Connect with us

DAKSHINA KANNADA

ಮಂಗಳೂರು: ಫೆಬ್ರವರಿ 6ರಂದು ಸೂರ್ಯನಮಸ್ಕಾರ ಯಜ್ಞ

Published

on

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಮಂಗಳ ಸ್ಟೇಡಿಯಂನಲ್ಲಿ ಫೆಬ್ರವರಿ 6ರಂದು ಬೆಳಿಗ್ಗೆ ಸೂರ್ಯನಮಸ್ಕಾರ ಯಜ್ಞ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಯಜ್ಞದ ಪೂರ್ವ ಭಾವಿಯಾಗಿ ಶಿಕ್ಷಕರು ಹಾಗೂ ಶಿಭಿರಾರ್ಥಿಗಳು ಅಭ್ಯಾಸ ವರ್ಗ ನಡೆಸಿದರು.

ಅಭ್ಯಾಸ ವರ್ಗದ ಸಂದರ್ಭದಲ್ಲಿ ಸೂರ್ಯನಮಸ್ಕಾರ ಮಾರ್ಗದರ್ಶಕ ಡಾ. ಜ್ಞಾನೇಶ್ವರ್ ನಾಯಕ್, ಏಕನಾಥ್ ಬಾಳಿಗ, ಡಾ. ಎಂ. ಜಗದೀಶ್ ಶೆಟ್ಟಿ, ಭೋಜರಾಜ್, ಸುಜಾತ ಮಾರ್ಲಾ, ಯೋಗೀಶ್ ಶೆಟ್ಟಿ, ನರಸಿಂಹ ಹೆಗ್ಡೆ ಉಪಸ್ಥಿತರಿದ್ದರು.

DAKSHINA KANNADA

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಮೇಲೆ ಜೈಲಲ್ಲೇ ಹಲ್ಲೆ

Published

on

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇತರ ಕೈದಿಗಳು ದಾಳಿ ಮಾಡಿದ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಸೋಮವಾರ ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಏಕಾಏಕಿ ಕಲ್ಲು ಹಾಗೂ ಮಾರಕಾಯುಧಗಳಿಂದ ದಾಳಿ ಮಾಡಲಾಗಿದ್ದು, ಇದರಿಂದ ನೌಷಾದ್‌ಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಚೊಟ್ಟೆ ನೌಷಾದ್ ಹಿನ್ನಲೆ ನೋಡೋದಾದ್ರೆ ಆರೋಪಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್, ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಇತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಪ್ರತಿಕ್ರಿಯೆ:

ಇನ್ನು ನಗರದ ಜೈಲಿನಲ್ಲಿ ಚೊಟ್ಟೆ ನೌಷಾದ್ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂದಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕ್ವಾರಂಟೈನ್ ಸೆಲ್ ವಿಭಾಗದ ವಿಚಾರಣಾ ಬಂದಿಗಳು ಜೈಲಿನ‌ ಕಚೇರಿ ಮುಂಭಾಗ ನಿಂತು, ಬಿ ಬ್ಯಾರಕ್ ಖೈದಿಗಳನ್ನು ಗೂರಾಯಿಸಿದ್ದರು. ಈ ಕಾರಣಕ್ಕಾಗಿ ಪರಸ್ಪರ ಅವ್ಯಾಚ ಶಬ್ದಗಳೊಂದಿಗೆ ಬೈದಾಡಿಕೊಂಡು ಕೂಗಾಡಿದ್ದರು.

ಇದನ್ನೂ ಓದಿ: ಮನೆ ಮುಂದೆ ಕಟ್ಟಿದ್ದ 3 ಹಸುಗಳ ಕಳ್ಳತನ

ಸಿಮೆಂಟ್ ಬ್ಲಾಕ್‌ನ್ನು ಒಡೆದು ಅದರ ತುಂಡುಗಳನ್ನು ಎಸೆದಿದ್ದರು. ಬಿ‌ ಬ್ಯಾರಕ್‌ನ ಖೈದಿಗಳು ಮಧ್ಯ ದ್ವಾರದ ಗೇಟ್‌ನ್ನು ದೂಡಿ ಹೊರಬಂದು ಕಛೇರಿಯ ಡೋರಿನ ಗ್ಲಾಸ್‌ನ್ನು ಕೈನಿಂದ ಹೊಡೆದು ಹಾನಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ವಿಚಾರಣಾ ಸಿಬಂದಿ ಒಬ್ಬನಿಗೆ ಕಾಲಿಗೆ ರಕ್ತ ಗಾಯವಾಗಿದೆ. ಮಂಗಳೂರಿನ ಕಾರಾಗೃಹದ ಅಧೀಕ್ಷಕರು, ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Continue Reading

DAKSHINA KANNADA

ಪವಿತ್ರ ಹಜ್ ಯಾತ್ರೆ ಕೈಗೊಂಡ ಸ್ಪೀಕರ್‌ ಯು.ಟಿ. ಖಾದರ್‌

Published

on

ಮಂಗಳೂರು: ಸ್ಪೀಕರ್ ಯು.ಟಿ.ಖಾದರ್ ಅವರು ಈ ವರ್ಷದ ಪವಿತ್ರ ಹಜ್ ಯಾತ್ರೆಯನ್ನು ಕೈಗೊಂಡಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ಮಂಗಳೂರಿನ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.

ಬಳಿಕ ಮಾತನಾಡಿದ ಯು.ಟಿ.ಖಾದರ್‌ ಅವರು ‘ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ಹಜ್ ಯಾತ್ರೆ ಪವಿತ್ರವಾದುದು. ಅದು ಎಲ್ಲರಿಗೂ ದಕ್ಕುವಂತದ್ದಲ್ಲ. ಹಣವಿದ್ದೂ ಹಜ್ ಯಾತ್ರೆ ಮಾಡಲಾಗದವರು ಇದ್ದಾರೆ. ಹಣವಿಲ್ಲದವರಿಗೂ ಈ ಸೌಭಾಗ್ಯ ಲಭಿಸುತ್ತದೆ. ನಾನು ಹಜ್ ಯಾತ್ರೆ ಮಾಡಲು ಯಾವುದೇ ಪೂರ್ವಸಿದ್ಧತೆ ಮಾಡಿದವನಲ್ಲ. ಅನಿರೀಕ್ಷಿತವಾಗಿ ನನಗೆ ಮತ್ತು ನನ್ನ ಸಹೋದರ ಇಫ್ತಿಕಾರ್ ಹಾಗೂ ಕುಟುಂಬದ ಸದಸ್ಯರಿಗೆ ಈ ಅವಕಾಶ ಲಭಿಸಿದೆ. ನಮ್ಮ ನಾಡು, ಸಮಾಜದ ಮತ್ತು ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ’ ಎಂದು ಹೇಳಿದರು.

ಇದೇ ವೇಳೆ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್‌ಕೇರ್ ಕರ್ನಾಟಕ ಇದರ ರಾಜ್ಯ ಅಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡಾ ಬೀಳ್ಕೊಡಲಾಯಿತು. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೇನೆಪೊಯ ವಿಶ್ವ ವಿದ್ಯಾಲಯದ ಕುಲಾಧಿಪತಿ ಡಾ.ವೈ.ಅಬ್ದುಲ್ಲಾ ಕುಂಞಿ, ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ದ.ಕ.ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಶುಭ ಹಾರೈಸಿದರು. ವೇದಿಕೆಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್ ಮತ್ತಿತರರು ಉಪಸ್ಥಿತರಿದ್ದರು.

 

Continue Reading

DAKSHINA KANNADA

ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

Published

on

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.

ಹವಾಮಾನ ಇಲಾಖೆಯು ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ರಾತ್ರಿ ವೇಳೆಯೇ ಕೆಲವು ಕಡೆ ಮಳೆಯಾಗಿದ್ದು, ಇಂದು ಮುಜಾನೆಯಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ.

ಗಾಳಿ ಮಳೆಯಿಂದಾಗಿ ಕೆಲವು ಕಡೆ ಆಸ್ತಿ ಪಾಸ್ತಿಗೆ ಹಾನಿಯಾಗಿದೆ. ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ಸಿಸಿಲಿಯಾ ಪಿಂಟೊ ಎಂಬುವವರ ಮನೆ ಕುಸಿದು ಬಿದ್ದ ಘಟನೆ ಸಂಭವಿಸಿದ್ದು, ಯಾವುದೇ ಜಿವ ಹಾನಿಯಾಗಿಲ್ಲ.

ಕೆಲವು ಕಡೆ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಸಮಸ್ಯೆ ಉಂಟಾದ ಘಟನೆಯೂ ಸಂಭವಿಸಿದೆ. ಉಡುಪಿ, ಕಾರ್ಕಳ, ಕುಂದಾಪುರ, ಕಾಪು,ಪಡುಬಿದ್ರಿ ಸಹಿತ ಕರಾವಳಿಯ ಎಲ್ಲಾ ತಾಲೂಕುಗಳಲ್ಲಿ ಧಾರಾಕಾರ ಮಳೆ ಬಂದಿದೆ.

ಇದನ್ನೂ ಓದಿ: ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವತಿಯರ ಸಾ*ವು

ಕಾರ್ಮೋಡ ಮುಸುಕಿದ ವಾತಾವರಣವಿದ್ದು ದಿನಪೂರ್ತಿ ಮಳೆ ಬರುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page