Connect with us

LATEST NEWS

6 ದಶಕ ಕನ್ನಡ ಚಿತ್ರರಂಗ ಆಳಿದ ನಟಿ ಜಯಾಳ ಶವ ಅನಾಥವಾಗಿ ಕಸದ ರಾಶಿಯಲ್ಲಿ..!

Published

on

ಬೆಂಗಳೂರು : ಕನ್ನಡದ ಹಿರಿಯ ನಟಿ ಜಯಾ ಅವರ ಪಾರ್ಥಿವ ಶರೀರಕ್ಕೆ ಅಗೌರವ ತೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಾಥವಾಗಿರು ವಿಡಿಯೋಗಳು ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  ಆರು ದಶಕಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ನಟಿಯ ಶವ ಕಸದ ತೊಟ್ಟಿಯಲ್ಲಿ ಅನಾಥವಾಗಿ ಬಿದ್ದುಕೊಂಡಿದ್ದು, ಎಂಥಹ ಕಟುಕನ ಹೃದಯವನ್ನು ಕಲುಕುವಂತಿಂತು.

ಜಯಾ ಅವರ ಪಾರ್ಥಿವ ಶರೀರಕ್ಕೆ ವಿದಾಯ ಹೇಳಲು ಬೆಂಗಳೂರಿನ ರುದ್ರಭೂಮಿಗೆ ತಂದು ಶವವನ್ನು ಕಸದ ರಾಶಿಯಲ್ಲಿ ಮಲಗಿಸಿ ಹೋಗಿದ್ದಾರೆ. ಆರು ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿದ ಹಿರಿಯ ನಟಿ ಶವ ಕಸದ ರಾಶಿ ಪಕ್ಕ ಅನಾಥವಾಗಿ ಬಿದ್ದುಕೊಂಡಿತ್ತು. ಯಾವನೇ ಒಬ್ಬ ಚಿತ್ರ ರಂಗದ ವ್ಯಕ್ತಿ ಕೂಡ ಅಲ್ಲಿ ಹಾಜರು ಇರಲಿಲ್ಲ ಎಂದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದು ಸರ್ಕಾರ ಮತ್ತು ಚಿತ್ರ ರಂಗದ ವಿರುದ್ದ ಅಸಮಾಧಾನವನ್ನು ಹೊರಗೆ ಹಾಕಿದ್ದಾರೆ.
ಆರು ದಶಕಗಳ ಕಾಲ ತಮ್ಮ ನಟನೆಯಿಂದ ಕನ್ನಡ ಅಭಿಮಾನಿಗಳನ್ನು ರಂಜಿಸಿದ್ದ ಹಿರಿಯ ನಟಿ ಬಿ.ಜಯಾ ಅವರು ನಿನ್ನೆ ಮಧ್ಯಾಹ್ನ ಕೊನೆಯುಸಿರೆಳೆದಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ 75 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದರು .

ಇದು ಶುದ್ದ ಸುಳ್ಳು ಎಂದ ಜಯ ಕುಟುಂಬಸ್ಥರು:

ಇನ್ನು  ಖ್ಯಾತ ಪೋಷಕ ನಟಿ ಬಿ.ಜಯಾ ಅವರ ಶವ ಅನಾಥವಾಗಿ ಪಾದಚಾರಿ ಮಾರ್ಗದಲ್ಲಿದೆ ಎನ್ನುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಇದು ಕಿಡಿಗೇಡಿಗಳ ಕೃತ್ಯ ಎಂದು ಜಯಾ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಪೋಷಕ ನಟಿ ಬಿ.ಜಯಾ ಅವರು ಗುರುವಾರ ಮೃತಪಟ್ಟಿದ್ದರು. ‘ಪಾರ್ಥಿವ ಶರೀರದ ಹತ್ತಿರ ನಾವು ಇರದ ಸಮಯದಲ್ಲೇ ಕಿಡಿಗೇಡಿಗಳು ಈ ರೀತಿ ವಿಡಿಯೊ ಮಾಡಿದ್ದಾರೆ.

ಪೂಜೆ ಬಳಿಕ ನಾವು ಸ್ಮಶಾನದಿಂದ ಹೊರಟು ಬಂದಿದ್ದೆವು. ನನ್ನ ಮಗಳು, ಅಳಿಯ ಅಲ್ಲಿಯೇ ಇದ್ದು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಸ್ಮಶಾನದಲ್ಲಿ ಕಾರ್ಯಕ್ರಮವೊಂದು ನಡೆಯುತ್ತಿದ್ದ ಕಾರಣ, ವಾಹನ ದಟ್ಟಣೆ ಇತ್ತು. ಹೊರಗಡೆ ಪಾದಚಾರಿ ಮಾರ್ಗದ ಆಚೀಚೆ ಕಸವೇ ತುಂಬಿತ್ತು.

ಜಾಗ ಇದ್ದಲ್ಲಿ ಪಾರ್ಥಿವ ಶರೀರ ಇಟ್ಟಿದ್ದೆವು’ ಎಂದು ಜಯಾ ಅವರ ತಮ್ಮ, ನಿರ್ದೇಶಕ ಮಲ್ಲೇಶ್‌ ಹೇಳಿಕೆ ನೀಡಿದ್ದಾರೆ.ಮನಸ್ಸಿಗೆ ನೋವಾಗುತ್ತದೆ. ಇದನ್ನು ಜನರು ನಂಬಬೇಡಿ.

ಜಯಾ ಅವರ ಪಾರ್ಥಿವ ಶರೀರವಿದೆ ಎಂದು ತಿಳಿದ ತಕ್ಷಣ 12 ಗಂಟೆಗೇ ಕಿಟ್‌ ವಿತರಣೆ ಕಾರ್ಯಕ್ರಮ ಪೂರ್ಣಗೊಳಿಸಿ, ಕಾರ್ಯಕ್ರಮದಲ್ಲಿದ್ದವರೇ ಕೆಲವರು ಪಾರ್ಥಿವ ಶರೀರವನ್ನು ಸ್ಮಶಾನದೊಳಗೆ ಎತ್ತಿಕೊಂಡು ಹೋದರು. ಎಲ್ಲ ವಿಧಿವಿಧಾನದೊಂದಿಗೆ ಅಂತ್ಯಸಂಸ್ಕಾರ ಮಾಡಿದೆವು’ ಎಂದು ಹೇಳಿದ್ದಾರೆ.

https://youtu.be/osfl7v9lHcY

LATEST NEWS

WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

Published

on

ಮಂಗಳೂರು/ವಿಜಯಪುರ : ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಜಯಪುರದಲ್ಲಿ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.  ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಈ ದು*ರಂತ ಸಂಭವಿಸಿದೆ.

28 ವರ್ಷದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಮೃ*ತ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ  ಹೃ*ದಯಾಘಾತಕ್ಕೊಳಗಾಗಿ ಕು*ಸಿದು ಬಿದ್ದಿದ್ದಾನೆ.

ಇದನ್ನೂ ಓದಿ : ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ. ಯುವಕನ ಕೊನೆಯ ಕ್ಷಣದ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

 

Continue Reading

LATEST NEWS

ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

Published

on

ಮಂಗಳೂರು/ಬೆಳಗಾವಿ: ಮಹಾಮಾರಿ ಕೋವಿಡ್ ಕುರಿತು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮಿಜಿಯವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕೊವಿಡ್ ಕುರಿತು ಸ್ವಾಮೀಜಿ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರಿ. ಉಸಿರಾಟಕ್ಕೆ ತೊಂದರೆಯಾಗಿ ಸಾ*ವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.

Continue Reading

FILM

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

Published

on

ಮಂಗಳೂರು/ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ, ಮೋಹಕ ತಾರೆ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ಬೇಸರ ಹಂಚಿಕೊಂಡಿದ್ದಾರೆ.

ಕರ್ನಾಟಕ ಡಿಟರ್ಜೆಂಟ್ಸ್ ಕಂಪನಿಯು ತನ್ನ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ಸಂಭಾವನೆಯನ್ನು ಗೊತ್ತುಪಡಿಸಿದೆ. ತಮನ್ನಾ, ಸಂಸ್ಥೆಯ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್‌ ಮಾಡಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ! ಸಂಭಾವನೆ ಎಷ್ಟು?

‘ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜಗತ್ತಿನ ಯಶಸ್ವಿ ಬ್ರಾಂಡ್‌ಗಳಲ್ಲಿ ಒಂದಾದ ಆ್ಯಪಲ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಹಾಗೆಯೇ, ಡವ್‍ ಸೋಪ್‍ ಪ್ರಚಾರ ಬಹಳ ಚೆನ್ನಾಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page