Connect with us

DAKSHINA KANNADA

ಸೆ.22ರಂದು ‘ಯಾನ್ ಸೂಪರ್ ಸ್ಟಾರ್’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ

Published

on

ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರ ಸೆ. 22 ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ ಎಂದು ನಿರ್ದೇಶಕ ರಾಮ್ ಶೆಟ್ಟಿ ಹೇಳಿದ್ದಾರೆ.

ಮಂಗಳೂರು: ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರ ಸೆ. 22 ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ ಎಂದು ನಿರ್ದೇಶಕ ರಾಮ್ ಶೆಟ್ಟಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನೂತನ ಚಲನಚಿತ್ರದ ಕುರಿತು ಮಾಹಿತಿ ನೀಡಿದರು.

ಸಿಐಡಿ ದಯಾ ಖ್ಯಾತಿಯ ದಯಾನಂದ ಶೆಟ್ಟಿ ಅವರು ಚಿತ್ರದ ಕುರಿತು ಮಾತನಾಡಿ, ಹಿಂದಿ ಸಿನಿಮಾ ಮತ್ತು ಧಾರವಾಹಿ ಕ್ಷೇತ್ರದಲ್ಲಿ ನಾನು ಕಳೆದ 25 ವರ್ಷಗಳಿಂದ ದುಡಿಯುತ್ತಿದ್ದೇನೆ.

ನಾನು ಎಲ್ಲಿ ಹೋದರೂ ತುಳು ಸಿನಿಮಾ ಯಾವಾಗ ಮಾಡುತ್ತೀರಿ ಎಂದು ಪ್ರಶ್ನಿಸುತ್ತಿದ್ದರು.

ಈಗ ನಾನು ನಟಿಸಿರುವ ‘ಯಾನ್ ಸೂಪರ್ ಸ್ಟಾರ್’ ತುಳು ಸಿನಿಮಾ ಬಿಡುಗಡೆಗೆ ತಯಾರಾಗಿದ್ದು ಶುಕ್ರವಾರ ಬಿಡುಗಡೆಯಾಗಲಿದೆ.

ಮೇಕಿಂಗ್, ನಿರ್ದೇಶನ ಎಲ್ಲದರಲ್ಲೂ ಗ್ರ್ಯಾಂಡ್ ಆಗಿರುವ ಸಿನಿಮಾವನ್ನು ಖಂಡಿತಾ ತುಳುವರು ಇಷ್ಟಪಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ನಟ ಹರೀಶ್ ವಾಸು ಶೆಟ್ಟಿ, ಕುಸೇಲ್ದರಸೆ ನವೀನ್ ಡಿ. ಪಡೀಲ್ ಮಾತನಾಡಿದರು.

ಉಡುಪಿ ಸುತ್ತಮುತ್ತ ಒಂದೇ ಹಂತದಲ್ಲಿ 25 ದಿನಗಳ ಕಾಲ ಯಾನ್ ಸೂಪರ್ ಸ್ಟಾರ್ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು.

ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್ ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ಕುಸೇಲ್ದರಸೆ ನವೀನ್ ಡಿ ಪಡೀಲ್, ನವರಸ ರಾಜೆ ಭೋಜರಾಜ ವಾಮಂಜೂರು, ಮಾನಸಿ ಸುಧೀರ್, ಅಶೋಕ್ ಪಕ್ಕಳ, ಮಾಸ್ಟರ್ ಅತಿಶ್ ಶೆಟ್ಟಿ, ಮಾಸ್ಟರ್ ಅರುಷ್ ಯು ಪೂಜಾರಿ, ಕುಮಾರಿ ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.

ಸಂತೋಷ್ ಶೆಟ್ಟಿಯವರ ಕತೆಗೆ ಸಚಿನ್ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ.

ಚಿತ್ರಕತೆ: ಅಂಕಣ ಜೋಷಿ, ಸಂತೋಷ್ ಶೆಟ್ಟಿ, ಸಾಹಿತ್ಯ ಹಾಡು, ಸಂಗೀತ: ವಿ ಮನೋಹರ್ ನೀಡಿದ್ದು, ಗುರುಕಿರಣ್ ಹಾಡಿದ್ದಾರೆ.

ಹಿನ್ನಲೆ ಸಂಗೀತವನ್ನು ಸಂಜಯ್ ವಾಂದ್ರೇಕರ್ ನೀಡಿದ್ದು, ಕ್ಯಾಮರಾ ಕೃಷ್ಣರಾಜ್ ಕೋಟ್ಯಾನ್ ಅವರದ್ದು.

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಸಂತೋಷ್ ಶೆಟ್ಟಿ, ರಾಮ್ ಶೆಟ್ಟಿ, ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಮತ್ತಿತರರು ಉಪಸ್ಥಿತರಿದ್ದರು.

DAKSHINA KANNADA

ನಿರೂಪಕ ಸಾಯಿಹೀಲ್ ರೈಗೆ ಪಿತೃ ವಿಯೋಗ

Published

on

ಮಂಗಳೂರು : ಉದ್ಯಮಿ, ಸಾಯಿ ಭಕ್ತ, ನಿರೂಪಕ ಸಾಯಿಹೀಲ್ ರೈ ಅವರ ತಂದೆ,  ಬೋಳಾರ ಮಂಗಳಾದೇವಿ ನಿವಾಸಿ ಬೆಳ್ಳಿಪ್ಪಾಡಿ ಸತೀಶ್ ರೈ ಅಗರಿ (66) ಅವರು ಇಂದು(ಮಾ.20) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು.

ಮೃತರು ಪತ್ನಿ ಶೋಭಾ ರೈ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಬಿ. ಸಿ. ರೋಡ್, ಸಜೀಪ – ನಾಲ್ ಕೈ ತ್ತಾಯ ದೈವಸ್ಥಾನದ ಸಮೀಪ ಇರುವ “ಅಗರಿ ಮನೆ”  ಯಲ್ಲಿ ಸಂಜೆ 4.30 ರಿಂದ 7 ನಡೆಯಲಿದೆ.

 

Continue Reading

DAKSHINA KANNADA

ಸುಳ್ಯ : ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ; ಕಾರಣ ನಿಗೂಢ

Published

on

ಸುಳ್ಯ : ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಕಾರಣಗಳು ನಿಖರವಾಗಿರುವುದಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ.

ಸುಳ್ಯದ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ, ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟ ಮಹಿಳೆಯನ್ನು ರೇವತಿ (51) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಡಬ : ಹಾಸ್ಟೆಲ್ ಮಕ್ಕಳ ಆಹಾರದಲ್ಲಿ ಹುಳ ಪತ್ತೆ

Published

on

ಕಡಬ : ಕಡಬ ತಾಲೂಕಿನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿದ ಮಂಗಳೂರು ಲೋಕಾಯುಕ್ತ ಪೊಲೀಸರ ತಂಡವು ಇಲ್ಲಿನ ಸರಕಾರಿ ಹಾಸ್ಟೆಲಿಗೆ ದಿಢೀರ್ ಭೇಟಿ ನೀಡಿದ್ದು,ತಪಾಸಣೆ ನಡೆಸಿದೆ.

ಕಡಬದ ಸರಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಈ ಹಿಂದಿನಿಂದಲೂ ಆರೋಪಗಳು ಕೇಳಿಬರುತ್ತಿದ್ದು,ಮಕ್ಕಳ ಪೊಷಕರಾಗಲೀ ಇತರ ಯಾರೊಬ್ಬರೂ ಈ ಬಗ್ಗೆ ದೂರು ನೀಡುವುದಾಗಲೀ ಉನ್ನತ ಮಟ್ಟದ ಅಧಿಕಾರಿಗಳು ತನಿಖೆ ಮಾಡುವುದಾಗಲೀ ಮಾಡುತ್ತಿರಲಿಲ್ಲ. ದ.ಕ. ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಇಲ್ಲಿಗಾಗಮಿಸಿ ತಪಾಸಣೆ ನಡೆಸಿದಾಗ ಅವ್ಯವಸ್ಥೆ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರ್‌ಚಂದ್ರ ಮತ್ತು ಡಿವೈಎಸ್‌ಪಿ ಗಾನಾ ಪಿ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಲೋಕಾಯುಕ್ತ ಸಿಬ್ಬಂದಿಗಳು ವಸತಿಗೃಹದಲ್ಲಿ ತಪಾಸಣೆ ನಡೆಸಿದ್ದು ಕಳಪೆ ಆಹಾರ ಪೂರೈಕೆ, ಸಿಸಿ ಕ್ಯಾಮರಾ ಸರಿಯಿಲ್ಲದ ವಿಚಾರ, ಮ್ಯಾಟ್ ಮಾರಾಟ ಆರೋಪ, ಸುರಕ್ಷತಾ ಸಿಬ್ಬಂದಿ ವಾರ್ಡನ್ ಇಲ್ಲದಿರುವುದು ಸೇರಿದಂತೆ ಹಲವಾರು ವಿಚಾರಗಳು ಬೆಳಕಿಗೆ ಬಂದಿವೆ. ಮಕ್ಕಳಲ್ಲಿ ವಸತಿಗೃಹದ ಅವ್ಯವಸ್ಥೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ವಾರ್ಡನ್ ಸೇರಿದಂತೆ ಸಿಬ್ಬಂದಿಗಳು ಇಲ್ಲಿಗೆ ಬಾರದಿರುವ ಬಗ್ಗೆ ಮತ್ತು ಇಲ್ಲಿಗೆ ಬಂದಿರುವ ರಬ್ಬರ್ ಮ್ಯಾಟ್‌ಗಳಲ್ಲಿ ಸುಮಾರು 110 ಮ್ಯಾಟ್‌ಗಳು ಮಾರಾಟ ಮಾಡಿರುವ ಬಗ್ಗೆ ಮತ್ತು ಆಹಾರದ ಗುಣಮಟ್ಟದ ಬಗ್ಗೆ ಮಕ್ಕಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಡುಗೆ ಸಾಮಾಗ್ರಿಗಳನ್ನು ಸಂಗ್ರಹಿಸಿದ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಆಹಾರ ಪದಾರ್ಥಗಳಲ್ಲಿ ಹುಳಗಳಿರುವುದನ್ನು ನೋಡಿದರು. ಹಾಜರಾತಿ ಪುಸ್ತಕದಲ್ಲಿ ಮಕ್ಕಳು ಮತ್ತು ಅಧಿಕಾರಿಗಳ ಸಹಿ ಇಲ್ಲದಿರುವ ಬಗ್ಗೆ ಮನಗಂಡರು.ಈ ಬಗ್ಗೆ ವರದಿ ತಯಾರಿಸಿ ಸರಕಾರಕ್ಕೆ ಸಲ್ಲಿಸುವುದಾಗಿ ಲೋಕಾಯುಕ್ತ ಎಸ್ಪಿ ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page