Connect with us

LATEST NEWS

ಮಣಿಪಾಲ : ಕಂದಕಕ್ಕೆ ಉರುಳಿದ ಸ್ಕೂಟರ್ ; ಸವಾರ ಸಾವು

Published

on

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದಿದ್ದು, ಗಂಭೀರ ಗಾಯಗೊಂಡಿದ್ದ ಸವಾರ  ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ (ಏ.22) ಮಧ್ಯಾಹ್ನ ಮಣಿಪಾಲದ ದಶರಥ ನಗರ ಬಾಲಿಗಬೆಟ್ಟು ಪಂಚಾಯತ್ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಪರ್ಕಳದ ದೇವಿ ನಗರ ನಿವಾಸಿ ಅಬೂಬಕರ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೆಲಸದ ನಿಮಿತ್ತ ಅಬೂಬಕರ್ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದು ಗಂಭೀರ ಗಾಯ ಗೊಂಡು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಅಬೂಬಕ್ಕರ್ ಅವರು ಹಲವು ಸಂಘ ಸಂಸ್ಥೆಗಳಲ್ಲಿ ದುಡಿದು ಸಮಾಜ ಸೇವೆ ಕಾರ್ಯನಿರತದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ : ಮೂಡುಬಿದ್ರೆಯಲ್ಲಿ ವರುಣನ ಆರ್ಭಟ; ಗಾಳಿ ಮಳೆಗೆ ಮರ ಬಿದ್ದು ನಜ್ಜುಗುಜ್ಜಾದ ಕಾರು

ಮೃತರು ಹೆಂಡತಿ ಮಕ್ಕಳನ್ನು ಹಾಗೂ ಅಪಾರ ಬಂಧು ಬಂದು ಬಳಗವನ್ನು ಅಗಲಿದ್ದಾರೆ. ಈ ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS

ಭಾರತ-ಪಾಕ್ ಉದ್ವಿಗ್ನತೆ: ಐಎಸ್‌ಪಿಆರ್‌ಎಲ್‌ ಕಚ್ಚಾ ತೈಲ ಸಂಗ್ರಹಗಾರ ಸಮೀಪ ಅಣಕು ಕಾರ್ಯಾಚರಣೆ

Published

on

ಉಡುಪಿ: ಪೆಹಲ್ಗಾಮ್ ದುರ್ಘಟನೆ ಮತ್ತು ಪಾಕ್ ಮೇಲೆ ಭಾರತೀಯ ಸೇನೆಯ ಕಾರ್ಯಾಚರಣೆ ನಂತರ ದೇಶದ ಹಲವೆಡೆ ಮಾಕ್ ಡ್ರಿಲ್ ಮಾಡಲಾಗುತ್ತಿದೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐ.ಎಸ್.ಪಿ.ಆರ್.ಎಲ್ ಕಚ್ಚಾತೈಲ ಸಂಗ್ರಹಗಾರ ಸಮೀಪ ಅಣಕು ಕಾರ್ಯಾಚರಣೆ ನಡೆಸಲಾಯ್ತು. ಡ್ರೋನ್ ಮೂಲಕ ಸಿಡಿಮದ್ದು ತುಂಬಿದ ಬಾಂಬ್ ದಾಳಿ ಮೂಲಕ ಬೆಂಕಿ ಸೃಷ್ಟಿಸಲಾಯ್ತು. ತಕ್ಷಣದಲ್ಲಿಯೇ ಸೈರನ್ ಮೊಳಗಿ ಎಚ್ಚರಿಕೆ ಗಂಟೆ ಬಾರಿಸಿದ್ದು, ಐ.ಎಸ್.ಪಿ.ಆರ್.ಎಲ್ ನ ಬೆಂಕಿ ನಂದಕ ವಾಹನವು ಕಂಪನಿಯ ಒಳಭಾಗದಲ್ಲಿ ಬೆಂಕಿ ಆರಿಸಿತು.

ಕೆಲವೇ ಕ್ಷಣಗಳಲ್ಲಿ ಅದಾನಿ ಕಂಪನಿಯ ಫೈರ್ ಇಂಜಿನ್, ಕಾರ್ಕಳದ ಅಗ್ನಿ ಶಾಮಕ ವಾಹನವು ಹೊರಭಾಗದ ಕಾರ್ಯಾಚರಣೆಯಲ್ಲಿ ಕೈಜೋಡಿಸಿತು. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ, ಸಾರ್ವಜನಿಕರನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯಿತು. ಬಾಂಬ್ ನಿಷ್ಕ್ರಿಯದಳ, ಶ್ವಾನದಳ ಆಗಮಿಸಿ, ಸ್ಥಳದಲ್ಲಿ ಸಜೀವ ಬಾಂಬ್‌ಗಳ ಇರುವಿಕೆಯ ಬಗ್ಗೆ ಪರಿಶೀಲನಾ ಕಾರ್ಯಗಳನ್ನು ಕೈಗೊಂಡರು.

ಇದನ್ನೂ ಓದಿ: ಬೆಳ್ತಂಗಡಿಯ ಆಕಾಂಕ್ಷ ನಿಗೂಢ ಸಾ*ವು ಪ್ರಕರಣ; ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್‌ ಒತ್ತಾಯ

ಘಟನೆ ನಡೆದ 40 ನಿಮಿಷದ ಒಳಗಾಗಿ ಮಂಗಳೂರಿನ ಎಸ್.ಡಿ.ಆರ್.ಎಫ್ ತಂಡವು ಸ್ಥಳಕ್ಕೆ ಆಗಮಿಸಿತು. 270 ಕ್ಕೂ ಹೆಚ್ಚು ಸಿಬ್ಬಂದಿಗಳು ಸೇರಿ ತಾಲೀಮು ನಡೆಸಿದರು. ಜಿಲ್ಲಾಡಳಿತದ ಎಲ್ಲಾ ಇಲಾಖೆಗಳು ಅಣಕು ಕಾರ್ಯಾಚರಣೆಯಲ್ಲಿ ಭಾಗಿಯಾದವು.

 

 

 

 

Continue Reading

DAKSHINA KANNADA

ಬೆಳ್ತಂಗಡಿಯ ಆಕಾಂಕ್ಷ ನಿಗೂಢ ಸಾ*ವು ಪ್ರಕರಣ; ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್‌ ಒತ್ತಾಯ

Published

on

ಮಂಗಳೂರು/ಬೆಂಗಳೂರು: ಬೆಳ್ತಂಗಡಿ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಆಕಾಂಕ್ಷ ನಿಗೂಢ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುಂತೆ ನಾನು ಪಂಜಾಬ್ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಆಕಾಂಕ್ಷ ಸಾವಿನ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಪ್ರಕರಣ ಕುರಿತು ನಾನು ರಾಜ್ಯ ಮುಖ್ಯಕಾರ್ಯದರ್ಶಿಯವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಪಂಜಾಬ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕಾಂಕ್ಷ ಮೃತದೇಹವನ್ನು ಕುಟುಂಬ ವರ್ಗದವರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದೇನೆ. ಅಲ್ಲದೇ ಆಕಾಂಕ್ಷ ನಿಗೂಢ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ಮಾತನಾಡುವಂತೆ ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಪಂಜಾಬ್‌ ನಲ್ಲಿ ನಿಗೂಢ ಸಾ*ವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಆಕಾಂಕ್ಷ ಅವರ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಸರ್ಕಾರದಿಂದ ಅಗತ್ಯ ಸಹಕಾರ ಕಲ್ಪಿಸಲಾಗುವುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Continue Reading

LATEST NEWS

ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವತಿಯರ ಸಾ*ವು

Published

on

ಮಂಗಳೂರು/ರಾಮನಗರ: ಮಾಗಡಿ ತಾಲೂಕಿನ ವೈ.ಜಿ. ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಯುವತಿಯರು ಮೃ*ತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನಿವಾಸಿಗಳಾದ ಭಾರ್ಗವಿ(22), ರಮ್ಯ(20) ಹಾಗೂ ಮಧು (25) ಮೃ*ತ ದುರ್ದೈವಿಗಳು.

ಮಾಗಡಿಯ ಐನೋರಪಾಳ್ಯ ಗ್ರಾಮದ ಹಬ್ಬದ ಸಲುವಾಗಿ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದರು. ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು ಆಟವಾಡುತ್ತಿದ್ದ ಯುವತಿಯರ ಪೈಕಿ, ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ.

ಇದನ್ನೂ ಓದಿ: ಪ್ರವಾಸಕ್ಕೆಂದು ತೆರಳಿದ್ದ ವೇಳೆ ಅಪಘಾತ; ತುಮಕೂರು ಮೂಲದ ಮೂವರು ಸಾವು

ಮುಳುಗುತ್ತಿದ್ದ ಯುವತಿಯನ್ನು ರಕ್ಷಿಸಲು ಉಳಿದಿಬ್ಬರು ಮುಂದಾಗಿದ್ದಾರೆ. ಆಗ ಅವರು ಸಹ ನೀರಿನ ಸೆಳೆತಕ್ಕೆ ಸಿಲುಕಿ ಮುಳಗತೊಡಗಿದ್ದಾರೆ. ಕಣ್ಣೆದುರಿಗೆ ಕುಟುಂಬದ ಯುವತಿಯರು ಮುಳುಗುತ್ತಿದ್ದನ್ನು ಕಂಡು ಉಳಿದವರು ನೆರವಿಗಾಗಿ ಕೂಗಿಕೊಂಡಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಮೃ*ತಪಟ್ಟಿದ್ದಾರೆ.

ಮೃ*ತದೇಹಗಳನ್ನು ಮಾಗಡಿಯ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page