Connect with us

LATEST NEWS

ಉಡುಪಿ : ಹಿರಿಯ ವೈದ್ಯ ಡಾ. ಗಣೇಶ್ ಕಾಮತ್ ವಿಧಿವಶ

Published

on

ಉಡುಪಿ : ಮೂಲತಃ ಕಟಪಾಡಿ ನಿವಾಸಿ ಲಾಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಗಣೇಶ್ ಕಾಮತ್ ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಉಡುಪಿಯ ಜನರ ಅಚ್ಚುಮೆಚ್ಚಿನ ವೈದ್ಯ, ರೋಗಿಗಳ ಪಾಲಿಗೆ ದೇವರಾಗಿ ಗುರುತಿಸಿಕೊಂಡಿದ್ದ ಡಾ. ಗಣೇಶ್ ಕಾಮತ್ ಕಳೆದ ಹತ್ತು ವರ್ಷಗಳಿಂದ ಮಿಷನ್ ಆಸ್ಪತ್ರೆಯಲ್ಲಿ ಯಾವುದೇ ರಜೆಯನ್ನು ಪಡೆಯದೆ ರೋಗಿಗಳ ಸೇವೆ ಮಾಡುತ್ತಾ ಬಂದಿದ್ದರು. ಇದೀಗ ವೈದ್ಯರ ಅಕಾಲಿಕ ಅಗಲಿಕೆಯು ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.

ಡಾ. ಗಣೇಶ್ ಕಾಮತ್ ಹಿರಿಯ ವೈದ್ಯಕೀಯ ಸಮಾಲೋಚಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತ್ನಿ, ಓರ್ವ ಪುತ್ರನ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ ವೈದ್ಯರ ನಿಧನಕ್ಕೆ ಆಸ್ಪತ್ರೆಯ ಆಡಳಿತ ಬಳಗ ಸಂತಾಪವನ್ನು ಸೂಚಿಸಿದೆ.

LATEST NEWS

ಪಾಕಿಸ್ತಾನಿಯರು ಹಿಂದೂ-ಮುಸ್ಲಿಮರ ನಡುವಿನ ವ್ಯತ್ಯಾಸಗಳನ್ನು ತಮ್ಮ ಮಕ್ಕಳಿಗೆ ಹೇಳಿಕೊಡಬೇಕು: ಪಾಕ್ ಸೇನಾ ಮುಖ್ಯಸ್ಥ

Published

on

ಮಂಗಳೂರು/ನವದೆಹಲಿ: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತೊಮ್ಮೆ ಭಾರತ ಮತ್ತು ಹಿಂದೂ ಧರ್ಮವನ್ನು ಗುರಿಯಾಗಿಸಿಕೊಂಡು ಹಲವು ಹೇಳಿಕೆಗಳನ್ನು ನೀಡಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಮೊದಲ ಸಾಗರೋತ್ತರ ಪಾಕಿಸ್ತಾನಿ ಸಮ್ಮೇಳನದಲ್ಲಿ, ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಗಳನ್ನು ಉದ್ದೇಶಿಸಿ ಮಾತನಾಡುವ ಬದಲು.. ಸೇನಾ ಮುಖ್ಯಸ್ಥರು ಧರ್ಮೋಪದೇಶಗಳು, ಎರಡು ರಾಷ್ಟ್ರದ ಸಿದ್ದಾಂತಗಳನ್ನು ಪ್ರತಿಪಾದಿಸಿ ಭಾರತದ ವಿರುದ್ದ ಮತ್ತೆ ಕ್ಯಾತೆ ತೆಗೆದಿದ್ದಾರೆ.

ಈ ಸಮ್ಮೇಳನದಲ್ಲಿ ಪ್ರಧಾನಿ ಶಹಬಾಜ್ ಷರೀಫ್ ಸೆರಿದಂತೆ ಪಾಕಿಸ್ತಾನದ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಪಾಕಿಸ್ಥಾನದ ಕಥೆಯನ್ನು ಹೇಳಬೇಕು
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ‘ನೀವು ಖಂಡಿತವಾಗಿಯೂ ನಿಮ್ಮ ಮಕ್ಕಳಿಗೆ ಪಾಕಿಸ್ತಾನದ ಕಥೆಯನ್ನು ಹೇಳಬೇಕು. ನಮ್ಮ ಪೂರ್ವಜರು ಜೀವನದ ಪ್ರತಿಯೊಂದು ಅಂಶದಲ್ಲೂ ನಾವು ಹಿಂದೂಗಳಿಗಿಂತ ಭಿನ್ನರು ಎಂದು ಭಾವಿಸಿದ್ದರು. ನಮ್ಮ ಧರ್ಮಗಳು, ನಮ್ಮ ಪದ್ದತಿಗಳು, ಸಂಪ್ರದಾಯಗಳು, ಆಲೋಚನೆಗಳು ಮತ್ತು ಮಹತ್ವಾಕಾಂಕ್ಷೆಗಳು ವಿಭಿನ್ನವಾಗಿವೆ. ಅದು ಎರಡು ರಾಷ್ಟ್ರಗಳ ಸಿದ್ದಾಂತದ ಅಡಿಪಾಯವಾಗಿತ್ತು’ಎಂದು ಹೇಳಿದ್ದಾರೆ.

ಪಾಕಿಸ್ತಾನಿಯರು ಹಿಂದೂ-ಮುಸ್ಲಿಮರ ನಡುವಿನ ವ್ಯತ್ಯಾಸ ಹೇಳಿಕೊಡಿ
ನಮ್ಮ ಪೂರ್ವಜರು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಹಿಂದೂಗಳಿಗಿಂತ ಭಿನ್ನರು ಎಂದೇ ಭಾವಿಸಿದ್ದರು. ನಮ್ಮ ಧರ್ಮ, ಆಚರಣೆ, ಸಂಪ್ರದಾಯ, ಆಲೋಚನೆ ಮತ್ತು ಗುರಿಗಳು ಬೇರೆ ಆದ್ದರಿಂದಲೇ, ದ್ವಿರಾಷ್ಟ್ರ ಪರಿಕಲ್ಪನೆ ಮೊಳಕೆಯೊಡೆಯಿತು. ಈಗಲೂ ಪಾಕಿಸ್ತಾನವು ದ್ವಿರಾಷ್ಟ್ರ ಸಿದ್ಧಾಂತದ ತಳಹದಿಯ ಮೇಲೆ ನಿಂತಿದೆ. ಇದರ ಮಹತ್ವ ಎಂದಿಗೂ ಕಡಿಮೆಯಾಗಬಾರದು. ಇದಕ್ಕಾಗಿ ನಾವು ನಮ್ಮ ಮಕ್ಕಳಿಗೆ ಹಿಂದೂ-ಮುಸ್ಲಿಂ ನಡುವಿನ ವ್ಯತ್ಯಾಸವನ್ನು ಹೇಳಿಕೊಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಚೀನಾದ ಮೇಲೆ ಮುನಿದ ಅಮೆರಿಕ..!

ಭಯೋತ್ಪಾದಕರಿಗೆ ಎಚ್ಚರಿಕೆ
ಭಯೋತ್ಪಾದಕರಿಗೆ ಎಚ್ಚರಿಕೆ ನೀಡಿದ ಅಸಿಮ್ ಮುನೀರ್, ‘ಕೇವಲ 1500 ಭಯೋತ್ಪಾದಕರು ದೇಶದ ಭವಿಷ್ಯವನ್ನು ಬದಲಾಯಿಸುತ್ತಾರೆ ಎಂದು ಪಾಕಿಸ್ತಾನದ ಶತ್ರುಗಳು ಭಾವಿಸುತ್ತಾರಾ? ನಾವು ಶೀಘ್ರದಲ್ಲೇ ಈ ಭಯೋತ್ಪಾದಕರ ಬೆನ್ನು ಮುರಿಯುತ್ತೇವೆ. 13 ಲಕ್ಷ ಜನರ ಭಾರತೀಯ ಸೇನೆಗೆ ನಮ್ಮನ್ನು ಹೆದರಿಸಲು ಸಾಧ್ಯವಾಗಲಿಲ್ಲ, ಈ ಭಯೋತ್ಪಾದಕರು ಏನು ಮಾಡುತ್ತಾರೆ?’’ ಎಂದು ಕುಹಕ ನಗೆ ಬೀರಿದರು.

ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ), ಬಲೂಚ್ ಲಿಬರೇಶನ್ ಫ್ರಂಟ್ (ಬಿಎಲ್‌ಎಫ್) ಮತ್ತು ಬಲೂಚ್ ರಿಪಬ್ಲಿಕನ್ ಆರ್ಮಿ (ಬಿಆರ್‌ಎ) ನಂತಹ ಸಂಘಟನೆಗಳನ್ನು ದೇಶಕ್ಕೆ ಬೆದರಿಕೆ ಎಂದು ಒಪ್ಪಿಕೊಳ್ಳಲು ಅವರು ನಿರಾಕರಿಸಿದರು ಮತ್ತು ಈ ಸಂಘಟನೆಗಳಿಗೆ ಶೀಘ್ರದಲ್ಲೇ ಸೂಕ್ತ ಉತ್ತರ ನೀಡಲಾಗುವುದು ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.

Continue Reading

DAKSHINA KANNADA

WATCH : ವೇದಿಕೆಗೆ ನುಗ್ಗಿ ವೇಷಧಾರಿಯ ಮೈಮೇಲೆ ಎರಗಿದ ವ್ಯಕ್ತಿ, ವೀಡಿಯೋ ವೈರಲ್

Published

on

ಕಡಬ : ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ  ವ್ಯಕ್ತಿಯೊಬ್ಬರು ವೇದಿಕೆಗೆ ನುಗ್ಗಿ ವೇಷಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.

ಕಡಬದ ನಂದುಗುರಿ ಎಂಬಲ್ಲಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಎಂಬವರ ಮನೆಯಲ್ಲಿ  ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು. ವಿದ್ಯುನ್ಮಾಲಿ ಹಾಗೂ ಅದಿತಿ ಸಂಭಾಷಣೆ ನಡೆಯುತ್ತಿದ್ದ ವೇಳೆ  ಸಭೆಯಿಂದ ಏಕಾಏಕಿ ಓಡೋಡಿ ಬಂದ ವ್ಯಕ್ತಿಯೊಬ್ಬರು ವೇಷಧಾರಿಯ ಮೇಲೆ ಎರಗಿದ್ದಾರೆ.

ಇದನ್ನೂ ಓದಿ : ಕಾಡು ಹಂದಿ ಮಾಂಸದ ಆಮಿಷವೊಡ್ಡಿ ವಂಚನೆ; ಖದೀಮನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ಏಕಾಏಕಿ ವೇದಿಕೆ ಮೇಲೆ ಹಾರಿ ಬಂದ ವ್ಯಕ್ತಿಯ ವರ್ತನೆಯಿಂದ   ಕಲಾವಿದರು, ಪ್ರೇಕ್ಷಕರು ದಿಗ್ಬ್ರಮೆಗೊಳಗಾಗಿ ಗಲಿಬಿಲಿಗೊಂಡಿದ್ದಾರೆ.  ಕೂಡಲೇ ಆತನನ್ನು ತಡೆದು ಇತರರ ಸಹಕಾರದಿಂದ ಎಳೆದುಕೊಂಡು ದೂರ ಹೋಗಿರುವುದು ವೀಡಿಯೋದಲ್ಲಿದೆ. ವೇದಿಕೆಗೆ ನುಗ್ಗಿದ ವ್ಯಕ್ತಿ ಸ್ಥಳೀಯ ನಿವಾಸಿ ರಾಧಾಕೃಷ್ಣ ಎಂದು ಗುರುತಿಸಲಾಗಿದ್ದು,  ಮೈಮೇಲೆ ಆವೇಶ ಬಂದ ರೀತಿಯಲ್ಲಿ ವರ್ತಿಸಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ.

Continue Reading

LATEST NEWS

ಶಿಕ್ಷಕರಿಗೆ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನದಿಂದ ವಿನಾಯಿತಿ..!?

Published

on

 ಮಂಗಳೂರು/ಬೆಂಗಳೂರು: ಏಪ್ರಿಲ್ 15 ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಆರಂಭವಾಗಿದೆ.


ಆದ್ರೆ ಏಪ್ರಿಲ್ 18 ರಂದು ಗುಡ್ ಫ್ರೈಡ್ , ಹೋಲಿ ಸ್ಯಾಟರ್‌ಡೆ ಮತ್ತು ಈಸ್ಟರ್ ಸಂಡೆ ದಿನದಂದು ಮೌಲ್ಯಮಾಪನಕ್ಕೆ ವಿನಾಯಿತಿ ಕೋರಿ ಶಿಕ್ಷಕರು ಮನವಿ ಮಾಡಿದ್ದಾರೆ. ಈ ಮನವಿಯನ್ನು ಪುರಸ್ಕರಿಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ಕ್ರೈಸ್ತ ಸಮೂದಾಯದ ಶಿಕ್ಷಕರಿಗೆ ಮೌಲ್ಯ ಮಾಪನದಿಂದ ವಿನಾಯಿತಿ ನೀಡಿದೆ.

ಇದನ್ನೂ ಓದಿ: ರೈಲಿನಲ್ಲಿ ಎಟಿಎಮ್; ವಿನೂತನ ಕಾರ್ಯ ಪರಿಚಯಿಸಿದ ಭಾರತೀಯ ರೈಲ್ವೆ..!

ರಾಜ್ಯದ ಎಲ್ಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಪತ್ರ ಬರೆದು ಏ.18 ರಿಂದ 20 ರ ವರೆಗೆ ಅರ್ಹ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page