Connect with us

DAKSHINA KANNADA

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

Published

on

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.


ಇತ್ತೀಚೆಗೆ ಹತ್ಯೆಯಾಗಿದ್ದ ಫಾಝಿಲ್ ಸಹೋದರ ಸಂಚರಿಸುತ್ತಿದ್ದ ವಾಹನ ಮತ್ತು ಇನ್ನೊಂದು ವಾಹನ ಪರಸ್ಪರ ತಾಗಿದ್ದರಿಂದ ಇತ್ತಂಡಗಳ ನಡುವೆ ಮಾತಿನ ಚಕಮಕಿ ಉಂಟಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

DAKSHINA KANNADA

ಹಾವು ಕಡಿದು ಮಹಿಳೆ ಸಾ*ವು

Published

on

ಬೆಳ್ತಂಗಡಿ: ಹಾವು ಕಚ್ಚಿ ವೃದ್ಧ ಮಹಿಳೆ ಮೃ*ತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾರ್ಯ ಗ್ರಾಮ ಎಂಬಲ್ಲಿ ನಡೆದಿದೆ.

ನಾರ್ಯ ನಿವಾಸಿ ಶಾಂತಾ (68) ಮೃ*ತಪಟ್ಟ ಮಹಿಳೆ. ಮನೆಯ ಹಿಂಬದಿಗೆ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಇದ್ದ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು. ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃ*ತಪಟ್ಟಿದ್ದಾರೆ.

ಇದನ್ನೂ ಓದಿ: ವಿದ್ಯುತ್ ತಂತಿ ಬಿದ್ದು ಸೂರಾಲು ಮೇಳದ ಯುವ ಯಕ್ಷಗಾನ ಕಲಾವಿದ ಜೀವಾಂತ್ಯ

ಪ್ರಸ್ತುತ ಬಿಸಿಲಿನ ಬೇಗೆಯನ್ನು ಸಹಿಸಲಾಗದೆ ತಂಪು ವಾತಾವರಣವನ್ನು ಹುಡುಕಿಕೊಂಡು ಹಾವುಗಳು ಮನೆಯೊಳಗೆ, ಹೂವಿನ ಕುಂಡಗಳಿಗೆ, ಕಿಟಿಕಿ, ಬಾಗಿಲುಗಳ ಸಂದು ಮತ್ತಿತರ ತಾಣಗಳಿಗೆ ಬರುತ್ತಿರುವುದು ಸಾಮಾನ್ಯ. ಹಾಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗುತ್ತದೆ.

Continue Reading

DAKSHINA KANNADA

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Published

on

ಮಂಗಳೂರು: ಮಾವಿನ ಹಣ್ಣನ್ನು ಲೋಡ್ ಮಾಡಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರಿನ ಪಚ್ಚನಾಡಿ ಬೋಂದೆಲ್ ರಸ್ತೆಯಲ್ಲಿ ನಡೆದಿದೆ.

ಲಾರಿಯು ಉಡುಪಿಯಲ್ಲಿ ನಡೆಯಲಿರುವ ಮಾವು ಮೇಳಕ್ಕೆ ಹೋಗುತ್ತಿತ್ತು. ಈ ವೇಳೆ ವಾಮಂಜೂರು ಕಡೆಯಿಂದ ಪಚ್ಚನಾಡಿ ಕಡೆ ಸಂಚರಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಇದನ್ನೂ ಓದಿ: ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಪೋ*ಟ, ಐವರಿಗೆ ಗಂ*ಭೀರ ಗಾಯ

ಘಟನೆಯಲ್ಲಿ ಲಾರಿ ಚಾಲಕ ರಫೀಕ್ ಉಳಾಯಿಬೆಟ್ಟು ಅವರಿಗೆ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಚಾಲಕ ನಗರದ‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Continue Reading

bangalore

ಮತ್ತೆ ಆವರಿಸುತ್ತಿರುವ ಮುಂಗಾರು ; ಸಿಡಿಲು, ಮಿಂಚು ಸಹಿತ ರಾಜ್ಯಾದ್ಯಂತ ಅಲ್ಲಲ್ಲಿ ಮಳೆ

Published

on

ಬಳ್ಳಾರಿ/ ಬೆಂಗಳೂರು/ದ.ಕ/ಉಡುಪಿ : ಒಂದೊಮ್ಮೆ ಭಾರೀ ಆರ್ಭಟಿಸಿ ಬಳಿಕ ಕೊಂಚ ತಣ್ಣಗಾಗಿದ್ದ ಮುಂಗಾರು ಪೂರ್ವ ಮಳೆ ಮತ್ತೆ ರಾಜ್ಯಾದ್ಯಂತ ಆವರಿಸಿದೆ. ನಿನ್ನೆ (ಮೇ.13) ಒಂದೇ ದಿನ ರಾಜ್ಯಾದ್ಯಂತ ಅಲ್ಲಲ್ಲಿ ಸಿಡಿಲು, ಮಿಂಚು ಸಹಿತ ವರುಣನ ಆರ್ಭಟ ಜೋರಾಗಿಯೇ ಇತ್ತು.

ಬಳ್ಳಾರಿಯಲ್ಲಂತೂ ವರುಣನಾರ್ಭಟ ಜೋರಾಗಿಯೇ ಇತ್ತು ಮಾತ್ರವಲ್ಲದೆ, ಅಪಾರ ಹಾನಿಯೂ ಸಂಭವಿಸಿದೆ. ಮೊದಲೇ ಟ್ರಾಫಿಕ್ ಜಾಮ್ ಹೆಚ್ಚಿರುವ ಬೆಂಗಳೂರಿನಲ್ಲಿ ನಿನ್ನೆ ಮತ್ತೂ ಅಧಿಕ ಹೊತ್ತು ಜಾಮ್ ಆಘಿತ್ತು ಮಾತ್ರವಲ್ಲದೆ, ಬಸ್‌ ಒಳಗೂ ನೀರು ನುಗ್ಗಿ ಪ್ರಯಾಣಕ್ಕೆ ತೊಂದರೆ ನಿಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲೂ ಅಲ್ಲಲ್ಲಿ ಜೋರು ಮಳೆ ಸುರಿದಿದೆ.

ಬಳ್ಳಾರಿಯಲ್ಲಿ ಸಿಡಿಲು ಬಡಿದು ಪ್ರಾಣಹಾನಿ :

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಕುರಿಗಾಹಿಗಳು ಬಲಿಯಾಗಿದ್ದಾರೆ. ಬೀರಪ್ಪ (45), ಸುನೀಲ (26), ವಿನೋದ್ (14) ಮೃತ ದುರ್ದೈವಿಗಳು. ಕುರಿ ಮೇಯಿಸಲು ತೆರಳಿದ್ದಾಗ ಜೋರು ಮಳೆ ಬಂದಿದೆ. ಈ ವೇಳೆ, ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಸಿರಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕುಡಪಲಿ ಗ್ರಾಮದ ರೈತ ಸುನೀಲ ಕಾಳೇರ (29), ಹಾನಗಲ್ಲ ತಾಲೂಕಿನ ಕೊಂಡೋಜಿ ಗ್ರಾಮದಲ್ಲಿ ವೃದ್ದೆ ಮರಿಯಮ್ಮ ನಾಯ್ಕ‌ರ್ (60) ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಟ್ರಾಫಿಕ್‌ಜಾಮ್, ಬಸ್‌ ಒಳಗೂ ನೀರು :

ಬೆಂಗಳೂರಿನಲ್ಲಿ ಸುರಿದ ಗುಡುಗು, ಗಾಳಿ ಸಹಿತ ಭಾರಿ ಮಳೆಗೆ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್, ಮೈತ್ರಿ ಸರ್ಕಲ್, ವಿಧಾನಸೌಧ, ಶಿವಾನಂದ ಸರ್ಕಲ್, ಕೆ.ಆ‌ರ್. ಸರ್ಕಲ್ ಸುತ್ತಮುತ್ತ ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮಾನ್ಯತಾ ಟೆಕ್ ಪಾರ್ಕ್‌ ಬಳಿ ಬಿಎಂಟಿಸಿ ಬಸ್ ಒಳಗೆ ಮಳೆ ನೀರು ನುಗ್ಗಿದೆ. ಭಾರಿ ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು, ರಸ್ತೆಯಿಂದ ಬಸ್‌ ಒಳಭಾಗಕ್ಕೆ ಮಳೆ ನೀರು ಹರಿದಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆ :

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ಉಡುಪಿ ಜಿಲ್ಲೆಯಲ್ಲೂ ಸಿಡಿಲು, ಮಿಂಚು ಸಹಿತ ಉತ್ತಮ ಮಳೆಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page