Connect with us

FILM

ಟಿಆರ್‌ಪಿ ಯಲ್ಲಿ ಭರ್ಜರಿ ಏರಿಕೆ ಕಂಡ “ಸೀತಾ ರಾಮ” ಸೀರಿಯಲ್

Published

on

‘ಸೀತಾ ರಾಮ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಸೀತಾ ಹಾಗೂ ರಾಮ್​ ಮದುವೆ ನೆರವೇರುತ್ತಿದೆ. ಇದಕ್ಕಾಗಿ ಭರ್ಜರಿ ಸೆಟ್ ಹಾಕಲಾಗಿದೆ. ಅದ್ದೂರಿ ಮದುವೆ ಸಮಾರಂಭಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗುತ್ತಿದೆ. ಈ ಕಾರಣದಿಂದಲೇ ಧಾರಾವಾಹಿ ಟಿಆರ್​ಪಿಯಲ್ಲಿ ಭರ್ಜರಿಯಾಗಿ ಏರಿಕೆ ಕಂಡಿದೆ. ಉಳಿದ ಧಾರಾವಾಹಿಗಳು ಟಿಆರ್​ಪಿಯಲ್ಲಿ ಸಾಕಷ್ಟು ಏರಿಳಿತ ಕಾಣಿಸಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಈಗ 27ನೇ ವಾರದ ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ಹಾಗೂ ‘ಲಕ್ಷ್ಮಿ ನಿವಾಸ’ ಧಾರಾವಾಹಿ ಸರಿ ಸಮಾನವಾದ ಟಿಆರ್​ಪಿ ಪಡೆದುಕೊಂಡಿವೆ. ಈ ಮೂಲಕ ಎರಡೂ ಧಾರಾವಾಹಿಗೆ ಮೊದಲ ಸ್ಥಾಮ ಸಿಕ್ಕಿದೆ. ‘ಲಕ್ಷ್ಮಿ ನಿವಾಸ’ದಲ್ಲಿ ಕಥಾ ನಾಯಕಿ ಭಾವನಾಗೆ ಸಿದ್ದು ತಾಳಿ ಕಟ್ಟಿ ಹೋಗಿದ್ದಾನೆ. ಈ ಮೂಲಕ ಕಥೆ ಪ್ರಮುಖ ಟ್ವಿಸ್ಟ್ ಪಡೆದು ಸಾಗುತ್ತಿದೆ. ಇದರಿಂದ ಜನರು ಧಾರಾವಾಹಿಯನ್ನು ಹೆಚ್ಚು ವೀಕ್ಷಿಸುತ್ತಿದ್ದಾರೆ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಮದುವೆ ಬಳಿಕ ಗೌತಮ್ ಹಾಗೂ ಭೂಮಿಕಾ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯುತ್ತಿದೆ. ಇದು ಧಾರಾವಾಹಿಯಲ್ಲಿ ಹೈಲೈಟ್ ಆಗುತ್ತಿದೆ. ಐದನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಹಾಗೂ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಗಳು ಇದೆ.

FILM

ಜು.14 ರಂದು ಥೈಲ್ಯಾಂಡ್‌ ದೇಶಕ್ಕೆ ಹಾರಲಿದ್ದಾರೆ ನಟ ದರ್ಶನ್

Published

on

ಬೆಂಗಳೂರು: ಜು.14 ರಂದು ನಟ ದರ್ಶನ್ ಡೆವಿಲ್ ಚಿತ್ರದ ಬಾಕಿ ಇರುವ ಒಂದೇ ಒಂದು ಹಾಡಿನ ಶೂಟಿಂಗ್‌ಗಾಗಿ ಥೈಲ್ಯಾಂಡ್ ದೇಶಕ್ಕೆ ಹಾರಲಿದ್ದಾರೆ.

ಅಲ್ಲದೇ ವಿದೇಶಕ್ಕೆ ತೆರಳಲು ಅನುಮತಿಯನ್ನೂ ಪಡೆದುಕೊಂಡಿದ್ದಾರೆ. ಕೋರ್ಟ್ ಆದೇಶದಂತೆ ದರ್ಶನ್ ಸೋಮವಾರ ಥಾಯ್ಲೆಂಡ್‌ಗೆ ತೆರಳಲಿದ್ದಾರೆ. ಡೆವಿಲ್ ಚಿತ್ರದ ಡ್ಯುಯೆಟ್ ಹಾಡೊಂದರ ಚಿತ್ರೀಕರಣಕ್ಕೆ ಥೈಲ್ಯಾಂಡ್‌ ದೇಶದ ಬ್ಯಾಂಕಾಕ್, ಪುಕೆಟ್, ಕ್ರಾಬಿಯಲ್ಲಿ ದರ್ಶನ್ ಹಾಡಿನ ಚಿತ್ರೀಕರಣದಲ್ಲಿ ನಡೆಯಲಿದೆ. ಇದು ಕೊಲೆ ಪ್ರಕರಣದ ಬಳಿಕ ದರ್ಶನ್ ತೆರೆಳುತ್ತಿರುವ ಮೊದಲ ವಿದೇಶ ಪ್ರಯಾಣವಾಗಿದೆ.

ಇದನ್ನೂ ಓದಿ: ವಾಕಿಂಗ್ ಮಾಡಲು ಹೋದ ವ್ಯಕ್ತಿ ಹೃದಯಾ*ಘಾತಕ್ಕೆ ಬ*ಲಿ

ಸೋಮವಾರ ಟಿಕೆಟ್ ಬುಕ್ ಆಗಿದ್ದು ಸಿನಿಮಾ ಟೀಮ್ ಜೊತೆಗೂಡಿ ತೆರಳಲಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಪತಿ ಜೊತೆ ಹೋಗುವ ಸಾಧ್ಯತೆ ಇದೆ.

Continue Reading

FILM

ಕರಾವಳಿಯಾದ್ಯಂತ ತೆರೆಕಂಡ ‘ಧರ್ಮ ಚಾವಡಿ’ ತುಳು ಚಿತ್ರ

Published

on

ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಲಾದ ಧರ್ಮ ಚಾವಡಿ ತುಳು ಚಿತ್ರ ಇಂದು(ಜು.11) ಮಂಗಳೂರಿನ ಭಾರತ್‌ ಮಾಲ್‌ನಲ್ಲಿ ಬಿಡುಗಡೆಗೊಂಡಿತು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ದೀಪ ಬೆಳಗಿಸುವ ಮೂಲಕ ಸಿನೆಮಾ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತುಳು ಚಿತ್ರರಂಗ ಇದೀಗ ಉಚ್ಛಾಯ ಸ್ಥಿತಿಯಲ್ಲಿದ್ದು, ಚಿತ್ರ ಯಶಸ್ಸಿ ಕಾಣಲಿ. ಈ ಮೂಲಕ ಇನ್ನಷ್ಟು ವ್ಯಾಪಿಸಲಿ ಎಂದು ನಳಿನ್ ಶುಭ ಹಾರೈಸಿದರು.

ಇದನ್ನೂ ಓದಿ: ಚಿನ್ನದಂಗಡಿಗೆ ನುಗ್ಗಿ 3 ಕೆಜಿ ಚಿನ್ನಾಭರಣವನ್ನು ಲೂಟಿ ಮಾಡಿ ಪರಾರಿಯಾದ ಕಳ್ಳರು

ಕಾರ್ಯಕ್ರಮದಲ್ಲಿ ಗಣ್ಯರಾದ ಚಿತ್ರ ನಿರ್ಮಾಪಕರಾದ ವಿಜಯಕುಮಾರ್ ಕೊಡಿಯಾಲ್‌ ಬೈಲ್‌, ದೇವದಾಸ್‌ ಕಾಪಿಕಾಡ್, ಆರ್ ಧನರಾಜ್‌, ಯೋಗೀಶ್ ಶೆಟ್ಟಿ, ಲಂಚುಲಾಲ್‌, ಇಸ್ಮಾಯಿಲ್‌ ಮೂಡುಶೆಡ್ಡೆ, ಮೋಹನ್‌ ಕೊಪ್ಪಳ, ಪ್ರಕಾಶ್ ಪಾಂಡೇಶ್ವರ, ತಾರಾನಾಥ ಗಟ್ಟಿ ಕಾಪಿಕಾಡ್, ರೂಪೇಶ್ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಸ್ವರಾಜ್ ಶೆಟ್ಟಿ, ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ, ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ, ನಟಿ ಧನ್ಯ ಪೂಜಾರಿ, ಚಿತ್ರ ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ಸಂಗೀತ ನಿರ್ದೇಶಕ ಪ್ರಸಾದ್ ಕೆ. ಶೆಟ್ಟಿ, ಅರುಣ್ ರೈ ಪುತ್ತೂರು, ನಟಿ ನೇಹಾ ಕೋಟ್ಯಾನ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದು, ಚಿತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Continue Reading

FILM

‘ಅಮೃತಧಾರೆ’ ಕಿರುತೆರೆ ನಟಿಗೆ ಪತಿಯಿಂದ ಚಾ*ಕು ಇ*ರಿತ

Published

on

ಬೆಂಗಳೂರು: ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಶ್ರುತಿ ಚಾ*ಕು ಇ*ರಿತಕ್ಕೆ ಒಳಗಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರುತಿ ಅವರ ಪತಿ ಅಮರೇಶ್ ಅವರೇ ಪತ್ನಿಗೆ ಚಾ*ಕು ಇ*ರಿದಿದ್ದಾರೆ ಎನ್ನಲಾಗಿದ್ದು, ಪೊಲೀಸರು ಅಮರೇಶ್ ಅನ್ನು ಬಂಧಿಸಿದ್ದಾರೆ. ಈ ಘಟನೆ ಜುಲೈ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶ್ರುತಿ 20 ವರ್ಷದ ಹಿಂದೆ ಅಮರೇಶ್‌ ಎಚ್‌ಎಸ್‌ಎಂಬಾತನ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ ಇಬ್ಬರು ಮಕ್ಕಳು ಕೂಡ ಇದ್ದರು. ಸಂಸಾರ ಸಮೇತ ಹನುಮಂತ ನಗರದಲ್ಲಿ ಲೀಸ್ ಗೆ ಮನೆ ಪಡೆದು ದಂಪತಿ ವಾಸವಿದ್ದರು. ನಂತರ ಶ್ರುತಿ ನಡವಳಿಕೆ ಗಂಡ ಅಮರೇಶ್‌ಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೂಡ ಸರಿಯಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಗಂಡನಿಂದ ದೂರಾಗಿ ಶ್ರುತಿ ಅಣ್ಣನ ಮನೆಯಲ್ಲಿ ವಾಸವಿದ್ದರು. ಕಳೆದ ಏಪ್ರಿಲ್‌ನಲ್ಲಿ ಶ್ರುತಿ ಗಂಡನಿಂದ ದೂರವಾಗಿದ್ದರು. ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡ ಪ್ರೇಮಿಗಳು

ಈ ಕುರಿತಂತೆ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದರು. ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂದಾನ ಮಾಡಿ ಗಂಡ-ಹೆಂಡತಿ ಒಂದಾಗಿದ್ದರು. ಆದರೆ, ಇಬ್ಬರೂ ಒಂದಾದ ಮಾರನೇ ದಿನವೇ ಗಂಡ ಪತ್ನಿಗೆ ಚಾ*ಕು ಇರಿದಿದ್ದಾನೆ. ಕಳೆದ ಶುಕ್ರವಾರ ಮಕ್ಕಳಿಬ್ಬರು ಕಾಲೇಜಿಗೆ ಹೋದ ನಂತರ ಹೆಂಡತಿಯ ಮೇಲೆ ಹ*ಲ್ಲೆ ನಡೆದಿದೆ. ಪೆಪ್ಪರ್ ಸ್ಪ್ರೇ ಹೊಡೆದು ಹೆಂಡತಿಗೆ ಚಾ*ಕು ಇ*ರಿದು ಕೊ*ಲೆಗೆ ಯತ್ನ ನಡೆಸಿದ್ದಾನೆ. ಸದ್ಯ ಶ್ರುತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page