Connect with us

LATEST NEWS

ಭೀಕರ ಬೈಕ್‌ ಅ*ಪಘಾತ; ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವು

Published

on

ಮಂಗಳೂರು/ಶಿವಮೊಗ್ಗ: ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ, ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ಇಂದು (ನ.8) ಬೆಳಿಗ್ಗೆ ಶಿವಮೊಗ್ಗ ನಗರದ ಹೊರವಲಯದ ತೀರ್ಥಹಳ್ಳಿ ರಸ್ತೆಯ ಹರಕೆರೆ ಸಮೀಪ ಕಾನೇಹಳ್ಳದ ಬಳಿ ನಡೆದಿದೆ.

ಆರ್ ಎಂಎಲ್ ನಗರದ ನಿಸಾರ್ (18) ಹಾಗೂ ಮಂಜುನಾಥ ಬಡಾವಣೆಯ ಯಶವಂತ್ (20) ಮೃ*ತ ವಿದ್ಯಾರ್ಥಿಗಳು.

ಕೆಟಿಎಂ ಬೈಕ್‌ ನಲ್ಲಿ ತೀರ್ಥಹಳ್ಳಿ ಮಾರ್ಗವಾಗಿ ಗಾಜನೂರು ಐಟಿಐ ಕಾಲೇಜಿಗೆ ಯುವಕರು ತೆರಳುತ್ತಿದ್ದ ವೇಳೆ ಅತಿಯಾದ ವೇಗದಿಂದ ಬೈಕ್ ನಿಯಂತ್ರಣ ತಪ್ಪಿ ಅ*ಪಘಾತ ಸಂಭವಿಸಿದೆ.

ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

INTERNATIONAL

ಕೊನೆಗೂ ಸಿಕ್ತು ಡೊನಾಲ್ಡ್‌ ಟ್ರಂಪ್‌ ಕೈಗೆ ನೊಬೆಲ್‌ ಶಾಂತಿ ಪರಸ್ಕಾರ!

Published

on

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಬಹುದಿನಗಳ ಕನಸು ಈಡೇರಿದೆ. ಕೊನೆಗೂ ನೊಬೆಲ್‌ ಶಾಂತಿ ಪುರಸ್ಕಾರ ಅವರ ಕೈ ಸೇರಿದೆ.

ಹೌದು, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ಸಿಗಬೇಕು ಅನ್ನೋ ವಿಚಾರ ಭಾರೀ ಸದ್ದು ಮಾಡಿತ್ತು. ಜಗತ್ತಿನಲ್ಲಿ ಅನೇಕ ಯುದ್ದಗಳನ್ನು ನಾನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ಕಾಪಾಡಿದ್ದೇನೆ, ಹೀಗಾಗಿ ನನಗೆ ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿ ಕೊಡಬೇಕು ಎಂದು ಡೊನಾಲ್ಡ್‌ ಟ್ರಂಪ್‌ ವಾದ ಮಾಡಿದ್ದರು. ಆದರೆ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊಗೆ ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಲಾಗಿತ್ತು.

ಆದರೆ ತನಗೆ ಸಿಕ್ಕ ಪ್ರಶಸ್ತಿಯನ್ನು ಕೊರಿನಾ ಮಚಾದೊ ಶ್ವೇತಭವನಕ್ಕೆ ತೆರಳಿ ಅಧ್ಯಕ್ಷ ಟ್ರಂಪ್‌ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ ನೀಡಿದ್ದಾರೆ.

ವೆನೆಜುವೆಲಾದ ಮಾರಿಯಾ ಕೊರಿನಾ ಮಚದೊ ಅವರನ್ನು ಭೇಟಿಯಾಗಲು ತಮಗೆ ಸಿಕ್ಕ ದೊಡ್ಡ ಗೌರವ ಎಂದು ಅಧ್ಯಕ್ಷ ಟ್ರಂಪ್‌ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಉತ್ತಮ ಕೆಲಸಕ್ಕಾಗಿ ಮಾರಿಯಾ ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಿದ್ದಾರೆ ಎಂದು ಟ್ರಂಪ್‌ ಹೇಳಿದ್ದಾರೆ.

ಇನ್ನು ಮಚಾದೊ ಅವರು ಹೇಳಿಕೆ ನೀಡಿದ್ದು, ನಾನು ಯುನೈಟೆಡ್‌ ಸ್ಟೇಟ್ಸ್‌ ಅಧ್ಯಕ್ಷರಿಗೆ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನೊಬೆಲ್‌ ಪ್ರಶಸ್ತಿಯನ್ನು ಹಸ್ತಾಂತರಿಸಬಹುದೇ?
ಮಾರಿಯಾ ಕೊರಿನಾ ಮಚಾದೊ ಅವರಿಗೆ ಸಿಕ್ಕಿದ ನೊಬೆಲ್‌ ಶಾಂತಿ ಪ್ರಶಸ್ತಿಯ ಪದಕ ಹಾಗೂ ಪ್ರಮಾಣ ಪತ್ರವನ್ನು ಮಚಾಡೊ ಟ್ರಂಪ್‌ ಅವರಿಗೆ ಹಸ್ತಾಂತರ ಮಾಡಿದ್ದು ದೊಡ್ಡ ವಿವಾದ ಎಬ್ಬಿಸಿದೆ. ಸಾಮಾನ್ಯವಾಗಿ ನಾರ್ವೇಜಿಯನ್‌ ನೊಬೆಲ್‌ ಸಂಸ್ಥೆಯು ಪ್ರಶಸ್ತಿಯ ಹಣವ್ನನು ವಿಜೇತರು ಬಯಸುವವರೊಂದಿಗೆ ಮಾತ್ರ ಹಂಚಿಕೊಳ್ಳಬಹುದು. ಆದರೆ ಬಹುಮಾನವನ್ನು ಬೇರೆಯವರೊಂದಿಗೆ ವರ್ಗಾಯಿಸಲು ಅಥವಾ ಹಂಚಿಕೊಳ್ಳು ಸಾಧ್ಯವಿಲ್ಲ ಎಂದು ಹೇಳಿದೆ.

Continue Reading

DAKSHINA KANNADA

ಸಜೀಪ ಮೂಡ ವಲಯ  ಕಾಂಗ್ರೆಸ್ ಸಮಿತಿ :  ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ

Published

on

ಬಂಟ್ವಾಳ : ಪಾಣೆಮಂಗಳೂರು  ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಜೀಪಮೂಡ ವಲಯ  ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಯವರನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಬಿ.ರಮಾನಾಥ ರೈ ಶಿಫಾರಸ್ಸಿನ ಮೇರೆಗೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಚಂದ್ರಶೇಖರ ಭಂಡಾರಿ ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ಇದನ್ನೂ ಓದಿ : ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ  ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸಜೀಪ ಮೂಡ ವಲಯ ಕಾಂಗ್ರೆಸ್‌ನ ಅಧ್ಯಕ್ಷ ಎನ್.ಕರೀಂ  ಉಪಸ್ಥಿತರಿದ್ದರು.

Continue Reading

BIG BOSS

ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

Published

on

ಮಂಗಳೂರು/ಬೆಂಗಳೂರು : ಬಿಗ್ ಬಾಸ್ ಸೀಸನ್ 12 ಮುಕ್ತಾಯದ ಹಂತದಲ್ಲಿದೆ. ಒಬ್ಬೊಬ್ಬರೇ ಹೊರ ನಡೆದಿದ್ದಾರೆ. ಈಗ ಉಳಿದಿರೋದು ಕೇವಲ ಐದು ಮಂದಿ. ಮಿಡ್ ವೀಕ್ ಎಲಿಮಿನೇಷನ್‌ ಮೂಲಕ ಧ್ರುವಂತ್ ಹೊರಬಂದಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಲೇ ಧ್ರುವಂತ್ ಬದಲಾಗಿದ್ದಾರೆ.

ಬದಲಾಯ್ತು ಗೆಟಪ್:

ಬಿಗ್ ಬಾಸ್ ಮನೆಯೊಳಗಿದ್ದಾಗ ತಮ್ಮದೇ ಆದ ರೀತಿಯಲ್ಲಿ ಆಟವಾಡಿದ್ದರು ಧ್ರುವಂತ್. ಚರ್ಚೆ, ಜಗಳ, ವಾದದಲ್ಲೂ ಧ್ರುವಂತ್ ಇದ್ದರು. ಎಲ್ಲರೊಂದಿಗೆ ಜಗಳವಾಡುತ್ತಿದ್ದ ಧ್ರುವಂತ್‌ರನ್ನು ಕಿಚ್ಚ ಕ್ಲಾಸ ತೆಗೆದುಕೊಂಡಿದ್ದೂ ಇದೆ. ದೊಡ್ಮನೆಯೊಳಗೆ ‘ಜೈ ಮಹಾಕಾಳ್’ ಎನ್ನುತ್ತಾ ಖ್ಯಾತರಾಗಿದ್ದ ಧ್ರುವಂತ್ ಸೀಕ್ರೆಟ್ ರೂಮಿಗೂ ಹೋಗಿದ್ದರು. ಅಲ್ಲೂ ರಕ್ಷಿತಾ ಶೆಟ್ಟಿ ಜೊತೆ ಅವರ ಜಗಳ ಸಿಕ್ಕಾಪಟ್ಟೆ ಸದ್ದು ಮಾಡಿತ್ತು.

ಬಿಗ್ ಬಾಸ್ ಮನೆಯಲ್ಲಿ ತನ್ನ ಉದ್ದ ಕೂದಲನ್ನು ಜುಟ್ಟು ಕಟ್ಟಿಕೊಂಡು ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದ್ದ ಧ್ರುವಂತ್, ಇದೀಗ ಜುಟ್ಟಿಗೆ ಕತ್ತರಿ ಹಾಕಿಸಿಕೊಂಡಿದ್ದಾರೆ. ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಕಣ್ಣು ಬಣ್ಣದ ಥಾರ್‌ನಲ್ಲಿ ಬಂದಿಳಿದ ಧ್ರುವಂತ್, ಅಭಿಮಾನಿಗಳನ್ನು ಭೇಟಿಯಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಬಳಿಕ ಸೆಲೂನ್‌ಗೆ ಹೋದ ಅವರು ಕೂದಲು ಕತ್ತರಿಸಿಕೊಂಡಿದ್ದಾರೆ. ಸ್ಟೈಲಿಷ್ ಹೇರ್ ಸ್ಟೈಲ್ ಮಾಡಿಕೊಂಡು ಡಿಫರೆಂಟ್ ಲುಕ್‌ನಲ್ಲಿ ಕಂಗೊಳಿಸಿದ್ದಾರೆ. ಅಂತ್ಯ ಅಲ್ಲ….ಇದು ಹೊಸ ಆರಂಭ ಎಂಬುದಾಗಿ ಟ್ಯಾಗ್ ಲೈನ್‌ನೊಂದಿಗೆ ವೀಡಿಯೋ ಹಂಚಿಕೊಂಡಿದ್ದು, ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ : ‘ಅಶ್ವಿನಿ ಗೌಡಗೆ ಕನ್ನಡ ಬರೆಯೋಕೆ ಬರಲ್ಲ’ ಎಂಬ ಟೀಕೆಗೆ ಸ್ಪಷ್ಟೀಕರಣ ಕೊಟ್ಟ ಕರವೇ ನಾರಾಯಣ ಗೌಡ!

ಅಂದಹಾಗೆ, ಇಂದು(ಜ.17) ಬಿಗ್ ಬಾಸ್ ಪ್ರಿ ಫಿನಾಲೆ ನಡೆಯಲಿದೆ. ನಾಳೆ(ಜ.18) ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ,ರಘು, ಧನುಷ್, ಅಶ್ವಿನಿ ಗೌಡರಲ್ಲಿ ಯಾರು ಬಿಗ್ ಬಾಸ್ ಟ್ರೋಫಿ ಗೆಲ್ತಾರೆ ಅನ್ನೋದು ಸದ್ಯದ ಕುತೂಹಲ.

Continue Reading
Advertisement

Trending

Copyright © 2025 Namma Kudla News

You cannot copy content of this page