Connect with us

LATEST NEWS

ಮಾಲ್‌ ಒಳಗೆ ನುಗ್ಗಿ ಕಾಣೆಯಾದ ಹೆಬ್ಬಾವು: ಮಾಲ್‌ಗೆ ಜನರ ನಿಷೇಧ

Published

on

ಅಮೆರಿಕ: ಮಾಲ್‌ಗೆ ನುಗ್ಗಿದ ಹೆಬ್ಬಾವೊಂದು ತಪ್ಪಿಸಿಕೊಂಡಿದ್ದು, ಇದೀಗ ಎಲ್ಲೆಡೆ ಆತಂಕಕ್ಕೀಡು ಮಾಡಿದೆ.
ಅಮೆರಿಕದ ಲೂಸಿಯಾನಾದ ಬ್ಲೂ ಅಕ್ವೇರಿಯಂನಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದ ಹಳದಿ ಬಣ್ಣದ ಹಾವು  ಕಾಣೆಯಾಗಿದೆ. ಸದ್ಯ ಇದು ಎಲ್ಲಿಗೆ ಹೋಗಿದೆ ಎನ್ನುವುದು ತಿಳಿಯುತ್ತಿಲ್ಲ. ಇದರಿಂದ ಮಾಲ್‌ಗೆ ಜನರನ್ನು ನಿಷೇಧಿಸಲಾಗಿದೆ. ಉರಗ ತಜ್ಞರು ಇದರ ಹುಡುಕಾಟ ಮುಂದುವರೆಸಿದ್ದಾರೆ.

ಈ ಮಾಲ್‌ನಲ್ಲಿ ಕೆಲವೊಂದು ಗೋಡೆಗಳಲ್ಲಿ ಅಲಂಕಾರಕ್ಕಾಗಿ ರಂಧ್ರಗಳನ್ನು ಮಾಡಲಾಗಿದೆ. ಈ ರಂಧ್ರದೊಳಗೆ ಹೆಬ್ಬಾವು ಸೇರಿಕೊಂಡಿರುವ ಸಾಧ್ಯತೆ ಇರುವ ಕಾರಣ ಕೆಲವು ಕಡೆಗಳ ಗೋಡೆಗಳನ್ನು ಒಡೆದಿದ್ದರೂ ಹಾವು ಮಾತ್ರ ಕಾಣಿಸಿಕೊಂಡಿಲ್ಲ ನೋಡಲು ಭಯಾನಕವಾಗಿರುವ ಹೆಬ್ಬಾವು ಇದಾಗಿದೆ.

ಈ ಮಾಲ್‌ನಲ್ಲಿ 140 ಮಳಿಗೆಗಳು ಇವೆ. ಇದಾಗಲೇ ಎಲ್ಲಾ ಕಡೆಗಳಲ್ಲಿಯೂ ತಜ್ಞರು ಹುಡುಕಾಟ ನಡೆಸಿದ್ದಾರೆ. ಆದರೆ ಇದುವರೆಗೂ ಈ ಹಾವು ಪತ್ತೆಯಾಗಿಲ್ಲ.
ಇದು ಬರ್ಮೀಸ್ ಹೆಬ್ಬಾವಾಗಿದ್ದು, ಮನುಷ್ಯರ ಮೇಲೆ ಆಕ್ರಮಣ ಮಾಡುವುದು ಕಡಿಮೆ. ಸಿಸಿಟಿವಿಗಳ ಪರಿಶೀಲನೆ ನಡೆಯುತ್ತಿದೆ, ಜತೆಗೆ ಮಾಲ್‌ಗೆ ಸಂಪರ್ಕ ಇರುವ ಕೊಳವೆಗಳನ್ನು ಅಕ್ಕ-ಪಕ್ಕದಲ್ಲಿ ಇರುವ ಬೃಹತ್‌ ರಂಧ್ರಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

BELTHANGADY

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಅಗ್ನಿ ದುರಂತ; ಬೆಂಕಿಯಲ್ಲಿ ಸುಟ್ಟು ಕರಕಲಾದ ಅಂಗಡಿ

Published

on

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ನಡೆದಿದೆ.


ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ ಕೆಎಎಫ್ ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ.

ಇದನ್ನೂ ಓದಿ: ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Continue Reading

BELTHANGADY

ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Published

on

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನ ಚಿತ್ರಶೇಖರ ಎಂಬವರಿಗೆ 2013 ರಲ್ಲಿ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಬೆಳ್ತಂಗಡಿಯ ಪಾರೆಂಕಿ ಗ್ರಾಮದ 53 ವರ್ಷ ಪ್ರಾಯದ ಆಲ್ವಿನ್ ರೊಡ್ರಿಗಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಚಿತ್ರಶೇಖರ ಎಂಬವರಿಗೆ ಹಲ್ಲೆ ನಡೆಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಮ್ಮ ಕುಟುಂಬದ ಮಕ್ಕಳನ್ನ ನಾವೇ ಸರಿಯಾಗಿ ಗಮನಿಸಬೇಕು: ಲವ್ ಜಿಹಾದ್ ಕುರಿತು ಶಾಸಕ ಯತ್ನಾಳ್ ಹೇಳಿಕೆ

ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಆಲ್ವಿನ್ ರೊಡ್ರಿಗಸ್‌ನನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Continue Reading

LATEST NEWS

ನಮ್ಮ ಕುಟುಂಬದ ಮಕ್ಕಳನ್ನ ನಾವೇ ಸರಿಯಾಗಿ ಗಮನಿಸಬೇಕು: ಲವ್ ಜಿಹಾದ್ ಕುರಿತು ಶಾಸಕ ಯತ್ನಾಳ್ ಹೇಳಿಕೆ

Published

on

ಉಡುಪಿ: ಕರಾವಳಿಯಲ್ಲಿ ಹೆಚ್ಚುತ್ತಿರುವ ಲವ್‌ ಜಿಹಾದ್‌ ಬಗ್ಗೆ ಉಡುಪಿಯಲ್ಲಿ ಇಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

ಲವ್ ಜಿಹಾದ್ ಕರಾವಳಿ ಭಾಗದಲ್ಲಿ ಹೆಚ್ಚುತ್ತಿದೆ. ಮೊದಲು ಈ ಬಗ್ಗೆ ಹಿಂದುಗಳು ಜಾಗೃತರಾಗಬೇಕು. ನಮ್ಮ ಕುಟುಂಬದ ಮಕ್ಕಳನ್ನು ನಾವೇ ಸರಿಯಾಗಿ ನೋಡಿಕೊಳ್ಳಬೇಕು, ಲವ್‌ ಜಿಹಾದ್‌ನಲ್ಲಿ ದೊಡ್ಡ ಜಾಗತಿಕ ಜಾಲವೇ ಶಾಮೀಲಾಗಿದೆ ಎಂದರು.

ಬೆಂಗಳೂರಿನಲ್ಲಿ ಬ್ರಾಹ್ಮಣ ಹೆಣ್ಣುಮಗಳನ್ನು ಮದುವೆಯಾಗಿ ಮಗು ಕೊಟ್ಟು ಮತ್ತೊಂದು ಮದುವೆಯಾದ ಪ್ರಕರಣ ಇತ್ತೀಚೆಗೆ ನಡೆದಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಅಪಾಯ ಖಂಡಿತ.

ಇದನ್ನೂ ಓದಿ: ರಾಹುಲ್ ಗಾಂಧಿ ಒಬ್ಬ ಅಪ್ರಾಪ್ತ ಬುದ್ಧಿಹೀನ: ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ಈ ಸರಕಾರ ಅಂತೂ ಏನು ಮಾಡಲ್ಲ ಎಂದ ಯತ್ನಾಳ್, 18 ವರ್ಷ ಪ್ರಾಯವಾದರೆ ಕಾನೂನಾತ್ಮಕವಾಗಿ ಏನು ಮಾಡಲು ಬರಲ್ಲ. ತಂದೆ ತಾಯಿ ಒಪ್ಪಿಗೆ ಇಲ್ಲದೆ ಇಂತಹ ಮದುವೆಗಳಿಗೆ ಅವಕಾಶ ನೀಡಬಾರದು. ಕಾನೂನು ಜಾರಿ ಮಾಡುವ ಸರ್ಕಾರ ಬರಬೇಕು. ಆದರೆ ಇದು ಕಾಂಗ್ರೆಸ್ ನಿಂದ ಆಗಲ್ಲ ಎಂದು ನುಡಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page