Connect with us

FILM

ದರ್ಶನ್‌ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ ಸ್ಯಾಂಡಲ್ ವುಡ್ ಕ್ವೀನ್..!

Published

on

ಬೆಂಗಳೂರು/ಮಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ವಿರುದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ.  ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಜೈಲು ಸೇರಿರುವ ದರ್ಶನ್‌ ಗೆ ಅಷ್ಟೊಂದು ಹೈಪ್ ಮಾಡುವ ಅಗತ್ಯವಿಲ್ಲ. ಯಾಕಂದ್ರೆ ಅಷ್ಟೊಂದು ಅಭಿಮಾನಿಗಳನ್ನು ದರ್ಶನ್ ಹೊಂದಿಲ್ಲ. ಬೇರೆ ನಟರು ದರ್ಶನ್‌ಗಿಂತ ಹೆಚ್ಚು ಫ್ಯಾನ್ ಫಾಲೋಯಿಂಗ್‌ನ್ನು ಹೊಂದಿದ್ದಾರೆ. ಇನ್ನು ದರ್ಶನ್ ಸುತ್ತಮುತ್ತ ಇರುವವರೆಲ್ಲಾ ನಟೋರಿಯಸ್ ಕಿಲ್ಲರ್‌ಗಳು ಎಂದು ರಮ್ಯಾ ಹೇಳಿದ್ದಾರೆ.

ದರ್ಶನ್ ಕೊಲೆ ಆರೋಪ ವಿಚಾರ ಭಾರೀ ಚರ್ಚೆಗೆ ಎಡೆ ಮಾಡಿದೆ. ಕನ್ನಡ ಚಿತ್ರರಂಗವೇ ತಲೆತಗ್ಗಿಸುವಂತೆ ಮಾಡಿದೆ. ಈ ಮಧ್ಯೆ ಸ್ಯಾಂಡಲ್‌ವುಡ್ ಕ್ವೀನ್‌ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದರು. ಇದೀಗ ಮತ್ತೊಮ್ಮೆ ರಾಷ್ಟ್ರೀಯ ಚಾನೆಲ್‌ವೊಂದರಲ್ಲಿ ಸಂದರ್ಶನ ನೀಡುವಾಗ ದರ್ಶನ್ ಕುರಿತಾಗಿ ಹೇಳಿಕೆಯನ್ನು ನೀಡಿದ್ದಾರೆ.

Read More..;  ದರ್ಶನ್‌ ಕೊಲೆ ಪ್ರಕರಣ ಬೆನ್ನಲ್ಲೇ ‘ಯಶ್’ ವೀಡಿಯೋ ವೈರಲ್..! ಅಭಿಮಾನಿಗಳಿಗೆ ಯಶ್ ಹೇಳಿದ್ದೇನು?

ದರ್ಶನ್‌ಗೆ ಹೈಪ್‌ ಮಾಡುವಷ್ಟು ಫ್ಯಾನ್ ಫಾಲೋಯಿಂಗ್ ಇಲ್ಲ. ಅವರಿಗಿಂತ ಬೇರೆ ನಟರಿಗೆ ಹೆಚ್ಚು ಫ್ಯಾನ್‌ ಫಾಲೋವರ್ಸ್‌ ಇದ್ದಾರೆ. ಅಷ್ಟು ದೊಡ್ಡ ಮಟ್ಟದಲ್ಲಿ ಫ್ಯಾನ್ಸ್‌ ಇದ್ದಿದ್ರೆ ಅವರು ಮಾಡೋ ಸಿನೆಮಾಗಳೆಲ್ಲಾ ಹಿಟ್ ಆಗಬೇಕಿತ್ತು. ಸಿನೆಮಾ ಅಲ್ಲದೆ ರಾಜಕೀಯದಲ್ಲೂ ಕಳೆದ ಆರು ತಿಂಗಳಿನಿಂದ ರಾಜಕಾರಣಿಗಳ ಪರ ಪ್ರಚಾರ ನಡೆಸಿದ್ದರು. ಆದರೆ ಅವರಲ್ಲಿ ಕೆಲವರು ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದಾರೆ. ಇನ್ನು ದರ್ಶನ್ ಅರೆಸ್ಟ್‌ ಆದ ಪೊಲೀಸ್ ಸ್ಟೇಷನ್ ಮುಂಭಾಗದಲ್ಲಿ 20ರಿಂದ 50 ಜನ ನಿಂತ ಮಾತ್ರಕ್ಕೆ ಅವರಿಗೆ ಸಿಕ್ಕಾಪಟ್ಟೆ ಫ್ಯಾನ್‌ ಫಾಲೋಯಿಂಗ್ ಇದ್ದಾರೆ ಅನ್ನೋದು ಸರಿಯಲ್ಲ ಎಂದು ರಮ್ಯಾ ಹೇಳಿದ್ದಾರೆ. ದರ್ಶನ್ ಸುತ್ತಮುತ್ತಲೂ ಇರುವ ಜನರು ನಟೋರಿಯಸ್‌ಗಳು. ಕೊಲೆ, ಅಪಹರಣ, ಜನರ ಮೇಲೆ ಹಲ್ಲೆ ಮಾಡುವುದರಲ್ಲಿ ತೊಡಗಿಕೊಂಡವರು. ದರ್ಶನ್ ಫ್ಯಾನ್‌ ಕ್ಲಬ್‌ ಅಪಹರಣ, ಕೊಲೆಗಳನ್ನು ಮಾಡುತ್ತಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ ಎಂದು ರಮ್ಯಾ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ನಟ ದರ್ಶನ್ ಜೈಲು ಸೇರುತ್ತಿದ್ದಂತೆಯೇ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು . ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಳ್ಳುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದರೆ ಪೊಲೀಸರಿಗೆ ದೂರು ಕೊಡಬೇಕಿತ್ತು. ಅವರು ವಿಚಾರಿಸಿಕೊಳ್ಳುತ್ತಿದ್ದರು.  ಆದರೆ ನೀವು ಜನರನ್ನು ಹೊಡೆದು ಕೊಲ್ಲುವುದಲ್ಲ. ಈ ವಿಚಾರದಲ್ಲಿ ನಾನು ಪೊಲೀಸರ ಕೆಲಸವನ್ನು ಮೆಚ್ಚುತ್ತೇನೆ. ಯಾವುದೇ ಒಂದು ಒತ್ತಡಕ್ಕೆ ಮಣಿಯದೇ ತನಿಖೆ ಮಾಡುತ್ತಿದ್ದು, ಪೊಲೀಸರ ಮೇಲೆ ಜನರು ಭರವಸೆ ಉಳಿಸಿಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ಪೋಸ್ಟ್‌ ಹಾಕಿದ್ದರು.

FILM

ಮದುವೆಯಾಗಿ ತಾಳಿ ಹಾಕೋ ಪದ್ಧತಿ ನಮ್ಮಲ್ಲಿ ಇಲ್ಲ ಎಂದ ನಟಿ ವೈಷ್ಣವಿ ಗೌಡ

Published

on

ಸೀತಾರಾಮ ಧಾರಾವಾಹಿಯ ನಟಿ ವೈಷ್ಣವಿ ಗೌಡ ಅವರು ಮದುವೆಯಾದರೂ ಕೂಡ ತಾಳಿ ಹಾಕ್ತಿಲ್ಲ ಎಂದು ಕೆಲವರು ಆರೋಪ ಮಾಡಿದ್ದರು. ಇದಕ್ಕೆ ವೈಷ್ಣವಿ ಗೌಡ ಉತ್ತರ ಕೊಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ವೈಷ್ಣವಿ, “ಹುಡುಗನ ಮನೆಯಲ್ಲಿ ಯಾವ ಪದ್ಧತಿ ಇದೆಯೋ ಅದನ್ನೇ ಹುಡುಗಿ ಕೂಡ ಅನುಸರಿಸಬೇಕು. ಹೀಗಾಗಿ ನಾನೂ ಅದನ್ನೇ ಅನುಸರಿಸಿದ್ದೇನೆ. ಹುಡುಗನ ಪದ್ಧತಿಯಂತೆ ನಮ್ಮ ಮದುವೆ ಆಯ್ತು. ಆದರೆ ತಾಳಿ ಹಾಕಿಲ್ಲ ಅಂತ ಕೆಲವರು ಕೇಳಿದ್ದೀರಾ. ನನ್ನ ಅತ್ತೆ ಕೂಡ ಇದುವರೆಗೂ ತಾಳಿ ಹಾಕಿಲ್ಲ. ತಾಳಿ ಹಾಕುವ ಪದ್ಧತಿ ನಮ್ಮಲ್ಲಿ ಇಲ್ಲ” ಎಂದು ವೈಷ್ಣವಿ ಗೌಡ ಹೇಳಿದ್ದಾರೆ.

ತಾಳಿ ಹಾಕುವ ಪದ್ಧತಿ ಹುಡುಗನ ಮನೆಯಲ್ಲಿ ಇಲ್ಲ. ಅದು ನಮಗೆ ಮುಖ್ಯ ಅಲ್ಲ. ಇಲ್ಲಿ ಮೂಗು ಚುಚ್ಚಿಸಿರಬೇಕು, ಕೈಯಲ್ಲಿ ಗಾಜಿನ ಬಳೆ ಇರಬೇಕು, ಕೈಯಲ್ಲಿ ಒಂದು ದಾರ ಇರಬೇಕು, ಕಾಲುಂಗುರ ಹಾಕಿರಬೇಕು. ನಮ್ಮ ಸಂಪ್ರದಾಯ, ಸಂಸ್ಕೃತಿ ಬಗ್ಗೆ ನನಗೆ ಗೌರವವಿದೆ. ಆದರೆ ಅವರ ಮನೆಯಲ್ಲಿ ಈ ಪದ್ಧತಿ ಇಲ್ಲ ಹೀಗಾಗಿ ಹಾಕುತ್ತಿಲ್ಲ ಅಷ್ಟೇ ಎಂದು ವೈಷ್ಣವಿ ಗೌಡ ಹೇಳಿದ್ದಾರೆ.

ಇದನ್ನೂ ಓದಿ: ಉಡುಪಿ: ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾ*ವು

ಮೆಟ್ರಿಮೋನಿಯಲ್ಲಿ ವೈಷ್ಣವಿಗೌಡ ಹಾಗೂ ಅನುಕೂಲ್ ಮಿಶ್ರಾ ಪರಿಚಯ ಆಗಿದೆ. ಒಂದು ವರ್ಷದ ಹಿಂದೆಯೇ ಇವರ ಮದುವೆ ಫಿಕ್ಸ್ ಆಗಿತ್ತು. ಈ ವರ್ಷ ಈ ಜೋಡಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡು, ಮದುವೆ ಆಗಿದ್ದಾರೆ. ಅನುಕೂಲ್ ಮಿಶ್ರಾ ಅವರು ಇಂಡಿಯನ್ ಆರ್ಮಿಯಲ್ಲಿ ಲೆಫ್ಟಿನಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ವೈಷ್ಣವಿ ಗೌಡ ನಟಿಯಾದರೆ, ಅನುಕೂಲ್ ಅವರು ಆರ್ಮಿಯಲ್ಲಿದ್ದಾರೆ.

Continue Reading

FILM

ಮೊದಲ ಮಗುವಿನ ಆಗಮನದ ಸಂಭ್ರಮದಲ್ಲಿ ಕಿಯಾರಾ ಅಡ್ವಾಣಿ – ಸಿದ್ದಾರ್ಥ್ ಮಲ್ಹೋತ್ರಾ

Published

on

ಮಂಗಳೂರು / ಮುಂಬೈ : ಬಾಲಿವುಡ್‌ ತಾರೆಯರಾದ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಮನೆಯಲ್ಲಿ ಸಂಭ್ರಮದ ವಾತಾವರಣ. ಹೌದು, ದಂಪತಿ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮೊದಲ ಮಗುವನ್ನು ದಂಪತಿ ಸ್ವಾಗತಿಸಿದ್ದಾರೆ. ಕಿಯಾರಾ ಅಡ್ವಾಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ.

ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್ ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆಗಸ್ಟ್‌ನಲ್ಲಿ ಕಿಯಾರಾಗೆ ಮಗು ಜನಿಸಬೇಕಿತ್ತು. ಆದರೆ, ಮಗು ಬೇಗನೆ ಹುಟ್ಟಿದೆ.

ಇದನ್ನೂ ಓದಿ : ಪ್ರೇಯಸಿ, ಮಗು ಇಬ್ಬರ ಕತ್ತು ಸೀಳಿ ಕೊಂ*ದ ಯುವಕ; ಇವರಿಬ್ಬರ ಪ್ರೇಮ್ ಕಹಾನಿ ಕೇಳಿ ಬೆಚ್ಚಿ ಬಿದ್ದ ಪೊಲೀಸರು

ಮಗು ಜನಿಸಿರುವ ಬಗ್ಗೆ ದಂಪತಿ  ಇನ್ಸ್ಟಾಗ್ರಾಮ್‌ನಲ್ಲಿ ಜಂಟಿಯಾಗಿ ಪೋಸ್ಟ್ ಮಾಡಿದ್ದಾರೆ. “ನಮ್ಮ ಹೃದಯಗಳು ತುಂಬಿವೆ ಮತ್ತು ನಮ್ಮ ಪ್ರಪಂಚವು ಶಾಶ್ವತವಾಗಿ ಬದಲಾಗಿದೆ. ನಮಗೆ ಹೆಣ್ಣು ಮಗು ಜನಿಸಿದೆ” ಎಂದು ಪೋಸ್ಟ್ ಮಾಡಿದ್ದಾರೆ.

 

2021 ರಲ್ಲಿ ತೆರೆ ಕಂಡಿದ್ದ ಶೇರ್ಷಾ ಸಿನಿಮಾದಲ್ಲಿ ಕಿಯಾರಾ ಮತ್ತು ಸಿದ್ಧಾರ್ಥ್ ಜೊತೆಯಾಗಿ ನಟಿಸಿದ್ದರು. 2023 ರ ಫೆಬ್ರವರಿಯಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದರು.

Continue Reading

FILM

‘ಕಾಂತಾರ ಚಾಪ್ಟರ್-1’ ಮತ್ತೊಂದು ಬಿಗ್ ಅಪಡೇಟ್ ಕೊಟ್ಟ ಚಿತ್ರತಂಡ?

Published

on

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾ ಬಹಳಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈಗಗಾಲೇ ಚಿತ್ರೀಕರಣ ಪೂರ್ಣಗೊಂಡ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.

ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ರೇಂಜ್‌ನಲ್ಲಿ ‘ಕಾಂತಾರ- ಚಾಪ್ಟರ್- 1’ ಚಿತ್ರ ಬಿಡುಗಡೆ ಮಾಡುವ ಪ್ರಯತ್ನ ನಡೀತಿದೆ 2 ವರ್ಷದ ಹಿಂದೆ ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿದ್ದ ‘ಕಾಂತಾರ’ ಸಿನಿಮಾ ಬಳಿಕ ಪರಭಾಷಿಕರು ಬೇಡಿಕೆ ಮೇರೆಗೆ ಡಬ್ ಆಗಿ ಬಿಡುಗಡೆ ಆಗಿತ್ತು. ವಿಶ್ವದ ಮೂಲೆ ಮೂಲೆಯಲ್ಲಿ ಸಿನಿಮಾ ಪ್ರೇಕ್ಷಕರನ್ನು ರಂಜಿಸಿತ್ತು. 300 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಗೆದ್ದಿತ್ತು. ಇದೀಗ ಪ್ರೀಕ್ವೆಲ್ ಬಿಡುಗಡೆಯಾಗುವ ಸಮಯ.

ಇದನ್ನೂ ಓದಿ: ಡಿವೈನ್ ಸ್ಟಾರ್ ಹುಟ್ಟುಹಬ್ಬಕ್ಕೆ ‘ಕಾಂತರ-1’ ಚಿತ್ರ ತಂಡದಿಂದ ಹೊರಬಿತ್ತು ಬಿಗ್ ಅಪ್‌ಡೇಟ್

‘ಕಾಂತಾರ-1’ಗಾಗಿ ರಿಷಬ್ ‘ಕಳರಿ ಪಯಟ್ಟು’ ಯಂತಹ ಕರಗತ ಮಾಡಿಕೊಂಡಿದ್ದಾರೆ. ಪ್ರೀಕ್ವೆಲ್‌ನಲ್ಲಿ ಅವರ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ಸಿನಿಮಾ ತಂಡ ಪ್ರಚಾರಕ್ಕೆ ರೆಡಿಯಾಗಿದ್ದು, ಈ ಬಗ್ಗೆ ಹೊಂಬಾಳೆ ಗ್ರೂಪ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಚೆಲುವೆ ಗೌಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. “ಲೈಟ್.. ಕ್ಯಾಮರಾ.. ಕೌಂಟ್‌ಡೌನ್… ‘ಕಾಂತಾರ’ ಚಾಪ್ಟರ್-1 ಕ್ಯಾಂಪೇನ್ ಶುರು. ಅಕ್ಟೋಬರ್ 2ರಂದು ಚಿತ್ರಮಂದಿರಗಳಲ್ಲಿ ಸಿಗೋಣ” ಎಂದು ಅವರು ಬರೆದುಕೊಂಡಿದ್ದಾರೆ. ಚಿತ್ರ ರಿಲೀಸ್ ಹಾಗೂ ಪ್ರಚಾರದ ಬಗ್ಗೆ ಚರ್ಚೆ ನಡೆಸುತ್ತಿರುವ ಫೋಟೋವನ್ನು ಚೆಲುವೆ ಗೌಡ ಹಂಚಿಕೊಂಡಿದ್ದಾರೆ.

ಇನ್ನೂ ರಿಷಬ್ ಶೆಟ್ಟಿ ಕೊಲ್ಲೂರು ಭೇಟಿ ಮಾಡಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ಫ್ಯಾನ್ಸ್ ಟೀಸರ್ ಯಾವಾಗ ಲಾಂಚ್? ಆಗುತ್ತದೆ. ಟೀಸರ್ ಬೇಗ ಬಿಡಿ ಸರ್ ಎಂದು ಆಗ್ರಹಿಸುತ್ತಿದ್ದಾರೆ. ನೆಚ್ಚಿನ ನಟನ ಬಳಿ ಪ್ರೀತಿಯಿಂದ ಮನವಿ ಮಾಡಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಟೀಸರ್ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಪ್ರಯುಕ್ತವೇ ರಿಷಬ್ ಶೆಟ್ಟಿ ದಂಪತಿ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page