Connect with us

ಕೊರೊನಾ ಮಾರಿ ನಿಗ್ರಹಕ್ಕಾಗಿ ಗೆಜ್ಜೆಗಿರಿಯ ಮಾತೆ ದೇಯಿ ಬೈದ್ಯೆತಿಗೆ ಮೊರೆ..!?

Published

on

ಕೊರೊನಾ ಮಾರಿ ನಿಗ್ರಹಕ್ಕಾಗಿ ಗೆಜ್ಜೆಗಿರಿಯ ಮಾತೆ ದೇಯಿ ಬೈದ್ಯೆತಿಗೆ ಮೊರೆ..!?

ಪುತ್ತೂರು : ಇಡೀ ಜಗತ್ತನ್ನೇ ಕಾಡುತ್ತಿರುವ ಎಲ್ಲೆಡೆ ಮರಣ ಮೃದಂಗ  ಬಾರಿಸುತ್ತಿರುವ ಮಾಹಾ ಮಾರಿ ಕೊರೋನಾ ವೈರಸ್ ಸೋಂಕು ನಾಗರಿಕ ಸಮಾಜವನ್ನೇ ದಂಗುಬಡಿಸಿದೆ.

ಔಷಧವೇ ಇಲ್ಲದ ಈ ಭಯಾನಕ ರೋಗ ನಿವಾರಣೆಗೆ ಮನುಷ್ಯ ಪ್ರಯತ್ನಗಳು  ಸತತ ನಡೆಯುತ್ತಲೇ ಇವೆ. ಆದರೆ ಫಲ ಶೂನ್ಯವಾಗಿರುವ ಕಾರಣ ಅಂತಿಮವಾಗಿ ದೇವರ ಮೇಲೆ ಭಾರ ಹಾಕುವುದೊಂದೇ ಉಳಿದಿರುವ ಏಕೈಕ ಮಾರ್ಗವಾಗಿದೆ.

ಈ ಹಿನ್ನೆಲೆಯಲ್ಲಿ (ನಾಳೆ )ಮಾಚ್೯ 16 ರಂದು ಸೋಮವಾರ ಮಾತೆ ದೇಯಿ ಬೈದ್ಯೆತಿ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಅಪೂರ್ವ ಶತೌಷಧಿ ದ್ರವ್ಯ  ಕಳಶಾಭಿಷೇಕ ಮಹಾಮಾತೆಗೆ ಕ್ಷೇತ್ರದ ತಂತ್ರಿಗಳಾದ ಶ್ರಿ ಲೋಕೇಶ್ ಶಾಂತಿ ಅವರ ನೇತೃತ್ವದಲ್ಲಿ ನಡೆಯಲಿದೆ.

ಮುಂಜಾನೆಯಿಂದಲೇ ಈ ಅಪೂರ್ವ ಕಲಶಾಭಿಷೇಕ ಆರಂಭಗೊಳ್ಳಲಿದೆ. ನೂರು ಬಗೆಯ ಔಷಧೀಯ ಗಿಡಮೂಲಿಕೆಗಳ ದ್ರವ್ಯಗಳನ್ನು ಓಷಧಿ ಸೂಕ್ತದಿಂದ ಅಭಿಮಂತ್ರಿಸಿ, ಪವಮಾನ ಹೋಮ, ಧನ್ವಂತರಿ ಹೋಮ ಸಹಿತವಾಗಿ ಕಲಶಾಭಿಷೇಕ ನಡೆಯಲಿದೆ.

ಪ್ರಸನ್ನ ಕಾಲದಲ್ಲಿ ಮಾತೆಯ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಲೋಕ ಕಲ್ಯಾಣಾರ್ಥವಾಗಿ ನಡೆಯುವ ಈ ಅಪೂರ್ವ ಶತೌಷಧಿ ದ್ರವ್ಯ ಕಲಶಾಭಿಷೇಕದ ಫಲವಾಗಿ ಮಾತೆಯ ಪೂರ್ಣ ಅನುಗ್ರಹ ಲೋಕಕ್ಜೆ ಸಿಗಲಿ, ಜಗತ್ತು ಕೊರೋನಾ ಮುಕ್ತವಾಗಲಿ‌ ಎಂದು ಪ್ರಾರ್ಥನೆ.

ಲಕ್ಷಾಂತರ ಜನರ ಕಾಯಿಲೆ, ಕೋಟಲೆಗಳನ್ನು ದೂರ ಮಾಡಿರುವ ಮಹಾ ಮಾತೆ ದೇಯಿ ಬೈದ್ಯೆತಿ ಈ ಕೊರೊನಾ ಮಾರಿಯನ್ನು ದೂರ ಮಾಡಲೆಂಬುದೇ ಭಕ್ತ ಕುಲಕೋಟಿಯ ಆಶಯವಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page