Connect with us

DAKSHINA KANNADA

ಪುತ್ತೂರು: ಶಾಸಕ ಅಶೋಕ್‌ ರೈ ನೇತೃತ್ವದಲ್ಲಿ ವಸ್ತ್ರ ವಿತರಣೆ, ಸಹಭೋಜನ ‘ಸೇವಾ ಸೌರಭ’

Published

on

ಪುತ್ತೂರು : ಸಂಪತ್ತು ಮೌಲ್ಯವರ್ಧನೆ ಆಗುವುದು ದಾನ ಮಾಡಿದಾಗ ಮಾತ್ರ. ಮಾನವೀಯತೆ ಇದ್ದಲ್ಲಿ ಬದುಕು ಬಂಗಾರವಾಗಲು ಸಾಧ್ಯ. ಇವೆರಡು ಇಂದಿನ ಕಾರ್ಯಕ್ರಮದಲ್ಲಿ ಮೇಳೈಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.


ಅವರು ಕೊಂಬೆಟ್ಟು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜ್ಯುಕೇಶಬಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದು ನಡೆದ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ ‘ಸೇವಾ ಸೌರಭ’ವನ್ನು ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಇದೊಂದು ಸೇವಾ ಸಂಭ್ರಮವಾಗಿದ್ದು, ಅತಿಥಿ ದೇವೋಭವ ಎಂಬ ಅರ್ಥ ಇಲ್ಲಿ ಸಂಪನ್ನಗೊಂಡಿದೆ. ಈ ನಿಟ್ಟಿನಲ್ಲಿ ಲೋಕದ ಜನರನ್ನು ಪ್ರೀತಿಯಿಂದ ಸೆಳೆದು ಅವರಲ್ಲಿ ಪ್ರೀತಿಯನ್ನು ತುಂಬಿಸುವ ಕೆಲಸ ಆಗಬೇಕಾಗಿ. ಆ ಕೆಲಸವನ್ನು ಟ್ರಸ್ಟ್ ರೂವಾರಿ ಅಶೋಕ್ ರೈ ಅವರಿಂದ ಆಗಿದೆ ಎಂದು ನುಡಿದರು.

ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಪುತ್ತೂರಿನ ಸಂಸ್ಕೃತಿಯ ಸಾರವನ್ನು ಎತ್ತಿಹಿಡಿದಿದೆ. ಸಾಂಸ್ಕೃತಿಯ ಸಾರ ಹೊಂದಿರುವ ಸ್ಥಾನವನ್ನು ದ.ಕ.ಜಿಲ್ಲೆ ಹೊಂದಿದ್ದು, ಅದನ್ನು ಪುತ್ತೂರಿನಲ್ಲಿ ಕಾಣುವಂತಾಗಿದೆ.

ಜತೆಗೆ ಸ್ವಾಭಿಮಾನದ ಬದುಕು ಕಟ್ಟಿಕೊಂಡಿರುವ ಬಡ 20 ಮಂದಿಯನ್ನು ಸನ್ಮಾನಿಸಲಾಗಿದೆ ಎಂದ ಅವರು, ಕಂಬಳ ಕ್ರೀಡಾಕೂಟವನ್ನು ಬೆಂಗಳೂರಿನಲ್ಲಿ ಆಯೋಜಿಸಿ ಮತ್ತೊಮ್ಮೆ ಪುತ್ತೂರಿನ ಜನತೆಗೆ ಗೌರವ ತಂದು ಕೊಡುವ ಕೆಲಸ ಅಶೋಕ್ ರೈ ಅವರಿಂದ ಆಗಲಿದೆ. ಮುಂದೆ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡಿ ಎಂದು ವಿನಂತಿಸಿದರು.


ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ದೇವರು ಮೆಚ್ಚುವ ಕೆಲಸವನ್ನು ಅಶೋಕ್ ರೈಗಳು ಮಾಡುತ್ತಿದ್ದಾರೆ. ಶಾಸಕರಾಗಲು ದೇವರು ಅವರ ಜತೆ ನಿಂತಿದ್ದಾರೆ ಎಂದರು.
ರೈ ಏಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ತಂದೆ-ತಾಯಿ ಮಾಡಿಕೊಂಡ ಬಂದಿರುವ ವಸ್ತ್ರ ವಿತರಣೆಯನ್ನು ಸಂಪ್ರದಾಯವಾಗಿ ಮಾಡಿಕೊಂಡಿ ಬರುತ್ತಿದ್ದೇನೆ.

ಮುಂದಿನ ದಿನಗಳಲ್ಲಿ 94ಸಿ, 94ಸಿಸಿ ಕಾನೂನು ರೀತಿಯಲ್ಲಿ ಭ್ರಷ್ಟಾಚಾರಮುಕ್ತವಾಗಿ ಪ್ರತಿಯೊಬ್ಬ ಫಲಾನುಭವಿಯ ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ. ಈಗಾಗಲೇ 600 ಮಂದಿ ಮಹಿಳೆಯರು ಮನೆಯಿಲ್ಲದೆ ನಿರ್ಗತಿಕರಾಗಿ ಬದುಕುತ್ತಿದ್ದಾರೆ. ಅವರಿಗೆ ಮೂರು ಸೆಂಟ್ಸ್ ಜಾಗ ನೀಡುವ ಕೆಲಸ ಮುಂದಿನ ದಿನಗಳಲ್ಲಿ ಆಗಲಿದೆ ಎಂದರು.

ವೇದಿಕೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಟ್ರಸ್ಟ್ ಮುಖ್ಯಸ್ಥೆ ಸುಮಾ ಅಶೋಕ್ ರೈ, ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ , ಕೆಪಿಸಿಸಿ ವಕ್ತಾರ ಮಹಮ್ಮದ್ ಬಡಗನ್ನೂರು, ಪುತ್ತೂರು ಮಾಯಿದೇ ದೇವುಸ್‍ಚರ್ಚ್ ಧರ್ಮಗುರು ವಿ.ರೆ.ಫಾ.ಲಾರೆನ್ಸ್ ಮಸ್ಕರೇನಸ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಧಾರ್ಮಿಕ ಮುಖಂಡ ಜ.ಹುಸೈನ್ ದಾರಿಮಿ ರೆಂಜಿಲಾಡಿ,

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ರೈ ಎಂ.ಬಿ., ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ., ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ,

ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಟ್ರಸ್ಟ್ ನ ನಿಹಾಲ್ ರೈ, ಸುಬ್ರಹ್ಮಣ್ಯ ರೈ ದಂಪತಿ, ಡಾ.ರಘು ಬೆಳ್ಳಿಪ್ಪಾಡಿ, ಬೇಬಿ ಕುಂದರ್, ಪ್ರಗತಿಪರ ಕೃಷಿಕ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು, ಜಿಪಂ ಮಾಜಿ ಸದಸ್ಯ ಎಂ.ಎಸ್‍.ಮಹಮ್ಮದ್, ಟ್ರಸ್ಟ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ಕೃಷ್ಣ ಪ್ರಸಾದ್ ಬೊಲ್ಲಾವು ಉಪಸ್ಥಿತರಿದ್ದರು.

DAKSHINA KANNADA

ಕುಂಭದ್ರೋಣ ಮಳೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

Published

on

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಆರಂಭಗೊಂಡು ಹಲವು ವರ್ಷವಾದ್ರೂ ಇನ್ನೂ ಕೂಡಾ ಪೂರ್ಣಗೊಂಡಿಲ್ಲ. ಕೆಲವಡೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಏನೋ ನಿರ್ಮಾಣ ಮಾಡಲಾಗಿದೆಯಾದರೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ವ್ಯವಸ್ಥೆಯೇ ಮಾಡಿಲ್ಲ.

 

ಕಳೆದ ವರ್ಷ ಇದೇ ಸಮಸ್ಯೆಯಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ಇದೀಗ ಮಳೆಗಾಲ ಸಮೀಪಿಸ್ತಾ ಇದ್ದು , ಅಕಾಲಿಕ ಮಳೆ ಕೂಡಾ ಆರಂಭವಾಗಿದೆ. ಭಾನುವಾರ ಬಂಟ್ವಾಳ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮತ್ತೆ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ.

ಬಂಟ್ವಾಳ ತಾಲೂಕಿ ಕಲ್ಲಡ್ಕ ಸಮೀಪದ ಸೂರಿಕುಮೇರು ಎಂಬಲ್ಲಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಇಡೀ ರಸ್ತೆಯೇ ನದಿಯಂತಾಗಿ ಹೋಗಿದೆ. ಇದರ ನಡುವೆ ಸಣ್ಣಪುಟ್ಟ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹೆದ್ದಾರಿ ಕಾಮಗಾರಿಗೆ ಹಿಡಿ ಶಾಪ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ : ಹುಲಿ ವೇಷದಾರಿ ಹೃದಯಾಘಾತಕ್ಕೆ ಬಲಿ

ಹೆದ್ದಾರಿಯ ಇಕ್ಕೆಲೆಯಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದ್ದು, ತಕ್ಷಣವೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Continue Reading

DAKSHINA KANNADA

ರೈಲ್ವೇ ಇಲಾಖೆ ಪರೀಕ್ಷೆಯಲ್ಲೂ ಎಡವಟ್ಟು; ಜನಿವಾರದ ಜೊತೆ ತಾಳಿಗೂ ಕಂಟಕ

Published

on

ಮಂಗಳೂರು : ಇತ್ತಿಚೆಗೆ ಸಿಇಟಿ ಪರೀಕ್ಷೆಯ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಬ್ರಾಹ್ಮಣ ಸಮೂದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹಿಂದೂ ಸಂಘಟನೆಗಳೂ ಕೂಡ ಪರೀಕ್ಷಾರ್ಥಿಗಳಿಗೆ ಜನಿವಾರ ತೆಗೆಸಿದ ವಿಚಾರವಾಗಿ ಪ್ರತಿಭಟನೆ ನಡೆಸಿತ್ತು. ಇದೀಗ ರೈಲ್ವೇ ಇಲಾಖೆ ಕೂಡಾ ಇಂತಹದೇ ಒಂದು ಯಡವಟ್ಟು ಮಾಡಿದೆ. ಅದೇನು ಗೊತ್ತಾ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಜನಿವಾರ ಪ್ರಕರಣ ತೀವ್ರ ಸುದ್ಧಿಯಾಗುತ್ತಿರುವ ಬೆನ್ನಲ್ಲೇ ಇದೀಗ ಪರೀಕ್ಷೆ ಬರೆಯಲು ಜನಿವಾರ ಮತ್ತು ಮಂಗಳ ಸೂತ್ರ ತೆಗೆದು ಬರುವಂತೆ ಸೂಚಿಸಿದೆ. ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಏಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು, ಹಾಲ್ ಟಿಕೇಟ್ ನಲ್ಲೇ ಈ ಸೂಚನೆಯನ್ನು ನೀಡಿದೆ.

ಮಂಗಳೂರು ನಗರದ ಬೋಂದೇಲ್‌ ಸಮೀಪದ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲಿದ್ದು, ಹಾಲ್ ಟಿಕೇಟ್ ನಲ್ಲಿ ನಮೂದಿಸಿದ ವಿಚಾರ ಧಾರ್ಮಿಕ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ವಿಚಾವಾಗಿದೆ. ಹೀಗಾಗಿ ಈ ಸೂಚನೆಯನ್ನು ರದ್ದು ಪಡಿಸುವಂತೆ ರೈಲ್ವೇ ಇಲಾಖೆಗೆ ಸೂಚಿಸಬೇಕು ಎಂದು ಹಿಂದೂ ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದಾರೆ.

Continue Reading

DAKSHINA KANNADA

ವರುಣನ ಆರ್ಭಟಕ್ಕೆ ಮಂಗಳೂರು ಫುಲ್ ಕೂಲ್.. ಕೂಲ್.. !

Published

on

ಮಂಗಳೂರು : ಬೆಂದಿದ್ದ ಧರೆಯ ತಂಪಾಗಿಸಲು ಭುವಿಗಿಳಿದ ವರುಣ… ರಾತ್ರಿ ಮಲಗುವ ವೇಳೆ “ಎಂಥಾ ಸೆಕೆ ಮಾರ್ರೆ ?” ಎನ್ನುತ್ತಿದ್ದವರೂ ಸಹ ಫ್ಯಾನ್ ಆಫ್ ಮಾಡಿ ಮಲಗಿದ್ದಾರೆ. ಹೌದು .. ನಿನ್ನೆ(ಏ.27) ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗಿದೆ. ಹವಾಮಾನ ಇಲಾಖೆ ಈ ಕುರಿತು ಮೊದಲೇ ಮುನ್ಸೂಚನೆ ನೀಡಿದೆ. ಅದರಲ್ಲೂ ದಕ್ಷಿಣ ಕನ್ನಡದ ಹಲವೆಡೆ ನಿನ್ನೆ ಹಾಗೂ ಮೊನ್ನೆ (ಏ.26) ಗುಡುಗು ಮಿಂಚು ಸಹಿತ ವರುಣನ ಆರ್ಭಟ ಜೊರಾಗಿಯೇ ಇತ್ತು,

ನಿನ್ನೆ ಹಗಲು ಬಿಸಿಲು ಇತ್ತು. ಆದರೆ ಸಂಜೆ ಹೊತ್ತಿಗೆ ಯಾರೂ ಊಹಿಸದ ರೀತಿ ಮಳೆ ಸುರಿದಿದೆ. ಧಾರಕಾರ ಮಳೆಯಿಂದ ಬಿಸಿ ಬಿಸಿಯಾಗಿದ್ದ ನಗರ ಫುಲ್ ಕೂಲ್ ಆಗಿದೆ. ಬಿಸಿ ವಾತಾವರಣ ಪೂರ್ತಿ ನಿವಾರಣೆಯಾಗಿದೆ.

ಎರಡು ಮೂರು ದಿನಗಳಿಂದ ದಕ್ಷಿಣ ಕನ್ನಡ ಹಲವು ಕಡೆಗಳಲ್ಲಿ ಆಗಾಗ ಮಳೆ ಕಾಣಿಸಿಕೊಳ್ಳುತ್ತಿದೆ. ಇಂದು (ಏ.28) ಮಂಗಳೂರು ನಗರದಲ್ಲಿ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂಬುವುದಾಗಿ ಹವಮಾನ ಇಲಾಖೆ ಸೂಚಿಸಿದ್ದು, ಸಂಜೆ ತನಕ ಕಾದು ನೋಡಬೇಕಷ್ಟೇ.

Continue Reading
Advertisement

Trending

Copyright © 2025 Namma Kudla News

You cannot copy content of this page