Connect with us

LATEST NEWS

ಕಂದಹಾರ್‌ಗೆ ನುಗ್ಗಿದ ತಾಲಿಬಾನ್ ಉಗ್ರರು : ಅಫ್ಘಾನ್ ಸೇನೆ ತಾಲಿಬಾನ್ ಸಂಘರ್ಷ ತೀವ್ರ..!

Published

on

ಕಾಬೂಲ್ : ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಮರಳುತ್ತಿದ್ದಂತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ.

ಈಗ ದೇಶದ 2ನೇ ಅತಿದೊಡ್ಡ ನಗರವಾಗಿರುವ 6 ಲಕ್ಷ ಜನಸಂಖ್ಯೆಯುಳ್ಳ ಕಂದಹಾರ್ ನಗರವನ್ನು ಪ್ರವೇಶಿಸಿದ್ದಾರೆ.ವಿದೇಶಿ ಪಡೆಗಳು ತೆರಳುತ್ತಿದ್ದಂತೆ ಒಂದೊಂದೇ ಪ್ರದೇಶವನ್ನು ವಶಪಡಿಸಿಕೊಳ್ಳುತ್ತಿರುವ ಉಗ್ರರು ಈಗಾಗಲೇ ದೇಶದ ಶೇ.85ರಷ್ಟುಭಾಗವನ್ನು ವಶಪಡಿಸಿಕೊಂಡಿರುವುದಾಗಿ ಪ್ರಕಟಿಸಿದ್ದಾರೆ.

ಇಷ್ಟೇ ಅಲ್ಲದೇ ಇರಾನ್ ಜೊತೆಗಿನ ವ್ಯಾಪಾರ ನಡೆಸುವ ಗಡಿ ಚೆಕ್ ಪೋಸ್ಟ್ ವಶಕ್ಕೆ ಪಡೆದಿದ್ದಾರೆ.ಕಂದಹಾರ್ ಗವರ್ನರ್ ವಕ್ತಾರರಾದ ಬಹಿರ್ ಅಹಮದಿ ಅವರು, ದೇಶದ ಎರಡನೇ ಅತಿದೊಡ್ಡ ನಗರ ಕಂದಹಾರ್ ಅನ್ನು ಕಳೆದ ಶುಕ್ರವಾರ ಉಗ್ರರು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ಉಗ್ರರು ಮುನ್ನುಗ್ಗುತ್ತಿರುವುದನ್ನು ನೋಡಿದರೆ ಅಫ್ಘಾನಿಸ್ತಾನ ಪೂರ್ಣ ಪ್ರಮಾಣದಲ್ಲಿ ತಾಲಿಬಾನ್ ಕೈವಶವಾಗುವ ಅಪಾಯವಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

7 ಪೊಲೀಸ್ ಜಿಲ್ಲಾ ಪ್ರದೇಶದ ಮೂಲಕ ಕಂದಹಾರ್ ನಗರವನ್ನು ಮೊದಲ ಬಾರಿಗೆ ಪ್ರವೇಶಿಸಿದ್ದು, ಅಫ್ಘಾನ್ ಸೇನೆ ದಾಳಿ ನಡೆಸಿ ತಿರುಗೇಟು ನೀಡುತ್ತಿದೆ.

ಇದರಿಂದಾಗಿ ಎರಡೂ ಬಣಗಳ ನಡುವೆ ಸಂಘರ್ಷ ಜೋರಾಗಿದೆ.2001ರಲ್ಲಿ ವಿಶ್ವ ವಾಣಿಜ್ಯ ಕಟ್ಟಡದ ಮೇಲೆ ಉಗ್ರರ ದಾಳಿಯಿಂದ ಸಿಟ್ಟಾದ ಅಮೆರಿಕ ಅಲ್‍ ಖೈದಾ ಉಗ್ರರನ್ನು ಮಟ್ಟ ಹಾಕಲು ದೊಡ್ಡ ಕಾರ್ಯಾಚರಣೆ ಆರಂಭಿಸಿತು.

ಕಳೆದ 20 ವರ್ಷಗಳಿಂದ ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಅಫ್ಘಾನಿಸ್ತಾನದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

ಆದರೆ ಅಫ್ಘಾನಿಸ್ತಾನದಲ್ಲಿ ಸೈನ್ಯವನ್ನು ಕಳುಹಿಸಿದ್ದರಿಂದ ಅಮೆರಿಕಕ್ಕೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಹಿಂದೆ ಸರಿಯುವ ನಿರ್ಧಾರವನ್ನು ಅಮೆರಿಕ ಕೈಗೊಂಡಿದ್ದು, ಮೇ 1ರಿಂದ ಆ ಪ್ರಕ್ರಿಯೆ ಆರಂಭವಾಗಿದೆ.

ಇನ್ನು ಈ ಮಧ್ಯೆ ಕಂದಾಹರ್ ನಲ್ಲಿರುವ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಭಾರತೀಯ ರಾಜತಾಂತ್ರಿಕರು, ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು ಕರೆ ತರಲು ವಾಯು ಪಡೆಯ ವಿಶೇಷ ವಿಮಾನವನ್ನು ಭಾರತ ಕಳುಹಿಸಿದೆ.

ಸದ್ಯ ಈಗ ಕಾಬೂಲ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ರಾಜತಾಂತ್ರಿಕರು ಮತ್ತು ಅಫ್ಘಾನ್ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ.

LATEST NEWS

NSUI ನಾಯಕನ ಮೇಲೆ ತಲವಾರು ದಾ*ಳಿ ಪ್ರಕರಣ; ಐವರು ಅರೆಸ್ಟ್

Published

on

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಎನ್.ಎಸ್.ಯು.ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ನಡೆದ ಹ*ಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕುಂಜಿಬೆಟ್ಟು ನಿವಾಸಿ ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಅಲೆವೂರು ನಿವಾಸಿ ಶಂಶಾಂಕ್ ನಾಯಕ್ (25) ಬಂಧಿತ ಆರೋಪಿಗಳು.

ಜನವರಿ 30 ರಂದು ರಾತ್ರಿ 9 ಗಂಟೆ ಸುಮಾರಿಗೆ ಚಿಟ್ಟಾಡಿ ಬೈಲೂರು ಬಡಗುಬೆಟ್ಟು ನಿವಾಸಿ ಶರತ್ ಕುಂದರ್ (25) ಅವರು ತಮ್ಮ ಸ್ನೇಹಿತನ ಕಾರಿನಲ್ಲಿ ಮಣಿಪಾಲದ ಹೋಟೆಲೊಂದಕ್ಕೆ ಊಟಕ್ಕೆಂದು ತೆರಳಿದ್ದರು. ಅಲ್ಲಿ ಅಕ್ಷತ್ ಪೈ, ಶಶಾಂಕ್ ಹಾಗೂ ಉಡುಪಿಯ ಜನರಲ್ ಸ್ಟೋರೊಂದರ ಮಾಲಕರ ಮಗನೊಂದಿಗೆ ಸಣ್ಣ ವಿಚಾರಕ್ಕೆ ಸಂಬಂಧಿಸಿ ಬಾಯಿ ಮಾತಿನ ಗಲಾಟೆ ನಡೆದಿದೆ.

ನಂತರ ಶರತ್ ಕುಂದ‌ರ್ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲ್ಸಂಕ ಬಳಿ ತಲುಪುವ ಸಂದರ್ಭದಲ್ಲಿ ಅಕ್ಷತ್ ಪೈ ಕರೆ ಮಾಡಿ, ಹೋಟೆಲ್‌ನ ಗಲಾಟೆ ವಿಚಾರವಾಗಿ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ನಿಲ್ಲುವಂತೆ ತಿಳಿಸಿದ್ದಾನೆ. ರಾತ್ರಿ ಸುಮಾರು 11.30ರ ವೇಳೆಗೆ ಪಿಪಿಸಿ ಕ್ರಾಸ್ ಸಮೀಪ ಕೋಸ್ಟಲ್ ಚಿಕನ್ ಅಂಗಡಿಯ ಎದುರು ರಸ್ತೆಯ ಬದಿಯಲ್ಲಿ ಶರತ್ ಕುಂದರ್ ತಮ್ಮ ಸ್ನೇಹಿತರಾದ ಧ್ರುವಾ, ಸಿಲಾನ್ ಗಗನ್ ಹಾಗೂ ರೋಹಿತ್ ಜೊತೆ ಮಾತನಾಡುತ್ತ ನಿಂತಿದ್ದ ವೇಳೆ ಟಾಟಾ ಸಫಾರಿ ಮತ್ತು ಮಹೀಂದ್ರ ಥಾರ್ ವಾಹನಗಳು ಏಕಾಏಕಿ ಬಂದು ನಿಂತಿವೆ.

ವಾಹನಗಳಿಂದ ಇಳಿದ ಅಕ್ಷತ್ ಪೈ, ಶಶಾಂಕ್ ಸೇರಿದಂತೆ ಆರೇಳು ಮಂದಿ ಕೈಯಲ್ಲಿ ತಲವಾರಿನಂತಹ ಆಯುಧ ಹಾಗೂ ಕಬ್ಬಿಣದ ಚೈನ್ ಹಿಡಿದು ಶರತ್ ಕುಂದ‌ರ್ ಮೇಲೆ ಹಲ್ಲೆ ನಡೆಸಿದರೆಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ಬಳಿಕ  ಆರೋಪಿಗಳು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದರು. ಗಾಯಾಳುವನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ ಹುಂಡೈ ಅವೆನ್ಯೂ ಕಾರು (ಅಂದಾಜು ಮೌಲ್ಯ 8 ಲಕ್ಷ) ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

FILM

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್ ಪೋಸ್ಟ್!

Published

on

ಕನ್ನಡ ಚಿತ್ರರಂಗದ ಮಾದರಿ ದಂಪತಿಗಳಾದ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿಯ ವ್ಯಾಲೆಂಟೈನ್ಸ್ ದಿನವನ್ನು ಪ್ರೀತಿಯಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪತಿ ಯಶ್ ಅವರೊಂದಿಗೆ ಇರುವ ಸುಂದರವಾದ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಶ್ ಮಾಡಿದ್ದಾರೆ.


ರಾಧಿಕಾ ಪಂಡಿತ್‌ ಮತ್ತು ಯಶ್‌ ಇಬ್ಬರೂ ಧಾರಾವಾಹಿ ಮೂಲಕ ಪರಿಚಯ ಆಗಿದ್ದು, ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿ, ಬಳಿಕ ಒಟ್ಟಾಗಿ ಸಿನಿಮಾ ಮಾಡಿದರು. ತೆರೆಮೇಲೆ ಜೋಡಿಯಾಗಿದ್ದ ಇವರು ತೆರೆಹಿಂದೆಯೂ ಕಪಲ್‌ ಆಗಿದ್ದಾರೆ. ಇದೀಗ ಯಶ್‌ ಅವರ ಕುರಿತು ರಾಧಿಕಾ ಪಂಡಿತ್‌ ಹಂಚಿಕೊಂಡಿರೋ ಪೋಸ್ಟ್‌ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಯಶ್ ಅವರಿಗೆ ಧನ್ಯವಾದ ಅರ್ಪಿಸಿರುವ ರಾಧಿಕಾ, ‘ನನ್ನ ಅಭದ್ರತೆಯನ್ನು ತೆಗೆದು ಹಾಕಿದವನು ನೀನು. ನಿನ್ನ ಕಣ್ಣುಗಳಲ್ಲಿ ದಣಿವು, ಬೇರೆ ಯಾರೂ ಗಮನಿಸದ ತ್ಯಾಗ, ದೂರು ನೀಡದೆ ನೀನು ಹೊತ್ತುಕೊಂಡ ದೀರ್ಘ ಭಾರ ನನಗೆ ಕಾಣುತ್ತಿದೆ. ಅದು ನಮಗಾಗಿ ಎಂದು ನನಗೆ ತಿಳಿದಿದೆ. ನನ್ನನ್ನು ದಿನವೂ ಆಯ್ಕೆ ಮಾಡಿದ್ದಕ್ಕೆ ನಿನಗೆ ಧನ್ಯವಾದ, ಹ್ಯಾಪಿ ವ್ಯಾಲೆಂಟೈನ್ಸ್ ಡೇ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಇಬ್ಬರೂ ಜೊತೆಯಾಗಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಪ್ರೇಮಿಗಳ ದಿನದ ಶುಭಾಶಯ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರ ಈ ಪೋಸ್ಟ್ ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಸಾವಿರಾರು ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

Continue Reading

LATEST NEWS

ಚರಂಡಿಗೆ ಬಿ*ದ್ದು ಬಾಲಕ ಸಾ*ವು

Published

on

ಮಂಗಳೂರು/ಬೀದರ್ : ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕ  ಚರಂಡಿಗೆ ಬಿ*ದ್ದು ಸಾ*ವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃ*ತ ಬಾಲಕ. ಮನೆಯ ಮುಂದೆ ಆಡುತ್ತಿದ್ದ ಬಾಲಕ ಕಾಣೆಯಾಗಿದ್ದ. ಹೀಗಾಗಿ  ಕುಟುಂಬಸ್ಥರು ಹುಡುಕಾಡಿದ್ದು, ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾ*ವನ್ನಪ್ಪಿರುವುದು ಗೊತ್ತಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಬಗದಲ್ ಪೊಲೀಸ್ ವ್ಯಾಪ್ತಿಯಲ್ಲಿ ಈ ದುರಂ*ತ ಸಂಭವಿಸಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page