Connect with us

ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗ ಕಂಡ ಜನಪ್ರಿಯ ಹಾಸ್ಯನಟ ಮೈಕೆಲ್ ಮಧು

Published

on

ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗ ಕಂಡ ಜನಪ್ರಿಯ ಹಾಸ್ಯನಟ ಮೈಕೆಲ್ ಮಧು

ಸ್ಯಾಂಡಲ್ ವುಡ್ ಗೆ ಮತ್ತೊಂದು ಅಘಾತವಾಗಿದೆ. ಹಾಸ್ಯ ನಟ ಬುಲೆಟ್ ಪ್ರಕಾಶ್ ಬಳಿಕ ಮತ್ತೋರ್ವ ಹಿರಿಯ ಹಾಸ್ಯ ನಟನನ್ನು ಸ್ಯಾಂಡಲ್ ವುಡ್ ಕಳೆದುಕೊಂಡಿದೆ.

ಮೈಕೆಲ್ ಮಧು ಕೊನೆಯುಸಿರೆಳೆದಿದ್ದಾರೆ. ನಿನ್ನೆ (ಮೇ 13) ಬೆಳಗ್ಗೆ ಮನೆಯಲ್ಲಿ ಜ್ಞಾನತಪ್ಪಿ ಬಿದ್ದಿದ್ದ ನಟ ಮೈಕೆಲ್ ಮಧು ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೈಕೆಲ್ ಮಧು ಮೃತಪಟ್ಟಿದ್ದಾರೆ. ತಮ್ಮ ಪಾತ್ರಗಳಿಂದಲೇ ನಕ್ಕು ನಗಿಸ್ತಿದ್ದ ಮತ್ತೊಬ್ಬ ಹಾಸ್ಯನಟ ಇದೀಗ ಇಹಲೋಕ ಯಾತ್ರೆ ಮುಗಿಸಿದ್ದಾರೆ.

ಕನ್ನಡದಲ್ಲಿ ಸಾಕಷ್ಟು ಸಿನಿಮಾದಲ್ಲಿ ಹಾಸ್ಯ ನಟನಾಗಿ ಮೈಕಲ್ ಮಧು ಅಭಿನಯಿಸಿದ್ದರು. ಸುಮಾರು 80ಕ್ಕೂ ಹೆಚ್ಚು ಚಿತ್ರಗಳಿಗೆ ಬಣ್ಣ ಹಚ್ಚಿದ್ದರು.

ಮೃತ ಮೈಕೆಲ್ ಮಧು ಅವರಿಗೆ 50 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಮೈಕೆಲ್ ಮಧು ಅಗಲಿದ್ದಾರೆ.

ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹಿಟ್ ‘ಓಂ’ ಸಿನಿಮಾ ಮೂಲಕ ಮೈಕೆಲ್ ಮಧು ಸಿನಿಮಾ ಪಯಣ ಆರಂಭವಾಗಿತ್ತು.

ಬಹುತೇಕ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳನ್ನೇ ಮೈಕೆಲ್ ಮಧು ನಿರ್ವಹಿಸಿದ್ದಾರೆ. ಇತ್ತೀಚಿಗೆ ‘ಗೋಸಿ ಗ್ಯಾಂಗ್’ ಎಂಬ ಚಿತ್ರದಲ್ಲಿ ಅಭಿನಯಿಸಿದ್ದರು.

ಎರಡೂ ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಮೈಕೆಲ್ ಮಧು, 85 ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದರು.

‘ಎ’, ‘ಯಜಮಾನ’, ‘ಸೂರ್ಯವಂಶ’, ‘ಎ.ಕೆ.47’, ‘ಭಜರಂಗಿ’ನಂತಹ ಸೂಪರ್ ಹಿಟ್ ಚಿತ್ರಗಳಲ್ಲಿ ತಮಗೆ ಸಿಕ್ಕ ಸಣ್ಣಸಣ್ಣ ಪಾತ್ರಗಳಲ್ಲಿಯೇ ಗಮನ ಸೆಳೆದಿದ್ದರು.

ಇದೀಗ ಕನ್ನಡ ಚಿತ್ರರಂಗ ಮತ್ತೊಬ್ಬ ಹಾಸ್ಯನಟನನ್ನು ಕಳೆದುಕೊಂಡು ಬಡವಾಗಿದೆ.

ಸದ್ಯ ಲಾಕ್ ಡೌನ್ ಹಿನ್ನಲೆ ಪ್ರತ್ಯಕ್ಷವಾಗಿ ಭೇಟಿ ಮಾಡಲಾಗದ ಸ್ಯಾಂಡಲ್ ವುಡ್ ನಟ-ನಟಿಯರು ಹಾಗೂ ದಿಗ್ಗಜರು ಸಾಮಾಜಿಕ ಜಾಲತಾಣದ ಮೂಲಕ ಅಂತಿಮ ನಮನ ಸಲ್ಲಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page