Connect with us

LATEST NEWS

ಕಣ್ಣೀರು ಹಾಕುತ್ತಾ ಮಹಾಕುಂಭಮೇಳದಿಂದ ಹೊರ ನಡೆದ ಸುಂದರಿ ಸಾಧ್ವಿ

Published

on

ಮಂಗಳೂರು/ಪ್ರಯಾಗ್‌ರಾಜ್ : ಮಹಾ ಕುಂಭಮೇಳವು ಉತ್ತರ ಪ್ರದೇಶದ ಪ್ರಯಾದ್ ನಲ್ಲಿ ನಡೆಯುತ್ತಿದ್ದು, ಬಹಳ ಅಟ್ರ್ಯಾಕ್ಟಿವ್ ಆಗಿದ್ದ ಸುಂದರ ಸಾಧ್ವಿ ಹರ್ಷ ರಿಚಾರಿಯಾ ಕಣ್ಣೀರು ಹಾಕುತ್ತಾ ಮಹಾ ಕುಂಭದಿಂದ ಹೊರ ಬಂದಿದ್ದಾರೆ.

ಮಹಾಕುಂಭ ಮೇಳದಲ್ಲಿ  ಲಕ್ಷಗಟ್ಟಲೆ ಭಕ್ತಾದಿಗಳು, ಸಾಧು-ಸಂತರು ಪಾಲ್ಗೊಂಡು ಪುನೀತರಾಗುತ್ತಿದ್ದಾರೆ. ಅಲ್ಲದೆ ಇದು ಅನೇಕ ವಿಶೇಷತೆಗಳಿಗೆ ಕಾರಣವಾಗಿದೆ. ಹಲವು ವಿಶೇಷತೆಗಳನ್ನು ಮೆರೆಯುವಂತಹ ಸಾಧು ಸಂತರು, ನಾಗಸಾಧುಗಳು ಕಂಡು ಬರುತ್ತಿದ್ದಾರೆ. ಇದರೆಡೆಯಲ್ಲಿ ಬಹಳ ಪ್ರಮುಖ ಆಕರ್ಷಣೆಯಾಗಿ ಕಂಡುಬಂದದ್ದು ಸುರಸುಂದರಿಯಾದ ಸಾಧ್ವಿ ಹರ್ಷ ರಿಚಾರಿಯಾ. ಆದರೆ ಈ ಸಾಧ್ವಿ ಇದೀಗ ಅಳುತ್ತಾ ಕುಂಭಮೇಳದಿಂದ ಹೊರ ಬಂದಿದ್ದಾರೆ. ರಿಚಾರಿಯಾ ಅಚಾನಕ್ ಕುಂಭಮೇಳವನ್ನು ಅರ್ಧದಲ್ಲಿಯೇ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಕಣ್ಣೀರು ಹಾಕುತ್ತಾ ಗಂಭೀರ ಆರೋಪ ಮಾಡಿದ್ದಾರೆ. ‘ನಾಚಿಕೆ ಆಗಬೇಕು ಆ ಜನಕ್ಕೆ, ನಾನು ಇಲ್ಲಿ ಮಹಾಕುಂಭದಲ್ಲಿ ಇರೋಕೆ ಬಿಡಲಿಲ್ಲ. ಈ ಕುಂಭಮೇಳ ನಮ್ಮ ಜೀವನದಲ್ಲಿ ಒಮ್ಮೆ ಬರುತ್ತೆ, ನೀವು ಅದನ್ನ ನನ್ನಿಂದ ಕಸಿದುಕೊಂಡಿದ್ದೀರಿ. ಈಗ ನಾನು ಏನೋ ದೊಡ್ಡ ತಪ್ಪು ಮಾಡಿದಂಗೆ ಅನಿಸುತ್ತಿದೆ. ನನ್ನದು ಯಾವ ತಪ್ಪೂ ಇಲ್ಲದಿದ್ದರೂ ನನ್ನ ಮೇಲೆ ಟೀಕೆ ಮಾಡ್ತಿದ್ದಾರೆ. ಇನ್ನು ಇಲ್ಲಿ ನಿಲ್ಲೋಕೆ ಆಗಲ್ಲ’ ಎಂದು ಹರ್ಷ ರಿಚಾಯಿಯಾ ಸಾರ್ವಜನಿಕರ ವಿದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿವಾದ:

ಮಹಾಕುಂಭಮೇಳ ಆರಂಭದಿಂದಲೂ ಹರ್ಷ ರಿಚಾರಿಯಾ ಭಾರೀ ಚರ್ಚೆಯಲ್ಲಿದ್ದಾರೆ. ಮಹಿಳಾ ವರದಿಗಾರ್ತಿಯೊಬ್ಬರು “ಇಷ್ಟು ನೀವು ಸುಂದರಿಯಾಗಿದ್ದರೂ ಏಕೆ ಸಾಧ್ವಿ ಆಗಿದ್ದೀರಿ?” ಎಂದು ಪ್ರಶ್ನಿಸಿದ್ದರು. ಆಗ ಹರ್ಷಾ ರಿಚಾರಿಯಾ, “ಧರ್ಮದ ಜೊತೆ ಇದ್ದಾಗ ನೆಮ್ಮದಿ ಸಿಗುತ್ತದೆ. ನಾನೀಗ 30 ವರ್ಷದವಳು, ಕಳೆದ 2 ವರ್ಷದ ಹಿಂದೆ ಸನ್ಯಾಸತ್ವ ಸ್ವೀಕರಿಸಿದ್ದೇನೆ” ಎಂದಿದ್ದ ವಿಡಿಯೋ ವೈರಲ್ ಆದ ನಂತರ ಟ್ರೋಲ್‌ರ್‌ಗಳು ಸಾಧ್ವಿ ಹರ್ಷಾ ರನ್ನು ಟಾರ್ಗೆಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದಾರೆ. ಮಾಡೆಲಿಂಗ್ ಮೂಲಕ ತಮ್ಮ ವೃತ್ತಿ ಶುರು ಮಾಡಿದ್ದ ಹರ್ಷ ಆರು ವರ್ಷಗಳ ನಂತ್ರ ಆಧ್ಯಾತ್ಮಿಕದತ್ತ ಒಲವು ತೋರಿಸಿದ್ದರು. ನಿರೂಪಕಿಯಾಗಿ ಕೆಲಸ ಮಾಡ್ತಿದ್ದ ಹರ್ಷ, ಕಳೆದ ಎರಡು ವರ್ಷಗಳಿಂದ ಮಾಡೆಲಿಂಗ್ ಮತ್ತು ನಿರೂಪಣೆಯಿಂದ ದೂರವಿದ್ದಾರೆ. ಅಲ್ಲದೆ ಇನ್ಸ್ಟಾಗ್ರಾಂ ನಲ್ಲಿ ಸುಮಾರು ಹನ್ನೆರಡು ಲಕ್ಷ ಫಾಲೋವರ್ಸ್‌ಗಳನ್ನೂ ಹೊಂದಿದ್ದಾರೆ. ತಾನು ‘ಆಚಾರ್ಯ ಮಹಾಮಂಡಲೇಶ್ವರನ ಶಿಷ್ಯೆ’ ಎಂದು ಹೇಳಿಕೊಂಡಿದ್ದಾರೆ. ಸಧ್ಯ ಕಂಡು ಕೇಳರಿಯದ ಜನಸಾಗರದ ಮಧ್ಯೆ, ರಿಚಾರಿಯಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ.

DAKSHINA KANNADA

ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹೀಂ ನವಾಝ್ ಆಯ್ಕೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 10942 ಮತಗಳನ್ನು ಗಳಿಸಿ ಇಬ್ರಾಹೀಂ ನವಾಝ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಡಕಬೈಲ್ ನಿವಾಸಿಯಾಗಿರುವ ಇಬ್ರಾಹೀಂ ನವಾಝ್ ಈ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರಿಯಂಗಳ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಅವರು ಬಂಟ್ವಾಳ ಹ್ಯೂಮನ್ ವೆಲ್ಫೇರ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾಗಿ, ಆಸರೆ ಸೇವಾ ಫೌಂಡೇಶನ್ ಕಾರ್ಯದರ್ಶಿ, ನವೋದಯ ಅಟೋ-ರಿಕ್ಷಾ ಚಾಲಕ-ಮಾಲಕರ ಸಂಘ ಗೌರವಧ್ಯಕ್ಷರಾಗಿ, ಬಂಟ್ವಾಳ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಸದಸ್ಯ, ತೆಂಗು ಬೆಳೆಗಾರರ ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳಿಗೆ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ 2024ರ ಆಗಸ್ಟ್ ತಿಂಗಳಿನಲ್ಲಿ ಮತದಾನ ನಡೆದಿತ್ತು. ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು.

Continue Reading

LATEST NEWS

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಶ್ರೀಲಂಕಾದ ಸ್ಟಾರ್ ಆಟಗಾರ

Published

on

ಮಂಗಳೂರು/ಗಾಲೆ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಶ್ರೀಲಂಕಾದ ಸೋಲನುಭವಿಸಿದೆ. ಹೀಗಾಗಿ ಮಾಜಿ ನಾಯಕ ದಿಮುತ್ ಕರುಣಾರತ್ನ ಸೋಲಿನೊಂದಿಗೆ ತಮ್ಮ 36ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ದಿಮುತ್ ಇಂಟರ್​ನ್ಯಾಷನಲ್​ ಕೆರಿಯರ್ ಅಂತ್ಯಗೊಳಿಸಿದ್ದಾರೆ. ವಿಶೇಷ ಎಂದರೆ ಇದು ದಿಮುತ್ ಕರುಣರತ್ನೆ ಅವರ 100ನೇ ಟೆಸ್ಟ್ ಪಂದ್ಯವಾಗಿತ್ತು.

ಈ ಸ್ಮರಣೀಯ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ದಿಮುತ್ ಮೊದಲ ಇನಿಂಗ್ಸ್​ನಲ್ಲಿ 36 ರನ್​ಗಳಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 14 ರನ್​ ಬಾರಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ತಮ್ಮ 100ನೇ ಪಂದ್ಯದಲ್ಲಿ ಕೇವಲ 40 ರನ್​ ಮಾತ್ರ ಕಲೆಹಾಕಿದ್ದಾರೆ.

ಇದನ್ನೂ ಓದಿ: ಗೂಗಲ್ ಮ್ಯಾಪ್: ಮತ್ತೊಂದು ಭೀಕರ ಅಪಘಾತ !

ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡವು 9 ವಿಕೆಟ್​ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಲಂಕಾ ದಾಂಡಿಗ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

2011 ರಲ್ಲಿ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ  ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಒಟ್ಟು 237 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 17 ಶತಕ ಹಾಗೂ 50 ಅರ್ಧಶತಕಗಳೊಂದಿಗೆ ಒಟ್ಟು 8538 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಶ್ರೀಲಂಕಾದ 12ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Continue Reading

LATEST NEWS

ಮನೆ-ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಅಗ್ನಿ ಅವಘಡ

Published

on

ಧಾರವಾಡ: ಮನೆಗಳಿಗೆ ನೇರ ಸಂಪರ್ಕವನ್ನು ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಧಾರವಾಡದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ.

ಮನೆ-ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಇದಾಗಿದ್ದು, ಬಡಾವಣೆಯಲ್ಲಿ ಗ್ಯಾಸ್ ಪೈಪ್ ಲೈನ್‌ನ ಎರಡೂ ಕಡೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ.

ಪೈಪ್‌ ಲೈನ್‌ಗೆ ಬೆಂಕಿ ಹೊತ್ತಿದ ಪರಿಣಾಮ ಮಾರ್ಗದುದ್ದಕ್ಕೂ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಹತ್ತಿರದ ನಿವಾಸಿಗಳು ಭಯದಿಂದ ಮನೆಯಿಂದ ಹೊರಗಡೆ ನಡೆದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page