Connect with us

DAKSHINA KANNADA

ನಮ್ಮ ಕುಡ್ಲ ವಾಹಿನಿಯ ಬೆಳ್ಳಿ ಹಬ್ಬ ಸಂಭ್ರಮ-ಶರವು ಮಹಾಗಣಪತಿ ಕ್ಷೇತ್ರದಲ್ಲಿ ವಿಶೇಷ ಪೂಜೆ

Published

on

ನಮ್ಮ ಕುಡ್ಲ ವಾಹಿನಿಯು ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಆ ಪ್ರಯುಕ್ತ ಚೌತಿ ಹಬ್ಬದ ದಿನವಾದ ಇಂದು ಮಂಗಳೂರಿನ ಶರವು ಶ್ರೀ ಶರಭೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

ಮಂಗಳೂರು: ನಮ್ಮ ಕುಡ್ಲ ವಾಹಿನಿಯು ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಆ ಪ್ರಯುಕ್ತ ಚೌತಿ ಹಬ್ಬದ ದಿನವಾದ ಇಂದು ಮಂಗಳೂರಿನ ಶರವು ಶ್ರೀ ಶರಭೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

1999 ರಲ್ಲಿ ಶರವು ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸುವುದರೊಂದಿಗೆ ನಮ್ಮ ಕುಡ್ಲ ತುಳು ಸುದ್ದಿ ವಾಹಿನಿ ಪ್ರಾರಂಭವಾಗಿದ್ದು, ಅಂದಿನಿಂದ ಪ್ರತೀ ವರ್ಷ ಚೌತಿ ಸಂದರ್ಭದಲ್ಲಿ ಈ ದೇವಸ್ಥಾನದಲ್ಲಿ ವಾಹಿನಿ ವತಿಯಿಂದ ಪೂಜೆ ನಡೆಸಲಾಗುತ್ತಿದೆ.

24 ವರ್ಷ ಕಳೆದು 25 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು.

ಕ್ಷೇತ್ರದ ಆಡಳಿತ ಮೊಕ್ತೇಸರ ಹಾಗೂ ಪ್ರಧಾನ ಪೂಜೆ ನೆರವೇರಿಸುವ ಶರವು ರಾಘವೇಂದ್ರ ಶಾಸ್ತ್ರಿ ಅವರು ನಮ್ಮಕುಡ್ಲದ ಪರವಾಗಿ ಪ್ರಾರ್ಥನೆ ಸಲ್ಲಿಸಿದರು.

ಶ್ರೀ ಮಹಾಗಣಪತಿ ದೇವರಿಗೆ ಪೂಜೆ ಸಲ್ಲಿಸಿ ವಾಹಿನಿಯ ಸೇವೆಯನ್ನು ಅರ್ಪಣೆ ಮಾಡಿ ಪ್ರಸಾದ ವಿತರಿಸಿದರು.

ನಮ್ಮಕುಡ್ಲ ವಾಹಿನಿಯ ನಿರ್ದೇಶಕರಾದ ಹರೀಶ್ ಬಿ. ಕರ್ಕೇರ, ಸುರೇಶ್ ಬಿ. ಕರ್ಕೇರ, ಮೋಹನ ಬಿ. ಕರ್ಕೇರ, ಲೀಲಾಕ್ಷ ಬಿ. ಕರ್ಕೇರ, ಸಂತೋಷ್ ಬಿ. ಕರ್ಕೇರ ಮತ್ತು ಕುಟುಂಬದ ಸದಸ್ಯರು, ನಮ್ಮಕುಡ್ಲದ ಕಾರ್ಯಕ್ರಮ ನಿರ್ವಾಹಕ ಕದ್ರಿ ನವನೀತ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಪ್ರೊ. ಎಸ್‌. ಕೋಟ್ಯಾನ್‌, ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಮತ್ತಿತರರು ಉಪಸ್ಥಿತರಿದ್ದರು.

ಶರವು ರಾಘವೇಂದ್ರ ಶಾಸ್ತ್ರಿ ಅವರು ಆಶೀರ್ವಾದ ಮಾಡಿ ನಮ್ಮಕುಡ್ಲ ವಾಹಿನಿಯ ಬೆಳ್ಳಿ ಹಬ್ಬ ವರ್ಷಾಚರಣೆಗೆ ಶುಭ ಹಾರೈಸಿದರು.

ಚೌತಿ ಹಬ್ಬದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುವ 5001 ತೆಂಗಿನ ಕಾಯಿ ಪಲ್ಲಪೂಜೆ ಮತ್ತು ವಿಶೇಷ ಆರಾಧನೆ ಇತ್ಯಾದಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.

DAKSHINA KANNADA

ವರುಣನ ಆರ್ಭಟಕ್ಕೆ ಮಂಗಳೂರು ಫುಲ್ ಕೂಲ್.. ಕೂಲ್.. !

Published

on

ಮಂಗಳೂರು : ಬೆಂದಿದ್ದ ಧರೆಯ ತಂಪಾಗಿಸಲು ಭುವಿಗಿಳಿದ ವರುಣ… ರಾತ್ರಿ ಮಲಗುವ ವೇಳೆ “ಎಂಥಾ ಸೆಕೆ ಮಾರ್ರೆ ?” ಎನ್ನುತ್ತಿದ್ದವರೂ ಸಹ ಫ್ಯಾನ್ ಆಫ್ ಮಾಡಿ ಮಲಗಿದ್ದಾರೆ. ಹೌದು .. ನಿನ್ನೆ(ಏ.27) ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗಿದೆ. ಹವಾಮಾನ ಇಲಾಖೆ ಈ ಕುರಿತು ಮೊದಲೇ ಮುನ್ಸೂಚನೆ ನೀಡಿದೆ. ಅದರಲ್ಲೂ ದಕ್ಷಿಣ ಕನ್ನಡದ ಹಲವೆಡೆ ನಿನ್ನೆ ಹಾಗೂ ಮೊನ್ನೆ (ಏ.26) ಗುಡುಗು ಮಿಂಚು ಸಹಿತ ವರುಣನ ಆರ್ಭಟ ಜೊರಾಗಿಯೇ ಇತ್ತು,

ನಿನ್ನೆ ಹಗಲು ಬಿಸಿಲು ಇತ್ತು. ಆದರೆ ಸಂಜೆ ಹೊತ್ತಿಗೆ ಯಾರೂ ಊಹಿಸದ ರೀತಿ ಮಳೆ ಸುರಿದಿದೆ. ಧಾರಕಾರ ಮಳೆಯಿಂದ ಬಿಸಿ ಬಿಸಿಯಾಗಿದ್ದ ನಗರ ಫುಲ್ ಕೂಲ್ ಆಗಿದೆ. ಬಿಸಿ ವಾತಾವರಣ ಪೂರ್ತಿ ನಿವಾರಣೆಯಾಗಿದೆ.

ಎರಡು ಮೂರು ದಿನಗಳಿಂದ ದಕ್ಷಿಣ ಕನ್ನಡ ಹಲವು ಕಡೆಗಳಲ್ಲಿ ಆಗಾಗ ಮಳೆ ಕಾಣಿಸಿಕೊಳ್ಳುತ್ತಿದೆ. ಇಂದು (ಏ.28) ಮಂಗಳೂರು ನಗರದಲ್ಲಿ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂಬುವುದಾಗಿ ಹವಮಾನ ಇಲಾಖೆ ಸೂಚಿಸಿದ್ದು, ಸಂಜೆ ತನಕ ಕಾದು ನೋಡಬೇಕಷ್ಟೇ.

Continue Reading

DAKSHINA KANNADA

2024-25ರ ಆರ್ಥಿಕ ವರ್ಷದಲ್ಲಿ ಎಂಆರ್‌ಪಿಎಲ್‌ಗೆ 371 ಕೋಟಿ ರೂ. ಲಾಭ

Published

on

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ ಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್‌) ಕಂಪನಿಯು 2024-25ನೇ ಹಣಕಾಸು ವರ್ಷದ ತ್ರೈಮಾಸಿಕ ಲಾಭದ ಪ್ರಮಾಣ ಶೇ.20ರಷ್ಟು ಏರಿಕೆ ಕಂಡಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಸಂಸ್ಥೆ 371 ಕೋಟಿ ರೂ. ಲಾಭ ಗಳಿಸಿದೆ.

ಶನಿವಾರ ನಡೆದ ಕಂಪನಿಯ ಆಡಳಿತ ಮಂಡಳಿಯ ಸಭೆಯಲ್ಲಿ ನಾಲ್ಕನೇ ತ್ರೈಮಾಸಿಕದ ವರದಿಗೆ ಅನುಮೋದನೆ ನೀಡಲಾಯಿತು.

ಸಂಸ್ಕರಣಾಗಾರದ ಕಾರ್ಯಾಚರಣೆಯಿಂದ ನಿವ್ವಳ ಆದಾಯವು ಶೇ.12.5ರಷ್ಟು ಏರಿಕೆಯಾಗಿ 24,596ಕ್ಕೆ ತಲುಪಿದೆ. 2025ನೇ ಹಣಕಾಸು ವರ್ಷದಲ್ಲಿ ಪ್ರತಿ ಬ್ಯಾರೆಲ್‌ಗೆ 4.45 ಡಾಲರ್ ಒಟ್ಟು ಸಂಸ್ಕರಣಾ ಲಾಭಾಂಶ ಗಳಿಸಿದೆ. ಕಳೆದ ವರ್ಷ ಇದು ಪ್ರತಿ ಬ್ಯಾರೆಲ್ ಕಚ್ಛಾ ತೈಲಕ್ಕೆ 10.36 ಡಾಲರ್ ಕಡಿಮೆಯಾಗಿತ್ತು.

ಇದನ್ನೂ ಓದಿ: ಎಂಆರ್‌ಪಿಎಲ್‌ 2ನೇ ತ್ತೈಮಾಸಿಕ ಅವಧಿ ಫಲಿತಾಂಶ; ನಷ್ಟ ಎಷ್ಟು ಗೊತ್ತಾ ?

ಅಲ್ಲದೆ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ (ONGC) ಅಂಗಸಂಸ್ಥೆಯಾಗಿರುವ ಈ ಸಂಸ್ಥೆಯು, ನಾಲ್ಕನೇ ತ್ರೈಮಾಸಿಕದಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲವನ್ನು ಇಂಧನವಾಗಿ ಪರಿವರ್ತಿಸುವ ಮೂಲಕ 6.23 ಡಾಲರ್ ಗಳಿಸಿದೆ. ಕಳೆದ ವರ್ಷ ಪ್ರತಿ ಬ್ಯಾರಲ್‌ಗೆ 11.35 ಡಾಲರ್ ಆಗಿತ್ತು.

ಪ್ರಸಕ್ತ ವರ್ಷದಲ್ಲಿ ಹೊಸದಾಗಿ 66 ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು ಈ ಸಂಸ್ಥೆಯ ಪೆಟ್ರೋಲ್ ಪಂಪ್‌ಗಳ ಸಂಖ್ಯೆ 167ಕ್ಕೆ ತಲುಪಿದೆ.

Continue Reading

DAKSHINA KANNADA

ಮನೆಗೆ ನುಗ್ಗಿ ತಲ್ವಾರ್ ಹಿಡಿದು ಬೆ*ದರಿಕೆ ಆರೋಪ; ಹಸಂತಡ್ಕ ವಿರುದ್ಧ FIR

Published

on

ಮಂಗಳೂರು : ವಿಶ್ವ ಹಿಂದೂ ಪರಿಷತ್ ರಾಜ್ಯ ನಾಯಕ ಮುರಳಿ ಕೃಷ್ಣ ಹಸಂತಡ್ಕ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಾಗಿದೆ. ಹಿಂದೂ ಮಹಿಳೆಯೊಬ್ಬರು ಒಂಟಿಯಾಗಿದ್ದ ಸಂದರ್ಭದಲ್ಲಿ ತ*ಲ್ವಾರು ಹಿಡಿದು ಮನೆಗೆ ನುಗ್ಗಿ ಬೆ*ದರಿಕೆ ಹಾಕಿದ ವಿಚಾರವಾಗಿ ಈ ಎಫ್ ಐ ಆರ್ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಹರೀಶ್ ಎಂಬವರು ನೀಡಿದ ದೂರಿನಂತೆ ನ್ಯಾಯಾಲಯದ ಆದೇಶ ಪ್ರಕಾರವಾಗಿ ವಿಟ್ಲ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಏಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ಪ್ರವೇಶ ಮಾಡಿ ಬೆದರಿಕೆ ಹಾಕಿದ್ದೂ ಅಲ್ಲದೆ ಏಪ್ರಿಲ್ 19 ರಂದು ಕೂಡ ದಂಪತಿಗೆ ತಲ್ವಾರ್ ಹಿಡಿದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : ಹೆಬ್ರಿ : ಕಾಲು ಜಾರಿ ನದಿಗೆ ಬಿದ್ದು ಯುವಕ ಸಾ*ವು

ವ್ಯವಹಾರದ ವಿಚಾರವಾಗಿ ಈ ಪ್ರಕರಣ ನಡೆದಿದ್ದು, ಸಾರಡ್ಕ ಪೆಟ್ರೋಲ್ ಪಂಪ್ ಬಿಟ್ಟು ಕೊಡುವ ವಿಚಾರವಾಗಿ ಹಸಂತಡ್ಕ ಈ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹರೀಶ್ ಪತ್ನಿ ಶ್ರೀದೇವಿ ಹಾಗೂ ಮುರಳೀಕೃಷ್ಣ ಹಸಂತಡ್ಕ ಸಾರಡ್ಕದ ಪೆಟ್ರೋಲ್ ಪಂಪ್‌ ನಲ್ಲಿ ಪಾಲುದಾರಿಕೆ ಹೊಂದಿದ್ದು, ಪಾಲುದಾರಿಕೆ ಬಿಟ್ಟುಕೊಡುವ ವಿಚಾರವಾಗಿ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page