Connect with us

LATEST NEWS

ಇದೇ ನೋಡಿ ರಾಜ್ಯದಲ್ಲೇ ಅತೀ ಎತ್ತರದ ಗಣೇಶ ; ಹುಬ್ಬಳ್ಳಿ ಕಾ ಮಹರಾಜ್

Published

on

ಮಂಗಳೂರು/ಹುಬ್ಬಳ್ಳಿ: ಕರ್ನಾಟಕದಲ್ಲಿಯೇ ಹುಬ್ಬಳ್ಳಿಯ ಗಣೇಶೋತ್ಸವವು ಸಾಕಷ್ಟು ಪ್ರಸಿದ್ದಿಯನ್ನು ಪಡೆದುಕೊಂಡಿದ್ದು ರಾಜ್ಯದಲ್ಲೇ ಅತ್ಯಂತ ಎತ್ತರವಾದ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ದಾಜೀಬಾನಪೇಟ,‌‌ ಮರಾಠಾಗಲ್ಲಿಯಲ್ಲಿ 21 ಅಡಿಗೂ ಎತ್ತರವಾದ ಗಣೇಶ ವಿಗ್ರಹವನ್ನು ಇರಿಸಲಾಗುತ್ತದೆ. ಇದು 25 ಅಡಿ ಎತ್ತರವಿದ್ದು , ಸುಮಾರು 5ಟನ್ ಗೂ ಅಧಿಕ ತೂಕ ಹೊಂದಿದೆ. ಕರ್ನಾಟಕದಲ್ಲಿಯೇ ಅತಿ ಎತ್ತರದ ಮೂರ್ತಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಕಳೆದ 42 ವರ್ಷಗಳಿಂದ ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಮೊದಲು ಇಲ್ಲಿ ಚಿಕ್ಕದಾದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿತ್ತು. ನಂತರದ ವರ್ಷಗಳಲ್ಲಿ ಧರ್ಮಸ್ಥಳ ಮಂಜುನಾಥ, ಶಬರಿಮಲೆಯ ಅಯ್ಯಪ್ಪಸ್ವಾಮಿ ಮಂದಿರ, ಅಷ್ಟವಿನಾಯಕ ಮಂದಿರಗಳು, 65 ಅಡಿ ಎತ್ತರದ ಅಮೆರಿಕ ಟಾವರ್, ಅಜಂತಾ ಎಲ್ಲೋರಾ ಗುಹೆ, ಬರ್ನಿಂಗ್ ಟ್ರೇನ್ ಸೇರಿದಂತೆ ಹಲವು ರೂಪಕಗಳನ್ನು ಪ್ರದರ್ಶನದ ವ್ಯವಸ್ಥೆ ಮಾಡಲಾಗಿತ್ತು.ಗಣೇಶ ಚತುರ್ಥಿ ಹಬ್ಬದ ನಾಲೈದು ತಿಂಗಳು ಮೊದಲೇ ಕೋಲ್ಕತ್ತಾದಿಂದ ಆಗಮಿಸುವ ಅಪ್ಪು ಪಾಲ್ ನೇತೃತ್ವದ 25 ಮೂರ್ತಿ ತಯಾರಕರ ತಂಡವು ಇದಕ್ಕೆ ಬೇಕಾಗುವ ಮಣ್ಣನ್ನು ಕೋಲ್ಕತ್ತಾ (ಗಂಗಾನದಿಯ)ದಿಂದ ಹುಬ್ಬಳ್ಳಿಗೆ ತಂದು ಮೂರ್ತಿ ತಯಾರಿಸುವುದು ವಿಶೇಷ.


ಕಳೆದ 20 ವರ್ಷಗಳಿಂದ 25 ಅಡಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಈ ಮೂರ್ತಿಗೆ 25 ಕೆಜಿಗೂ ಅಧಿಕ ಬೆಳ್ಳಿಯ ಆಭರಣ ಹಾಕಲಾಗುತ್ತದೆ. ಮೂರ್ತಿಯ ಹಸ್ತ, ಪಾದುಕೆ, ಕೊರಳಲ್ಲಿರುವ ಬೃಹತ್ ಮಾಲೆ, ಮೋದಕ, ಕಿವಿಯೋಲೆಗಳನ್ನು ಸಂಪೂರ್ಣವಾಗಿ ಬೆಳ್ಳಿಯಿಂದ ತಯಾರಿಸಲಾಗುತ್ತದೆ. ಉಂಗುರ, ದಂತ, ತ್ರಿಶೂಲಕ್ಕೆ 70 ಗ್ರಾಂಗೂ ಅಧಿಕ ಬಂಗಾರ ಬಳಕೆ ಮಾಡಲಾಗಿದೆ. ಮೂರ್ತಿಯ ದೋತ್ರ (ಪಂಚೆ)ಕ್ಕೆ 25 ಮೀಟರ್ ಗಾತ್ರದ ಬಟ್ಟೆ ಬಳಕೆ ಮಾಡಿರುವುದು ಮತ್ತೊಂದು ವಿಶೇಷವಾಗಿದೆ.


ಮತ್ತೊಂದೆಡೆ ದಾಜೀಬಾನಪೇಟದಲ್ಲಿ 49 ವರ್ಷಗಳಿಂದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಇಲ್ಲಿಯೂ ಕೂಡ ಕಳೆದ 18 ವರ್ಷಗಳಿಂದ 20 ಅಡಿಗೂ ಎತ್ತರವಾದ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಈ ವರ್ಷ 24 ಅಡಿಯ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಸಂಪೂರ್ಣ ಮಣ್ಣಿನಿಂದ ತಯಾರಿಸಿರುವ ಪರಿಸರ ಸ್ನೇಹಿಯಾಗಿದೆ. ಗಣಪನಿಗೆ 25 ಕೆಜಿ ಬೆಳ್ಳಿಯಿಂದ ಅಲಂಕರಿಸಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಅಕ್ರಮ ಎಮ್ಮೆ ಸಾಗಾಟದ ಟೆಂಪೋ ಪಲ್ಟಿ ಪ್ರಕರಣ: ಆರೋಪಿಗಳಿಬ್ಬರಿಗೆ ಗಾಯ, ಓರ್ವ ಪರಾರಿ

Published

on

ಉಡುಪಿ: ಎಮ್ಮೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟೆಂಪೊವೊಂದು ಮಗುಚಿ ಬಿದ್ದ ಪರಿಣಾಮ ಎರಡು ಎಮ್ಮೆಗಳು ಗಾಯಗೊಡಿದ್ದು, ಇದೀಗ ಗಾಯಗೊಂಡಿರುವ ಆರೋಪಿಗಳಿಬ್ಬರನ್ನು ಅಂಬಾಗಿಲು ಜಂಕ್ಷನ್ ಬಳಿ ಫೆ.9 ರ ಬೆಳಗಿನ ಜಾವ ನಡೆದಿತ್ತು.

ಗಾಯಗೊಂಡ ಆರೋಪಿಗಳನ್ನು ಶೀತಲ್ ಗಣಪತಿ ಬಾಗಣ್ಣರ ಹಾಗೂ ಯಮನಪ್ಪ ರಮೇಶ್ ಅರ್ಜುನ ವಾಡ ಎಂದು ಗುರುತಿಸಲಾಗಿದೆ. ಪರಶು ಎಂಬ ಮತ್ತೋರ್ವ ಆರೋಪಿ ಓಡಿ ಪರಾರಿಯಾಗಿದ್ದಾನೆ. ಟೆಂಪೋದಲ್ಲಿದ್ಞ ಎರಡು ಎಮ್ಮೆಗಳು ತೀವ್ರ ಗಾಯಗೊಂಡಿವೆ.

ಇದನ್ನೂ ಓದಿ : ಉಡುಪಿ: ಅಕ್ರಮ ಕೋಣ ಸಾಗಾಟ ಮಾಡುತ್ತಿದ್ದ ವಾಹನ ಅಪಘಾತ

ಅಕ್ರಮವಾಗಿ ಎಮ್ಮೆಗಳನ್ನು ಸಂಕೇಶ್ವರದಿಂದ ಮಂಗಳೂರಿಗೆ ಸಾಗಿಸುತ್ತಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಟೆಂಪೊ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಗಾಯಾಳು ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ : ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಬಶೀರ್ ಕಣ್ಣೂರು ಆಯ್ಕೆ

Published

on

ಮಂಗಳೂರು : ಅನ್‌ಲೈನ್‌ನಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ಚುನಾವಣೆ ನಡೆದಿತ್ತು. ಅದರಲ್ಲಿ 9035 ಮತ ಪಡೆಯುವ ಮೂಲಕ ಮುಹಮ್ಮದ್ ಬಶೀರ್ ಕಣ್ಣೂರು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಶೀರ್ ಕಣ್ಣೂರು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬೀಯಿಂಗ್ ಹ್ಯೂಮನ್ ಫೌಂಡೇಶನ್‌ನ ಮಂಗಳೂರು ನಗರ ಅಧ್ಯಕ್ಷರಾಗಿ, ಮಂಗಳೂರು ಬ್ಯಾರಿ ಸೆಂಟ್ರಲ್ ಕಮಿಟಿಯ ಸದಸ್ಯರಾಗಿ, ಮೇಕ್ ಎ ಚೇಂಜ್‌ನ ಸಹ ಸ್ಥಾಪಕರಾಗಿರುವ ಬಶೀರ್ ಪ್ರಸ್ತುತ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದಾರೆ.

 

Continue Reading

DAKSHINA KANNADA

ಮಂಗಳೂರು : ಮಾದಕ ವಸ್ತು ಮಾರಾಟಕ್ಕೆ ಯತ್ನ; 6 ಜನರ ಬಂಧನ

Published

on

ಮಂಗಳೂರು: ಎಂಡಿಎಂಎ ಎಂಬ ನಿಷೇಧಿತ ಮಾದಕ ವಸ್ತುವಿನ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 6 ಮಂದಿಯನ್ನು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಸಹಿತ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಪಾಂಡೇಶ್ವರ ಗ್ರೀನ್‌ಲ್ಯಾಂಡ್ ಲೇಔಟ್ ನಿವಾಸಿ ಧನಿಶ್ ಡಿ. ಕಾಂಚನ್ (19), ಪಾಂಡೇಶ್ವರ ನಿವಾಸಿ ಪೃಥ್ವಿಕ್ (18), ಬಾವುಟಗುಡ್ಡ ನಿವಾಸಿ ಫೈಜ್ ಅಂಬರ್ (23), ಜಲ್ಲಿಗುಡ್ಡೆ ನಿವಾಸಿ ತುಷಾನ್ ಡಿ. ಸುವರ್ಣ (19), ಫಳ್ನೀರ್ ನಿವಾಸಿ ರಾಜಿನ್ (21), ಫಳ್ನೀರ್ ಸ್ಟರಕ್ ರೋಡ್ ನಿವಾಸಿ ಅಫ್ಘಾನ್ (20) ಎಂದು ಗುರುತಿಸಲಾಗಿದೆ.

 

ಇದನ್ನೂ ಓದಿ : ಮಕ್ಕಳ ಕಿಡ್ನ್ಯಾಪಿಗೆ ಯತ್ನ; ದೂರು ದಾಖಲು

 

ಮಂಗಳೂರಿನ ಫಳ್ನೀರ್ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಫೆ.8 ರಂದು ಸಂಜೆ 5:30ಕ್ಕೆ ಕಾರು ಮತ್ತು ದ್ವಿಚಕ್ರ ವಾಹನದಲ್ಲಿ 6 ಮಂದಿ ಯುವಕರು ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಪೊಲೀಸರಿಗೆ ದೊರಕಿತ್ತು. ಈ ಆಧಾರದ ಮೇಲೆ ಬಂದರು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಪಲೀಸರು ಆರೋಪಿಗಳ ವಾಹನವನ್ನು ಅಡ್ಡಗಟ್ಟಿ ಬಂಧಿಸಿ 20.52ಗ್ರಾಂ ಎಂಡಿಎಂಎ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಲ್ಲದೆ ಕೃತ್ಯಕ್ಕೆ ಬಳಸಿದ್ದ ಕಾರು, ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page