Connect with us

DAKSHINA KANNADA

ಫೆ. 22 ರಂದು ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವ : ನಾಟ್ಯಶ್ರೀ ಪ್ರಶಸ್ತಿಗೆ ಶಾರದಾಮಣಿ ಆಯ್ಕೆ

Published

on

ಮಂಗಳೂರು/ಬೀದರ್:  ಬೀದರ್‌ನ  ನಾಟ್ಯಶ್ರೀ ನೃತ್ಯಾಲಯದಿಂದ ಕೊಡಲಾಗುವ 2026ನೇ ಸಾಲಿನ ನಾಟ್ಯಶ್ರೀ ಪ್ರಶಸ್ತಿಗೆ ನೃತ್ಯ ಕಲಾವಿದೆ, ಮಂಗಳೂರಿನ ಸನಾತನ ನೃತ್ಯಾಲಯದ ಮುಖ್ಯಸ್ಥೆ ಶಾರದಾಮಣಿ ಶೇಖರ್ ಆಯ್ಕೆ ಆಗಿದ್ದಾರೆ.

ರಾಣಿ ಸತ್ಯಮೂರ್ತಿ ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ನೇತೃತ್ವದಲ್ಲಿ ಬೀದರ್‌ನಲ್ಲಿ ಸಭೆ ನಡೆಸಿದ ನಾಟ್ಯಶ್ರೀ ಪ್ರಶಸ್ತಿ ಆಯ್ಕೆ ಸಮಿತಿಯು ಕಲಾ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆ ನೀಡಿರುವ ಶಾರದಾಮಣಿ ಶೇಖರ್‌ರನ್ನು ಪ್ರಶಸ್ತಿಗೆ ಆಯ್ಕೆಗೊಳಿಸಿತು. ಪ್ರಶಸ್ತಿಯು ರೂ. 20 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಮಹಾಲಕ್ಷ್ಮಿ ಕೃಷ್ಣ ಕಂಗಿನಾಯಿ ತಾಯಿಯವರ ಸ್ಮರಣಾರ್ಥವಾಗಿ 8  ವರ್ಷಗಳಿಂದ ನಾಟ್ಯಶ್ರೀ ಪ್ರಶಸ್ತಿ ನೀಡುತ್ತಾಬರಲಾಗಿದೆ.  ಫೆ. 22 ರಂದು ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಸತ್ಯಮೂರ್ತಿ ಪ್ರಕಟಿಸಿದ್ದಾರೆ.

ಶಾರದಾಮಣಿ ಕುರಿತು :

ಕರ್ನಾಟಕದ ಪ್ರಸಿದ್ದ ನೃತ್ಯ ಗುರುಗಳಲ್ಲಿ ಒಬ್ಬರಾದ ವಿದುಷಿ ಶಾರದಾಮಣಿ ಶೇಖರ್ ಮೂಲತಃ ಮಂಗಳೂರಿನವರು. 35 ವರ್ಷಗಳಿಂದ ಸನಾತನ ನೃತ್ಯಾಲಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ನೃತ್ಯ ತರಬೇತಿ ನೀಡಿದ್ದಾರೆ. ಹಲವು ವೇದಿಕೆಗಳಲ್ಲಿ ಕಲಾ ಪ್ರದರ್ಶನ ನೀಡಿದ್ದಾರೆ.

ಇವರ ನೃತ್ಯ ನಿರ್ದೇಶನದ ರಾಷ್ಟ್ರ ದೇವೋಭವ, ಪುಣ್ಯಭೂಮಿ ಭಾರತ, ಸನಾತನ ರಾಷ್ಟ್ರಾಂಜಲಿ, ಸಿರಿ, ಶಬರಿ ಮತ್ತಿತರ ನೃತ್ಯ ರೂಪಕಗಳು ದೇಶ, ವಿದೇಶದಲ್ಲಿ ದಾಖಲೆಯ ಪ್ರದರ್ಶನ ಕಂಡಿವೆ. ಶಿಕ್ಷಣದಿಂದ ವಂಚಿತರಾದ ಹಲವರು ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿಯೇ ಆಶ್ರಯ ಕೊಟ್ಟು, ವಿದ್ಯೆ ಕಲಿಸಿದ ಹಿರಿಮೆ ಇವರಿಗಿದೆ.

ಇದನ್ನೂ ಓದಿ : 50ನೇ ವರ್ಷದ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ; ಹೀಗಿದೆ ಫಲಿತಾಂಶ

ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿಯ ಮಾಜಿ ಸದಸ್ಯೆಯೂ ಆದ ಶಾರದಾಮಣಿ ಶೇಖರ್‌ರಿಗೆ ಕರ್ನಾಟಕ ಕಲಾಶ್ರೀ ಗೌರವ ಪ್ರಶಸ್ತಿ, ಯಕ್ಷರುದ್ರ ಕಲಾ ಗೌರವ ಪ್ರಶಸ್ತಿ, ಸ್ವರ ಸಾಧನಾ ಪ್ರಶಸ್ತಿ, ನಾಟ್ಯ, ವಿದ್ವನ್ಮಣಿ ಗೌರವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ.

DAKSHINA KANNADA

ನಾಳೆ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಧರ್ಮ ಚಾವಡಿ ತುಳು ಸಿನಿಮಾ

Published

on

ಮಂಗಳೂರು:  ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ ಧರ್ಮ ಚಾವಡಿ ತುಳು ಸಿನಿಮಾ ಕಳೆದ ವರ್ಷ ಕರಾವಳಿಯಾದ್ಯಂತ ಬಿಡುಗಡೆಗೊಂಡು ಜನಮನ್ನಣೆ ಪಡೆದು ಯಶಸ್ವಿ ಚಿತ್ರಗಳ ಸಾಲಿಗೆ ಸೇರ್ಪಡೆಗೊಂಡಿದೆ. ಇದೀಗ ಈ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿ ಜಗತ್ತಿನಾದ್ಯಂತ ಇರುವ ತುಳು ಸಿನಿಮಾ ಪ್ರೇಕ್ಷಕರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲು ಚಿತ್ರ ತಂಡ ನಿರ್ಧರಿಸಿದೆ.

ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ, ನಾಳೆ  ಅಂದರೆ ಮಾರ್ಚ್ 6 ರಂದು ಧರ್ಮ ಚಾವಡಿ ಸಿನಿಮಾ ಟಾಕೀಸ್ ಆ್ಯಪ್ ಒಟಿಟಿ ಮೂಲಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಮುಂಬಯಿಯಲ್ಲಿ ಧರ್ಮ ಚಾವಡಿ ಚಿತ್ರದ ಯಶಸ್ವೀ 14 ಶೋ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮತ್ತು ಕಾಸರಗೋಡಿನಲ್ಲಿಯೂ ಚಿತ್ರ ಯಶಸ್ವೀ  ಪ್ರದರ್ಶನ ಕಂಡಿದೆ.

ಮುಂದಿನ ದಿನಗಳಲ್ಲಿ ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಕರ್ನಾಟಕದ ಇತರ ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ನಟ ರಮೇಶ್ ರೈ ಕುಕ್ಕುವಳ್ಳಿ, ನಟಿ ನೇಹಾ ಕೋಟ್ಯಾನ್, ಟಾಕೀಸ್ ಆ್ಯಪ್ ಒಟಿಟಿ ಇದರ ಅಡ್ಮಿನ್ ಎಕ್ಸಿಕ್ಯೂಟಿವ್ ಚಿದಾನಂದ್ ಪೈ ಮತ್ತು ಇತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಸ್ಟೇಟ್ ಬ್ಯಾಂಕ್ ಮೀನು ಮಾರ್ಕೆಟ್ ಅವ್ಯವಸ್ಥೆ-ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ

Published

on

ಮಂಗಳೂರು: ನಗರದ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಮಧ್ಯಾಹ್ನ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹಸಿ ಹಾಗೂ ಒಣಮೀನು ಮಾರುಕಟ್ಟೆಯ ಪ್ರತಿ ಮೂಲೆಗೂ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ಕಣ್ಣಾರೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ದಶಕಗಳಿಂದ ಮೀನು ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿರುವ ನೂರಾರು ಮಹಿಳೆಯರು ತಮ್ಮ ಸಮಸ್ಯೆಗಳನ್ನು  ಅವರ  ಮುಂದೆ ಹಂಚಿಕೊಂಡರು.

ಪರಿಶೀಲನೆಯ ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ , ಮಾರುಕಟ್ಟೆಯಲ್ಲಿ ಸಮರ್ಪಕ ನೈರ್ಮಲ್ಯದ ಕೊರತೆಯಿಂದ ದುರ್ವಾಸನೆ ವ್ಯಾಪಿಸಿದ್ದು, ದಿನವಿಡೀ ಕೆಲಸ ಮಾಡುವ ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದರು. ಮಾರುಕಟ್ಟೆ ಸ್ವಚ್ಛತೆಗೆ ಅಗತ್ಯವಾದ ನೀರಿನ ಸೌಲಭ್ಯವಿಲ್ಲದೆ ಇರುವುದೂ ಸಮಸ್ಯೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ವ್ಯಾಪಾರಕ್ಕೆ ತಕ್ಕಷ್ಟು ಸ್ಥಳಾವಕಾಶದ ಕೊರತೆ ಹಾಗೂ ಭದ್ರತಾ ವ್ಯವಸ್ಥೆಯ ಅಭಾವದಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಾಗಿ ಮಹಿಳೆಯರು ದೂರಿದರು. ಈ ಎಲ್ಲ ವಿಚಾರಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಿದ್ದೇನೆ. ಮೀನುಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನೂತನ ಮಾರುಕಟ್ಟೆಯಲ್ಲಿ ಅಗತ್ಯವಿರುವ ವೈಜ್ಞಾನಿಕ ಬದಲಾವಣೆಗಳನ್ನು ಮಾಡಿಸುವಂತೆ ಒತ್ತಾಯಿಸುತ್ತೇನೆ. ಮೀನು ಮಾರಾಟಗಾರ ಮಹಿಳೆಯರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ,” ಎಂದು ಡಾ. ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು.

 

 

 

 

Continue Reading

DAKSHINA KANNADA

ಭಾ.ಜ.ಪ ಜಿಲ್ಲಾ ಓಬಿಸಿ ಮೋರ್ಚಾ ಸಮಿತಿ : ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ಆಯ್ಕೆ

Published

on

ಬಂಟ್ವಾಳ:  ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಓಬಿಸಿ ಮೋರ್ಚಾ ಸಮಿತಿ ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ಆಯ್ಕೆಯಾಗಿದ್ದಾರೆ.

ಪುರುಷೋತ್ತಮ ಸಾಲ್ಯಾನ್  ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ : ಶಂಭೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ : ಪುರುಷೋತ್ತಮ ಸಾಲ್ಯಾನ್ ಅಧ್ಯಕ್ಷರಾಗಿ ಪುನರಾಯ್ಕೆ

ಅಷ್ಟೇ ಅಲ್ಲದೆ, ಧಾರ್ಮಿಕ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page