Connect with us

LATEST NEWS

ಬೆಂಗಳೂರು: ಚಾರ್ಜ್​ಶೀಟ್​ ಸಲ್ಲಿಕೆ; ಪಾಕಿಸ್ತಾನ ಪ್ರಜೆಗಳ ಬಂಧನ

Published

on

ಮಂಗಳೂರು/ಬೆಂಗಳೂರು: ಪಾಕಿಸ್ತಾನ ಪ್ರಜೆಗಳ ಬಂಧನಕ್ಕೆ ಸಂಬಂಧಿಸಿದಂತೆ ಜಿಗಣಿಯಲ್ಲಿ ಒಂದು ಪ್ರಕರಣವನ್ನು ಪೊಲೀಸರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 22 ಮಂದಿ ಬಂಧಿತ ಆರೋಪಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 12 ಜನ ಆರೋಪಿಗಳ ಒಂದು ಪ್ರಕರಣದ ತನಿಖೆ ಪೂರ್ಣಗೊಳಿಸಿ 1000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಹಲವು ವಿಚಾರಗಳು ಉಲ್ಲೇಖವಾಗಿವೆ.

ಪ್ರಕರಣದ ಪ್ರಮುಖ ಆರೋಪಿ ರಶೀದ್ ಅಲಿ ಸಿದ್ದಿಕ್ಕಿ ಪಾಕಿಸ್ತಾನ ಮೂಲದವನೆಂದು ಎಂದು ಸಾಬೀತು ಆಗಿದೆ. ಆರೋಪಿ ರಶೀದ್ ಅಲಿ ಸಿದ್ದಿಕ್ಕಿ ಬಳಿ ಪಾಕಿಸ್ತಾನದ ಶಾಶ್ವತ ನಿವಾಸ ಪ್ರಮಾಣಪತ್ರ ಪತ್ತೆಯಾಗಿದೆ. 12 ಜನ ಆರೋಪಿಗಳಲ್ಲಿ ಎಂಟು ಮಂದಿ ಪುರುಷರು, ಮೂವರು ಮಹಿಳೆಯರು ಮತ್ತು ಓರ್ವ ಬಾಲಕಿ ಇದ್ದಾಳೆ. ಈ ಎಲ್ಲರೂ ಅಕ್ರಮವಾಗಿ ಭಾರತಕ್ಕೆ ಬಂದಿಸಿದ್ದಾರೆ.

ಪಾಕಿಸ್ತಾನ ನಿವಾಸಿಗಳು 22 ಮಂದಿಯನ್ನ ಬಹಿಷ್ಕರಿಸಿದ್ದರು. ಬಳಿಕ ಆರೋಪಿಗಳು ಪಾಕಿಸ್ತಾನ ತೊರೆದು ಭಾರತದ ಕಡೆ ಮುಖ ಮಾಡಿದ್ದರು. ವೀಸಾ, ಪಾಸ್ ಪೋರ್ಟ್ ಇಲ್ಲದಂತೆ ಅಕ್ರಮವಾಗಿ ಭಾರತದೊಳಗೆ ನುಸುಳಿದರು. ದೆಹಲಿಯಲ್ಲಿ ನಕಲಿ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮಾಡಿಕೊಂಡಿದ್ದಾರೆ. ಅಲ್ಲದೇ ಭಾರತದ ಪಾಸ್ ಪೋರ್ಟ್ ಸಹ ಮಾಡಿಕೊಂಡಿದ್ದಾರೆ.

‘ಮುಸ್ಲಿಂ ಹೆಸರುಗಳನ್ನ ಹಿಂದೂಗಳ ಹೆಸರುಗಳನ್ನಾಗಿ ಬದಲಿಸಿಕೊಂಡು, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿ ಹಲವೆಡೆ ವಾಸವಾಗಿದ್ದರು. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ರಾಜ್ಯಕ್ಕೆ ಬಂದಿದ್ದ ಪಾಕಿಸ್ತಾನ ಪ್ರಜೆಗಳು ದಾವಣಗೆರೆ ನಂತರ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಬೆಂಗಳೂರಿನ ಆನೇಕಲ್ ಸಮೀಪದ ಜಿಗಣಿ ಹಾಗೂ ಪೀಣ್ಯದಲ್ಲಿ ನೆಲೆಸಿದ್ದ ಆರೋಪಿಗಳು, ಯೂಟ್ಯೂಬ್ ಚಾನೆಲ್​ನಲ್ಲಿ ಧರ್ಮ ಬೋಧನೆ ಮಾಡುತ್ತಿದ್ದರು. ತಮ್ಮದೇ ಯೂಟ್ಯೂಬ್ ತೆರೆದು ಅದರಲ್ಲಿ ಧರ್ಮ ಪ್ರಚೋದನೆಯಲ್ಲಿ ತೊಡಗಿದ್ದರು. ಆರೋಪಿಗಳೆಲ್ಲರೂ ಮೆಹದಿ ಫೌಂಡೇಶನ್​ನ ಸದಸ್ಯರಾಗಿದ್ದಾರೆ’ ಎಂದು ದೋಷಾರೋ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಇವೆಲ್ಲ ಅಂಶಗಳ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಸೂಕ್ತ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಪಾಕಿಸ್ತಾನ ಪ್ರಜೆಗಳು ಸೇರಿದಂತೆ ಹಲವು ಮಂದಿಯ ಹೇಳಿಕೆ ದಾಖಲು ಮಾಡಿದ್ದಾರೆ. ತಾಂತ್ರಿಕ ಸಾಕ್ಷ್ಯಗಳು, ಸಿಡಿಆರ್ ರಿಪೋರ್ಟ್ ಟವರ್ ಡಂಟ್​ ಮತ್ತು ಯೂಟ್ಯೂಬ್ ಚಾನೆಲ್ ವಿವರನ್ನು ಕಲೆ ಹಾಕಿದ್ದಾರೆ. ಹಾಗೇ, ಬಂಧಿತ ಆರೋಪಿಗಳ ಬಳಿ ಇದ್ದ ಮೊಬೈಲ್​ನಲ್ಲಿನ ಆಡಿಯೋ ಮತ್ತು ವಿಡಿಯೋವನ್ನು ಸಂಗ್ರಹಿಸಿದ್ದಾರೆ.

DAKSHINA KANNADA

ಹಾವು ಕಡಿದು ಮಹಿಳೆ ಸಾ*ವು

Published

on

ಬೆಳ್ತಂಗಡಿ: ಹಾವು ಕಚ್ಚಿ ವೃದ್ಧ ಮಹಿಳೆ ಮೃ*ತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನಾರ್ಯ ಎಂಬಲ್ಲಿ ನಡೆದಿದೆ.

ನಾರ್ಯ ನಿವಾಸಿ ಶಾಂತಾ (68) ಮೃ*ತಪಟ್ಟ ಮಹಿಳೆ. ಮನೆಯ ಹಿಂಬದಿಗೆ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಇದ್ದ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು. ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃ*ತಪಟ್ಟಿದ್ದಾರೆ.

ಇದನ್ನೂ ಓದಿ: ವಿದ್ಯುತ್ ತಂತಿ ಬಿದ್ದು ಸೂರಾಲು ಮೇಳದ ಯುವ ಯಕ್ಷಗಾನ ಕಲಾವಿದ ಜೀವಾಂತ್ಯ

ಪ್ರಸ್ತುತ ಬಿಸಿಲಿನ ಬೇಗೆಯನ್ನು ಸಹಿಸಲಾಗದೆ ತಂಪು ವಾತಾವರಣವನ್ನು ಹುಡುಕಿಕೊಂಡು ಹಾವುಗಳು ಮನೆಯೊಳಗೆ, ಹೂವಿನ ಕುಂಡಗಳಿಗೆ, ಕಿಟಿಕಿ, ಬಾಗಿಲುಗಳ ಸಂದು ಮತ್ತಿತರ ತಾಣಗಳಿಗೆ ಬರುತ್ತಿರುವುದು ಸಾಮಾನ್ಯ. ಹಾಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗುತ್ತದೆ.

Continue Reading

LATEST NEWS

ಎಸ್‌. ಜೈಶಂಕರ್‌ಗೆ ಬುಲೆಟ್ ಪ್ರೂಫ್‌ ಕಾರು; ಹೇಗಿರಲಿದೆ ವಿದೇಶಾಂಗ ಸಚಿವರ ನೂತನ ಭದ್ರತಾ ವ್ಯವಸ್ಥೆ

Published

on

ಮಂಗಳೂರು/ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಮುಂದುವರೆದಿದ್ದು, ಭಾರತದ ವಿದೇಶಾಂಗ ಸಚಿವ ಎಸ್‌ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಹೌದು, ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರ ಭದ್ರತೆಯನ್ನು ಗೃಹ ಸಚಿವಾಲಯ ಹೆಚ್ಚಿಸಲಾಗಿದೆ. ಈಗಾಗಲೇ ಇರುವ ಝಡ್ ಭದ್ರತೆ ಜತೆಗೆ ಬುಲೆಟ್​ ಪ್ರೂಫ್​ ಕಾರು ಕೂಡ ಸರ್ಕಾರ ಒದಗಿಸಲಿದೆ. ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ.

ಎಸ್ ಜೈಶಂಕರ್ ಅವರಿಗೆ ಈಗಾಗಲೇ ಗೃಹ ಸಚಿವಾಲಯವು Z- ವರ್ಗದ ಭದ್ರತೆಯನ್ನು ಹೊಂದಿದ್ದು, ಇದನ್ನು ಇದನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಮಾಂಡೋಗಳು ಒದಗಿಸುತ್ತಿದ್ದು, ರಕ್ಷಣೆಗಾಗಿ 33 ಕಮಾಂಡೋಗಳ ತಂಡವನ್ನು 24/7 ನಿಯೋಜಿಸಲಾಗಿದೆ.

ಪಹಲ್ಲಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂದೂ‌ರ್ ನಂತರ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಮಿಲಿಟರಿ ಉದ್ವಿಗ್ನತೆಯ ನಡುವೆ ಭದ್ರತೆ ಬಿಗಿ ಗೊಳಿಸಲಾಗಿದೆ.

ಇದನ್ನೂ ಓದಿ: ‘ಆಪರೇಷನ್‌ ಸಿಂದೂರ್’ ನಂತರದ ಮುಂದಿನ ಕ್ರಮದ ಕುರಿತು ಇಂದು ಮಹತ್ವದ ಸಭೆ

ಹೇಗಿರಲಿದೆ ವಿದೇಶಾಂಗ ಸಚಿವರ ನೂತನ ಭದ್ರತಾ ವ್ಯವಸ್ಥೆ?
Z- ವರ್ಗದ ಭದ್ರತೆಯು ಭಾರತದಲ್ಲಿ ಮೂರನೇ ಅತ್ಯುನ್ನತ ಭದ್ರತೆಯಾಗಿದೆ. ಅದರಲ್ಲಿ 22 ಸೈನಿಕರಿರುತ್ತಾರೆ. ಇವರಲ್ಲಿ 4 ರಿಂದ 6 ಎನ್‌ಎಸ್‌ಜಿ ಕಮಾಂಡೋಗಳು ಮತ್ತು ಸ್ಥಳೀಯ ಪೊಲೀಸರು ಸೇರಿದ್ದಾರೆ. ಇದು ಬುಲೆಟ್​ ಪ್ರೂಫ್​ ಕಾರನ್ನು ಸಹ ಹೊಂದಿದೆ. ಹೆಚ್ಚುವರಿಯಾಗಿ, ಬೆಂಗಾವಲು ಪಡೆಗಳನ್ನು ಸಹ ಒದಗಿಸಲಾಗುತ್ತದೆ. ಈ ಭದ್ರತೆಯನ್ನು ಹೆಚ್ಚಿನ ಭದ್ರತೆಯ ಅಗತ್ಯವಿರುವ ದೊಡ್ಡ ನಾಯಕರು ಮತ್ತು ಸೆಲೆಬ್ರಿಟಿಗಳಿಗೆ ನೀಡಲಾಗುತ್ತದೆ.

ವಿದೇಶಾಂಗ ಸಚಿವರಿಗೆ ಇರುವ ಬೆದರಿಕೆಯನ್ನು ಗುಪ್ತಚರ ಬ್ಯೂರೋ (ಐಬಿ) ನಿರ್ಣಯಿಸಿದ ನಂತರ ಅಕ್ಟೋಬರ್ 2023ರಲ್ಲಿ ಅವರ ಭದ್ರತೆಯನ್ನು Y- ವರ್ಗದಿಂದ Z- ವರ್ಗಕ್ಕೆ ಹೆಚ್ಚಿಸಲಾಗಿತ್ತು.

Continue Reading

LATEST NEWS

6 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್

Published

on

ನವದೆಹಲಿ: ಟೆಕ್ ದಿಗ್ಗಜ ಮೈಕ್ರೋಸಾಫ್ಟ್ 6,000 ಉದ್ಯೋಗಿಗಳನ್ನು ವಜಾಗೊಳಿಸಿದೆ.

ವಜಾಗೊಳಿಸುವಿಕೆಯು ಎಲ್ಲಾ ಹಂತಗಳು ಮತ್ತು ಭೌಗೋಳಿಕ ಪ್ರದೇಶಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಆದರೆ ನಿರ್ವಹಣಾ ಮಟ್ಟವನ್ನು ಕಡಿಮೆ ಮಾಡುವತ್ತ ಗಮನಹರಿಸುತ್ತದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ. ಮಂಗಳವಾರ ಸೂಚನೆಗಳನ್ನು ಹೊರಡಿಸಲಾಗಿದೆ.

ಮೈಕ್ರೋಸಾಫ್ಟ್ ಎರಡು ವಾರಗಳ ಹಿಂದೆ ಜನವರಿಯಿಂದ ಮಾರ್ಚ್ ಅವಧಿಯ ದೃಢವಾದ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿತು. ಇದು ತನ್ನ ಕೌಡ್ ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆ ವ್ಯವಹಾರಗಳಲ್ಲಿ ಬಲವಾದ ಕಾರ್ಯಕ್ಷಮತೆಯಿಂದ ಪ್ರೇರಿತವಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page