Connect with us

DAKSHINA KANNADA

‘ಕುವೆಂಪು ಅವರನ್ನು ಅವಮಾನಿಸಿದವರನ್ನೇ ಅಧ್ಯಕ್ಷರನ್ನಾಗಿಸಿದ್ದು ದುರಂತ’

Published

on

ಮಂಗಳೂರು: ರಾಷ್ಟ್ರಕವಿ ಕುವೆಂಪುರವರನ್ನು ವ್ಯಂಗ್ಯವಾಗಿ ಕಾಣುತ್ತಿರುವ ರೋಹಿತ್ ಚಕ್ರತೀರ್ಥ ಅವರನ್ನು ಮತ್ತೆ ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿರುವುದು ದುರಂತ. ಇವರು ತನ್ನ ಫೇಸ್‌ಬುಕ್‌  ಪೇಜ್‌ನಲ್ಲಿ ನಾಡಗೀತೆಯ ಬಗ್ಗೆ ಕೂಡಾ ಅವಮಾನಿಸಿದ್ದಾರೆ. ಏಕೆಂದರೆ ಅದರಲ್ಲಿ ಸರ್ವ ಜನಾಂಗದ ಶಾಂತಿಯ ತೋಟ…. ಎಂದು ಇದೆಯಲ್ವಾ, ಅದನ್ನೆಲ್ಲ ಇವರಿಗೆ ಸಹಿಸಲು ಆಗುತ್ತಿಲ್ಲ ಎಂದು ಎಸ್‌ಎಫ್‌ಐ ಮುಖಂಡ ಮನೋಜ್ ಕುಮಾರ್ ವಾಮಂಜೂರು ಹೇಳಿದರು.

ಇವರು ಇಂದು ಮಂಗಳೂರಿನಲ್ಲಿ ಕ್ಲಾಕ್‌ಟವರ್ ಬಳಿ ಪಠ್ಯಪುಸ್ತಕ ಪರಿಷ್ಕರಿಸಿ ಭಗತ್‌ಸಿಂಗ್, ನಾರಾಯಣ ಗುರು, ಲಂಕೇಶ್ ಪಠ್ಯಗಳನ್ನು ತೆಗೆದಿರುವುದರ ಬಗ್ಗೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ ‘ಎರಡು ತಿಂಗಳ ಮುಂಚೆ ಇಲ್ಲಿನ ರಾಜ್ಯ ಸರ್ಕಾರ ಶಿಕ್ಷಣ ಸಚಿವರಾಗಿರುವ ನಾಗೇಶ್‌ರವರ ನೇತೃತ್ವದಲ್ಲಿ ರೋಹಿತ್ ಚಕ್ರತೀರ್ಥ ಅವರನ್ನು ಅಧ್ಯಕ್ಷರಾಗಿ ನೇಮಿಸುವ ಮೂಲಕ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ರಚಿಸಲಾಯಿತು.

 

ಈ ವ್ಯವಸ್ಥೆ ಏನಿದೆ ಅದು ವಿದ್ಯಾರ್ಥಿಗಳ ಕ್ಷೇಮಾಭ್ಯುದಯಕ್ಕೆ ವಿರುದ್ಧವಾಗಿದೆ ಎನ್ನುವುದು ನಮ್ಮ ಅಭಿಪ್ರಾಯ.  ಆ ಪಠ್ಯಪುಸ್ತಕದಿಂದ ನಾಡಿನ ಸಮಾಜ ಸುಧಾರಕರಾದ, ವಿಶ್ವಗುರುಗಳಾದ ನಾರಾಯಣ ಗುರು ಪಠ್ಯವನ್ನು ತೆಗೆದುಹಾಕಿರುವುದು ಖಂಡನೀಯ.

ಇದನ್ನು ಯಾಕೆ ತೆಗೆದುಹಾಕಿದ್ದಾರೆ ಎಂದರೆ ಅವರು ಒಂದೇ ಮತ ಒಂದೇ ಧರ್ಮ, ಒಂದೇ ದೇವರು ಅಂತ ಹೇಳಿದ್ದಾರೆ. ಇವರಿಗೆ ಬಹುತ್ವದಲ್ಲಿ ಏಕತೆಯನ್ನು ಸಾರುವವರು ಯಾರೂ ಬೇಕಾಗಿಲ್ಲ.  ನಾರಾಯಣ ಗುರುಗಳು ಗುರು ಸಮಾನರು ಅನ್ನುವ ಭಾವನೆಯಲ್ಲಿ ಕಾಣಬೇಕಾದ ಸರ್ಕಾರ ಅವರ ಪಠ್ಯವನ್ನೇ ತೆಗೆದುಹಾಕಿರುವುದು ದುರಂತ.

ಅಷ್ಟೇ ಅಲ್ಲ ಭಗತ್‌ಸಿಂಗ್ ಪಠ್ಯವನ್ನು ಕೂಡಾ ತೆಗೆಯಲಾಗಿದೆ. ಇವತ್ತಿಗೂ ಕೂಡಾ ಈ ಹೆಸರು ಹೇಳಿದ ತಕ್ಷಣ ರೋಮಾಂಚನವಾಗುತ್ತದೆ ಏಕೆಂದರೆ ಇವರು 23 ವಯಸ್ಸಿನಲ್ಲಿ ಸ್ವಾತಂತ್ರ್ಯಕ್ಕೆ ಧುಮುಕಿದವರು. ಅವರ ನೈಜ ಆದರ್ಶಗಳು ಇವರಿಗೆ ಬೇಕಾಗಿಲ್ಲ.

ಇವರು ರಾಷ್ಟ್ರೀಯವಾದಿಗಳು ಎಂದು ಹೇಳಿಕೊಳ್ಳುತ್ತಾರೆ ಅಷ್ಟೇ. ಆದರೆ ಅನೇಕ ಬಾರಿ ಅದರ ವಿರುದ್ಧವೇ ನಡೆದುಕೊಳ್ಳುತ್ತಿದ್ದಾರೆ.  ಇದನ್ನೆಲ್ಲವನ್ನು ಬಿಟ್ಟು ಹೆಡಗೇವಾರ್ ಅವರ ಪಠ್ಯವನ್ನು ಸೇರಿಸಿದ್ದಾರೆ. ಅವರು ಯಾರು, ಅವರು ಬ್ರಿಟಿಷ್‌ನವರಿಗೆ ಸಹಕಾರ ನೀಡಿದವರು ಎಂದು ಆಕ್ರೋಶವನ್ನು ಹೊರಹಾಕಿದರು.

ಇನ್ನು ಪ್ರತಿಭಟನೆಯಲ್ಲಿ  ಪ್ರತಿಭಟನೆಯಲ್ಲಿ ವಿನಿತ್ ದೇವಾಡಿಗ ಜಿಲ್ಲಾ ಸಮಿತಿ ಸಂಚಾಲಕ, ವಿನುಶ ರಮಣ ಎಸ್‌ಎಫ್‌ಐ ಜಿಲ್ಲಾ ಸಮಿತಿ ಸಹ ಸಂಚಾಲಕ, ವಿಕಾಸ್ ಕುತ್ತಾರ್ ಸಮಿತಿ ಸದಸ್ಯರು ಮತ್ತಿರರು ಉಪಸ್ಥಿತರಿದ್ದರು.

DAKSHINA KANNADA

ಕೋಳಿ ಸಾಗಾಟದ ಟೆಂಪೋ ಪ*ಲ್ಟಿ; ಸ*ತ್ತ ಕೋಳಿಗಳಿಗಾಗಿ ಮುಗಿಬಿದ್ದ ಸಾರ್ವಜನಿಕರು

Published

on

ಬಂಟ್ವಾಳ: ಕೋಳಿ ಸಾಗಾಟದ ಟೆಂಪೋ ಪ*ಲ್ಟಿಯಾಗಿ ನೂರಾರು ಕೋಳಿಗಳು ಸಾ*ವನ್ನಪ್ಪಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕನ್ಯಾನದ ಕುಳಾಲು ಎಂಬಲ್ಲಿ ಘಟನೆ ನಡೆದಿದೆ.

ಕಡಿದಾದ ರಸ್ತೆಯಲ್ಲಿ ಇನ್ನೊಂದು‌ ವಾಹನಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಪಿಕಪ್ ಪ*ಲ್ಟಿಯಾಗಿದೆ.  ಪಿಕಪ್ ಟೆಂಪೋ ಚಾಲಕ‌ ಅದೃಷ್ಟವಶಾತ್ ಅ*ಪಾಯದಿಂದ ಪಾರಾಗಿದ್ದಾನೆ.

ಈ ವೇಳೆ ಸ*ತ್ತ ಕೋಳಿಗಳನ್ನು ಮನೆಗೆ ಕೊಂಡೊಯ್ಯಲು ಸಾರ್ವಜನಿಕರು ಮುಗಿಬಿದ್ದಿದ್ದಾರೆ.  ಈ ಘಟನೆಯಿಂದ ಕೋಳಿ‌ಪ್ರಿಯರಿಗೆ ಪುಕ್ಕಟೆಯಾಗಿ ಕೋಳಿಗಳು ದೊರೆದಂತಾಗಿದೆ.

Continue Reading

DAKSHINA KANNADA

ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಚಾಲನೆ

Published

on

ಮಂಗಳೂರು : ಮಂಗಳೂರು ನಗರದ ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 15 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ.

ದಿವಂಗತ ಜೆ. ಜಯಗಂಗಾಧರ ಶೆಟ್ಟಿ ಮನ್ಕುತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥ ನಡೆಯುವ ಕಂಬಳದ ಉದ್ಘಾಟನೆ ಬೆಳಗ್ಗೆ ನೆರವೇರಿತು. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಕಂಬಳಕ್ಕೆ ಪಾಲಿಕೆಯಿಂದ  ಆರ್ಥಿಕ ನೆರವು ನೀಡಲಾಗುತ್ತಿದೆ. ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಪೊಲೀಸ್ ಅಧಿಕಾರಿ ಟಿ.ಡಿ. ನಾಗರಾಜ್, ಜಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಮತ್ತಿತರ ವಿವಿಧ ಕ್ಷೇತ್ರಗಳ ಪ್ರಮುಖರು ಅತಿಥಿಗಳಾಗಿ ಉಪಸ್ಥಿತರಿದ್ದರು. ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ಕುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜೆ. ಉಮೇಶ್ ಅತಿಕಾರಿ, ಕೋಶಾಧಿಕಾರಿ ಜೆ. ಬಾಲಕೃಷ್ಣ ಶೆಟ್ಟಿ, ಪ್ರಕಾಶ್ ಮೇಲಂಟ, ಶೇಖರ ಕಿಲ್ಲೆ ಪಡುಹಿತ್ಲು, ಗುರುರಾಜ್ ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು. ಮನೋಜ್ ಶೆಟ್ಟಿ ವಂದಿಸಿದರು. ಅಭಿಷೇಕ್ ಕಾರ್ಯಕ್ರಮ ನಿರ್ವಹಿಸಿದರು.

Continue Reading

DAKSHINA KANNADA

ಮಂಗಳೂರು: ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್‌ಗೆ “ಸೌತ್ ಇಂಡಿಯಾ ಯಂಗ್ ಚೆಫ್ ಆಫ್ ದಿ ಇಯರ್” ಪ್ರಶಸ್ತಿ

Published

on

ಮಂಗಳೂರು: ಭಾರತದ ಅತ್ಯುತ್ತಮ ಆಹಾರ ಮತ್ತು ಪಾನೀಯಗಳನ್ನು ಗುರುತಿಸುವ *ಫುಡ್ “ಕನೋಸರ್ಸ್ ಇಂಡಿಯಾ ಅವಾರ್ಡ್ಸ್ (FCIA)* ನ ಏಳನೇ ಆವೃತ್ತಿಯಲ್ಲಿ ಮಂಗಳೂರಿನ ಮಾಸ್ಟರ್ ಚೆಫ್ *ಮಹಮ್ಮದ್ ಆಶಿಕ್* ಅವರಿಗೆ *’ಸೌತ್ ಇಂಡಿಯಾ ಯಂಗ್ ಚೆಫ್ ಆಫ್ ದಿ ಇಯರ್’* ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಬೆಂಗಳೂರಿನ *ತಾಜ್ ಯಶವಂತಪುರ ಹೋಟೆಲ್* ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಬಂದ ಅತ್ಯುತ್ತಮ ಶೆಫ್ಗಳು, ರೆಸ್ಟೋರೆಂಟ್ಗಳು ಮತ್ತು ಫುಡ್ ಬ್ರಾಂಡ್ಗಳು ಪಾಲ್ಗೊಂಡಿದ್ದರು. ಮಂಗಳೂರಿನ ಪ್ರತಿಭೆ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಈ ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲೆಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹೆಗ್ಗಳಿಸಿದ್ದಾರೆ.

ಪ್ರಶಸ್ತಿ ಪಡೆದ ನಂತರ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಅವರು ಮಾತನಾಡುತ್ತಾ, “ಈ ಪ್ರಶಸ್ತಿಯನ್ನು ಪ್ರಮುಖವಾಗಿ ಆಹಾರದ ಗುಣಮಟ್ಟ, ಸೃಜನಾತ್ಮಕತೆ ಮತ್ತು ಅನುಭವಗಳನ್ನು ಆಧರಿಸಿ ನೀಡಲಾಗುತ್ತದೆ. ಈ ಬಾರಿ ಕನ್ನಡನಾಡಿನ ಹಲವಾರು ರೆಸ್ಟೋರೆಂಟ್ಗಳು ಮತ್ತು ಶೆಫ್ಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನನಗೆ ಈ ಪ್ರಶಸ್ತಿ ಲಭಿಸಿದ್ದು ಗೌರವದ ಸಂಗತಿ. ಇದು ನನ್ನ ಕುಟುಂಬ, ಸ್ನೇಹಿತರು ಮತ್ತು ಜಿಲ್ಲೆಯ ಜನರ ಸಹಕಾರದ ಫಲವಾಗಿದೆ. ಈ ಪ್ರಶಸ್ತಿ ನನಗೆ ಇನ್ನಷ್ಟು ಸಾಧನೆ ಮಾಡಲು ಸ್ಪೂರ್ತಿ ನೀಡಿದೆ” ಎಂದರು.

ಈ ಕಾರ್ಯಕ್ರಮದ ಮೂಲಕ ಭಾರತದ ವೈವಿಧ್ಯಮಯ ಆಹಾರ ಸಂಸ್ಕೃತಿ ಮತ್ತು ಪ್ರತಿಭಾವಂತ ಶೆಫ್ಗಳ ಸಾಧನೆಗಳನ್ನು ಗುರುತಿಸಲಾಯಿತು. ಮಂಗಳೂರಿನ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಅವರ ಈ ಸಾಧನೆ ಜಿಲ್ಲೆಯ ಆಹಾರ ಕ್ಷೇತ್ರದ ಹೆಮ್ಮೆಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page