Connect with us

LATEST NEWS

ಅಮ್ಮನನ್ನು ಸುತ್ತಿಗೆಯಿಂದ ಹೊಡೆದು ಕೊಂದ ಮಗ..! ಕಾರಣ ಕೇಳಿದ್ರೆ ಬೆಚ್ಚಿಬಿಳ್ತಿರಾ..!?

Published

on

ಮಂಗಳೂರು/ಛತ್ತೀಸ್‌ಗಢ: ಛತ್ತೀಸ್‌ಗಢದ ರಾಯ್‌ಪುರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, 45 ವರ್ಷದ ಮಗನೊಬ್ಬ ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊ*ಲೆ ಮಾಡಿದ್ದಾನೆ.

 

ಛತ್ತೀಸ್‌ಗಢದ ಉರ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕೊಲೆ ಮಾಡಲು ಕಾರಣ 200 ರೂ..!
ಅಷ್ಟಕ್ಕೂ, 45 ವರ್ಷದ ಪ್ರದೀಪ್ ದೇವಾಂಗನ್ ಎಂಬಾತ 800 ರೂಪಾಯಿಗೆ ನಾಯಿ ಮರಿಯೊಂದನ್ನು ಖರೀದಿಸಲು ಮುಂದಾಗಿದ್ದನು. ಆದರೆ ಆತನ ಬಳಿ ನಾಯಿ ಖರೀದಿಸಲು 200ರೂ ಕಡಿಮೆ ಇತ್ತು. ಹಾಗಾಗಿ ಉಳಿದ ಹಣಕ್ಕಾಗಿ ಪ್ರದೀಪ್​ ತಾಯಿ ಗಣೇಶಿ ಅವರ ಬಳಿ ಹಣ ಕೇಳಿದ್ದನು.

ಇದನ್ನೂ ಓದಿ: ಪಾನಿಪುರಿ ತಿಂದು 31 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಆದರೆ ಅವರು ಮಗನಿಗೆ ಹಣ ನೀಡಲು ನಿರಾಕರಿಸಿದ್ದರು. ಇದೇ ವಿಷಯಕ್ಕೆ ಜಗಳ ನಡೆದಿದ್ದು, ಆತ ತನ್ನ ತಾಯಿಯನ್ನು ಹೊಡೆದು ಕೊಂ*ದಿದ್ದಾನೆ. ಈ ವೇಳೆ ಇದನ್ನು ತಡೆಯಲು ಬಂದ ಪತ್ನಿ ರಾಮೇಶ್ವರಿ ಮೇಲೂ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ನಂತರ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ಥ ಮಹಿಳೆಯರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರ ವೇಳೆಗೆ ವೃದ್ದ ಮಹಿಳೆ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

LATEST NEWS

ಬೆಂಗಳೂರಿನಲ್ಲಿ ಕೋವಿಡ್‌ನಿಂದ ವ್ಯಕ್ತಿ ಸಾವು

Published

on

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯೂ ದ್ವಿಗುಣಗೊಳ್ಳುತ್ತಿದೆ.

ಇದೀಗ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೊರೋನಾ ಬುಲೆಟಿನ್‌ನಲ್ಲಿ ಬೆಂಗಳೂರಿನಲ್ಲಿ ಕೋವಿಡ್-19ಗೆ ಒಬ್ಬ ಬಲಿಯಾಗಿದ್ದು, ರಾಜ್ಯದಲ್ಲಿ ಇಂದು 5 ಹೊಸ ಕೇಸ್‌ಗಳು ದಾಖಲಾಗಿವೆ. ಇದರ ಬೆನ್ನಲ್ಲ ಸರ್ಕಾರ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಜನರಿಗೆ ಒತ್ತಾಯಿಸುತ್ತಿದೆ.

ಇದನ್ನೂ ಓದಿ: ಮಳೆ ತಂದ ಆವಾಂತರ; ರಸ್ತೆ ಕಾಣದೆ ಮೀನಿನ ಲಾರಿ ಪಲ್ಟಿ

ಹೌದು, ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಇಂದು ಒಂದೇ ದಿನ 5 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ ಹಾಗೂ ಬೆಂಗಳೂರಿನಲ್ಲಿ ಕೋವಿಡ್ 19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಸದ್ಯ ರಾಜ್ಯದಲ್ಲಿ ಒಟ್ಟು 38 ಸಕ್ರೀಯ ಪ್ರಕರಣಳಿದ್ದು, ಇದರಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 32 ಕೇಸ್‌ಗಳು ದಾಖಲಾಗಿವೆ.

Continue Reading

DAKSHINA KANNADA

ಪ್ರಚೋದನಕಾರಿ ಪೋಸ್ಟ್: 4 ಇನ್ಸ್ಟಾಗ್ರಾಂ, 1 ಪೇಸ್ಬುಕ್ ಪೇಜ್ ರದ್ದು

Published

on

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 4 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜ್‌ಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಈ ಪೇಜ್‌ಗಳನ್ನು ಡಿಆ್ಯಕ್ಟಿವೇಟ್ ಮಾಡಲಾಗಿದೆ.

“ವಿಎಚ್‌ಪಿ ಬಜರಂಗದಳ ಅಶೋಕನಗರ’ ಮತ್ತು “ಶಂಖನಾದ’ ಇನ್‌ ಸ್ಟಾಗ್ರಾಂ ಪೇಜ್ ವಿರುದ್ಧ ಉರ್ವ ಪೊಲೀಸ್ ಠಾಣೆ, “ಡಿಜೆ ಭರತ್ 2008” ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ, “ಕರಾವಳಿ ಅಫೀಶಿಯಲ್ ಇನ್‌ಸ್ಟಾಗ್ರಾಂ ಪೇಜ್” ವಿರುದ್ಧ ಪಾಂಡೇಶ್ವರ ಠಾಣೆ ಮತ್ತು “ಆಶಿಕ್ ಮೈಕಾಲ’ ಫೇಸ್‌ಬುಕ್ ಪೇಜ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

ಈ ಪ್ರಕರಣಗಳ ತನಿಖೆಯನ್ನು ಸೆನ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 6 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜನ್ನು ರದ್ದುಗೊಳಿಸಲಾಗಿದೆ.

Continue Reading

LATEST NEWS

ಮಳೆ ತಂದ ಆವಾಂತರ; ರಸ್ತೆ ಕಾಣದೆ ಮೀನಿನ ಲಾರಿ ಪಲ್ಟಿ

Published

on

ಹಾಸನ: ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ರಾಟೆ ಮನೆ ಬಳಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮೀನುಗಳನ್ನು ಸಾಗಿಸುತ್ತಿದ್ದ KA-02-AB-479 ನಂಬರ್‌ನ ಲಾರಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಗಿದೆ.

ಇದನ್ನೂ ಓದಿ: ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

ಇದರಿಂದಾಗಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page