Connect with us

DAKSHINA KANNADA

ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ: ಡಾ. ಎಂ.ಎನ್. ರಾಜೇಂದ್ರ ಕುಮಾರ್

Published

on

ಮಂಗಳೂರು: ನಗರದಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನವೆಂಬರ್ 18ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ ಮಂಗಳೂರು ಇದರ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ 70ನೇ ಸಹಕಾರಿ ಸಪ್ತಾಹದ 5ನೇ ದಿನ ಅಂದರೆ ನವೆಂಬರ್ 18ರಂದು ಬೆಳಿಗ್ಗೆ 10 ಗಂಟೆಗೆ ಉರ್ವ ಕ್ರಿಕೆಟ್ ಮೈದಾನದಲ್ಲಿ ಸಹಕಾರಿ ಸಪ್ತಾಹವನ್ನು ಆಚರಿಸುತ್ತಿದ್ದೇವೆ. ಇದರಲ್ಲಿ ವಸ್ತು ಪ್ರದರ್ಶನ ಉದ್ಘಾಟನೆಯನ್ನು ಸ್ಪೀಕರ್‌ ಯು ಟಿ ಖಾದರ್‌ ನೆರವೇರಿಸಲಿದ್ದು, ಸಮಾರಂಭದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ ಎನ್ ರಾಜಣ್ಣ ನೆರವೇರಿಸುವರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡುವರು. ಸಂಸದ ನಳಿನ್‌ ಕುಮಾರ್ ಕಟೀಲು ಅವರು ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ನೀಡಿದರೆ, ಸಹಕಾರಿ ಧ್ವಜಾರೋಹಣವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ನೆರವೇರಿಸುವರು.

ಅಧ್ಯಕ್ಷತೆಯನ್ನು ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ವಹಿಸಲಿರುವರು ಎಂದರು. ಮೆರವಣಿಗೆ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಕಾಮತ್‌ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉತ್ತರ ಕ್ಷೇತ್ರ ಶಾಸಕ ಡಾ ಭರತ್‌ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಸಹಕಾರಿ ಹಾಲು ಉತ್ಪಾದಕರ ಒಕ್ಕುಟದ ಅಧ್ಯಕ್ಷ ಕೆ ಪಿ ಸುಚರಿತ ಶೆಟ್ಟಿ ಉಪಸ್ಥಿತರಿರುವರು.

ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌, ಸಹಕಾರ ಸಂಘಗಳ ನಿಬಂಧಕ ಕ್ಯಾ ಡಾ ಕೆ ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭಾಗವಹಿಸಲಿದ್ದಾರೆ ಎಂದರು. 15,000 ಸಹಕಾರಿಗಳು ಸೇರಿ ಈ ಸಮಾವೇಶವನ್ನು ನಡೆಸುತ್ತಿದ್ದೇವೆ. ಎಸ್ಸಿಡಿಸಿಸಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್ ಮೈದಾನದವರೆಗೆ ಸಾಂಸ್ಕೃತಿಕ ಕಲಾ ಪ್ರಕಾರಗಳ ವಿವಿಧ ಟ್ಯಾಬ್ಲೋಗಳೊಂದಿಗೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ ಉಮೇಶ್‌ ಜಿ, ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ ಜಯಕರ ಶೆಟ್ಟಿ ಇಂದ್ರಾಳಿ, ನಿದೇರ್ಶಕ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರಿದ್ದರು.

DAKSHINA KANNADA

ಡಿ.6ರಂದು ಸಹಕಾರ ರತ್ನ ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ

Published

on

ಮಂಗಳೂರು: ಕರ್ನಾಟಕ ಸರಕಾರದ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ ಡಿಸೆಂಬರ್ 6 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಭಾಸ್ಕರಾಭಿನಂದನಾ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಭಾಸ್ಕರ್ ಎಸ್. ಕೋಟ್ಯಾನ್‌ ಅವರು ಸಹಕಾರ, ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಈ ವರ್ಷ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳೆಲ್ಲ ಸೇರಿ ಸಾರ್ವಜನಿಕವಾಗಿ ಅವರನ್ನು ಅಭಿನಂದಿಸಲು ತೀರ್ಮಾನಿಸಿದ್ದಾರೆ ಎಂದು ಭಾಸ್ಕರಾಭಿನಂದನಾ ಸಮಿತಿಯ ಸಂಚಾಲಕ ಚಿತ್ತರಂಜನ್ ಬೋಳಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುರಭವನದಲ್ಲಿ ಡಿಸೆಂಬರ್ 6 ರಂದು ಅಪರಾಹ್ನ 3 ಗಂಟೆಗೆ ಚಿತ್ರನಟ ಮಂಜು ರೈ ಮೂಳೂರು ಅವರ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಮಾರಂಭಕ್ಕೆ ಚಾಲನೆ ಸಿಗಲಿದೆ. 3.45 ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ.

 

ಸೋಲೂರು ಮಠದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ  ಸಂಸದ ಬ್ರಿಜೇಶ್ ಚೌಟ ದೀಪ ಬೆಳಗಿಸುವರು. ಸ್ಪೀಕರ್ ಯು.ಟಿ. ಖಾದರ್ ಭಾಸ್ಕರಾಭಿನಂದನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಗಣ್ಯರು ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ಭಾಸ್ಕರಾಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಸದಾನಂದ ಪೂಜಾರಿ, ಸಂಚಾಲಕ ಕೆ.ಟಿ. ಸುವರ್ಣ ಮತ್ತಿತರರು ಇದ್ದರು.

 

Continue Reading

DAKSHINA KANNADA

ಡಿ.7ರಂದು ಶಾರದಾ ವಿದ್ಯಾಲಯದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ, ಸಾಂಸ್ಕೃತಿಕ ವೈಭವ

Published

on

ಮಂಗಳೂರು: ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಸ ಕ್ರೀಡೆ, ನೃತ್ಯ, ಸಂಗೀತ ಇವೆಲ್ಲವುಗಳನ್ನೊಳಗೊಂಡ ಹೊನಲು ಬೆಳಕಿನ ಕ್ರೀಡೋತ್ಸವ ಡಿ7ರ ಭಾನುವಾರದದಂದು ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಹೇಳಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಈ ಬಾರಿಯ ಕ್ರೀಡೋತ್ಸವ ಸಮಾರಂಭವನ್ನು ಮೈಸೂರಿನ ಸಂಸದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಆಗಮಿಸಲಿದ್ದಾರೆ. ಸಾಹಸ ಕ್ರೀಡೆ, ಸಾಂಸ್ಕೃತಿಕ ಪ್ರದರ್ಶನದಲ್ಲಿ ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಒ ಸಮೀರ್ ಪುರಾಣಿಕ್ ಮಾತನಾಡಿ 4ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಈ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಕಂಬ, ಫೈರ್ ಜಂಪ್, ಯೋಗಾಸನ ಸೇರಿದಂತೆ ಪಿರಮಿಡ್ ರಚನೆಯ ಕ್ರೀಡಾ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: WATCH : ಉಡುಪಿ: ಶಾಲೆಯ ರೋಡ್ ಸರಿ ಇಲ್ಲ…ನಗರಸಭೆ ಆಯುಕ್ತರಿಗೆ ದೂರು ಕೊಟ್ಟ ಪುಟ್ಟ ವಿದ್ಯಾರ್ಥಿ

ಸಂಸ್ಥೆಯ ಪ್ರಾಂಶುಪಾಲ ದಯಾನಂದ ಕಟೀಲ್ ಶೋಭಾಯಾತ್ರೆಯಲ್ಲಿ ಒಡೆಯರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಈ ಕ್ರೀಡೋತ್ಸವಕ್ಕೆ ಮಕ್ಕಳನ್ನು ತಯಾರು ಮಾಡಲು ಯಾವುದೇ ತರಬೇತುದಾರರಿಲ್ಲ. ಶಾರದಾ ಕುಟುಂಬ ಜೊತೆಯಾಗಿ ಸೇರಿಕೊಂಡೇ ಮಕ್ಕಳನ್ನು ಸಿದ್ಧಪಡಿಸಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿ ಸುಧಾಕರ್ ಪೇಜಾವರ, ಶಾರದಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು.

Continue Reading

DAKSHINA KANNADA

ಕುದ್ರೋಳಿ ಭಗವತಿ ಕ್ಷೇತ್ರಕ್ಕೆ ವರ್ಕಳ ಶಿವಗಿರಿ ಮಠದ ಶ್ರೀಗಳ ಭೇಟಿ

Published

on

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧೀಜಿಯವರ ನಡುವಿನ ಐತಿಹಾಸಿಕ ವರ್ಕಳ ಶಿವಗಿರಿ ಸಂವಾದವು ಮಂಗಳೂರು ವಿವಿಯಲ್ಲಿ ನಡೆದಿದ್ದು, ಕಾರ್ಯಕ್ರಮಕ್ಕೆ ಆಶೀರ್ವಚನವನ್ನು ನೀಡಲು ಆಗಮಿಸಿದ್ದ ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿ ಇಂದು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭ ಕುದ್ರೋಳಿ ಕ್ಷೇತ್ರಾಡಳಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದು, ಯತಿವರೇಣ್ಯರನ್ನು ಸ್ವಾಗತಿಸಿದರು. ಮಹಿಳಾ ಸಮಿತಿ ಸದಸ್ಯರು ಅವರ ಆಗಮನದುದ್ದಕ್ಕೂ ಪೂರ್ಣಕುಂಭ ಸ್ವಾಗತಿಸಿದರು.

ಇದೇ ವೇಳೆ ಶ್ರೀಗಳು ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರತಿ ಬೆಳಗಿದರು. ಅಲ್ಲದೆ ಮಂತ್ರಪಠಣ ಮಾಡಿದರು. ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು. ಬಳಿಕ ಭಗವತಿ ಕ್ಷೇತ್ರದಲ್ಲಿ ಶ್ರೀಗಳಿಗೆ ವಿಶೇಷ ಗೌರವಾರ್ಪಾಣೆ ಕ್ಷೇತ್ರದ ವತಿಯಿಂದ ನೀಡಲಾಯಿತು. ಪ್ರಾರ್ಥನೆ ನೆರವೇರಿಸಿದ ಪ್ರಸಾದ ವಿತರಿಸಲಾಯಿತು.

ಇದೇ ವೇಳೆ ಶ್ರೀ ಭಗವತಿ ಕ್ಷೇತ್ರಕ್ಕೆ ವರ್ಕಳ ಶಿವಗಿರಿ ಮಠದ ಶ್ರೀ ಜ್ಞಾನಾನಂದ ತೀರ್ಥ ಸ್ವಾಮೀಜಿ ಅವರೂ ಭೇಟಿ ನೀಡಿದ್ದು, ಅವರನ್ನೂ ಕ್ಷೇತ್ರಾಡಳಿತ ಮಂಡಳಿ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿ, ಗೌರವಿಸಿದರು.

ಮೊಕ್ತೇಸರರಾದ ರವೀಂದ್ರ, ರಾಜ್ ಗೋಪಾಲ್, ವೈಬಿ ಸುಂದರ್, ಉಷಾ ಪ್ರಭಾಕರ್, ಕಾರ್ಯದರ್ಶಿ ಸುಧೀರ್ ಬಿ, ಆಶಾ ಚಂದ್ರಮೋಹನ್, ದಿನೇಶ್ ಕುಂಪಲ, ರಾಕೇಶ್, ಶಿವ ಪ್ರಸಾದ್, ಆಚಾರಪಟ್ಟವರು, ಗುರಿಕಾರರು, ಮಹಿಳಾ ಸೇವಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page