Connect with us

LATEST NEWS

ಬಾಹ್ಯಾಕಾಶ ತಲುಪಿದ ಸ್ಪೇಸ್X Crew-10; ಮಾರ್ಚ್ 20ಕ್ಕೆ ಭೂಮಿಗೆ ಬರಲಿರುವ ಸುನಿತಾ ವಿಲಿಯಮ್ಸ್ !

Published

on

ಮಂಗಳೂರು/ವಾಷಿಂಗ್ಟನ್: ಅಮೆರಿಕದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಅವರ ಸಹವರ್ತಿ ಬುಚ್ ವಿಲ್ಮೋರ್ ಅವರನ್ನು ಭೂಮಿಗೆ ಕರೆತರುವ ಯೋಜನೆಗೆ ಕೊನೆಗೂ ಮೊದಲ ಯಶಸ್ಸು ಸಿಕ್ಕಿದೆ. ಇಂದು ಬೆಳಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ಯಶಸ್ವಿಯಾಗಿ ತಲುಪಿದೆ.

ಬೋಯಿಂಗ್‌ನ ಸ್ಟಾರ್‌ಲೈನರ್ ಸಮಸ್ಯೆಗಳಿಂದಾಗಿ ಒಂಬತ್ತು ತಿಂಗಳಿನಿಂದ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆತರಲು ನಾಸಾ ಮತ್ತು ಸ್ಪೇಸ್‌ಎಕ್ಸ್ ಶುಕ್ರವಾರ ಸಂಜೆ 7:03 ಕ್ಕೆ EDT (ಶನಿವಾರ ಬೆಳಿಗ್ಗೆ 4:30 ಕ್ಕೆ IST) ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಕ್ರೂ-10 ಮಿಷನ್ ಅನ್ನು ಪ್ರಾರಂಭಿಸಿತ್ತು.

ಆ ಮಿಷನ್ ಇಂದು ಬೆಳಿಗ್ಗೆ ಭಾರತೀಯ ಕಾಲಮಾನ 9.40ಕ್ಕೆ NASA-SpaceXನಲ್ಲಿ ಪ್ರಯಾಣಿಸಿದ ಕ್ರ್ಯೂ 10 ಸದಸ್ಯರು ಅಂತಾರಾಷ್ಟ್ರೀಯ ಬಾಹ್ಯಾಕಾಶವನ್ನು ತಲುಪಿದ್ದಾರೆ. ಸ್ಪೇಸ್ ಎಕ್ಸ್‌ನ ಡ್ರ್ಯಾಗನ್ ಸ್ಪೇಸ್ ಕ್ರ್ಯಾಫ್ಟ್ ISSಗೆ ತಲುಪಿದ್ದು, ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ ಮೋರ್ ಸಂಭ್ರಮದಿಂದ ಸ್ವಾಗತ ಮಾಡಿದ್ದಾರೆ.

ಇದನ್ನೂ ಓದಿ: ಕೊನೆಗೂ ಭೂಮಿಗೆ ಮರಳಲಿದ್ದಾರೆ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್

NASA-SpaceX Crew-10 ಮಿಷನ್‌ನಲ್ಲಿ ಒಟ್ಟು 4 ಗಗನಯಾತ್ರಿಗಳು ಭಾಗಿಯಾಗಿದ್ದಾರೆ. ನಾಸಾದಿಂದ ಆ್ಯನೆ ಮೆಕ್ಲೇನ್, ನಿಕೋಲ್ ಆಯರ್ಸ್, ಜಪಾನ್‌ನ ತಕುಯಾ ಓನಿಷಿ ಮತ್ತು ರಷ್ಯಾದ ಕಿರಿಲ್ ಟೆಸ್ಕಾವ್ ISS ನಿಲ್ದಾಣವನ್ನು ತಲುಪಿದ್ದಾರೆ.

ಇನ್ನು ಮಾರ್ಚ್ 20ಕ್ಕೆ ಬಾಹಾಕ್ಯಾಶ ನಿಲ್ದಾಣದಿಂದ ಕ್ರ್ಯೂ 9ನ ನಾಲ್ವರು ಸದಸ್ಯರು ವಾಪಸ್ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ನಾಸಾದ ನಿಕ್ ಹೇಗ್, ಸುನಿತಾ ವಿಲಿಯಮ್ಸ್, ಬುಚ್‌ ವಿಲ್ ಮೋರ್ ಮತ್ತು ಗಾರ್ಬನೋ ವಾಪಸ್ ಬರಲಿದ್ದಾರೆ.

LATEST NEWS

ಯುದ್ಧದ ಬಗ್ಗೆ ಪ್ರಧಾನಿ, ರಕ್ಷಣಾ ಸಚಿವರು ನಿರ್ಧಾರ ಮಾಡುತ್ತಾರೆ : ಪುತ್ತಿಗೆ ಶ್ರೀ

Published

on

ಉಡುಪಿ : ಭಾರತ ಹಾಗೂ ಪಾಕ್ ನಡೆವೆ ಈಗಾಗಲೇ ಉದ್ವಿಗ್ನತೆ ಉಂಟಾಗಿದ್ದು ಭವಿಷ್ಯ ಹೇಳುವುದು ಕಠಿಣ. ಈ ಕುರಿತು ಮಾತನಾಡಿದ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ “ಯುದ್ಧ ಬೇಕೋ ಬೇಡವೋ ಎನ್ನುವುದು ಪ್ರಧಾನಿ ಮತ್ತು ರಕ್ಷಣಾ ಸಚಿವರು ತೆಗೆದುಕೊಳ್ಳಬೇಕಾದ ನಿರ್ಧಾರ” ಎಂದು ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಪುತ್ತಿಗೆ ಶ್ರೀಗಳು “ಕಾಶ್ಮೀರ ಘಟನೆಗೆ ಹಿನ್ನೆಲೆ ಮತ್ತು ಕಾರಣವೇನೇಂದು ನಮಗೆ ಗೊತ್ತಿಲ್ಲ. ಕಾಶ್ಮೀರ ದಲ್ಲಿ ಭದ್ರತೆಯನ್ನು ಹೆಚ್ಚಿಸ ಬೇಕು. ಭದ್ರತೆಗೆ ಪ್ರಥಮ ಪ್ರಾಶಸ್ತ್ಯ ನೀಡ ಬೇಕು. ಶಾಂತಿಯಿಂದ ಸಮಸ್ಯೆ ಪರಿಹಾರ ಆಗುವುದು ಎಷ್ಟು ಮುಖ್ಯವೋ ಶಾಶ್ವತ ಪರಿಹಾರ ಸಿಗುವುದು ಕೂಡ ಅಷ್ಟೇ ಮುಖ್ಯ ಶಾಂತಿ, ಶಾಂತಿ ಎಂದು ಹೇಳಿ ನಾವೇ ಯಾವಾಗಲೂ ಸಂಕಷ್ಟಕ್ಕೀಡಾಗುತ್ತಿದ್ದರೆ ಅರ್ಥವಿಲ್ಲ. ಶಾಶ್ವತ ಪರಿಹಾರವೇ ಮುಖ್ಯ” ಎಂದರು.

ಪೆಹಲ್ಗಾಂವ್  ಘಟನೆಯಿಂದ ನನಗೆ ಆಶ್ಚರ್ಯವಾಗಿದೆ. ಈವರೆಗೆ ಧರ್ಮವನ್ನು ನೋಡಿ ಭಯೋತ್ಪಾದನೆ ನಡೆಯುತ್ತಿರಲಿಲ್ಲ. ಮಾರ್ಕೆಟ್ ನಲ್ಲಿ , ಬಸ್ ಸ್ಟ್ಯಾಂಡ್ ನಲ್ಲಿ ಎಲ್ಲೆಂದರಲ್ಲಿ  ಬಾಂಬ್ ಹಾಕುತ್ತಿದ್ದರು. ಅದನ್ನು ಮಾನಸಿಕ ದೌರ್ಬಲ್ಯ ಎಂದು ಭಾವಿಸ ಬಹುದಿತ್ತು. ಈಗ ಧರ್ಮವನ್ನು ಕೇಳಿ ಹೊಡೆಯುತ್ತಿದ್ದಾರೆ. ಹಿಂದೂ ಸಮಾಜ ಜಾಗೃತವಾಗ ಬೇಕು, ಒಗ್ಗಟ್ಟಾಗ ಬೇಕು. ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು, ಭಯೋತ್ಪಾದಕರಿಗೆ ಕಠಿನ ಶಿಕ್ಷೆಯಾಗ ಬೇಕು. ತಾತ್ಕಾಲಿಕ ಪರಿಹಾರಗಳಿಂದ ಸಮಸ್ಯೆ ಬಗೆಹರಿಯಲ್ಲ. ಶಾಶ್ವತ ಪರಿಹಾರ ಏನು ಅನ್ನೋದನ್ನ ಪ್ರಧಾನ ಮಂತ್ರಿಗಳು ಮತ್ತು ಸಚಿವ ಸಂಪುಟ ನಿರ್ಧಾರ ಮಾಡ ಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಉಡುಪಿ : ಹುಲಿ ವೇಷದಾರಿ ಹೃದಯಾಘಾತಕ್ಕೆ ಬಲಿ

Published

on

ಉಡುಪಿ : ನವರಾತ್ರಿ ಸಮಯ ಹುಲಿ ವೇಷ ಹಾಕಿ ಮನರಂಜನೆ ನೀಡುತ್ತಿದ್ದ ಯುವ ಹುಲಿ ವೇಷದಾರಿ ಅಜ್ಜರಕಾಡು ನಿವಾಸಿ ಅನಿಲ್ ಕುಮಾರ್(31) ಇಂದು ಬೆಳಿಗ್ಗೆ (ಏ.28) ಹೃದಯಘಾತದಿಂದ ವಿಧಿವಶರಾಗಿದ್ದಾರೆ.

ಅನಿಲ್ ಕುಮಾರ್ ಕಾಡಬೆಟ್ಟು ಅಶೋಕ್ ರಾಜ್ ಅವರ ತಂದಡಲ್ಲಿ ಹುಲಿ ಕುಣಿತದಲ್ಲಿ ಕಲಾವಿದರಾಗಿ ಗುರುತಿಸಿ ಕೊಂಡಿದ್ದರು. ಜೊತೆಗೆ  ಪೈಂಟಿಂಗ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ : ರೈಲ್ವೇ ಇಲಾಖೆ ಪರೀಕ್ಷೆಯಲ್ಲೂ ಎಡವಟ್ಟು; ಜನಿವಾರದ ಜೊತೆ ತಾಳಿಗೂ ಕಂಟಕ

ಈ ಘಟನೆ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ರೈಲ್ವೇ ಇಲಾಖೆ ಪರೀಕ್ಷೆಯಲ್ಲೂ ಎಡವಟ್ಟು; ಜನಿವಾರದ ಜೊತೆ ತಾಳಿಗೂ ಕಂಟಕ

Published

on

ಮಂಗಳೂರು : ಇತ್ತಿಚೆಗೆ ಸಿಇಟಿ ಪರೀಕ್ಷೆಯ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಬ್ರಾಹ್ಮಣ ಸಮೂದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹಿಂದೂ ಸಂಘಟನೆಗಳೂ ಕೂಡ ಪರೀಕ್ಷಾರ್ಥಿಗಳಿಗೆ ಜನಿವಾರ ತೆಗೆಸಿದ ವಿಚಾರವಾಗಿ ಪ್ರತಿಭಟನೆ ನಡೆಸಿತ್ತು. ಇದೀಗ ರೈಲ್ವೇ ಇಲಾಖೆ ಕೂಡಾ ಇಂತಹದೇ ಒಂದು ಯಡವಟ್ಟು ಮಾಡಿದೆ. ಅದೇನು ಗೊತ್ತಾ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಜನಿವಾರ ಪ್ರಕರಣ ತೀವ್ರ ಸುದ್ಧಿಯಾಗುತ್ತಿರುವ ಬೆನ್ನಲ್ಲೇ ಇದೀಗ ಪರೀಕ್ಷೆ ಬರೆಯಲು ಜನಿವಾರ ಮತ್ತು ಮಂಗಳ ಸೂತ್ರ ತೆಗೆದು ಬರುವಂತೆ ಸೂಚಿಸಿದೆ. ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಏಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು, ಹಾಲ್ ಟಿಕೇಟ್ ನಲ್ಲೇ ಈ ಸೂಚನೆಯನ್ನು ನೀಡಿದೆ.

ಮಂಗಳೂರು ನಗರದ ಬೋಂದೇಲ್‌ ಸಮೀಪದ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲಿದ್ದು, ಹಾಲ್ ಟಿಕೇಟ್ ನಲ್ಲಿ ನಮೂದಿಸಿದ ವಿಚಾರ ಧಾರ್ಮಿಕ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ವಿಚಾವಾಗಿದೆ. ಹೀಗಾಗಿ ಈ ಸೂಚನೆಯನ್ನು ರದ್ದು ಪಡಿಸುವಂತೆ ರೈಲ್ವೇ ಇಲಾಖೆಗೆ ಸೂಚಿಸಬೇಕು ಎಂದು ಹಿಂದೂ ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page