಇಂದು ನಿಮ್ಮೆಲ್ಲರ ಮುಂದೆ ನಿಂತು ಮಾತನಾಡುವ ಹಕ್ಕು ನನಗಿದೆ. ಏಕೆ ಎಂಬುದು ಈ ಚಿತ್ರ ನೋಡಿದ ನಂತರ ನಿಮಗೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page