Connect with us

LATEST NEWS

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಶ್ರೀರಾಂಸೇನೆ ಅಡ್ಡಿ:ಸರ್ಕಾರದ ವಿರುದ್ದ ಗುಡುಗಿದ ಮುತಾಲಿಕ್ ಅರೆಸ್ಟ್..!

Published

on

ಟಿಪ್ಪು ಜಯಂತಿ ವಿರೋಧಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತೇನೆ, ಕನಕ ಜಯಂತಿ ಆಚರಣೆಗೆ ಅವಕಾಶ ನೀಡುವಂತೆ ಕೋರುತ್ತೇನೆ ಎಂದು ಪ್ರಮೋದ್ ಮುತಾಲಿಕ್ (pramod muthalik) ಗುಡುಗಿದ್ದಾರೆ.

ಹುಬ್ಬಳ್ಳಿ :  ಬಹಳ ದಿನಗಳಿಂದ ತಣ್ಣಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ ಈಗ ಮತ್ತೆ ಸಂಚಲನ ಮೂಡಿಸಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಯಂತೆ ಟಿಪ್ಪು ಜಯಂತಿ ಆಚರಣೆ ನಡೆಸಲು ಅವಕಾಶ ನೀಡಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಪಾಲಿಕೆ ಅವಕಾಶ ನೀಡಿರುವುದನ್ನು ಖಂಡಿಸಿ ಶ್ರೀರಾಮ್ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (pramod muthalik) ಪ್ರತಿಭಟನೆ ನಡೆಸಲು ಮುಂದಾಗಿದ್ದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಪ್ರತಿಭಟನೆ ನಡೆಸಿದ್ದು ಚೆನ್ನಮ್ಮ ವೃತ್ತದ ಬಳಿ ಪ್ರಮೋದ್​ ಮುತಾಲಿಕ್ (pramod muthalik)  ಸೇರಿದಂತೆ ಹಲವು ಕಾರ್ಯಕರ್ತರು ಆಗಮಿಸಿದರು.

ಆದರೆ ಪೊಲೀಸರು ಅವರನ್ನು ಸುತ್ತುವರೆದು ಮುಂದಕ್ಕೆ ಹೋಗಲು ಬಿಡದೆ ವಶಕ್ಕೆ ಪಡೆದರು. ಈ ಸಂದರ್ಭ ಮುತಾಲಿಕ್ ಬಿಜೆಪಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

ಪಾಲಿಕೆ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೊಟ್ಟಿದ್ದು ತಪ್ಪು. ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಟಿಪ್ಪು ಜಯಂತಿ ರದ್ದು ಮಾಡಿ ಈಗ ಅವರೇ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೊಟ್ಟಿದ್ದಾರೆ.

ಚುನಾವಣೆಗೋಸ್ಕರ ಅಲ್ಪಸಂಖ್ಯಾತರನ್ನು ಓಲೈಸಲು ಈ ರೀತಿ ಬಿಜೆಪಿಯವರು ಕೆಳಮಟ್ಟದ ರಾಜಕೀಯ ಮಾಡುತ್ತಿದ್ದಾರೆ.

ಬೇರೆ ಮಹಾಪುರುಷರ ಜೊತೆ ಟಿಪ್ಪು ಹೋಲಿಕೆ ಸರಿಯಲ್ಲ. ಟಿಪ್ಪು ಒಬ್ಬ ಮತಾಂಧ, ದೇಶದ್ರೋಹಿ. ಟಿಪ್ಪು ಜಯಂತಿ ವಿರೋಧಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತೇನೆ, ಕನಕ ಜಯಂತಿ ಆಚರಣೆಗೆ ಅವಕಾಶ ನೀಡುವಂತೆ ಕೋರುತ್ತೇನೆ ಎಂದು ಮುತಾಲಿಕ್ ಗುಡುಗಿದ್ದಾರೆ.

DAKSHINA KANNADA

ಯುವಕನ ಬರ್ಬರ ಹತ್ಯೆ ಬಗ್ಗೆ ಅಪಪ್ರಚಾರ ಸಲ್ಲದು : ಅನುಪಮ್ ಅಗರ್ವಾಲ್

Published

on

ಮಂಗಳೂರು : ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆಯು ಮಂಗಳೂರು ಹೊರವಲಯದ ಕುಡುಪು ಸಮೀಪ ನಿನ್ನೆ (ಏ.27) ಸಂಜೆ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಯಾವುದೇ ರೀತಿಯಿಂದನೂ ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸುಮಾರು 35 ರಿಂದ 40 ವರ್ಷ ಪ್ರಾಯದ ಹೊರ ರಾಜ್ಯದ ಈ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಅಪರಿಚಿತ ಯುವಕನೊಬ್ಬ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತಪಟ್ಟ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ಸಾಗಿಸಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ತಿಳಿಯಬಹುದಾಗಿದೆ. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಒಬ್ಬರಿಗೊಬ್ಬರು ತಾಳಿಕಟ್ಟಿಕೊಂಡ ಯುವತಿಯರು; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಸ್ನೇಹಿತೆಯರ ಮದುವೆ ವೀಡಿಯೋ

Published

on

ಯವತಿಯರಿಬ್ಬರು ಒಬ್ಬರಿಗೊಬ್ಬರು ತಾಳಿ ಕಟ್ಟಿ ಹಾರ ಬದಲಾಯಿಸಿ ಹಸೆಮಣೆ ಏರಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಕ್ಷಿಣ ಭಾರತದ ಕೇರಳ ಅಥವಾ ತಮಿಳುನಾಡಿನಲ್ಲಿ ಈ ಮದುವೆ ನಡೆದಿರುವುದಾಗಿ ವಿಡಿಯೋ ವೀಕ್ಷಿಸಿದ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಬ್ಬರು ಯುವತಿಯರು ಮದುವೆ ಮಂಟಪದಲ್ಲಿ ತಾಳಿಯನ್ನು ಪ್ರದರ್ಶಿಸಿ ಒಬ್ಬರಿಗೊಬ್ಬರು ತಾಳಿ ಕಟ್ಟಿಕೊಂಡು ಪ್ರತಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಹಾರ ಬದಲಾಯಿಸಿಕೊಂಡು ಮದುವೆಯಾಗಿದ್ದಾರೆ.

ಇದು ನಿಜ ಮದುವೆಯಾ ಅಥವಾ ರೀಲ್ಸ್ ಗಾಗಿ ಮಾಡಿರೋದಾ ಎಂದು ಜನರು ಪ್ರಶ್ನೆ ಮಾಡಿದ್ದಾರೆ. ಕೆಲವರು ಈ ವಿಡಿಯೋಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದು, ನಮ್ಮ ದೇಶದ ಸಂಸ್ಕೃತಿಯನ್ನು ಹಾಳು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಐವರು ಮಡದಿಯರ ಮುದ್ದಿನ ಗಂಡ.. ಇಂದು 11 ಮಕ್ಕಳ ತಂದೆ..! ಈತನ ಐದು ಮದುವೆಗೆ ಕಾರಣ ಏನು ಗೊತ್ತಾ?

ಸಲಿಂಗಿಗಳ ಮದುವೆಗೆ ಸುಪ್ರೀಂ ಕೋರ್ಟ್ ಮಾನ್ಯತೆ ನೀಡಿಲ್ಲವಾಗಿದ್ದರೂ, ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇರಲು ಅವಕಾಶ ನೀಡಿದೆ. ಹಾಗೊಂದು ವೇಳೆ ಮದುವೆ ಆದರೆ ಅದನ್ನು ಮಾನ್ಯಗೊಳಿಸುವ ವಿಚಾರವನ್ನು ಶಾಸಕಾಂಗದ ಜವಾಬ್ದಾರಿಗೆ ಬಿಟ್ಟಿದೆ. ಈ ವಿಡಿಯೋ ವೈರಲ್ ಆದ ಬಳಿಕ ಭಾರತದಲ್ಲಿ ಸಲಿಂಗಿಗಳ ಮದುವೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

Continue Reading

DAKSHINA KANNADA

ಕುಂಭದ್ರೋಣ ಮಳೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

Published

on

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಆರಂಭಗೊಂಡು ಹಲವು ವರ್ಷವಾದ್ರೂ ಇನ್ನೂ ಕೂಡಾ ಪೂರ್ಣಗೊಂಡಿಲ್ಲ. ಕೆಲವಡೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಏನೋ ನಿರ್ಮಾಣ ಮಾಡಲಾಗಿದೆಯಾದರೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ವ್ಯವಸ್ಥೆಯೇ ಮಾಡಿಲ್ಲ.

 

ಕಳೆದ ವರ್ಷ ಇದೇ ಸಮಸ್ಯೆಯಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ಇದೀಗ ಮಳೆಗಾಲ ಸಮೀಪಿಸ್ತಾ ಇದ್ದು , ಅಕಾಲಿಕ ಮಳೆ ಕೂಡಾ ಆರಂಭವಾಗಿದೆ. ಭಾನುವಾರ ಬಂಟ್ವಾಳ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮತ್ತೆ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ.

ಬಂಟ್ವಾಳ ತಾಲೂಕಿ ಕಲ್ಲಡ್ಕ ಸಮೀಪದ ಸೂರಿಕುಮೇರು ಎಂಬಲ್ಲಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಇಡೀ ರಸ್ತೆಯೇ ನದಿಯಂತಾಗಿ ಹೋಗಿದೆ. ಇದರ ನಡುವೆ ಸಣ್ಣಪುಟ್ಟ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹೆದ್ದಾರಿ ಕಾಮಗಾರಿಗೆ ಹಿಡಿ ಶಾಪ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ : ಹುಲಿ ವೇಷದಾರಿ ಹೃದಯಾಘಾತಕ್ಕೆ ಬಲಿ

ಹೆದ್ದಾರಿಯ ಇಕ್ಕೆಲೆಯಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದ್ದು, ತಕ್ಷಣವೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page