Connect with us

LATEST NEWS

ಅಪಾರ್ಮೆಂಟ್ ನಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮಹತ್ಯೆ

Published

on

ಬೆಂಗಳೂರು: ಅಪಾರ್ಮೆಟ್ ಮೇಲಿನಿಂದ ಜಿಗಿದು ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾಡಗೋಡಿಯಲ್ಲಿ ನಡೆದಿದೆ.

ಬೆಂಗಳೂರಿನ ಕಾಡುಗೋಡಿಯ ಅಪಾರ್ಟ್ಮೆಂಟ್‌ನಲ್ಲಿದ್ದ ಬಾಲಕಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದಳು. ಎಸ್‌ಎಸ್‌ಎಲ್‌ಸಿಯ ಪರೀಕ್ಷೆ ಹತ್ತಿರ ಬರುತ್ತಿದ್ದ ಕಾರಣ ಓದುವಂತೆ ತಾಯಿ ಗದರಿಸಿದ್ದಾರೆ. ಇದರಿಂದ ಕೋಪಗೊಂಡ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್ಮೆಂಟ್‌ನ 20ನೇ ಮಹಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

 ಈ ವಿಷಯ ತಿಳಿದು ಸ್ಥಳಕ್ಕೆ ಕಾಡುಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆಯಿಂದ ನಿಖರ ಕಾರಣ ತಿಳಿದು ಬರಬೇಕಿದೆ.

DAKSHINA KANNADA

ಬಂಜಾರ ಸಮೂದಾಯದೊಳಗೆ ಒಡಕು ಮೂಡಿಸಿತಾ ಮಲ್ಪೆ ಹಲ್ಲೆ ಪ್ರಕರಣ..!?

Published

on

ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ವಿಚಾರವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಪ್ರಕರಣ ಸದ್ಯ ಬಂಜಾರ ಸಮೂದಾಯದ ನಡುವೆಯೆ ಬಿರುಕು ಮೂಡಿಸಿದಂತೆ ಕಾಣುತ್ತಿದೆ. ಹಲ್ಲೆಯನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡು ಮೀನುಗಾರರ ಪರ ನಿಂತಿದ್ದರೆ, ಹ*ಲ್ಲೆಯನ್ನು ಹಾಗೂ ಬಿಜೆಪಿ ನಾಯಕರ ನಡೆಯನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಇವರಿಬ್ಬರ ನಡುವೆ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಬಂಜಾರ ಸಮೂದಾಯದವರು ಹೆಣಗಾಡುತ್ತಿದ್ದಾರೆ.


ಮಲ್ಪೆಯಲ್ಲಿ ಹ*ಲ್ಲೆಗೊಳಗಾದ ಮಹಿಳೆ ಸಹಿ ಪಡೆದುಕೊಂಡ ಪೊಲೀಸರು ಆಕೆಗೆ ತಿಳಿಯದಂತೆ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ ಅನ್ನೋದು ಸದ್ಯ ಪೊಲೀಸರ ಮೇಲೆ ಇರುವ ಆರೋಪ. ಈ ಬಗ್ಗೆ ಮಹಿಳೆ ನಮ್ಮನ್ನು ನಮ್ಮ ಪಾಡಿಗೆ ಬಿಟ್ಟು ಬಿಡಿ ನಾನು ಊರಿಗೆ ಹೋಗುತ್ತೇನೆ ಎಂದು ಹೇಳಿದ್ದರು. ಆದ್ರೆ ಇದೇ ವೇಳೆ ಪತ್ರಿಕಾಗೋಷ್ಠಿ ನಡೆಸಿದ ಬಂಜಾರ ಸಮೂದಾಯದ ವಿದ್ಯಾರ್ಥಿ ಸಂಘಟನೆ ಹ*ಲ್ಲೆ ನಡೆಸಿದ ಎಲ್ಲರನ್ನೂ ಹಾಗೂ ಪ್ರಮೋದ್ ಮದ್ವರಾಜ್ ಅವರನ್ನೂ ಬಂಧಿಸಬೇಕು ಎಂದು ಒತ್ತಾಯ ಮಾಡಿದೆ. ಆದ್ರೆ ಮತ್ತೊಂದೆಡೆ ಅದೇ ಸಮೂದಾಯದ ಪ್ರಮುಖರು ಇದೊಂದು ದೊಡ್ಡ ಘಟನೆಯೇ ಅಲ್ಲ. ನಾವು ಹೊಟ್ಟೆ ಪಾಡಿಗೆ ಇಲ್ಲಿಗೆ ಬಂದವರು. ಇಲ್ಲಿನ ಜನರು ತುಂಬಾ ಒಳ್ಳೆಯವರು ಹಾಗೂ ಪ್ರಮೋದ್ ಮದ್ವರಾಜ್ ಅವರಷ್ಟು ಒಳ್ಳೆಯವರು ಯಾರೂ ಇಲ್ಲ. ಮಲ್ಪೆ ಬಂದರಿನಲ್ಲಿ ಇಂತಹದು ದಿನಾ ನಡಿತಾ ಇರುತ್ತದೆ ಅದಕ್ಕೆಲ್ಲಾ ಕೇಸ್ ಹಾಕ್ತಾ ಇದ್ರೆ ಪೊಲೀಸ್ ಠಾಣೆಯಲ್ಲಿ ಪುಸ್ತಕ ಸಾಕಾಗದು. ಇದು ನಮ್ಮನ್ನು ಮುಂದಿಟ್ಟು ಮಾಡುತ್ತಿರುವ ರಾಜಕೀಯ ಅಂತ ಹೇಳಿದ್ದಾರೆ.

ಕೇವಲ ಮೀನು ಕದ್ದ ಆರೋಪಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹ*ಲ್ಲೆ ನಡೆಸಿರುವುದನ್ನು ನಾಗರಿಕ ಸಮಾಜ ಒಪ್ಪುವ ವಿಚಾರವಂತು ಖಂಡಿತಾ ಅಲ್ಲ. ಇಂತಹ ಘಟನೆಗಳು ನಡೆದಾಗ ಸಂವಿಧಾನದ ಪ್ರಕಾರ ಕಾನೂನು ಕ್ರಮ ಕೈಗೊಳ್ಳಬೇಕಾಗಿರುವುದು ಪೊಲೀಸರ ಕರ್ತವ್ಯ ಕೂಡಾ. ಆದ್ರೆ ಇದರಲ್ಲಿ ರಾಜಕೀಯದವರು ಮೂಗು ತೂರಿಸಿದ ಕಾರಣ ಇದೀಗ ಹೊಟ್ಟೆಪಾಡಿಗೆ ಬಂದಿರುವ ಬಂಜಾರ ಸಮೂದಾಯದ ನಡುವೆ ಒಡಕು ಮೂಡಿರುವುದು ಸುಳ್ಳಲ್ಲ.

Continue Reading

LATEST NEWS

ಉಡುಪಿ: ಮಹಿಳೆಯ ಮೊಬೈಲ್‌ ಮತ್ತು ಪರ್ಸ್ ಎಗರಿಸಿದ ಆರೋಪಿ ಬಂಧನ

Published

on

ಉಡುಪಿಯ ಹೊರಟು ಕೆಳಾರ್ಕಳಬೆಟ್ಟು- ಸಂತೆಕಟ್ಟೆ ರಸ್ತೆಯಲ್ಲಿ ನಾಲ್ಕು ದಿನಗಳ ಹಿಂದೆ ಪಾದಚಾರಿ ಮಹಿಳೆಯ ಮೊಬೈಲ್‌ ಫೋನ್‌ ಮತ್ತು ಪರ್ಸ್ ಎಗರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಲ್ಪೆಯ ತೊಟ್ಟಂ ನಿವಾಸಿ ದರ್ಶನ್‌ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಬಾಗಲ್ಕೋಟೆ ಮೂಲದ ಮಹಿಳೆ ಸರಸ್ವತಿ (21) ಎಂಬವರು ಮಾರ್ಚ್ 21 ರಂದು ಬೆಳಿಗ್ಗೆ 11:45 ಗಂಟೆಗೆ ಸಂತೆಕಟ್ಟೆಯಲ್ಲಿನ ವೈದ್ಯರ ಬಳಿ ಹೋಗಲು ತನ್ನ ಮಗನನ್ನು ಎತ್ತಿಕೊಂಡು ಕೆಳಾರ್ಕಳಬೆಟ್ಟುವಿನ ತನ್ನ ತಾಯಿಯ ಮನೆಯಿಂದ ಹೊರಟು ಕೆಳಾರ್ಕಳಬೆಟ್ಟು- ಸಂತೆಕಟ್ಟೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಸುಲಿಗೆ ನಡೆದಿತ್ತು.

ಅಪರಿಚಿತ ಮೋಟಾರ್‌ ಸೈಕಲ್‌ ಸವಾರನೊಬ್ಬ ಹಿಂಬದಿಯಿಂದ ಬಂದು ಸರಸ್ವತಿ ಅವರ ಕೈಯಲ್ಲಿದ್ದ ಚೀಲವನ್ನು ಬಲತ್ಕಾರವಾಗಿ ಕಸಿದುಕೊಂಡು ಕೆಮ್ಮಣ್ಣು ಕಡೆಗೆ ಪರಾರಿಯಾಗಿದ್ದನು. ಅಪರಿಚಿತ ವ್ಯಕ್ತಿ ಎಗರಿಸಿದ್ದ ಚೀಲದಲ್ಲಿ ಮೊಬೈಲ್‌ ಪೋನ್‌ ಮತ್ತು 2500 ರೂಪಾಯಿ ಹಣವಿದ್ದ ಸಣ್ಣ ಪರ್ಸ್‌ ಇತ್ತು.

ಈ ಬಗ್ಗೆ ಸರಸ್ವತಿ ಅವರು ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಮಾರ್ಚ್ 24 ರಂದು ಬಂಧಿಸಿ ಆತನಿಂದ 13,000 ರೂಪಾಯಿ ಬೆಲೆಯ ರೆಡ್ಮಿ ಮೊಬೈಲ್ ಫೋನ್‌ ಮತ್ತು 2,500 ನಗದು ಹಾಗೂ ಲೇಡೀಸ್ ಪರ್ಸನ್ನು ವಶಪಡಿಸಿಕೊಂಡಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯ ಸಬ್‌ ಇನ್ಸ್‌ ಪೆಕ್ಟರ್ ರವಿ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

ಕಂಬಳಕ್ಕೆ ವಿದಾಯ ಹೇಳಿದ ‘ಚಾಂಪಿಯನ್ ಕುಟ್ಟಿ’ ; 17 ವರ್ಷದಿಂದ ಕಂಬಳಾಭಿಮಾನಿಗಳ ಫೇವರೇಟ್ ಆಗಿದ್ದ ‘ಕುಟ್ಟಿ’..!

Published

on

ಮಂಗಳೂರು : ಕಳೆದ ಹದಿನೇಳು ವರ್ಷಗಳಿಂದ ಕಂಬಳ ಕ್ಷೇತ್ರವನ್ನು ಆಳಿದ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದ ‘ಚಾಂಪಿಯನ್ ಕುಟ್ಟಿ’ ಕಂಬಳ ಕ್ಷೇತ್ರಕ್ಕೆ ವಿದಾಯ ಹೇಳಿದ್ದಾನೆ. ಈ ಮೂಲಕ ಸುದೀರ್ಘ ಕಾಲ ಕಂಬಳ ಕರೆಯಲ್ಲಿ ತನ್ನ ಗಾಂಭೀರ್ಯ ಓಟದ ಮೂಲಕ ಕಂಬಳಾಭಿಮಾನಿಗಳ ಹೃದಯ ಗೆದ್ದಿದ್ದ ಪ್ರಸಿದ್ಧ ‘ಕುಟ್ಟಿ’ ಕಂಬಳ ಕ್ಷೇತ್ರದಿಂದ ದೂರ ಉಳಿಯಲಿದ್ದಾನೆ.


17 ವರ್ಷದ ಹಿಂದೆ ಮುಲ್ಕಿಯಲ್ಲಿ ಮೊದಲ ಬಾರಿಗೆ ಜ್ಯೂನಿಯರ್ ವಿಭಾಗದಲ್ಲಿ ಕಂಬಳ ಕರೆಗೆ ಇಳಿದು ಮೊದಲ ಓಟದಲ್ಲೇ ಬಹುಮಾನ ಪಡೆಯುವ ಮೂಲಕ ‘ಕುಟ್ಟಿ’ ತನ್ನ ಗೆಲುವಿನ ನಾಗಾಲೋಟ ಆರಂಭಿಸಿತ್ತು. ಇದಾದ ಬಳಿಕ ಸತತ ಎರಡು ವರ್ಷ ಜ್ಯೂನಿಯರ್ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯೊಂದಿಗೆ ‘ಚಾಂಪಿಯನ್ ಕುಟ್ಟಿ’ ಕಂಬಳಾಭಿಮಾನಿಗಳ ಹೃದಯ ಗೆದ್ದಿತ್ತು. ಬಾರ್ಕೂರು ಶಾಂತಾರಾಮ ಶೆಟ್ಟಿ ಅವರ ಬಳಿ ಇದ್ದ ‘ಕುಟ್ಟಿ’ ಕೋಪಿಷ್ಠನಾಗಿದ್ದು, ಯಾರ ನಿಯಂತ್ರಣಕ್ಕೂ ಸಿಗುವ ಕೋಣ ಅಲ್ಲ. ಹೀಗಾಗಿ ‘ಚಾಂಪಿಯನ್ ಕುಟ್ಟಿ’ ನಂದಳಿಕೆ ಶ್ರೀಕಾಂತ ಭಟ್ಟರ ತಂಡ ಸೇರಿಕೊಂಡಿತ್ತು. ನಂದಳಿಕೆ ಶ್ರೀಕಾಂತ ಭಟ್ಟರ ಬಳಿ ಮತ್ತಷ್ಟು ಪಳಗಿದ ‘ಕುಟ್ಟಿ’ ಹಲವಾರು ಬಹುಮಾನಗಳನ್ನು ಪಡೆಯುವ ಮೂಲಕ ‘ಚಾಂಪಿಯನ್ ಕುಟ್ಟಿ’ಯಾಗಿ ಬದಲಾಗಿತ್ತು.

ಯಾವುದೇ ಕೋಣಗಳ ಜೊತೆ ಕಟ್ಟಿ ಓಡಿಸಿದ್ರೂ ಬಹುಮಾನ ತಂದು ಕೊಡುವ ಶಕ್ತಿ ಚಾಂಪಿಯನ್ ‘ಕುಟ್ಟಿ’ಗೆ ಇತ್ತು ಅನ್ನೋದೇ ವಿಶೇಷ. ಈ ಕೋಣವನ್ನು ಓಡಿಸಿದ ನಾಲ್ವರು ಓಟಗಾರರು ಕೂಡಾ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುವುದು ಮತ್ತೊಂದು ವಿಶೇಷ. ಸಾಮಾನ್ಯವಾಗಿ ಓಟದಲ್ಲಿ ಹಿಂದೆ ಬಿದ್ದಾಗ ಕೋಣಗಳಿಗೆ ನಿವೃತ್ತಿ ಘೊಷಣೆ ಮಾಡಲಾಗುತ್ತದೆ. ಆದ್ರೆ ಉಪ್ಪಿನಂಗಡಿಯಲ್ಲಿ ನಡೆದ ಕಂಬಳದಲ್ಲಿ ಭಾಗವಹಿಸಿದ ‘ಚಾಂಪಿಯನ್ ಕುಟ್ಟಿ’ ಇಲ್ಲೂ ಕೂಡಾ ಹಗ್ಗ ಹಿರಿಯ ವಿಭಾಗದಲ್ಲಿ ಬಹುಮಾನ ಗಳಿಸಿ ತಾನು ಇನ್ನೂ ಚಾಂಪಿಯನ್ ಅಂತ ತೋರಿಸಿಕೊಟ್ಟಿದೆ. ಆದ್ರೆ ಇದಾದ ಬಳಿಕ ನಂದಳಿಗೆ ಶ್ರೀಕಾಂತ್ ಭಟ್ಟರು ‘ಚಾಂಪಿಯನ್ ಕುಟ್ಟಿ’ಯ ನಿವೃತ್ತಿ ಘೋಷಣೆ ಮಾಡಿದ್ದರೆ. ಕಂಬಳ ಅಭಿಮಾನಿಗಳ ಕರತಾಡನದೊಂದಿಗೆ ‘ಚಾಂಪಿಯನ್ ಕುಟ್ಟಿ’ಗೆ ಗೌರವ ನೀಡಿ ವಿಶೇಷ ರೀತಿಯಲ್ಲಿ ಬೀಳ್ಕೊಡಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page