Connect with us

DAKSHINA KANNADA

ತೇಜಸ್ವಿನಿ ಆಸ್ಪತ್ರೆಯಲ್ಲಿ ಹೆಬ್ಬೆರಳಿಲ್ಲದೆ 7 ಬೆರಳು ಹೊಂದಿದ್ದ ಮಗುವಿನ  ಯಶಸ್ವೀ ಶಸ್ತ್ರ ಚಿಕಿತ್ಸೆ..!

Published

on

ತೇಜಸ್ವಿನಿ ಆಸ್ಪತ್ರೆಯಲ್ಲಿ ಹೆಬ್ಬೆರಳಿಲ್ಲದೆ 7 ಬೆರಳು ಹೊಂದಿದ್ದ ಮಗುವಿನ  ಯಶಸ್ವೀ ಶಸ್ತ್ರ ಚಿಕಿತ್ಸೆ..!

ಮಂಗಳೂರು:  ಹುಟ್ಟುವಾಗಲೇ ಏಳು ಬೆರಳುಗಳನ್ನು ಹೊಂದಿದ್ದು, ಹೆಬ್ಬೆರಳು ಇಲ್ಲದೇ ಜನಿಸಿದ್ದ ಮಗುವಿನ ಕೈಯನ್ನು ಮಂಗಳೂರಿನಲ್ಲಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಸರಿಪಡಿಸಲಾಗಿದೆ.

ಹತ್ತು ದಿನಗಳ ಹಿಂದೆ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಈ ಅಪರೂಪದ ಶಸ್ತ್ರಚಿಕಿತ್ಸೆ ನಡೆಯಿತು. ಬೆಂಗಳೂರಿನ ಮಗುವೊಂದಕ್ಕೆ ಹುಟ್ಟುವಾಗಲೇ ಹೆಬ್ಬೆರಳು ಇಲ್ಲದೆ ಏಳು ಬೆರಳುಗಳಿದ್ದವು.

ಇದನ್ನು ವೈಜ್ಞಾನಿಕ ಪರಿಭಾಷೆಯಲ್ಲಿ ಮಿರರ್ ಹ್ಯಾಂಡ್ ಎಂದು ಕರೆಯುತ್ತಾರೆ. ಹುಟ್ಟುವಾಗಲೇ ಮಗು ಈ ನ್ಯೂನತೆ ಹೊಂದಿರುವುದರಿಂದ ಮಗುವಿನ ಹೆತ್ತವರು ಖ್ಯಾತ ಹ್ಯಾಂಡ್ ಸರ್ಜನ್ ಡಾ. ಭಾಸ್ಕರಾನಂದ ಕುಮಾರ್ ಅವರ ಬಳಿ ಕರೆದುಕೊಂಡು ಬಂದಿದ್ದರು.ಡಾ. ಭಾಸ್ಕರಾನಂದ ಕುಮಾರ್ ಅವರು ಮಗುವಿನ ಬೆರಳಿನ ಶಸ್ತ್ರಚಿಕಿತ್ಸೆಯನ್ನು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ನಡೆಸಿದರು. ಈ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಎರಡೂವರೆ ಗಂಟೆಗಳ ಅವಧಿಯಲ್ಲಿ ಮುಗಿಸಿ ಹೆಚ್ಚುವರಿ ಬೆರಳನ್ನು ತೆಗೆದು ಹೆಬ್ಬೆರಳನ್ನು ಜೋಡಿಸಲಾಯಿತು.

ಶಸ್ತ್ರಚಿಕಿತ್ಸೆ ಬಳಿಕ ಗುಣಮುಖಗೊಂಡ   ಮಗುವನ್ನು ಮತ್ತೆ ಬೆಂಗಳೂರಿಗೆ ಹೆತ್ತವರು ಕರೆದುಕೊಂಡು ಹೋಗಿದ್ದಾರೆ. ಶಸ್ತ್ರಚಿಕಿತ್ಸೆ ಕುರಿತು ಪ್ರತಿಕ್ರಿಯೆ  ನೀಡಿದ ಹ್ಯಾಂಡ್ ಸರ್ಜನ್ ಡಾ. ಭಾಸ್ಕರಾನಂದ ಅವರು, ಹ್ಯಾಂಡ್ ಸರ್ಜನ್​ಗಳು ಇಂತಹ ಸರ್ಜರಿಯನ್ನು ಎರಡು ಅಥವಾ ಮೂರು ಬಾರಿ ಮಾಡಲು ಮಾತ್ರ ಸರ್ಜನ್​ಗಳ ವೃತ್ತಿ ಜೀವನದಲ್ಲಿ ಅವಕಾಶ ಸಿಗುತ್ತದೆ.

ಆದರೆ ನಾನು ತಿರುಪತಿ ದೇವಸ್ಥಾನದ ಬಿ ಐ ಆರ್‌ ಡಿ ಎಸ್ ನ ವಿಸಿಟಿಂಗ್ ಪ್ರೊಪೆಸರ್ ಆಗಿದ್ದು, ಈವರೆಗೆ ಇಂತಹ 13 ಸರ್ಜರಿಗಳನ್ನು ಮಾಡಿದ್ದೇನೆ.

ಈ ಅನುಭವದ ಆಧಾರದಲ್ಲಿ ಐದಾರು ಗಂಟೆ ತಗುಲುವ ಶಸ್ತ್ರಚಿಕಿತ್ಸೆಯನ್ನು ಎರಡೂವರೆ ಗಂಟೆಯಲ್ಲಿ ಮಾಡಿದ್ದೇನೆ ಎಂದಿದ್ದಾರೆ.  ಶಸ್ತ್ರಚಿಕಿತ್ಸೆಯಲ್ಲಿ ಮಗುವಿನ ಹೆಚ್ಚುವರಿ ಬೆರಳು ತೆಗೆದು ಅದರಿಂದ ಹೆಬ್ಬೆರಳು ಮಾಡಲಾಯಿತು. ಮಗು ಆರೋಗ್ಯದಿಂದ ಇದ್ದು ಡಿಸ್ಚಾರ್ಜ್ ಆಗಿದೆ ಎಂದು ತಿಳಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ

Published

on

ಸುಬ್ರಹ್ಮಣ್ಯ: ಇರಾನ್-ಇಸ್ರೇಲ್ ಸಂಘರ್ಷದ ಕಾರಣದಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದೀಗ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ಇದರ ಬಿಸಿ ತಟ್ಟಿದೆ.


ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರತಿದಿನ ಬೆಳಿಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು. ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಇಂದಿನಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಯಿಸುವ ತಿನಿಸು ಬದಲಾಗಿ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಸಂಘರ್ಷ: ಮಾ.12ರಂದು ಮಂಗಳೂರು- ಮಧ್ಯ ಪ್ರಾಚ್ಯ ಮಾರ್ಗದ 14 ವಿಮಾನಗಳು ರದ್ದು

ಇದರ ನಡುವೆ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬದಲಾವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Continue Reading

DAKSHINA KANNADA

ಕಾಲೇಜಿಗೆ ರಾಜಕೀಯ ಕೇಂದ್ರಿತ ವ್ಯಕ್ತಿಗಳ ಅನಗತ್ಯ ಪ್ರವೇಶ ಆರೋಪ; ಮಂಗಳೂರು ವಿ.ವಿ. ಕಾಲೇಜಿನಲ್ಲಿ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Published

on

ಮಂಗಳೂರು: ಕಾಲೇಜಿನಲ್ಲಿ ರಾಜಕೀಯ ಕೇಂದ್ರಿತ ವ್ಯಕ್ತಿಗಳ ಅನಗತ್ಯ ಪ್ರವೇಶ ಮಾಡಿ ಗದ್ದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಎ.ಬಿ.ವಿ.ಪಿ. ಸಂಘಟನೆಯ ವಿದ್ಯಾರ್ಥಿಗಳು ನಿನ್ನೆ ಹಂಪನಕಟ್ಟೆಯ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು.


ಮಾರ್ಚ್ 9 ರಂದು ರಾಜಕೀಯ ಪಕ್ಷ ಕೇಂದ್ರಿತ ಸುಮಾರು 15 ರಿಂದ 20 ಜನರ ಗುಂಪು ಆಗಮಿಸಿ ಕೆಲವು ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳ ಜತೆ ಸಂಭಾಷಣೆಯ ನೆಪದಲ್ಲಿ ಅನಾವಶ್ಯಕ ಗದ್ದಲವನ್ನು ಸೃಷ್ಟಿಸಿರುವುದು ವಿದ್ಯಾರ್ಥಿಗಳಲ್ಲಿ ಕಳವಳವನ್ನುಂಟು ಮಾಡಿದೆ. ಈ ರೀತಿ ಕಾಲೇಜಿಗೆ ಸಂಬಂಧ ಪಡದ, ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳ ಕ್ಯಾಂಪಸ್ ಪ್ರವೇಶವು ಅತ್ಯಂತ ಖಂಡನೀಯ.

ಇಂತಹ ಘಟನೆಗಳು ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ. ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಇದಕ್ಕೆ ಅನುಮತಿ ನೀಡಿರುವ ಪ್ರಾಧ್ಯಾಪಕರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಎಬಿವಿಪಿ ಮುಖಂಡರು ಒತ್ತಾಯಿಸಿದರು.̇

ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ಹಾನಿ!

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲ ಗಣಪತಿ‌ ಗೌಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು. ನಿನ್ನೆ ನಮ್ಮಿಂದ ಒಂದು ಆಚಾತುರ್ಯ ನಡೆದು ಹೋಗಿದೆ. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಬರ್ತಾರೆ ಅಂತಾ ಹೇಳಿದ್ದರು. ಆದರೆ ಘೋಷಣೆ ‌ಕೂಗಿದ ವಿಚಾರ ನಮಗೆ ಗೊತ್ತಾಗಿಲ್ಲ. ಸಾಂಕೇತಿಕವಾಗಿ ಸಿಹಿ ತಿಂಡಿ ವಿತರಿಸಿದ್ದಾರೆ. ನಿನ್ನೆ ನಡೆದ ಘಟನೆಯ ವರದಿಯನ್ನು ಉಪಕುಲಪತಿಯಯವರಿಗೆ ನೀಡ್ತೇವೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಪ್ರಾಂಶುಪಾಲರು ಆಶ್ವಾಸನೆ ನೀಡಿದರು.

Continue Reading

DAKSHINA KANNADA

ಉಳ್ಳಾಲ ನಗರಸಭೆ ಅಧ್ಯಕ್ಷರ ಕಾರು ಚಾಲಕ ಹೃದಯಾಘಾತದಿಂದ ನಿಧನ

Published

on

ಉಳ್ಳಾಲ: ಉಳ್ಳಾಲ ನಗರಸಭೆ ಯ ಅಧ್ಯಕ್ಷರ ಕಾರು ಚಾಲಕರಾಗಿ ಕಾರ್ಯನಿರ್ವಹಿಸುತಿದ್ದ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯ ಅಶೋಕ್ ಉಳ್ಳಾಲಬೈಲ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮೃತರು 2 ಮಕ್ಕಳನ್ನು ಅಗಲಿದ್ದಾರೆ.


ಕರ್ನಾಟಕ ರಾಜ್ಯ ವಿಧಾನ ಸಭಾ ಸಭಾಧ್ಯಕ್ಷ ಯು. ಟಿ. ಖಾದರ್, ಮಂಗಳೂರು ಮುಡ ಅಧ್ಯಕ್ಷ ಸದಾಶಿವ ಉಳ್ಳಾಲ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಸಭಾಧ್ಯಕ್ಷರ ಆಪ್ತ ಸಹಾಯಕ ಮನ್ಸೂರ್ ಮಂಚಿಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page