Connect with us

ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳ ಆಶಾಕಿರಣ ತಬಸ್ಸುಮ್‍ಗೆ ಮಂಗಳೂರು ಪ್ರೆಸ್ ಕ್ಲಬ್‍ನ ವರ್ಷದ ಪ್ರಶಸ್ತಿ..!

Published

on

ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳ ಆಶಾಕಿರಣ ತಬಸ್ಸುಮ್‍ಗೆ ಮಂಗಳೂರು ಪ್ರೆಸ್ ಕ್ಲಬ್‍ನ ವರ್ಷದ ಪ್ರಶಸ್ತಿ..!

ಮಂಗಳೂರು: ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳನ್ನು ತಾಯಿಯಂತೆ ಸಲಹುವ ಮೂಲಕ ಮಾನವೀಯ ಸೇವೆ ಮಾಡುತ್ತಿರುವ ತಬಸ್ಸುಮ್ ಅವರು ಮಂಗಳೂರು ಪ್ರೆಸ್ ಕ್ಲಬ್‍ನ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಂಗಳೂರು ಕೊಣಾಜೆ ಸಮೀಪದ ನಿವಾಸಿ ತಬಸ್ಸುಮ್ ಅವರನ್ನು ಪ್ರೊ.ಬಾಲಕೃಷ್ಣ ಗಟ್ಟಿ, ಡಾ.ವಸಂತ ಕುಮಾರ್ ಪೆರ್ಲ ಮತ್ತು ಡಾ.ನಾಗವೇಣಿ ಮಂಚಿ ನೇತೃತ್ವದ ಆಯ್ಕೆ ಸಮಿತಿಯು 2019ನೇ ವರ್ಷದ ಮಂಗಳೂರು ಪ್ರೆಸ್ ಕ್ಲಬ್‍ನ ಪ್ರಶಸ್ತಿಗೆ ಬುಧವಾರ ಆಯ್ಕೆ ಮಾಡಿದೆ.

ಫೆಬ್ರವರಿ 29ರಂದು ಪ್ರಶಸ್ತಿ ಪ್ರದಾನ:

ಉರ್ವ ರಾಧಾಕೃಷ್ಣ ಮಂದಿರದ ಸಭಾಂಗಣದಲ್ಲಿ 2020ರ ಫೆಬ್ರವರಿ 29ರಂದು ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದು ತಬಸ್ಸುಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ಪ್ರೆಸ್ ಕ್ಲಬ್‍ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಬಸ್ಸುಮ್ ಪರಿಚಯ:

ಎಚ್‍ಐವಿ/ ಏಡ್ಸ್ ಎಂಬುದು ಜಗತ್ತನ್ನು ತಲ್ಲಣಗೊಳಿಸಿರುವ ಮಹಾಮಾರಿಯಾಗಿ ಪರಿಣಮಿಸಿದೆ. ಈ ಸೋಂಕಿಗೆ ಎಷ್ಟೋ ಮಂದಿ ಬಲಿಯಾಗಿದ್ದರೆ, ಇನ್ನೇಷ್ಟೋ ಮಂದಿ ಜೀವನ್ಮರಣ ಹೋರಾಟದಲ್ಲೂ ಇದ್ದಾರೆ. ಅದರಲ್ಲೂ ಯಾವುದೇ ತಪ್ಪು ಮಾಡದ ಅಮಾಯಕ ಮಕ್ಕಳು ಕೂಡಾ ಎಚ್‍ಐವಿ/ ಏಡ್ಸ್‍ಗೆ ಬಲಿಯಾಗಿದ್ದನ್ನು ನಾವು ಕಂಡಿದ್ದೇವೆ.

ಎಚ್‍ಐವಿ ಸೋಂಕಿತ ಮಕ್ಕಳನ್ನು ಅಸ್ಪ್ರಶ್ಯರಂತೆ ಕಾಣುವ, ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುವ ಅಮಾನವೀಯ ಪರಿಸ್ಥಿತಿಯ ಮಧ್ಯೆ, ಸರಕಾರೇತರ ಸ್ವಯಂಸೇವಾ ಸಂಸ್ಥೆಗಳು ಮತ್ತು ಮಾಧ್ಯಮಗಳ ನಿರಂತರ ಜನಜಾಗೃತಿಯಿಂದ ಎಚ್‍ಐವಿ/ ಏಡ್ಸ್ ಸೋಂಕು ಬಾತ ಮಕ್ಕಳನ್ನು ಸಾಕಿ ಸಲಹುವ ಕೆಲಸ ಅಲ್ಲಲ್ಲಿ ನಡೆಯುತ್ತಿದೆ.
ಬಹುತೇಕ ತಂದೆ ತಾಯಿಯನ್ನು ಕಳೆದುಕೊಂಡಿರುವ ಅಂತಹ ಅನಾಥ ಮಕ್ಕಳಿಗೆ ತಾಯಿಯಯಂತೆ ಸಲಹುವ ಮಾನವೀಯ ಕೆಲಸ ಮಾಡುತ್ತಿರುವವರು ತಬಸ್ಸುಮ್.
ಕೊಣಾಜೆ ಸಮೀಪದ ಆರ್ಥಿಕವಾಗಿ ಹಿಂದುಳಿದ ತುಂಬು ಸದಸ್ಯರ ಕುಟುಂಬದ ಅಬ್ದುಲ್ ಸಮದ್ ಮತ್ತು ಖೈರುನ್ನಿಸಾ ದಂಪತಿಯ ಪುತ್ರಿಯೇ ತಬಸ್ಸುಮ್. ಶಾಲೆ ಕಾಲೇಜಿನ ಓದಿನಲ್ಲಿ ಮುಂಚೂಣಿಯಲ್ಲಿ ಮಾತ್ರವಲ್ಲ, ಎಲ್ಲ ಪರೀಕ್ಷೆಗಳಲ್ಲೂ ಪ್ರಥಮ ಸ್ಥಾನವನ್ನೇ ತಬಸ್ಸುಂ ಪಡೆಯುತ್ತಿದ್ದರು. ಜೀವನದಲ್ಲಿ ದೊಡ್ಡ ಸಾಧನೆಗಳನ್ನು ಮಾಡಬೇಕು ಎಂಬ ಕನಸುಗಳಿದ್ದರೂ, ಮನೆಯಿಂದ ಪೂರಕ ಸಹಕಾರ ಸಿಗುತ್ತಿರಲಿಲ್ಲ. ಪದವಿ ತರಗತಿ ಆರಂಭಿಸುವಾಗಲೇ ಮದುವೆ ಮಾಡಿಕೊಡಲಾಗಿತ್ತು.
ಕೌಟುಂಬಿಕ ಜೀವನದ ನಡುವೆ, ಸಮಾಜಕ್ಕೆ ಏನಾದರೊಂದು ಮಾಡಬೇಕು ಎಂಬ ಅವರ ಹಠ ಸಾಧನೆಯಿಂದಲೇ ಇವತ್ತು ಎಚ್‍ಐವಿ/ ಏಡ್ಸ್ ಬಾತ ಹೆಣ್ಮಕ್ಕಳನ್ನು ಸಾಕಿ ಸಲಹುವ ಸ್ನೇಹದೀಪ್ ಸಂಸ್ಥೆ ಕಾರ್ಯಾಚರಿಸುವಂತಾಗಿದೆ. 2011ರಲ್ಲಿ ಅವರು ಸ್ನೇಹ ದೀಪ್ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ.
ತನ್ನ ಗೆಳತಿಯೊಬ್ಬಳು ಏಡ್ಸ್‌ಗೆ ತುತ್ತಾಗಿ ಸಾವನ್ನಪ್ಪಿ, ಅವರ ಮಕ್ಕಳು ಅನಾಥರಾಗಿದ್ದನ್ನು ಕಂಡು ಬಹಳ ಬೇಸರಗೊಂಡಿದ್ದ ಅವರು, ಅಂದೇ ಎಚ್‍ಐವಿ/ ಏಡ್ಸ್ ಪೀಡಿತ ಹೆಣ್ಣು ಮಕ್ಕಳ ಸಂಸ್ಥೆ ಸ್ಥಾಪಿಸುವ ಯೋಜನೆ ಹಾಕಿಕೊಂಡಿದ್ದರು. ಆರಂಭದಲ್ಲಿ ಎಚ್‍ಐವಿ/ ಏಡ್ಸ್ ಬಾತ ಮಕ್ಕಳ ಸೇವೆ ಮಾಡುವ ಸಂಸ್ಥೆಯನ್ನು ಸೇರಿದ್ದ ಅವರು, ಮುಂದೆ ತನ್ನಲ್ಲಿದ್ದ ದುಡ್ಡಿನಿಂದ ಸ್ನೇಹದೀಪ್ ಸಂಸ್ಥೆಯನ್ನು ಹುಟ್ಟುಹಾಕಿದ್ದರು.
ಮಂಗಳೂರಿನ ಬಿಜೈ ಬಳಿ ಕಾರ್ಯಾಚರಿಸುತ್ತಿರುವ ಸ್ನೇಹದೀಪ್‍ನಲ್ಲಿ ಎಚ್‍ಐವಿ/ ಏಡ್ಸ್‍ನಿಂದ ತಂದೆ- ತಾಯಿಗಳನ್ನು ಕಳೆದುಕೊಂಡಿರುವ ಒಂದು ವರ್ಷದಿಂದ 10-15 ವರ್ಷದ ಮಕ್ಕಳಿದ್ದಾರೆ. ಬೀದಿ ಪಾಲಾಗಲಿದ್ದ ಎಷ್ಟೋ ಮಕ್ಕಳಿಗೆ ಮಾತೃವಾತ್ಸಲ್ಯ ನೀಡಿ ಹೊಸ ಬದುಕು ಕಟ್ಟುವ ಕೆಲಸವನ್ನು ತಬಸ್ಸುಮ್ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುತ್ತಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.
ಕೆಲವು ಮಕ್ಕಳ ಜೀವನದ ಅಂತಿಮ ಕ್ಷಣದಲ್ಲಿ ಹತ್ತಿರವಿದ್ದುಕೊಂಡು ತನ್ನ ಸೇವೆ ಮಾಡುತ್ತಿದ್ದಾರೆ. ಒಂದೊಂದು ಮಗುವಿನ ಹಿಂದೆಯೂ ಕಣ್ಣೀರ ಕಥೆಗಳಿವೆ. 19 ಮಕ್ಕಳು ಅವರ ಕೈಯಲ್ಲೇ ಪ್ರಾಣ ಬಿಟ್ಟಿದ್ದು, ಅದನ್ನು ನೆನಪಿಸುವಾಗ ತಬಸ್ಸುಮ್ ದುಃಖ ತಡೆದುಕೊಳ್ಳದೇ ಕಣ್ಣೀರು ಸುರಿಸುತ್ತಾರೆ.
ಕನಿಷ್ಠ ಪಕ್ಷ ಆ ಮಕ್ಕಳಿಗೆ ಪ್ರೀತಿ ವಾತ್ಸಲ್ಯದಿಂದ ಜೀವ ಬಿಡುವ ವ್ಯವಸ್ಥೆ ಮಾಡಿದ ತೃಪ್ತಿ ತಬಸ್ಸುಮ್ ಅವರದ್ದು. ಅಲ್ಲದೆ, ಆಯಾ ಮಕ್ಕಳಿಗೆ ಅವರವರ ಧರ್ಮಕ್ಕನುಗುಣವಾಗಿ ಗೌರವಯುತ ಅಂತಿಮ ಸಂಸ್ಕಾರ ಮಾಡಿಸುವ ಜವಾಬ್ದಾರಿ ನಿರ್ವಹಿಸಿ ಕೃತಜ್ಞರಾಗುತ್ತಿದ್ದಾರೆ. ಎಲ್ಲ ಧರ್ಮದ ಮಕ್ಕಳನ್ನೂ ಜಾತಿ, ಧರ್ಮದ ಭೇದವಿಲ್ಲದೆ, ಪ್ರೀತಿ, ಆದರದಿಂದ ಸಲಹುತ್ತಿದ್ದಾರೆ.
ಸ್ನೇಹದೀಪ್‍ನಲ್ಲಿ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳ 26 ಮಕ್ಕಳು ಇದ್ದಾರೆ. ಅವರಿಗೆ ಶಿಕ್ಷಣ, ಊಟ, ವಸತಿ, ಆರೋಗ್ಯದ ಸೇವೆಯನ್ನು ತನ್ನ ಮೂವರು ಸಿಬ್ಬಂದಿಗಳ ಜತೆ ತಬಸ್ಸುಮ್ ಮಾಡಿಸುತ್ತಿದ್ದಾರೆ. ಎಲ್ಲ ಮಕ್ಕಳು ಕೂಡಾ ತಬಸ್ಸುಮ್ ಅವರನ್ನು ತಾಯಿಯಂತೆ, ಸ್ನೇಹದೀಪ್ ಸಂಸ್ಥೆಯನ್ನು ಸ್ವಂತ ಮನೆಯಂತೆ ಕಾಣುತ್ತಿದ್ದಾರೆ. ತಬಸ್ಸುಮ್ ಅವರು ಅಂಗಡಿಯೊಂದನ್ನು ನಡೆಸುತ್ತಿದ್ದು, ಅದರಿಂದ ಬಂದ ಆದಾಯವನ್ನು ಸ್ನೇಹದೀಪ ಸಂಸ್ಥೆಗೆ ಖರ್ಚು ಮಾಡುತ್ತಿದ್ದಾರೆ. ಜತೆಗೆ ಸ್ಥಳೀಯ ಸಹೃದಯಿ ದಾನಿಗಳಿಂದ ಸಹಾಯ ಪಡೆದು ಸಂಸ್ಥೆ ನಡೆಸುತ್ತಿದ್ದಾರೆ.
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಸಂಸ್ಥೆಗೆ ದಾನಿಗಳಿಂದ ನೆರವು ಪಡೆಯುತ್ತಿದ್ದಾರೆ. ಅನೇಕ ಕಷ್ಟದ ಸಂದರ್ಭಗಳು ಬಂದರೂ, ಅದನ್ನು ಎದೆಗುಂದದೆ ನಿಭಾಯಿಸಿಕೊಂಡು ಸ್ನೇಹ ದೀಪ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ವಿಡಿಯೋಗಾಗಿ..

Advertisement
Click to comment

Leave a Reply

Your email address will not be published. Required fields are marked *

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page