Connect with us

FILM

ಸ್ಯಾಂಡಲ್​ವುಡ್​ ಹಿರಿಯ ನಟ ಕೆ. ಶಿವರಾಮ್ ಇನ್ನಿಲ್ಲ..!

Published

on

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ, ರಾಜಕಾರಣಿ ಮತ್ತು ಮಾಜಿ ಐಎಎಸ್​ ಅಧಿಕಾರಿ ಕೆ ಶಿವರಾಮ್​ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಶಿವರಾಮ್ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನ ಹೊಂದಿದರು. ಇವರ ಸಾವು ಸಾಕಷ್ಟು ಅಭಿಮಾನಿಗಳಿಗೆ ನೋವು ತರಿಸಿದೆ.

FILM

ಅಭಿಮಾನಿಗಳಿಗೆ ನಿರಾಸೆ…ಗೆಳತಿಯ ಆಸೆ ಈಡೇರಿಸುತ್ತೇನೆ ಎಂದ ಡಿಬಾಸ್

Published

on

ಮಂಗಳೂರು/ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ನಟ ದರ್ಶನ್ ಹುಟ್ಟುಹಬ್ಬ. ಡಿಬಾಸ್ ಅಭಿಮಾನಿಗಳು ದಿನಗಣನೆ ಮಾಡುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ದರ್ಶನ್ ಭೇಟಿಯಾಗುವ ಆಸೆಯಲ್ಲಿದ್ದಾರೆ. ಆದರೆ, ಅಭಿಮಾನಿಗಳಿಗೆ ದರ್ಶನ್ ನಿರಾಸೆಯುಂಟು ಮಾಡಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿ ದರ್ಶನ್ ವೀಡಿಯೋವೊಂದನ್ನು ಹರಿಬಿಟ್ಟಿದ್ದಾರೆ.  ಈ ಬಾರಿ ಹುಟ್ಟುಹಬ್ಬಕ್ಕೆ  ಅಭಿಮಾನಿಗಳನ್ನು ಭೇಟಿಯಾಗಲು ಆಗುವುದಿಲ್ಲ ಎಂದಿದ್ದಾರೆ.  ಬೆನ್ನುನೋವಿನಿಂದ ಬಳಲುತ್ತಿರುವುದರಿಂದ ಬಹಳ ಹೊತ್ತು ನಿಲ್ಲಲಾಗುವುದಿಲ್ಲ. ಎಲ್ಲರಿಗೂ ವಿಶ್ ಮಾಡಲು ಆಗುವುದಿಲ್ಲ. ಇಂಜೆಕ್ಷನ್ ತೆಗೆದುಕೊಂಡು 10 – 20 ದಿನ ನೋವು ಕಡಿಮೆ ಇರುತ್ತದೆ. ಪವರ್ ಕಮ್ಮಿಯಾಗುತ್ತಿದ್ದಂತೆ ನೋವು ಹೆಚ್ಚಾಗುತ್ತದೆ. ಆಪರೇಷನ್ ಕಟ್ಟಿಟ್ಟ ಬುತ್ತಿ. ಅದನ್ನು ಮಾಡಿಸಬೇಕು. ಕೆಲವೇ ದಿನಗಳಲ್ಲಿ ಭೇಟಿಯಾಗುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಸೂರಪ್ಪ ಬಾಬು ಸಿನಿಮಾ ಬಗ್ಗೆ…

ಈ ನಡುವೆ ಯಾರ್ಯಾರ ಸಿನಿಮಾ ಒಪ್ಪಿಕೊಂಡಿದ್ದೇನೆ ಅವರೆಲ್ಲಾ ಕಾದಿದ್ದಾರೆ. ಅವರಿಗೆ ತೊಂದರೆಯಾಗೋದು ಇಷ್ಟ ಇಲ್ಲ. ಸೆಲೆಬ್ರಿಟಿಗಳು ಯಾವ ಊಹಾಪೋಹಗಳಿಗೂ ಕಿವಿ ಕೊಡಬೇಡಿ. ಸೂರಪ್ಪ ಬಾಬು ಅವರು ನನ್ನ ಬಳಿಗೆ ಸಿನಿಮಾ ಮಾಡಬೇಕೆಂದು ಬಂದಿದ್ದಾಗ ಅವರಿಗೆ ಸಹ ತುಂಬಾ ಕಮಿಟ್ ಮೆಂಟ್ ಗಳಿದ್ದವು. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡೆ. ಈ ನಡುವೆ ತುಂಬಾ ವಿಷಯಗಳು ನಡೆದು ವಿಳಂಬವಾಯಿತು, ಸೂರಪ್ಪ ಬಾಬು ಅವರಿಗೆ ಮತ್ತಷ್ಟು ತೊಂದರೆ ಆಗಬಾರದು ಎಂದು ಅವರು ಕೊಟ್ಟ ಮುಂಗಡ ಹಣವನ್ನು ವಾಪಾಸ್ ಕೊಟ್ಟಿದ್ದೇನೆ ಮುಂದೊಂದು ದಿನ ಉತ್ತಮ ಸಬ್ಜೆಕ್ಟ್ ಸಿಕ್ಕಿದರೆ ಸೂರಪ್ಪ ಬಾಬು ಅವರ ಜೊತೆ ಸಿನಿಮಾ ಮಾಡುತ್ತೇನೆ ಎಂದರು.

 ಗೆಳತಿ ಆಸೆ ಈಡೇರಿಸುವೆ :

ನಿರ್ದೇಶಕ ಜೋಗಿ ಪ್ರೇಮ್ ಅವರ ಜೊತೆ ಖಂಡಿತ ಸಿನಿಮಾ ಮಾಡೇ ಮಾಡುತ್ತೇನೆ. ಅವರು ನನ್ನ ಗುರುಗಳು, ನನ್ನ ಪ್ರೀತಿಯ ಸ್ನೇಹಿತೆ ರಕ್ಷಿತಾ ಆಸೆ ಕೂಡ ನಾನು ಸಿನಿಮಾ ಮಾಡಬೇಕು ಅಂತ. ಕೆವಿಎನ್ ಪ್ರೊಡಕ್ಷನ್‌ನಲ್ಲಿ ಈಗಾಗಲೇ ಸಿನಿಮಾ ತಯಾರಾಗುತ್ತಿದೆ. ಅದರ ಮಧ್ಯೆ ಇನ್ನೊಂದು ಸಿನಿಮಾ ಸದ್ಯಕ್ಕೆ ಬೇಡ ಎಂದು ಮುಂದೆ ಹಾಕಿದ್ದೇವೆ. ಮುಂದೆ ಖಂಡಿತ ಮಾಡುತ್ತೇನೆ ಎಂದರು.

ವಿಶೇಷ ಥ್ಯಾಂಕ್ಸ್ ಹೇಳಿದ ಡಿಬಾಸ್ :

ವೀಡಿಯೋದ ಆರಂಭದಲ್ಲಿ ದರ್ಶನ್ ಸೆಲೆಬ್ರಿಟಿಗಳಿಗೆ(ಅಭಿಮಾನಿಗಳು) ನಮಸ್ಕಾರ ಹೇಳಬೇಕೋ, ಥ್ಯಾಂಕ್ಸ್ ಹೇಳಬೇಕೋ ಗೊತ್ತಾಗುತ್ತಿಲ್ಲ ಎಂದಿದ್ದಾರೆ. ಕೊನೆಯಲ್ಲಿ ಮತ್ತೆ ಧನ್ಯವಾದ ತಿಳಿಸಿದ್ದಾರೆ. ಅಭಿಮಾನಿಗಳ ಪ್ರೀತಿ, ಬೆಂಬಲಕ್ಕೆ ಯಾವಾಗಲೂ ಚಿರಋಣಿ ಎಂದಿದ್ದಾರೆ.

ಈ ವೇಳೆ ತನ್ನ ಕಷ್ಟ ಕಾಲದಲ್ಲಿ ಸಾಥ್ ಕೊಟ್ಟ ಮೂವರ ಹೆಸರು ಉಲ್ಲೇಖಿಸಿದ್ದಾರೆ. ನಟ ಧನ್ವೀರ್, ಬುಲ್ ಬುಲ್ ರಚಿತಾ ರಾಮ್, ಪ್ರಾಣ ಸ್ನೇಹಿತೆ ರಕ್ಷಿತಾಗೆ ತುಂಬಾ ಥ್ಯಾಂಕ್ಸ್ ಎಂದಿದ್ದಾರೆ.

ಇದನ್ನೂ ಓದಿ : ನವಗ್ರಹ ಸಿನಿಮಾ ಖ್ಯಾತಿಯ ನಟ ಗಿರಿ ದಿನೇಶ್​ ಇ*ನ್ನಿಲ್ಲ

ಇದೇ ಸಂದರ್ಭ ದರ್ಶನ್ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸುತ್ತಾರೆ ಎಂಬ ಗಾಸಿಪ್ ಬಗ್ಗೆ ಮಾತಾಡಿದ ಅವರು, ಈ ವಿಷಯ ಆಗಾಗ ಸುದ್ದಿಯಾಗುತ್ತಿರುತ್ತದೆ. ನನ್ನ ಕೊನೆಯ ಉಸಿರು ಇರುವವರೆಗೂ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸುವುದಿಲ್ಲ, ಕನ್ನಡದ ಜನತೆ ನನಗೆ ಪ್ರೀತಿ, ಆಶೀರ್ವಾದ ನೀಡಿದ್ದಾರೆ. ಇಲ್ಲಿ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದು  ಹೇಳಿದ್ದಾರೆ.

Continue Reading

FILM

ನವಗ್ರಹ ಸಿನಿಮಾ ಖ್ಯಾತಿಯ ನಟ ಗಿರಿ ದಿನೇಶ್​ ಇ*ನ್ನಿಲ್ಲ

Published

on

ಮಂಗಳೂರು/ಬೆಂಗಳೂರು : ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಅಭಿನಯದ ನವಗ್ರಹ ಸಿನಿಮಾದಲ್ಲಿ ಶೆಟ್ಟಿ ಪಾತ್ರದಲ್ಲಿ ಮಿಂಚಿದ್ದ ಗಿರಿ ದಿನೇಶ್ (45) ಹೃದ*ಯಾಘಾತದಿಂದ ನಿ*ಧನರಾಗಿದ್ದಾರೆ.  ಗಿರಿ ದಿನೇಶ್  ಶುಕ್ರವಾರ(ಫೆ.07) ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ​ ಅವರು ಕು*ಸಿದು ಬಿ*ದ್ದಿದ್ದರು. ತಕ್ಷಣ  ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ,  ದಾರಿ ಮಧ್ಯೆಯೇ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.

ಹಿರಿಯ ಹಾಸ್ಯ ನಟ ದಿನೇಶ್ ಅವರ ಪುತ್ರ ಗಿರಿ ದಿನೇಶ್. ಮದುವೆಯಾಗದೆ ಉಳಿದುಕೊಂಡಿದ್ದ ಅವರು ಅಣ್ಣನ ಮನೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ.  ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿ ಕೆಲವು ಚಿತ್ರಗಳಲ್ಲಿ ಗಿರಿ ದಿನೇಶ್ ನಟಿಸಿದ್ದರು.

ಇದನ್ನೂ ಓದಿ : ಮದುವೆಯ ಬಗ್ಗೆ ಕ್ಲೂ ನೀಡಿದ ಬಿಗ್ ಬಾಸ್ ಐಶ್ವರ್ಯ

ನವಗ್ರಹ ಚಿತ್ರದ ಶೆಟ್ಟಿ ಪಾತ್ರ ಖ್ಯಾತಿ ತಂದು ಕೊಟ್ಟಿತ್ತು. ದಿನಕರ್​ ನಿರ್ದೇಶನದ ನವಗ್ರಹ ಚಿತ್ರವನ್ನು ಮೀನಾ ತೂಗುದೀಪ ನಿರ್ಮಾಣ ಮಾಡಿದ್ದರು. ಈ ಚಿತ್ರ 2008ರಲ್ಲಿ ಬಿಡುಗಡೆಯಾಗಿತ್ತು. ಕಳೆದ ವರ್ಷ ನವೆಂಬರ್​ 8ರಂದು ಮರುಬಿಡುಗಡೆಯಾಗಿತ್ತು. ಆದರೆ, ಕ್ಯಾಮೆರಾದಿಂದ ದೂರ ಉಳಿದಿದ್ದ ಗಿರಿ ದಿನೇಶ್ ರೀರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ.

Continue Reading

FILM

ನಟಿಯಾಗಿದ್ದ ಸಾಯಿಪಲ್ಲವಿ ಗಮನ ಈಗ ನಿರ್ದೇಶನದತ್ತ

Published

on

ಸಾಕಷ್ಟು ಮೇಕಪ್ ಮಾಡಿಕೊಂಡು, ಗ್ಲಾಮರಸ್ ಡ್ರೆಸ್ ಹಾಕಿಕೊಂಡು ನಟಿಯರು ಮಿಂಚುತ್ತಿರುವ ಈ ಕಾಲದಲ್ಲಿ ದಕ್ಷಿಣದ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ಸಾಯಿ ಪಲ್ಲವಿ ತಮ್ಮ ಸರಳತೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಪ್ರಸ್ತುತ ಸಾಯಿ ಪಲ್ಲವಿ ಅವರು ನಿರ್ದೇಶನದತ್ತ ಗಮನ ಹರಿಸುವ ಆಲೋಚನೆ ಹೊಂದಿದ್ದು, ಭವಿಷ್ಯದ ಯೋಜನೆಯ ಬಗ್ಗೆ ನಟ ನಾಗ ಚೈತನ್ಯ ಮಾತನಾಡಿದ್ದಾರೆ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಥಾಂಡೇಲ್’ ಸಿನಿಮಾ ಇಂದು (ಫೆ.7) ರಿಲೀಸ್ ಆಗಿದ್ದು, ಬಹು ನಿರೀಕ್ಷೆ ಸೃಷ್ಟಿಸಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಅವರ ಪಾತ್ರ ಹೆಚ್ಚು ಹೈಲೈಟ್ ಆಗುವ ನಿರೀಕ್ಷೆ ಇದೆ. ಈ ಚಿತ್ರ ಪ್ರಚಾರ ವೇಳೆ ಅವರ ನಿರ್ದೇಶನದ ಪ್ಲ್ಯಾನ್ ಬಗ್ಗೆ ನಟ ಮಾತನಾಡಿದ್ದಾರೆ. ಸಂದರ್ಶನದ ವೇಳೆ ನೆರೆದಿದ್ದ ಅಭಿಮಾನಿಗಳಿಗೆ ಪ್ರಶ್ನೆ ಮಾಡಲು ಅವಕಾಶ ನೀಡಲಾಗಿದ್ದು, ಸಾಯಿ ಪಲ್ಲವಿ ಅವರಿಗೆ ‘ನೀವು ಫಿಲ್ಮ್ ಡೈರೆಕ್ಷನ್ ಮಾಡುವ ಸಾಧ್ಯತೆ ಇದೆಯೇ’ ಎಂದು ಕೇಳಲಾಯಿತು. ಇದಕ್ಕೆ ‘ಇಲ್ಲ’ ಎನ್ನುವ ಉತ್ತರವನ್ನು ಅವರು ನೀಡಿದರು. ‘ಇದು ಸುಳ್ಳು. ಒಂದು ಸಿನಿಮಾ ನಿರ್ದೇಶನ ಮಾಡಬಹುದು ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದಾರೆ. ನನ್ನನ್ನು ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳೋದಾಗಿಯೂ ಹೇಳಿದ್ದಾರೆ’ ಎಂದು ನಾಗ ಚೈತನ್ಯ ಅವರು ವಾದಿಸಿದಾಗ ‘ಅದು ನನಗೆ ನೆನಪಿದೆ’ ಎಂದು ಸಾಯಿ ಪಲ್ಲವಿ ಹೇಳಿದರು.

ಇದನ್ನೂ ಓದಿ : ಬಾಲಿವುಡ್ ಕಿಂಗ್ ಖಾನ್ ಪುತ್ರನಿಗೆ ಬೆಂಬಲ ನೀಡಿದ ಚಿತ್ರರಂಗ !

ಸಿನಿಮಾ ನಿರ್ದೇಶನದ ಮಾತುಕಥೆ ಮುಗಿದ ಬಳಿಕ, ಫ್ಯಾನ್ಸ್ಫ ಫುಲ್ ಥ್ರಿಲ್ ಆಗಿದ್ದಾರೆ. ಈ ಹೊಸ ಚಿತ್ರ ಶೀಘ್ರವೇ ಸೆಟ್ಟೇರಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಆದರೆ, ನಿರ್ದೇಶನ ಮಾಡೋದು ಅದು ಅಷ್ಟು ಸುಲಭದ ಮಾತಲ್ಲ. ಸಿನಿಮಾ ನಿರ್ದೇಶಿಸಲು ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಆ ಬಳಿಕವೇ ಸಿನಿಮಾ ನಿರ್ದೇಶನಕ್ಕೆ ಇಳಿಯಬೇಕಾಗುತ್ತದೆ. ಸಾಯಿ ಪಲ್ಲವಿ ಅವರು ಸದ್ಯ ‘ರಾಮಾಯಣ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಹಿಂದಿ ಭಾಷೆಯ ಈ ಚಿತ್ರದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page