Connect with us

LATEST NEWS

ಮಗು ಸುಂದರವಾಗಿ ಹುಟ್ಟಿದ್ದೇ ತಪ್ಪಾಯ್ತ?; ನೇಣಿಗೆ ಶರಣಾದ್ಲು ಸಾಫ್ಟ್‌ವೇರ್ ಟೆಕ್ಕಿ!

Published

on

ತೆಲಂಗಾಣ: ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಮನನೊಂದು ಸಾಫ್ಟ್‌ವೇರ್ ಟೆಕ್ಕಿ ಮಹಿಳೆಯು ಕನ್ನಡಿ ಮೇಲೆ ಕಾರಣ ಬರೆದಿಟ್ಟು ನೇಣಿಗೆ ಶರಣಾದ ಘಟನೆ ತೆಲಂಗಾಣದ ಜಗತ್ತಿಯಾಲ್‌ನಲ್ಲಿ ನಡೆದಿದೆ.

ಪ್ರಸನ್ನಲಕ್ಷ್ಮೀ (26) ಮೃತಪಟ್ಟ ಮಹಿಳೆ. ಪತಿ ಹಾಗೂ ಅತ್ತೆಯ ಕಿರುಕುಳ, ಅಲ್ಲದೇ ವರದಕ್ಷಿಣೆಯ ಕಿರುಕುಳದಿಂದಾಗಿ ಈಕೆ ಸಾವನ್ನಪ್ಪಿದ್ದಾಳೆ. 2 ವರ್ಷದ ಹಿಂದೆ ರಾಮನೂರು ಗ್ರಾಮದ ತಿರುಪತಿ ಎಂಬುವವನ ಜೊತೆ ಈಕೆಯ ಮದುವೆಯಾಗಿತ್ತು. ಮದುವೆ ಸಮಯದಲ್ಲಿ 55 ಲಕ್ಷ ವರದಕ್ಷಿಣೆ ಕೊಡಲು ಯುವತಿಯ ಮನೆಯವರು ಒಪ್ಪಿದ್ದರು. ಆದರೆ 10 ಲಕ್ಷ ಹಣ ಕೊಡಲು ಹಿಂದೇಟು ಹಾಕಿದ್ದರು. ಈ ಕಾರಣಕ್ಕಾಗಿ ಪ್ರತಿ ಬಾರೀ ಯುವತಿಗೆ ಅತ್ತೆ ಮತ್ತು ಪತಿ ಕಿರುಕುಳ ಕೊಡುತ್ತಿದ್ದನು.

ಇನ್ನು ದಂಪತಿಗಳಿಬ್ಬರೂ ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಓರ್ವ ಪುತ್ರ ಹುಟ್ಟಿದ್ದಾನೆ. ನಮ್ಮಿಬ್ಬರಿಗೆ ಜನಿಸಿದ ಪುತ್ರ ಹೇಗೆ ಇಷ್ಟು ಸುಂದರವಾಗಿ ಇರಲು ಸಾಧ್ಯ. ಎಂದು ಆಗಾಗ್ಗೆ ಯುವತಿಗೆ ನಿಂದಿಸುತ್ತಿದ್ದ. ಇದನ್ನೆಲ್ಲಾ ಅರಿತು ಮನನೊಂದ ಯುವತಿ 5 ದಿನಗಳ ಹಿಂದೆ ತನ್ನ ತವರು ಮನೆಗೆ ಬಂದು ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಲ್ಲದೇ ಯುವತಿಯು ಕನ್ನಡಿ ಮೇಲೆ ಡೆತ್‌ನೋಟ್‌ ಬರೆದಿಟ್ಟು, “ಅಪ್ಪ-ಅಮ್ಮ, ನನಗೆ ಬದುಕಲು ಇಷ್ಟವಿಲ್ಲ. ನನ್ನ ಮಗನ ಬಗ್ಗೆ ಎಚ್ಚರದಿಂದಿರಿ. ದಯವಿಟ್ಟು ಆತನಿಗೆ ಮಾತ್ರ ನನ್ನ ಮಗುವನ್ನು ಕೊಡಬೇಡಿ” ಎಂದಿದ್ದಾರೆ. ಇದರಿಂದಾಗಿ ಪ್ರಸನ್ನ ಲಕ್ಷ್ಮಿಯ ಸಂಬಂಧಿಕರು ಗುರುವಾರ ಬೆಳಗ್ಗೆ ಪ್ರತಿಭಟನೆ ನಡೆಸಿ, ಮಗಳ ಪತಿ ಮತ್ತು ಅತ್ತೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಉಪುನಿತಿ ಗಂಗಾಧರ್ ಅವರ ದೂರಿನ ಆಧಾರದ ಮೇರೆಗೆ ಯುವತಿಯ ಪತಿ, ಅತ್ತೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

FILM

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

Published

on

ಮಂಗಳೂರು/ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ, ಮೋಹಕ ತಾರೆ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ಬೇಸರ ಹಂಚಿಕೊಂಡಿದ್ದಾರೆ.

ಕರ್ನಾಟಕ ಡಿಟರ್ಜೆಂಟ್ಸ್ ಕಂಪನಿಯು ತನ್ನ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ಸಂಭಾವನೆಯನ್ನು ಗೊತ್ತುಪಡಿಸಿದೆ. ತಮನ್ನಾ, ಸಂಸ್ಥೆಯ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್‌ ಮಾಡಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ! ಸಂಭಾವನೆ ಎಷ್ಟು?

‘ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜಗತ್ತಿನ ಯಶಸ್ವಿ ಬ್ರಾಂಡ್‌ಗಳಲ್ಲಿ ಒಂದಾದ ಆ್ಯಪಲ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಹಾಗೆಯೇ, ಡವ್‍ ಸೋಪ್‍ ಪ್ರಚಾರ ಬಹಳ ಚೆನ್ನಾಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

Continue Reading

LATEST NEWS

ಹಿರಿಮಗಳಿಂದ ಮನನೊಂದು ಕೆರೆಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡ ಕುಟುಂಬಸ್ಥರು!?

Published

on

ಮಂಗಳೂರು/ಮೈಸೂರು : ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಕೆರೆಯಲ್ಲಿ ಮು*ಳುಗಿ ಮೂವರು ಸಾ*ವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ

ಮಹದೇವಸ್ವಾಮಿ, ಪತ್ನಿ ಮಂಜುಳಾ, ಕಿರಿಯ ಮಗಳು ಮೃ*ತಪಟ್ಟವರು. ಮಹದೇವಸ್ವಾಮಿಯ ಹಿರಿಯ ಮಗಳು ಪ್ರಿಯಕರನೊಂದಿಗೆ ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾಗಿರುವ ಮೂವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ ಹೆಚ್‌.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

Published

on

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸಿಸಿಟಿವಿ ವೀಡಿಯೋ ವೈರಲ್ ಆಗುತ್ತಿದೆ.

ಸಿನಿಮೀಯ ರೀತಿಯಲ್ಲಿ ಕಾರ್ ಚೇಸಿಂಗ್ : 

ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದ್ದ ಸುಹಾಸ್ ಶೆಟ್ಟಿ ಹತ್ಯೆಯ ವೀಡಿಯೋ, ಸಿಸಿ ಕ್ಯಾಮೆರಾದ ವೀಡಿಯೋ ಈಗಾಗಲೇ ವೈರಲ್ ಆಗಿವೆ. ಇದೀಗ ಮತ್ತೊಂದು ವೀಡಿಯೋ ವೈರಲ್ ಆಗಿದೆ.

ಸಿನಿಮೀಯ ರೀತಿಯಲ್ಲಿ ಕಾರ್ ಚೇಸಿಂಗ್ ಮಾಡಿ ಭೀಕರವಾಗಿ ಸುಹಾಸ್ ಶೆಟ್ಟಿ ಹ*ತ್ಯೆ ಮಾಡಲಾಗಿದೆ. ಕೊ*ಲೆ ಆರೋಪಿ ಸಫ್ವಾನ್ ಚಲಾಯಿಸುತ್ತಿದ್ದ ಮೀನು ಸಾಗಾಟದ ಪಿಕಪ್ ವಾಹನ ಕಾರನ್ನು ಚೇಸ್ ಮಾಡಿ ಡಿ*ಕ್ಕಿ ಹೊಡೆಯುವ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಮೀನು ಸಾಗಾಟದ ವಾಹನ ಓವರ್ ಟೇಕ್ ಮಾಡುತ್ತಿದ್ದಂತೆಯೇ ಅಲ್ಲಿ ಜನ ಸೇರಿದ್ದರು. ವಾಹನ ಡಿ*ಕ್ಕಿ ಹೊಡೆದು ಅಟ್ಟಾಡಿಸಿಕೊಂಡು ಹೋಗುವಾಗಲೂ ಜನರು ಮೂಕ ಪ್ರೇಕ್ಷಕರಂತೆ ನಿಂತಿದ್ದರು.

ನಾಳೆ(ಮೇ.25) ಬಜಪೆ ಚಲೋ :

ಮೇ 1 ರಂದು ಸಂಜೆ 7 ಗಂಟೆಗೆ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು ಪಕ್ಕಾ ಪ್ರೀ ಪ್ಲ್ಯಾನ್ಡ್ ಮರ್ಡರ್ ಎಂದು ಹಿಂದೂ ಸಂಘಟನೆಗಳು ಹೇಳಿದ್ದು, ಈ ಕೃ*ತ್ಯದಲ್ಲಿ ಮೂವತ್ತಕ್ಕೂ ಅಧಿಕ ಜನ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕಾಂಕ್ರೀಟ್‌ ಮಿಕ್ಸಿಂಗ್‌ ವಾಹನದಡಿಗೆ ಬಿದ್ದು ಮಹಿಳೆ ಸಾ*ವು

ಸುಹಾಸ್ ಪ್ರಕರಣವನ್ನು ಎನ್ ಐ ಎ ಗೆ ಒಪ್ಪಿಸಲು ಹಿಂದೂ ಸಂಘಟನೆಗಳ ಆಗ್ರಹಿಸುತ್ತಿದೆ. ಮತ್ತೊಂದೆಡೆ, ನಾಳೆ ಮಧ್ಯಾಹ್ನ ಮೂರು ಗಂಟೆಗೆ ಬಜಪೆ ಚಲೋ  ಹಮ್ಮಿಕೊಳ್ಳಲಾಗಿದೆ. ಬಜ್ಪೆ ಶಾರಾದ ಮಂಟಪದಲ್ಲಿ ಹಕ್ಕೊತ್ತಾಯ ಸಭೆ ನಡೆಯಲಿದ್ದು,  ಜಿಲ್ಲೆಯಾದ್ಯಂತ ಸಾವಿರಾರು ಜನ ಸೇರುವ ನಿರೀಕ್ಷೆಯಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page