Connect with us

DAKSHINA KANNADA

ಡೆಂಗಿಗಿಂತ ವಿಪಕ್ಷಗಳ ಸುಳ್ಳು ವೇಗವಾಗಿ ಹರಿದಾಡ್ತಾ ಇದೆ..! ಡೆಂಗಿ ಬಗ್ಗೆ ಜನರು ಆತಂಕ ಪಡಬೇಕಾಗಿಲ್ಲ : ಗುಂಡೂರಾವ್

Published

on

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ, ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಂಗಿ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.‌ ಯಾವುದೇ ಬೆಡ್ ಅಥಾವಾ ಔಷಧಿಯ ಕೊರತೆಯಿಲ್ಲ.‌ ಡೆಂಗಿ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿಯವರು ತಿಳಿಸಿದ್ದಾರೆ ಎಂದರು.‌

ಇನ್ನು ಎರಡು ತಿಂಗಳು ಡೆಂಗಿ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಗಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.‌ ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶ ಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಗಿ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒ ಗಳಿಗೆ ಸೂಚಿಸಲಾಗಿದೆ. ಔಷಧಿಗಳ ಲಭ್ಯತೆ ಇದೆ.

ಡೆಂಗಿ ವಿಚಾರದಲ್ಲಿ ವಿಪಕ್ಷ ನಾಯಕರು ಆತಂಕ ಹುಟ್ಟಿಸುವಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದು ಸರಿಯಲ್ಲ. ಇಂಥಹ ಸಂದರ್ಭದಲ್ಲಿ ವಿಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದರೆ ಡೆಂಗಿ ಹರಡುವ ಸೊಳ್ಳೆಗಳಿಗಿಂತ ವಿಪಕ್ಷ ನಾಯಕರ ಸುಳ್ಳುಗಳು ಹೆಚ್ಚು ಹರಡುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ನಾಯಕರ ಹೇಳಿಕೆಗಳನ್ನ ಟೀಕಿಸಿದರು. ಸಂಸದ ಡಾ. ಮಂಜುನಾಥ್ ಅವರು ಉತ್ತಮ ಸಲಹೆಗಳನ್ನ ನೀಡಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ. ಆ ರೀತಿಯ ಸಕಾರಾತ್ಮಕ ಚಿಂತನೆಗಳನ್ನ ವಿಪಕ್ಷಗಳು ಪ್ರದರ್ಶಿಸಲಿ ಎಂದರು.

ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೆ, ಯಾವುದೇ ರೆಸಾರ್ಟ್ ಹೋಗಿರಲಿಲ್ಲ

ಡೆಂಗಿ ಹೆಚ್ಚಳಕ್ಕೂ, ನಾನು ಮಂಗಳೂರಿನ ಅಂತಾರಾಷ್ಟ್ರೀಯ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದಕ್ಕೂ ಎತ್ತಣ ಸಂಬಂಧ ಎಂದು ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಯನ್ನ ಪ್ರಶ್ನಿಸಿದರು. ಮಂಗಳೂರಿನಲ್ಲಿ ನಾನು ಈಜಿದ್ದು ಮಾತ್ರವಲ್ಲ, ಡೆಂಗಿ ಈಡಿಸ್ ಸೊಳ್ಳೆಗಳ ಲಾರ್ವಾ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೊಟ್ಟಿದ್ದೇನೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾಗಿರುವ ಸ್ಥಳಗಳನ್ನ ಗುರುತಿಸಿ ಅಲ್ಲಿಯ ನಿವಾಸಿಗಳನ್ನ ಎಚ್ಚರಿಸಿದ್ದೇವೆ. ಎರಡು ದಿನ ಪ್ರವಾಸದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.‌ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಿದ್ದೇನೆ.. ಹೀಗಿರುವಾಗ ಬಿಜೆಪಿ ನಾನು ಈಜುಕೊಳ್ಳದಲ್ಲಿ ಈಜಿದ್ದನ್ನೇ ಪ್ರಶ್ನೆ ಮಾಡಿದೆ‌.. ಬಿಜೆಪಿಗರಿಗೆ ಈಜು ಒಂದು ರೀತಿಯಲ್ಲಿ ಮೋಜು ಮಸ್ತಿಯಾಗಿರಬಹುದು‌.. ಆದರೆ ನನಗಲ್ಲ.. ನಾನು ಮಂಗಳೂರಿನ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೇನೆ ಹೊರೆತು ಬಿಜೆಪಿಯವರ ರೀತಿ ಯಾವುದೋ ರೆಸಾರ್ಟ್ ಗೆ ಹೋಗಿಲ್ಲ.‌ ಅದು ಬೆಳಗ್ಗೆ 6 ಗಂಟೆಗೆ ಎದ್ದು, ಸಮಯ ಬಿಡುವು ಮಾಡಿಕೊಂಡು ನಾನು ಈಜುಕೊಳಕ್ಕೆ ಹೋಗಿದ್ದೆ. ಏಕೆಂದರೆ ಈಜುಕೊಳ್ಳಕ್ಕೆ ಭೇಟಿ ನೀಡುವುದು ನನ್ನ ಮಂಗಳೂರು ಪ್ರವಾಸದ ಒಂದು ಭಾಗವಾಗಿತ್ತು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.‌

DAKSHINA KANNADA

ಕಾರ್ಕಳ: ಗೋಶಾಲೆಯಿಂದ 10,000 ರೂ. ಬೆಲೆಯ 3 ದನ ಕಳವು

Published

on

ಕಾರ್ಕಳ: ಗೋಶಾಲೆಯಿಂದ ಮೂರು ದನಗಳನ್ನು ಕಳವು ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಲ್ಲಿ ನಡೆದಿದೆ.

 

ಬಜಗೋಳಿಯಲ್ಲಿ ಅಹಿಂಸಾ ಅನಿಮಲ್‌ ಕೇರ್‌ ಟ್ರಸ್ಟ್‌ ನಡೆಸುತ್ತಿರುವ ಗೋಶಾಲೆಯಿಂದ ಜೂನ್‌ 16ರಂದು ಮುಂಜಾನೆ 4 ಗಂಟೆ ಸುಮಾರಿಗೆ ಮೂರು ದನಗಳು ಕಳವಾಗಿವೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

READ IN ENGLISH : https://www.nammakudlaenglish.com/karkala-three-cows-worth-%e2%82%b910000-stolen-from-goshala/

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಕಳವಾದ ದನಗಳ ಮೌಲ್ಯ ಸುಮಾರು 10 ಸಾವಿರ ರೂಪಾಯಿ ಆಗ ಬಹುದೆಂದು ಟ್ರಸ್ಟ್ ಸಂಚಾಲಕ ಎಂ.ಕೆ. ವಿರಂಜಯ್‌ ಅವರು ದೂರಿನಲ್ಲಿ ತಿಳಿಸಿದ್ದಾರೆ. ಬಜಗೋಳಿಯಲ್ಲಿ ಅಹಿಂಸಾ ಅನಿಮಲ್‌ ಕೇರ್‌ ಟ್ರಸ್ಟ್‌ ಗೋಶಾಲೆಯನ್ನು ನಡೆಸುತ್ತಿದ್ದು, ಇಲ್ಲಿ ಗಾಯಗೊಂಡ, ಕಾಯಿಲೆಗೊಳಗಾದ, ಬೀದಿ ಪಾಲಾದ ಬೆಕ್ಕು, ನಾಯಿ ಮತ್ತು ದನಗಳನ್ನು ತಂದು ಆರೈಕೆ ಮಾಡಲಾಗುತ್ತಿದೆ ಎಂದು ಎಂ.ಕೆ. ವಿರಂಜಯ್‌ ವಿವರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

Published

on

ಮಂಗಳೂರು: ಕಾರೊಂದು ಡಿವೈಡರ್‌ ಗೆ ಢಿಕ್ಕಿ ಹೊಡೆದು ಇಬ್ಬರು ಯುವಕರು ಮೃತ ಪಟ್ಟ ದಾರುಣ ಘಟನೆ ಮಂಗಳೂರಿನ ಜಪ್ಪಿನಮೊಗರು ನಡು ಮೊಗೇರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ (ಜೂ.17) ರಾತ್ರಿ ಸಂಭವಿಸಿದೆ.

ಕದ್ರಿ ಮಲ್ಲಿಕಟ್ಟೆಯ ನಿವಾಸಿ ಅಮನ್ ರಾವ್‌ (23) ಮತ್ತು ಕೊಂಚಾಡಿಯ ಓಂ ಶ್ರೀ ಪೂಜಾರಿ (24) ಮೃತ ಯುವಕರು ಎಂದು ಗುರುತಿಸಲಾಗಿದೆ. ಕಾರು ಡಿವೈಡರಿಗೆ ಢಿಕ್ಕಿಯಾಗಿ ಬಳಿಕ ಮೋರಿಗೆ ಬಡಿದು ಅವಘಡ ಸಂಭವಿಸಿದೆ.

ಓಂ ಶ್ರೀ ಪೂಜಾರಿ ಅವರು ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿದ್ದರು. ಕಾರಿನಲ್ಲಿ 4- 5 ಮಂದಿ ಪ್ರಯಾಣಿಸುತ್ತಿದ್ದು, ಅಮನ್ ರಾವ್‌ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್‌ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

ವಂಶಿ ಮತ್ತು ಅಶಿಕ್‌ಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೊಬ್ಬ ಗೆಳೆಯ ಇಟಲಿ ಮೂಲದ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಟ್ರಾಫಿಕ್‌ ದಕ್ಷಿಣ ಠಾಣೆಯ ಪೊಲೀಸರು ಕೇಸ್ ದಾಖಲಿಸಿದ್ದಾರೆ.

Continue Reading

DAKSHINA KANNADA

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ದಶಮಾನೋತ್ಸವ

Published

on

ಮಂಗಳೂರು/ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕೇಂದ್ರದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ತಿಳಿಸಿದ್ದಾರೆ.


ದಶಮ ಸಂಭ್ರಮದ ಪ್ರಯುಕ್ತ ಯುಎಇಯ ಏಳು ಮಂದಿ ಸಾಧಕರಿಗೆ ಮತ್ತು ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಸಂಘಟನೆ ಕ್ಷೇತ್ರದಲ್ಲಿ ಸರ್ವೋತ್ತಮ ಶೆಟ್ಟಿ, ಕಲಾ ಪೋಷಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಉದ್ಯಮ ಕ್ಷೇತ್ರದಲ್ಲಿ ಪುತ್ತಿಗೆ ವಾಸುದೇವ ಭಟ್, ಸಮಾಜ ಸೇವಾ ಕ್ಷೇತ್ರದಲ್ಲಿ ಬಾಲಕೃಷ್ಣ ಸಾಲಿಯಾನ್, ಮಾಧ್ಯಮ ಕ್ಷೇತ್ರದ ಬಿ. ಕೆ. ಗಣೇಶ ರೈ, ನಾಟಕ ಕ್ಷೇತ್ರದಲ್ಲಿ ಡೋನಿ ಕೊರೆಯಾ, ಭರತನಾಟ್ಯ ಕ್ಷೇತ್ರದಲ್ಲಿ ರೂಪ ಕಿರಣ್ ಹಾಗೂ ಶ್ರೀ ರಾಜರಾಜೇಶ್ವರಿ ಭಜನಾ ತಂಡ, ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯನ್ನು ಗೌರವಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page